Homeಮುಖಪುಟಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

ಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಆಪರೇಷನ್ ಸಿಂಧೂರದಲ್ಲಿ ಭಾರತೀಯ ವಿಮಾನಗಳ ನಷ್ಟದ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಮೇಲಿನ ಟೀಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮತ್ತೆ ಮುಂದುವರೆಸಿದ್ದಾರೆ. ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?” ಎಂಬ ಪ್ರಶ್ನೆಯನ್ನು ಮತ್ತೆ ಕೇಳಿದ್ದಾರೆ.

ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ತಮ್ಮ ಈ ಹಿಂದಿನ ಪೋಸ್ಟ್ ಅನ್ನು ಮತ್ತೆ ಹಂಚಿಕೊಂಡಿದ್ದು, ಪ್ರಶ್ನೆಯನ್ನು ಪುನರುಚ್ಛರಿಸಿದ್ದಾರೆ. “ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವು ಕೇವಲಷ್ಟೆ ಹೇಳುತ್ತಿಲ್ಲ – ಅದು ಖಂಡನೀಯ. ಹಾಗಾಗಿ ನಾನು ಮತ್ತೆ ಕೇಳುತ್ತೇನೆ: ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ? ಇದು ಒಂದು ಲೋಪವಲ್ಲ. ಇದು ಅಪರಾಧವಾಗಿದೆ. ಮತ್ತು ದೇಶಕ್ಕೆ ಸತ್ಯಕ್ಕೆ ತಿಳಿಯಬೇಕಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಆರಂಭದಲ್ಲಿ ಭಾರತವು ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಸಚಿವ ಜೈಶಂಕರ್ ಅವರ ಹಿಂದಿನ ಹೇಳಿಕೆಗಳ ವಿಡಿಯೊವನ್ನು ಉಲ್ಲೇಖಿಸಿ ಅವರು ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಈ ಹಿಂದಿನ ಟ್ವೀಟ್‌ನಲ್ಲಿ, “ನಮ್ಮ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಇದನ್ನು ಮಾಡಿದೆ ಎಂದು ವಿದೇಶಾಂಗ ಸಚಿವ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದಾರೆ? ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು?” ಎಂದು ಕೇಳಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, “ಆಪರೇಷನ್ ಸಿಂಧೂರ ಆರಂಭದ ನಂತರದ ಆರಂಭಿಕ ಹಂತವಾದ ಆರಂಭದಲ್ಲಿಯೇ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆವು ಎಂದು ವಿದೇಶಾಂಗ ಸಚಿವರು ಹೇಳಿದ್ದರು. ಇದನ್ನು ಆರಂಭಕ್ಕೂ ಮುನ್ನ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ. ಸತ್ಯಗಳ ಬದಲಿಗೆ ಈ ಸಂಪೂರ್ಣ ತಪ್ಪು ನಿರೂಪಣೆಯನ್ನು ಹೊರತರಲಾಗುತ್ತಿದೆ” ಎಂದು ತಿಳಿಸಿದೆ.

ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿಯವರ ಮೂರ್ಖತನ ಕೇವಲ ಆಕಸ್ಮಿಕವಲ್ಲ – ಅದು ಕೆಟ್ಟದು. ಅವರು ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮೇ 15 ರಂದು, ಜೈಶಂಕರ್ ಹೀಗೆ ಹೇಳಿದ್ದರು: “ಕಾರ್ಯಾಚರಣೆಯ ಆರಂಭದಲ್ಲಿ, ನಾವು ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಎಂದು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೆವು. ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ. ಆದ್ದರಿಂದ ಮಿಲಿಟರಿಗೆ ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಅವರು ಆ ಉತ್ತಮ ಸಲಹೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರು.”

ಆಪರೇಷನ್ ಸಿಂಧೂರದಲ್ಲಿ ಪ್ರಾರಂಭವಾದ ನಂತರ ನಡೆದ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ಪಾಕಿಸ್ತಾನಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ನಡುವಿನ ಸಂಭಾಷಣೆಯನ್ನು ಸಚಿವ ಜೈ ಶಂಕರ್ ಉಲ್ಲೇಖಿಸುತ್ತಿದ್ದರು.

