Homeಮುಖಪುಟಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

ಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಆಪರೇಷನ್ ಸಿಂಧೂರದಲ್ಲಿ ಭಾರತೀಯ ವಿಮಾನಗಳ ನಷ್ಟದ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಮೇಲಿನ ಟೀಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮತ್ತೆ ಮುಂದುವರೆಸಿದ್ದಾರೆ. ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?” ಎಂಬ ಪ್ರಶ್ನೆಯನ್ನು ಮತ್ತೆ ಕೇಳಿದ್ದಾರೆ.

ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ತಮ್ಮ ಈ ಹಿಂದಿನ ಪೋಸ್ಟ್ ಅನ್ನು ಮತ್ತೆ ಹಂಚಿಕೊಂಡಿದ್ದು, ಪ್ರಶ್ನೆಯನ್ನು ಪುನರುಚ್ಛರಿಸಿದ್ದಾರೆ. “ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವು ಕೇವಲಷ್ಟೆ ಹೇಳುತ್ತಿಲ್ಲ – ಅದು ಖಂಡನೀಯ. ಹಾಗಾಗಿ ನಾನು ಮತ್ತೆ ಕೇಳುತ್ತೇನೆ: ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ? ಇದು ಒಂದು ಲೋಪವಲ್ಲ. ಇದು ಅಪರಾಧವಾಗಿದೆ. ಮತ್ತು ದೇಶಕ್ಕೆ ಸತ್ಯಕ್ಕೆ ತಿಳಿಯಬೇಕಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಆರಂಭದಲ್ಲಿ ಭಾರತವು ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಸಚಿವ ಜೈಶಂಕರ್ ಅವರ ಹಿಂದಿನ ಹೇಳಿಕೆಗಳ ವಿಡಿಯೊವನ್ನು ಉಲ್ಲೇಖಿಸಿ ಅವರು ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಈ ಹಿಂದಿನ ಟ್ವೀಟ್‌ನಲ್ಲಿ, “ನಮ್ಮ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಇದನ್ನು ಮಾಡಿದೆ ಎಂದು ವಿದೇಶಾಂಗ ಸಚಿವ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದಾರೆ? ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು?” ಎಂದು ಕೇಳಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, “ಆಪರೇಷನ್ ಸಿಂಧೂರ ಆರಂಭದ ನಂತರದ ಆರಂಭಿಕ ಹಂತವಾದ ಆರಂಭದಲ್ಲಿಯೇ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆವು ಎಂದು ವಿದೇಶಾಂಗ ಸಚಿವರು ಹೇಳಿದ್ದರು. ಇದನ್ನು ಆರಂಭಕ್ಕೂ ಮುನ್ನ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ. ಸತ್ಯಗಳ ಬದಲಿಗೆ ಈ ಸಂಪೂರ್ಣ ತಪ್ಪು ನಿರೂಪಣೆಯನ್ನು ಹೊರತರಲಾಗುತ್ತಿದೆ” ಎಂದು ತಿಳಿಸಿದೆ.

ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿಯವರ ಮೂರ್ಖತನ ಕೇವಲ ಆಕಸ್ಮಿಕವಲ್ಲ – ಅದು ಕೆಟ್ಟದು. ಅವರು ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮೇ 15 ರಂದು, ಜೈಶಂಕರ್ ಹೀಗೆ ಹೇಳಿದ್ದರು: “ಕಾರ್ಯಾಚರಣೆಯ ಆರಂಭದಲ್ಲಿ, ನಾವು ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಎಂದು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೆವು. ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ. ಆದ್ದರಿಂದ ಮಿಲಿಟರಿಗೆ ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಅವರು ಆ ಉತ್ತಮ ಸಲಹೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರು.”

ಆಪರೇಷನ್ ಸಿಂಧೂರದಲ್ಲಿ ಪ್ರಾರಂಭವಾದ ನಂತರ ನಡೆದ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ಪಾಕಿಸ್ತಾನಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ನಡುವಿನ ಸಂಭಾಷಣೆಯನ್ನು ಸಚಿವ ಜೈ ಶಂಕರ್ ಉಲ್ಲೇಖಿಸುತ್ತಿದ್ದರು.

