Homeರಾಷ್ಟ್ರೀಯ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ವಿವಾದಿತ ಯೋಜನೆ ‘ಅಗ್ನಿಪಥ್‌’ನಿಂದ ಕಡ್ಡಾಯ ನಿವೃತ್ತಿ ಹೊಂದುವ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸುವುದಾಗಿ ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರಾ ಅವರು ಹೇಳಿದ್ದಾರೆ. ಮಹೀಂದ್ರಾ ಅವರು ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸೇನೆಯ ಮಾಜಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರು, ಮಹೀಂದ್ರಾ ಗ್ರೂಪ್‌ ಈ ಹಿಂದೆ ತನ್ನ ಪ್ರಮುಖ ಹುದ್ದೆಗಳಲ್ಲಿ ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆಯೆ ಎಂದು ಪ್ರಶ್ನಿಸಿದ್ದಾರೆ.

‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ, ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುತ್ತೇವೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಗ್ನೀಪಥ್ ವಿಚಾರವಾಗಿ ನಡೆಯುವ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ, ಈಗ ನಾನು ಪುನಃ ಹೇಳುತ್ತೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳ ಲಾಭವು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಗಳನ್ನಾಗಿ ಮಾಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.

ಮಹೀಂದ್ರಾ ಅವರ ಘೋಷಣೆಯನ್ನು ಕೆಲವರು ಶ್ಲಾಘಿಸಿದರೆ, ಸೇನೆಯ ಮಾಜಿ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವರು ಮಹೀಂದ್ರಾ ಗ್ರೂಪ್ ಈ ಹಿಂದೆ ಎಷ್ಟು ಮಾಜಿ ಅಧಿಕಾರಿಗಳನ್ನು ನೇಮಿಸಿಕೊಂಡಿದೆ ಎಂದು ಗಂಭೀರ ಪ್ರಶ್ನೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ‘ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ಈ ಹೊಸ ಯೋಜನೆಗಾಗಿ ಏಕೆ ಕಾಯಬೇಕು? ಇಲ್ಲಿಯವರೆಗೆ ಸಾವಿರಾರು ಹೆಚ್ಚು ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರು (ಜವಾನರು ಮತ್ತು ಅಧಿಕಾರಿಗಳು) ಪ್ರತಿ ವರ್ಷ ನಿವೃತ್ತಿ ಹೊಂದುತ್ತಿದ್ದು, 2 ನೇ ವೃತ್ತಿಜೀವನವನ್ನು ನಡೆಸಲು ತೀವ್ರವಾಗಿ ಬಯಸುತ್ತಿದ್ದಾರೆ. ಅವರನ್ನು ಮಹೇಂದ್ರ ಗ್ರೂಪ್ ತಲುಪಿದೆಯೆ. ನಿಮ್ಮ ಗ್ರೂಪ್‌ನಿಂದ ಅಂಕಿ ಅಂಶಗಳನ್ನು ಪಡೆಯುವುದು ಒಳ್ಳೆಯದು” ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಮತ್ತು ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಅರುಣ್ ಪ್ರಕಾಶ್ ಪ್ರಶ್ನಿಸಿದ್ದಾರೆ.

“ಆನಂದ್ ಮಹೀಂದ್ರಾ ಸರ್, ಮಾಜಿ ನೌಕಾಪಡೆಯ ಮುಖ್ಯಸ್ಥರು ಕೋರಿರುವಂತೆ, ನಮಗೆ ಕೆಲವು ಅಂಕಿಅಂಶಗಳನ್ನು ನೀಡಬಹುದೇ? ಅಂತಹ ಭರವಸೆಗಳನ್ನು ಕೇಳಿ ನಾನು ನಲವತ್ತು ವರ್ಷಗಳ ಸೇವೆಯ ನಂತರ ನಿವೃತ್ತಿ ಹೊಂದಿದ್ದೇನೆ” ಎಂದು ಭಾರತೀಯ ವಾಯುಪಡೆಯ ಮಾಜಿ ಏರ್ ವೈಸ್ ಮಾರ್ಷಲ್ ಮನಮೋಹನ್ ಬಹದ್ದೂರ್ ಬರೆದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಆನಂದ್ ಮಹೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ, ಟಿಎಂಸಿ ನಾಯಕ ಸಾಕೇತ್ ಗೋಖಲೆ, “ಆನಂದ ಮಹೀಂದ್ರ ಅವರಿಗೆ ಎರಡು ಪ್ರಮುಖ ಪ್ರಶ್ನೆಗಳು. ಒಂದನೇಯದಾಗಿ, ಮಹೀಂದ್ರಾ ಗ್ರೂಪ್ ಪ್ರಸ್ತುತ ಎಷ್ಟು ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆ? ನಿಮ್ಮ ಒಟ್ಟು ಉದ್ಯೋಗಿಗಳಲ್ಲಿ ಎಷ್ಟು ಶೇಖಡ ಜನರು ಮಾಜಿ ಸೈನಿಕರಾಗಿದ್ದಾರೆ? ಎರಡನೆಯದಾಗಿ, ನಿಮ್ಮ ಹೇಳಿಕೆಯ ಹಿನ್ನಲೆಯಲ್ಲಿ ಹೇಳುವುದಾದರೆ, ಮಹೀಂದ್ರಾ ಗ್ರೂಪ್ ಸ್ಟೆಪ್‌ ಅಗ್ನಿವೀರರಿಗೆ ಶೇಖಡವಾರು ಉದ್ಯೋಗಗಳನ್ನು ಕಾಯ್ದಿರಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್‌ ಅನ್ನು ಉಲ್ಲೇಖಿಸಿ RPG ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕೂಡಾ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. “ಆರ್‌ಪಿಜಿ ಗ್ರೂಪ್‌ ಕೂಡ ಅಗ್ನಿವೀರ್‌ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

17.5 ರಿಂದ 21 ವಯಸ್ಸಿನೊಳಗಿನ ಸೇನಾ ಉದ್ಯೋಗಾಕಾಂಕ್ಷಿಗಳನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ್’ ಯೋಜನೆಯನ್ನು ಒಕ್ಕೂಟ ಸರ್ಕಾರವು ಘೋಷಿಸಿದ ನಂತರ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಈ ಯೋಜನೆಯ ಅನ್ವಯ, ನಾಲ್ಕು ವರ್ಷಗಳು ಪೂರ್ಣಗೊಂಡ ನಂತರ, ಅಗ್ನಿಪಥ್‌‌ಗೆ ಹೊಸದಾಗಿ ನೇಮಕಗೊಂಡವರಲ್ಲಿ 75% ದಷ್ಟು ಜನರು 12 ಲಕ್ಷ ರೂ. ನೊಂದಿಗೆ ಅವರ ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ. ಆದರೆ ಅವರು ಯಾವುದೇ ಪಿಂಚಣಿಗೆ ಅರ್ಹರಾಗಿರುವುದಿಲ್ಲ. ಉಳಿದ 25% ಜನರು ಸಶಸ್ತ್ರ ಪಡೆಗಳಲ್ಲಿ 15 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಬಹುದಾಗಿದೆ.

ಯೋಜನೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದರೂ, ಮೋದಿ ನೇತೃತ್ವದ ಸರ್ಕಾರವು ಅದನ್ನು ಹಿಂತೆಗೆದುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....