Homeಮುಖಪುಟಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

ಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಆಪರೇಷನ್ ಸಿಂಧೂರದಲ್ಲಿ ಭಾರತೀಯ ವಿಮಾನಗಳ ನಷ್ಟದ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಮೇಲಿನ ಟೀಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮತ್ತೆ ಮುಂದುವರೆಸಿದ್ದಾರೆ. ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?” ಎಂಬ ಪ್ರಶ್ನೆಯನ್ನು ಮತ್ತೆ ಕೇಳಿದ್ದಾರೆ.

ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ತಮ್ಮ ಈ ಹಿಂದಿನ ಪೋಸ್ಟ್ ಅನ್ನು ಮತ್ತೆ ಹಂಚಿಕೊಂಡಿದ್ದು, ಪ್ರಶ್ನೆಯನ್ನು ಪುನರುಚ್ಛರಿಸಿದ್ದಾರೆ. “ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವು ಕೇವಲಷ್ಟೆ ಹೇಳುತ್ತಿಲ್ಲ – ಅದು ಖಂಡನೀಯ. ಹಾಗಾಗಿ ನಾನು ಮತ್ತೆ ಕೇಳುತ್ತೇನೆ: ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ? ಇದು ಒಂದು ಲೋಪವಲ್ಲ. ಇದು ಅಪರಾಧವಾಗಿದೆ. ಮತ್ತು ದೇಶಕ್ಕೆ ಸತ್ಯಕ್ಕೆ ತಿಳಿಯಬೇಕಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಆರಂಭದಲ್ಲಿ ಭಾರತವು ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಸಚಿವ ಜೈಶಂಕರ್ ಅವರ ಹಿಂದಿನ ಹೇಳಿಕೆಗಳ ವಿಡಿಯೊವನ್ನು ಉಲ್ಲೇಖಿಸಿ ಅವರು ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಈ ಹಿಂದಿನ ಟ್ವೀಟ್‌ನಲ್ಲಿ, “ನಮ್ಮ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಇದನ್ನು ಮಾಡಿದೆ ಎಂದು ವಿದೇಶಾಂಗ ಸಚಿವ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದಾರೆ? ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು?” ಎಂದು ಕೇಳಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, “ಆಪರೇಷನ್ ಸಿಂಧೂರ ಆರಂಭದ ನಂತರದ ಆರಂಭಿಕ ಹಂತವಾದ ಆರಂಭದಲ್ಲಿಯೇ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆವು ಎಂದು ವಿದೇಶಾಂಗ ಸಚಿವರು ಹೇಳಿದ್ದರು. ಇದನ್ನು ಆರಂಭಕ್ಕೂ ಮುನ್ನ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ. ಸತ್ಯಗಳ ಬದಲಿಗೆ ಈ ಸಂಪೂರ್ಣ ತಪ್ಪು ನಿರೂಪಣೆಯನ್ನು ಹೊರತರಲಾಗುತ್ತಿದೆ” ಎಂದು ತಿಳಿಸಿದೆ.

ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿಯವರ ಮೂರ್ಖತನ ಕೇವಲ ಆಕಸ್ಮಿಕವಲ್ಲ – ಅದು ಕೆಟ್ಟದು. ಅವರು ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮೇ 15 ರಂದು, ಜೈಶಂಕರ್ ಹೀಗೆ ಹೇಳಿದ್ದರು: “ಕಾರ್ಯಾಚರಣೆಯ ಆರಂಭದಲ್ಲಿ, ನಾವು ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಎಂದು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೆವು. ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ. ಆದ್ದರಿಂದ ಮಿಲಿಟರಿಗೆ ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಅವರು ಆ ಉತ್ತಮ ಸಲಹೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರು.”

ಆಪರೇಷನ್ ಸಿಂಧೂರದಲ್ಲಿ ಪ್ರಾರಂಭವಾದ ನಂತರ ನಡೆದ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ಪಾಕಿಸ್ತಾನಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ನಡುವಿನ ಸಂಭಾಷಣೆಯನ್ನು ಸಚಿವ ಜೈ ಶಂಕರ್ ಉಲ್ಲೇಖಿಸುತ್ತಿದ್ದರು.

