Homeರಾಷ್ಟ್ರೀಯ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ವಿವಾದಿತ ಯೋಜನೆ ‘ಅಗ್ನಿಪಥ್‌’ನಿಂದ ಕಡ್ಡಾಯ ನಿವೃತ್ತಿ ಹೊಂದುವ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸುವುದಾಗಿ ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರಾ ಅವರು ಹೇಳಿದ್ದಾರೆ. ಮಹೀಂದ್ರಾ ಅವರು ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸೇನೆಯ ಮಾಜಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರು, ಮಹೀಂದ್ರಾ ಗ್ರೂಪ್‌ ಈ ಹಿಂದೆ ತನ್ನ ಪ್ರಮುಖ ಹುದ್ದೆಗಳಲ್ಲಿ ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆಯೆ ಎಂದು ಪ್ರಶ್ನಿಸಿದ್ದಾರೆ.

‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ, ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುತ್ತೇವೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಗ್ನೀಪಥ್ ವಿಚಾರವಾಗಿ ನಡೆಯುವ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ, ಈಗ ನಾನು ಪುನಃ ಹೇಳುತ್ತೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳ ಲಾಭವು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಗಳನ್ನಾಗಿ ಮಾಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.

ಮಹೀಂದ್ರಾ ಅವರ ಘೋಷಣೆಯನ್ನು ಕೆಲವರು ಶ್ಲಾಘಿಸಿದರೆ, ಸೇನೆಯ ಮಾಜಿ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವರು ಮಹೀಂದ್ರಾ ಗ್ರೂಪ್ ಈ ಹಿಂದೆ ಎಷ್ಟು ಮಾಜಿ ಅಧಿಕಾರಿಗಳನ್ನು ನೇಮಿಸಿಕೊಂಡಿದೆ ಎಂದು ಗಂಭೀರ ಪ್ರಶ್ನೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ‘ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ಈ ಹೊಸ ಯೋಜನೆಗಾಗಿ ಏಕೆ ಕಾಯಬೇಕು? ಇಲ್ಲಿಯವರೆಗೆ ಸಾವಿರಾರು ಹೆಚ್ಚು ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರು (ಜವಾನರು ಮತ್ತು ಅಧಿಕಾರಿಗಳು) ಪ್ರತಿ ವರ್ಷ ನಿವೃತ್ತಿ ಹೊಂದುತ್ತಿದ್ದು, 2 ನೇ ವೃತ್ತಿಜೀವನವನ್ನು ನಡೆಸಲು ತೀವ್ರವಾಗಿ ಬಯಸುತ್ತಿದ್ದಾರೆ. ಅವರನ್ನು ಮಹೇಂದ್ರ ಗ್ರೂಪ್ ತಲುಪಿದೆಯೆ. ನಿಮ್ಮ ಗ್ರೂಪ್‌ನಿಂದ ಅಂಕಿ ಅಂಶಗಳನ್ನು ಪಡೆಯುವುದು ಒಳ್ಳೆಯದು” ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಮತ್ತು ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಅರುಣ್ ಪ್ರಕಾಶ್ ಪ್ರಶ್ನಿಸಿದ್ದಾರೆ.

“ಆನಂದ್ ಮಹೀಂದ್ರಾ ಸರ್, ಮಾಜಿ ನೌಕಾಪಡೆಯ ಮುಖ್ಯಸ್ಥರು ಕೋರಿರುವಂತೆ, ನಮಗೆ ಕೆಲವು ಅಂಕಿಅಂಶಗಳನ್ನು ನೀಡಬಹುದೇ? ಅಂತಹ ಭರವಸೆಗಳನ್ನು ಕೇಳಿ ನಾನು ನಲವತ್ತು ವರ್ಷಗಳ ಸೇವೆಯ ನಂತರ ನಿವೃತ್ತಿ ಹೊಂದಿದ್ದೇನೆ” ಎಂದು ಭಾರತೀಯ ವಾಯುಪಡೆಯ ಮಾಜಿ ಏರ್ ವೈಸ್ ಮಾರ್ಷಲ್ ಮನಮೋಹನ್ ಬಹದ್ದೂರ್ ಬರೆದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಆನಂದ್ ಮಹೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ, ಟಿಎಂಸಿ ನಾಯಕ ಸಾಕೇತ್ ಗೋಖಲೆ, “ಆನಂದ ಮಹೀಂದ್ರ ಅವರಿಗೆ ಎರಡು ಪ್ರಮುಖ ಪ್ರಶ್ನೆಗಳು. ಒಂದನೇಯದಾಗಿ, ಮಹೀಂದ್ರಾ ಗ್ರೂಪ್ ಪ್ರಸ್ತುತ ಎಷ್ಟು ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆ? ನಿಮ್ಮ ಒಟ್ಟು ಉದ್ಯೋಗಿಗಳಲ್ಲಿ ಎಷ್ಟು ಶೇಖಡ ಜನರು ಮಾಜಿ ಸೈನಿಕರಾಗಿದ್ದಾರೆ? ಎರಡನೆಯದಾಗಿ, ನಿಮ್ಮ ಹೇಳಿಕೆಯ ಹಿನ್ನಲೆಯಲ್ಲಿ ಹೇಳುವುದಾದರೆ, ಮಹೀಂದ್ರಾ ಗ್ರೂಪ್ ಸ್ಟೆಪ್‌ ಅಗ್ನಿವೀರರಿಗೆ ಶೇಖಡವಾರು ಉದ್ಯೋಗಗಳನ್ನು ಕಾಯ್ದಿರಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್‌ ಅನ್ನು ಉಲ್ಲೇಖಿಸಿ RPG ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕೂಡಾ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. “ಆರ್‌ಪಿಜಿ ಗ್ರೂಪ್‌ ಕೂಡ ಅಗ್ನಿವೀರ್‌ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

17.5 ರಿಂದ 21 ವಯಸ್ಸಿನೊಳಗಿನ ಸೇನಾ ಉದ್ಯೋಗಾಕಾಂಕ್ಷಿಗಳನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ್’ ಯೋಜನೆಯನ್ನು ಒಕ್ಕೂಟ ಸರ್ಕಾರವು ಘೋಷಿಸಿದ ನಂತರ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಈ ಯೋಜನೆಯ ಅನ್ವಯ, ನಾಲ್ಕು ವರ್ಷಗಳು ಪೂರ್ಣಗೊಂಡ ನಂತರ, ಅಗ್ನಿಪಥ್‌‌ಗೆ ಹೊಸದಾಗಿ ನೇಮಕಗೊಂಡವರಲ್ಲಿ 75% ದಷ್ಟು ಜನರು 12 ಲಕ್ಷ ರೂ. ನೊಂದಿಗೆ ಅವರ ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ. ಆದರೆ ಅವರು ಯಾವುದೇ ಪಿಂಚಣಿಗೆ ಅರ್ಹರಾಗಿರುವುದಿಲ್ಲ. ಉಳಿದ 25% ಜನರು ಸಶಸ್ತ್ರ ಪಡೆಗಳಲ್ಲಿ 15 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಬಹುದಾಗಿದೆ.

ಯೋಜನೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದರೂ, ಮೋದಿ ನೇತೃತ್ವದ ಸರ್ಕಾರವು ಅದನ್ನು ಹಿಂತೆಗೆದುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...