Homeರಾಷ್ಟ್ರೀಯ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ವಿವಾದಿತ ಯೋಜನೆ ‘ಅಗ್ನಿಪಥ್‌’ನಿಂದ ಕಡ್ಡಾಯ ನಿವೃತ್ತಿ ಹೊಂದುವ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸುವುದಾಗಿ ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರಾ ಅವರು ಹೇಳಿದ್ದಾರೆ. ಮಹೀಂದ್ರಾ ಅವರು ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸೇನೆಯ ಮಾಜಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರು, ಮಹೀಂದ್ರಾ ಗ್ರೂಪ್‌ ಈ ಹಿಂದೆ ತನ್ನ ಪ್ರಮುಖ ಹುದ್ದೆಗಳಲ್ಲಿ ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆಯೆ ಎಂದು ಪ್ರಶ್ನಿಸಿದ್ದಾರೆ.

‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ, ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುತ್ತೇವೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಗ್ನೀಪಥ್ ವಿಚಾರವಾಗಿ ನಡೆಯುವ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ, ಈಗ ನಾನು ಪುನಃ ಹೇಳುತ್ತೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳ ಲಾಭವು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಗಳನ್ನಾಗಿ ಮಾಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.

ಮಹೀಂದ್ರಾ ಅವರ ಘೋಷಣೆಯನ್ನು ಕೆಲವರು ಶ್ಲಾಘಿಸಿದರೆ, ಸೇನೆಯ ಮಾಜಿ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವರು ಮಹೀಂದ್ರಾ ಗ್ರೂಪ್ ಈ ಹಿಂದೆ ಎಷ್ಟು ಮಾಜಿ ಅಧಿಕಾರಿಗಳನ್ನು ನೇಮಿಸಿಕೊಂಡಿದೆ ಎಂದು ಗಂಭೀರ ಪ್ರಶ್ನೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ‘ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ಈ ಹೊಸ ಯೋಜನೆಗಾಗಿ ಏಕೆ ಕಾಯಬೇಕು? ಇಲ್ಲಿಯವರೆಗೆ ಸಾವಿರಾರು ಹೆಚ್ಚು ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರು (ಜವಾನರು ಮತ್ತು ಅಧಿಕಾರಿಗಳು) ಪ್ರತಿ ವರ್ಷ ನಿವೃತ್ತಿ ಹೊಂದುತ್ತಿದ್ದು, 2 ನೇ ವೃತ್ತಿಜೀವನವನ್ನು ನಡೆಸಲು ತೀವ್ರವಾಗಿ ಬಯಸುತ್ತಿದ್ದಾರೆ. ಅವರನ್ನು ಮಹೇಂದ್ರ ಗ್ರೂಪ್ ತಲುಪಿದೆಯೆ. ನಿಮ್ಮ ಗ್ರೂಪ್‌ನಿಂದ ಅಂಕಿ ಅಂಶಗಳನ್ನು ಪಡೆಯುವುದು ಒಳ್ಳೆಯದು” ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಮತ್ತು ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಅರುಣ್ ಪ್ರಕಾಶ್ ಪ್ರಶ್ನಿಸಿದ್ದಾರೆ.

“ಆನಂದ್ ಮಹೀಂದ್ರಾ ಸರ್, ಮಾಜಿ ನೌಕಾಪಡೆಯ ಮುಖ್ಯಸ್ಥರು ಕೋರಿರುವಂತೆ, ನಮಗೆ ಕೆಲವು ಅಂಕಿಅಂಶಗಳನ್ನು ನೀಡಬಹುದೇ? ಅಂತಹ ಭರವಸೆಗಳನ್ನು ಕೇಳಿ ನಾನು ನಲವತ್ತು ವರ್ಷಗಳ ಸೇವೆಯ ನಂತರ ನಿವೃತ್ತಿ ಹೊಂದಿದ್ದೇನೆ” ಎಂದು ಭಾರತೀಯ ವಾಯುಪಡೆಯ ಮಾಜಿ ಏರ್ ವೈಸ್ ಮಾರ್ಷಲ್ ಮನಮೋಹನ್ ಬಹದ್ದೂರ್ ಬರೆದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಆನಂದ್ ಮಹೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ, ಟಿಎಂಸಿ ನಾಯಕ ಸಾಕೇತ್ ಗೋಖಲೆ, “ಆನಂದ ಮಹೀಂದ್ರ ಅವರಿಗೆ ಎರಡು ಪ್ರಮುಖ ಪ್ರಶ್ನೆಗಳು. ಒಂದನೇಯದಾಗಿ, ಮಹೀಂದ್ರಾ ಗ್ರೂಪ್ ಪ್ರಸ್ತುತ ಎಷ್ಟು ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆ? ನಿಮ್ಮ ಒಟ್ಟು ಉದ್ಯೋಗಿಗಳಲ್ಲಿ ಎಷ್ಟು ಶೇಖಡ ಜನರು ಮಾಜಿ ಸೈನಿಕರಾಗಿದ್ದಾರೆ? ಎರಡನೆಯದಾಗಿ, ನಿಮ್ಮ ಹೇಳಿಕೆಯ ಹಿನ್ನಲೆಯಲ್ಲಿ ಹೇಳುವುದಾದರೆ, ಮಹೀಂದ್ರಾ ಗ್ರೂಪ್ ಸ್ಟೆಪ್‌ ಅಗ್ನಿವೀರರಿಗೆ ಶೇಖಡವಾರು ಉದ್ಯೋಗಗಳನ್ನು ಕಾಯ್ದಿರಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್‌ ಅನ್ನು ಉಲ್ಲೇಖಿಸಿ RPG ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕೂಡಾ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. “ಆರ್‌ಪಿಜಿ ಗ್ರೂಪ್‌ ಕೂಡ ಅಗ್ನಿವೀರ್‌ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

17.5 ರಿಂದ 21 ವಯಸ್ಸಿನೊಳಗಿನ ಸೇನಾ ಉದ್ಯೋಗಾಕಾಂಕ್ಷಿಗಳನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ್’ ಯೋಜನೆಯನ್ನು ಒಕ್ಕೂಟ ಸರ್ಕಾರವು ಘೋಷಿಸಿದ ನಂತರ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಈ ಯೋಜನೆಯ ಅನ್ವಯ, ನಾಲ್ಕು ವರ್ಷಗಳು ಪೂರ್ಣಗೊಂಡ ನಂತರ, ಅಗ್ನಿಪಥ್‌‌ಗೆ ಹೊಸದಾಗಿ ನೇಮಕಗೊಂಡವರಲ್ಲಿ 75% ದಷ್ಟು ಜನರು 12 ಲಕ್ಷ ರೂ. ನೊಂದಿಗೆ ಅವರ ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ. ಆದರೆ ಅವರು ಯಾವುದೇ ಪಿಂಚಣಿಗೆ ಅರ್ಹರಾಗಿರುವುದಿಲ್ಲ. ಉಳಿದ 25% ಜನರು ಸಶಸ್ತ್ರ ಪಡೆಗಳಲ್ಲಿ 15 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಬಹುದಾಗಿದೆ.

ಯೋಜನೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದರೂ, ಮೋದಿ ನೇತೃತ್ವದ ಸರ್ಕಾರವು ಅದನ್ನು ಹಿಂತೆಗೆದುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....