ಅದಾಗ್ಯೂ, ಭಾರತವು ಫೈಟರ್ ಜೆಟ್‌ಗಳನ್ನು ಕಳೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಅವರು ಅಲ್ ಜಜೀರಾ ಜೊತೆಗೆ ಮಾತನಾಡುತ್ತಾ, ಪಾಕಿಸ್ತಾನವು ಐದು ಭಾರತೀಯ ಜೆಟ್‌ಗಳು, ಒಂದು ಡ್ರೋನ್ ಮತ್ತು ಹಲವಾರು ಕ್ವಾಡ್‌ಕಾಪ್ಟರ್‌ಗಳನ್ನು ಹೊಡೆದುರುಳಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ತಿಳಿಸಿದ್ದರು.

ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ವಿಮಾನಗಳನ್ನು ಭಾರತೀಯ ಪ್ರದೇಶದೊಳಗೆ ಹೊಡೆದುರುಳಿಸಲಾಗಿದೆ ಮತ್ತು ಸಂಘರ್ಷದ ಸಮಯದಲ್ಲಿ ಯಾವುದೇ ಕಡೆಯವರು ಪರಸ್ಪರರ ವಾಯುಪ್ರದೇಶವನ್ನು ದಾಟಿಲ್ಲ ಎಂದು ದೃಢಪಡಿಸಿದ್ದರು. ಈ ಹೇಳಿಕೆಯನ್ನು ಭಾರತವು ಅನುಮೋದಿಸಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೇ 9 ರಂದು, ಪಾಕಿಸ್ತಾನದ ವಾಯುಪಡೆಯ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಅವರು ಪತನಗೊಂಡ ಐದು ವಿಮಾನಗಳಲ್ಲಿ ಮೂರು ರಫೇಲ್‌ಗಳು, ಒಂದು ಮಿಗ್ -29 ಮತ್ತು ಒಂದು ಸು -30 ಸೇರಿವೆ ಎಂದು ಹೇಳಿಕೊಂಡಿದ್ದು, ವಿಮಾನಗಳು ಎಲ್ಲಿ ಹೊಡೆದುರುಳಿಸಲಾಗಿದೆ ಎಂಬುದರ ಎಲೆಕ್ಟ್ರಾನಿಕ್ ಸಹಿಗಳು ಮತ್ತು ನಿರ್ದಿಷ್ಟ ನಿರ್ದೇಶಾಂಕಗಳನ್ನು ಸಹ ಪ್ರಸ್ತುತಪಡಿಸಿದ್ದರು.

ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ದಿ ಗ್ಲೋಬಲ್ ಟೈಮ್ಸ್ ಮೇ 14 ರಂದು ಪಾಕಿಸ್ತಾನವು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು. ಅದಾಗ್ಯೂ, ಚೀನಾದಲ್ಲಿರುವ ಭಾರತದ ರಾಯಭಾರ ಕಚೇರಿ ಈ ವರದಿಯನ್ನು “ತಪ್ಪು ಮಾಹಿತಿ” ಎಂದು ಕರೆದಿದೆ. ಆದರೆ, ವರದಿಯಾದ ನಷ್ಟಗಳ ಬಗ್ಗೆ ಭಾರತವು ಔಪಚಾರಿಕ ದೃಢೀಕರಣ ಅಥವಾ ನಿರಾಕರಣೆಯನ್ನು ಈ ವರೆಗೆ ನೀಡಿಲ್ಲ.

ಕದನ ವಿರಾಮ ಘೋಷಣೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾರತದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, “ನಾವು ಯುದ್ಧ ಸನ್ನಿವೇಶದಲ್ಲಿದ್ದೇವೆ ಮತ್ತು ನಷ್ಟಗಳು ಅದರ ಒಂದು ಭಾಗವಾಗಿದೆ. ವಿವರಗಳಿಗೆ ಸಂಬಂಧಿಸಿದಂತೆ, ಈ ಸಮಯದಲ್ಲಿ ನಾವು ಇನ್ನೂ ಯುದ್ಧದಲ್ಲಿರುವುದರಿಂದ ಮತ್ತು ಎದುರಾಳಿಗೆ ಅನುಕೂಲವನ್ನು ನೀಡುವುದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮ ಎಲ್ಲಾ ಪೈಲಟ್‌ಗಳು ಮನೆಗೆ ಮರಳಿದ್ದಾರೆ.” ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...