Homeಮುಖಪುಟಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

ಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಆಪರೇಷನ್ ಸಿಂಧೂರದಲ್ಲಿ ಭಾರತೀಯ ವಿಮಾನಗಳ ನಷ್ಟದ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಮೇಲಿನ ಟೀಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮತ್ತೆ ಮುಂದುವರೆಸಿದ್ದಾರೆ. ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?” ಎಂಬ ಪ್ರಶ್ನೆಯನ್ನು ಮತ್ತೆ ಕೇಳಿದ್ದಾರೆ.

ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ತಮ್ಮ ಈ ಹಿಂದಿನ ಪೋಸ್ಟ್ ಅನ್ನು ಮತ್ತೆ ಹಂಚಿಕೊಂಡಿದ್ದು, ಪ್ರಶ್ನೆಯನ್ನು ಪುನರುಚ್ಛರಿಸಿದ್ದಾರೆ. “ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವು ಕೇವಲಷ್ಟೆ ಹೇಳುತ್ತಿಲ್ಲ – ಅದು ಖಂಡನೀಯ. ಹಾಗಾಗಿ ನಾನು ಮತ್ತೆ ಕೇಳುತ್ತೇನೆ: ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ? ಇದು ಒಂದು ಲೋಪವಲ್ಲ. ಇದು ಅಪರಾಧವಾಗಿದೆ. ಮತ್ತು ದೇಶಕ್ಕೆ ಸತ್ಯಕ್ಕೆ ತಿಳಿಯಬೇಕಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಆರಂಭದಲ್ಲಿ ಭಾರತವು ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಸಚಿವ ಜೈಶಂಕರ್ ಅವರ ಹಿಂದಿನ ಹೇಳಿಕೆಗಳ ವಿಡಿಯೊವನ್ನು ಉಲ್ಲೇಖಿಸಿ ಅವರು ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಈ ಹಿಂದಿನ ಟ್ವೀಟ್‌ನಲ್ಲಿ, “ನಮ್ಮ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಇದನ್ನು ಮಾಡಿದೆ ಎಂದು ವಿದೇಶಾಂಗ ಸಚಿವ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದಾರೆ? ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು?” ಎಂದು ಕೇಳಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, “ಆಪರೇಷನ್ ಸಿಂಧೂರ ಆರಂಭದ ನಂತರದ ಆರಂಭಿಕ ಹಂತವಾದ ಆರಂಭದಲ್ಲಿಯೇ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆವು ಎಂದು ವಿದೇಶಾಂಗ ಸಚಿವರು ಹೇಳಿದ್ದರು. ಇದನ್ನು ಆರಂಭಕ್ಕೂ ಮುನ್ನ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ. ಸತ್ಯಗಳ ಬದಲಿಗೆ ಈ ಸಂಪೂರ್ಣ ತಪ್ಪು ನಿರೂಪಣೆಯನ್ನು ಹೊರತರಲಾಗುತ್ತಿದೆ” ಎಂದು ತಿಳಿಸಿದೆ.

ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿಯವರ ಮೂರ್ಖತನ ಕೇವಲ ಆಕಸ್ಮಿಕವಲ್ಲ – ಅದು ಕೆಟ್ಟದು. ಅವರು ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮೇ 15 ರಂದು, ಜೈಶಂಕರ್ ಹೀಗೆ ಹೇಳಿದ್ದರು: “ಕಾರ್ಯಾಚರಣೆಯ ಆರಂಭದಲ್ಲಿ, ನಾವು ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಎಂದು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೆವು. ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ. ಆದ್ದರಿಂದ ಮಿಲಿಟರಿಗೆ ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಅವರು ಆ ಉತ್ತಮ ಸಲಹೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರು.”

ಆಪರೇಷನ್ ಸಿಂಧೂರದಲ್ಲಿ ಪ್ರಾರಂಭವಾದ ನಂತರ ನಡೆದ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ಪಾಕಿಸ್ತಾನಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ನಡುವಿನ ಸಂಭಾಷಣೆಯನ್ನು ಸಚಿವ ಜೈ ಶಂಕರ್ ಉಲ್ಲೇಖಿಸುತ್ತಿದ್ದರು.