ಅದಾಗ್ಯೂ, ಭಾರತವು ಫೈಟರ್ ಜೆಟ್‌ಗಳನ್ನು ಕಳೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಅವರು ಅಲ್ ಜಜೀರಾ ಜೊತೆಗೆ ಮಾತನಾಡುತ್ತಾ, ಪಾಕಿಸ್ತಾನವು ಐದು ಭಾರತೀಯ ಜೆಟ್‌ಗಳು, ಒಂದು ಡ್ರೋನ್ ಮತ್ತು ಹಲವಾರು ಕ್ವಾಡ್‌ಕಾಪ್ಟರ್‌ಗಳನ್ನು ಹೊಡೆದುರುಳಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ತಿಳಿಸಿದ್ದರು.

ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ವಿಮಾನಗಳನ್ನು ಭಾರತೀಯ ಪ್ರದೇಶದೊಳಗೆ ಹೊಡೆದುರುಳಿಸಲಾಗಿದೆ ಮತ್ತು ಸಂಘರ್ಷದ ಸಮಯದಲ್ಲಿ ಯಾವುದೇ ಕಡೆಯವರು ಪರಸ್ಪರರ ವಾಯುಪ್ರದೇಶವನ್ನು ದಾಟಿಲ್ಲ ಎಂದು ದೃಢಪಡಿಸಿದ್ದರು. ಈ ಹೇಳಿಕೆಯನ್ನು ಭಾರತವು ಅನುಮೋದಿಸಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೇ 9 ರಂದು, ಪಾಕಿಸ್ತಾನದ ವಾಯುಪಡೆಯ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಅವರು ಪತನಗೊಂಡ ಐದು ವಿಮಾನಗಳಲ್ಲಿ ಮೂರು ರಫೇಲ್‌ಗಳು, ಒಂದು ಮಿಗ್ -29 ಮತ್ತು ಒಂದು ಸು -30 ಸೇರಿವೆ ಎಂದು ಹೇಳಿಕೊಂಡಿದ್ದು, ವಿಮಾನಗಳು ಎಲ್ಲಿ ಹೊಡೆದುರುಳಿಸಲಾಗಿದೆ ಎಂಬುದರ ಎಲೆಕ್ಟ್ರಾನಿಕ್ ಸಹಿಗಳು ಮತ್ತು ನಿರ್ದಿಷ್ಟ ನಿರ್ದೇಶಾಂಕಗಳನ್ನು ಸಹ ಪ್ರಸ್ತುತಪಡಿಸಿದ್ದರು.

ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ದಿ ಗ್ಲೋಬಲ್ ಟೈಮ್ಸ್ ಮೇ 14 ರಂದು ಪಾಕಿಸ್ತಾನವು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು. ಅದಾಗ್ಯೂ, ಚೀನಾದಲ್ಲಿರುವ ಭಾರತದ ರಾಯಭಾರ ಕಚೇರಿ ಈ ವರದಿಯನ್ನು “ತಪ್ಪು ಮಾಹಿತಿ” ಎಂದು ಕರೆದಿದೆ. ಆದರೆ, ವರದಿಯಾದ ನಷ್ಟಗಳ ಬಗ್ಗೆ ಭಾರತವು ಔಪಚಾರಿಕ ದೃಢೀಕರಣ ಅಥವಾ ನಿರಾಕರಣೆಯನ್ನು ಈ ವರೆಗೆ ನೀಡಿಲ್ಲ.

ಕದನ ವಿರಾಮ ಘೋಷಣೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾರತದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, “ನಾವು ಯುದ್ಧ ಸನ್ನಿವೇಶದಲ್ಲಿದ್ದೇವೆ ಮತ್ತು ನಷ್ಟಗಳು ಅದರ ಒಂದು ಭಾಗವಾಗಿದೆ. ವಿವರಗಳಿಗೆ ಸಂಬಂಧಿಸಿದಂತೆ, ಈ ಸಮಯದಲ್ಲಿ ನಾವು ಇನ್ನೂ ಯುದ್ಧದಲ್ಲಿರುವುದರಿಂದ ಮತ್ತು ಎದುರಾಳಿಗೆ ಅನುಕೂಲವನ್ನು ನೀಡುವುದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮ ಎಲ್ಲಾ ಪೈಲಟ್‌ಗಳು ಮನೆಗೆ ಮರಳಿದ್ದಾರೆ.” ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...