ಅದಾಗ್ಯೂ, ಭಾರತವು ಫೈಟರ್ ಜೆಟ್‌ಗಳನ್ನು ಕಳೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಅವರು ಅಲ್ ಜಜೀರಾ ಜೊತೆಗೆ ಮಾತನಾಡುತ್ತಾ, ಪಾಕಿಸ್ತಾನವು ಐದು ಭಾರತೀಯ ಜೆಟ್‌ಗಳು, ಒಂದು ಡ್ರೋನ್ ಮತ್ತು ಹಲವಾರು ಕ್ವಾಡ್‌ಕಾಪ್ಟರ್‌ಗಳನ್ನು ಹೊಡೆದುರುಳಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ತಿಳಿಸಿದ್ದರು.

ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ವಿಮಾನಗಳನ್ನು ಭಾರತೀಯ ಪ್ರದೇಶದೊಳಗೆ ಹೊಡೆದುರುಳಿಸಲಾಗಿದೆ ಮತ್ತು ಸಂಘರ್ಷದ ಸಮಯದಲ್ಲಿ ಯಾವುದೇ ಕಡೆಯವರು ಪರಸ್ಪರರ ವಾಯುಪ್ರದೇಶವನ್ನು ದಾಟಿಲ್ಲ ಎಂದು ದೃಢಪಡಿಸಿದ್ದರು. ಈ ಹೇಳಿಕೆಯನ್ನು ಭಾರತವು ಅನುಮೋದಿಸಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೇ 9 ರಂದು, ಪಾಕಿಸ್ತಾನದ ವಾಯುಪಡೆಯ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಅವರು ಪತನಗೊಂಡ ಐದು ವಿಮಾನಗಳಲ್ಲಿ ಮೂರು ರಫೇಲ್‌ಗಳು, ಒಂದು ಮಿಗ್ -29 ಮತ್ತು ಒಂದು ಸು -30 ಸೇರಿವೆ ಎಂದು ಹೇಳಿಕೊಂಡಿದ್ದು, ವಿಮಾನಗಳು ಎಲ್ಲಿ ಹೊಡೆದುರುಳಿಸಲಾಗಿದೆ ಎಂಬುದರ ಎಲೆಕ್ಟ್ರಾನಿಕ್ ಸಹಿಗಳು ಮತ್ತು ನಿರ್ದಿಷ್ಟ ನಿರ್ದೇಶಾಂಕಗಳನ್ನು ಸಹ ಪ್ರಸ್ತುತಪಡಿಸಿದ್ದರು.

ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ದಿ ಗ್ಲೋಬಲ್ ಟೈಮ್ಸ್ ಮೇ 14 ರಂದು ಪಾಕಿಸ್ತಾನವು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು. ಅದಾಗ್ಯೂ, ಚೀನಾದಲ್ಲಿರುವ ಭಾರತದ ರಾಯಭಾರ ಕಚೇರಿ ಈ ವರದಿಯನ್ನು “ತಪ್ಪು ಮಾಹಿತಿ” ಎಂದು ಕರೆದಿದೆ. ಆದರೆ, ವರದಿಯಾದ ನಷ್ಟಗಳ ಬಗ್ಗೆ ಭಾರತವು ಔಪಚಾರಿಕ ದೃಢೀಕರಣ ಅಥವಾ ನಿರಾಕರಣೆಯನ್ನು ಈ ವರೆಗೆ ನೀಡಿಲ್ಲ.

ಕದನ ವಿರಾಮ ಘೋಷಣೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾರತದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, “ನಾವು ಯುದ್ಧ ಸನ್ನಿವೇಶದಲ್ಲಿದ್ದೇವೆ ಮತ್ತು ನಷ್ಟಗಳು ಅದರ ಒಂದು ಭಾಗವಾಗಿದೆ. ವಿವರಗಳಿಗೆ ಸಂಬಂಧಿಸಿದಂತೆ, ಈ ಸಮಯದಲ್ಲಿ ನಾವು ಇನ್ನೂ ಯುದ್ಧದಲ್ಲಿರುವುದರಿಂದ ಮತ್ತು ಎದುರಾಳಿಗೆ ಅನುಕೂಲವನ್ನು ನೀಡುವುದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮ ಎಲ್ಲಾ ಪೈಲಟ್‌ಗಳು ಮನೆಗೆ ಮರಳಿದ್ದಾರೆ.” ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...