ಅದಾಗ್ಯೂ, ಭಾರತವು ಫೈಟರ್ ಜೆಟ್‌ಗಳನ್ನು ಕಳೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಅವರು ಅಲ್ ಜಜೀರಾ ಜೊತೆಗೆ ಮಾತನಾಡುತ್ತಾ, ಪಾಕಿಸ್ತಾನವು ಐದು ಭಾರತೀಯ ಜೆಟ್‌ಗಳು, ಒಂದು ಡ್ರೋನ್ ಮತ್ತು ಹಲವಾರು ಕ್ವಾಡ್‌ಕಾಪ್ಟರ್‌ಗಳನ್ನು ಹೊಡೆದುರುಳಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ತಿಳಿಸಿದ್ದರು.

ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ವಿಮಾನಗಳನ್ನು ಭಾರತೀಯ ಪ್ರದೇಶದೊಳಗೆ ಹೊಡೆದುರುಳಿಸಲಾಗಿದೆ ಮತ್ತು ಸಂಘರ್ಷದ ಸಮಯದಲ್ಲಿ ಯಾವುದೇ ಕಡೆಯವರು ಪರಸ್ಪರರ ವಾಯುಪ್ರದೇಶವನ್ನು ದಾಟಿಲ್ಲ ಎಂದು ದೃಢಪಡಿಸಿದ್ದರು. ಈ ಹೇಳಿಕೆಯನ್ನು ಭಾರತವು ಅನುಮೋದಿಸಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೇ 9 ರಂದು, ಪಾಕಿಸ್ತಾನದ ವಾಯುಪಡೆಯ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಅವರು ಪತನಗೊಂಡ ಐದು ವಿಮಾನಗಳಲ್ಲಿ ಮೂರು ರಫೇಲ್‌ಗಳು, ಒಂದು ಮಿಗ್ -29 ಮತ್ತು ಒಂದು ಸು -30 ಸೇರಿವೆ ಎಂದು ಹೇಳಿಕೊಂಡಿದ್ದು, ವಿಮಾನಗಳು ಎಲ್ಲಿ ಹೊಡೆದುರುಳಿಸಲಾಗಿದೆ ಎಂಬುದರ ಎಲೆಕ್ಟ್ರಾನಿಕ್ ಸಹಿಗಳು ಮತ್ತು ನಿರ್ದಿಷ್ಟ ನಿರ್ದೇಶಾಂಕಗಳನ್ನು ಸಹ ಪ್ರಸ್ತುತಪಡಿಸಿದ್ದರು.

ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ದಿ ಗ್ಲೋಬಲ್ ಟೈಮ್ಸ್ ಮೇ 14 ರಂದು ಪಾಕಿಸ್ತಾನವು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು. ಅದಾಗ್ಯೂ, ಚೀನಾದಲ್ಲಿರುವ ಭಾರತದ ರಾಯಭಾರ ಕಚೇರಿ ಈ ವರದಿಯನ್ನು “ತಪ್ಪು ಮಾಹಿತಿ” ಎಂದು ಕರೆದಿದೆ. ಆದರೆ, ವರದಿಯಾದ ನಷ್ಟಗಳ ಬಗ್ಗೆ ಭಾರತವು ಔಪಚಾರಿಕ ದೃಢೀಕರಣ ಅಥವಾ ನಿರಾಕರಣೆಯನ್ನು ಈ ವರೆಗೆ ನೀಡಿಲ್ಲ.

ಕದನ ವಿರಾಮ ಘೋಷಣೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾರತದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, “ನಾವು ಯುದ್ಧ ಸನ್ನಿವೇಶದಲ್ಲಿದ್ದೇವೆ ಮತ್ತು ನಷ್ಟಗಳು ಅದರ ಒಂದು ಭಾಗವಾಗಿದೆ. ವಿವರಗಳಿಗೆ ಸಂಬಂಧಿಸಿದಂತೆ, ಈ ಸಮಯದಲ್ಲಿ ನಾವು ಇನ್ನೂ ಯುದ್ಧದಲ್ಲಿರುವುದರಿಂದ ಮತ್ತು ಎದುರಾಳಿಗೆ ಅನುಕೂಲವನ್ನು ನೀಡುವುದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮ ಎಲ್ಲಾ ಪೈಲಟ್‌ಗಳು ಮನೆಗೆ ಮರಳಿದ್ದಾರೆ.” ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...