Homeಮುಖಪುಟಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

ಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಆಪರೇಷನ್ ಸಿಂಧೂರದಲ್ಲಿ ಭಾರತೀಯ ವಿಮಾನಗಳ ನಷ್ಟದ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಮೇಲಿನ ಟೀಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮತ್ತೆ ಮುಂದುವರೆಸಿದ್ದಾರೆ. ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?” ಎಂಬ ಪ್ರಶ್ನೆಯನ್ನು ಮತ್ತೆ ಕೇಳಿದ್ದಾರೆ.

ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ತಮ್ಮ ಈ ಹಿಂದಿನ ಪೋಸ್ಟ್ ಅನ್ನು ಮತ್ತೆ ಹಂಚಿಕೊಂಡಿದ್ದು, ಪ್ರಶ್ನೆಯನ್ನು ಪುನರುಚ್ಛರಿಸಿದ್ದಾರೆ. “ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವು ಕೇವಲಷ್ಟೆ ಹೇಳುತ್ತಿಲ್ಲ – ಅದು ಖಂಡನೀಯ. ಹಾಗಾಗಿ ನಾನು ಮತ್ತೆ ಕೇಳುತ್ತೇನೆ: ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ? ಇದು ಒಂದು ಲೋಪವಲ್ಲ. ಇದು ಅಪರಾಧವಾಗಿದೆ. ಮತ್ತು ದೇಶಕ್ಕೆ ಸತ್ಯಕ್ಕೆ ತಿಳಿಯಬೇಕಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಆರಂಭದಲ್ಲಿ ಭಾರತವು ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಸಚಿವ ಜೈಶಂಕರ್ ಅವರ ಹಿಂದಿನ ಹೇಳಿಕೆಗಳ ವಿಡಿಯೊವನ್ನು ಉಲ್ಲೇಖಿಸಿ ಅವರು ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಈ ಹಿಂದಿನ ಟ್ವೀಟ್‌ನಲ್ಲಿ, “ನಮ್ಮ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಇದನ್ನು ಮಾಡಿದೆ ಎಂದು ವಿದೇಶಾಂಗ ಸಚಿವ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದಾರೆ? ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು?” ಎಂದು ಕೇಳಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, “ಆಪರೇಷನ್ ಸಿಂಧೂರ ಆರಂಭದ ನಂತರದ ಆರಂಭಿಕ ಹಂತವಾದ ಆರಂಭದಲ್ಲಿಯೇ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆವು ಎಂದು ವಿದೇಶಾಂಗ ಸಚಿವರು ಹೇಳಿದ್ದರು. ಇದನ್ನು ಆರಂಭಕ್ಕೂ ಮುನ್ನ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ. ಸತ್ಯಗಳ ಬದಲಿಗೆ ಈ ಸಂಪೂರ್ಣ ತಪ್ಪು ನಿರೂಪಣೆಯನ್ನು ಹೊರತರಲಾಗುತ್ತಿದೆ” ಎಂದು ತಿಳಿಸಿದೆ.

ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿಯವರ ಮೂರ್ಖತನ ಕೇವಲ ಆಕಸ್ಮಿಕವಲ್ಲ – ಅದು ಕೆಟ್ಟದು. ಅವರು ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮೇ 15 ರಂದು, ಜೈಶಂಕರ್ ಹೀಗೆ ಹೇಳಿದ್ದರು: “ಕಾರ್ಯಾಚರಣೆಯ ಆರಂಭದಲ್ಲಿ, ನಾವು ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಎಂದು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೆವು. ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ. ಆದ್ದರಿಂದ ಮಿಲಿಟರಿಗೆ ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಅವರು ಆ ಉತ್ತಮ ಸಲಹೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರು.”

ಆಪರೇಷನ್ ಸಿಂಧೂರದಲ್ಲಿ ಪ್ರಾರಂಭವಾದ ನಂತರ ನಡೆದ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ಪಾಕಿಸ್ತಾನಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ನಡುವಿನ ಸಂಭಾಷಣೆಯನ್ನು ಸಚಿವ ಜೈ ಶಂಕರ್ ಉಲ್ಲೇಖಿಸುತ್ತಿದ್ದರು.

ಅದಾಗ್ಯೂ, ಭಾರತವು ಫೈಟರ್ ಜೆಟ್‌ಗಳನ್ನು ಕಳೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಅವರು ಅಲ್ ಜಜೀರಾ ಜೊತೆಗೆ ಮಾತನಾಡುತ್ತಾ, ಪಾಕಿಸ್ತಾನವು ಐದು ಭಾರತೀಯ ಜೆಟ್‌ಗಳು, ಒಂದು ಡ್ರೋನ್ ಮತ್ತು ಹಲವಾರು ಕ್ವಾಡ್‌ಕಾಪ್ಟರ್‌ಗಳನ್ನು ಹೊಡೆದುರುಳಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ತಿಳಿಸಿದ್ದರು.

ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ವಿಮಾನಗಳನ್ನು ಭಾರತೀಯ ಪ್ರದೇಶದೊಳಗೆ ಹೊಡೆದುರುಳಿಸಲಾಗಿದೆ ಮತ್ತು ಸಂಘರ್ಷದ ಸಮಯದಲ್ಲಿ ಯಾವುದೇ ಕಡೆಯವರು ಪರಸ್ಪರರ ವಾಯುಪ್ರದೇಶವನ್ನು ದಾಟಿಲ್ಲ ಎಂದು ದೃಢಪಡಿಸಿದ್ದರು. ಈ ಹೇಳಿಕೆಯನ್ನು ಭಾರತವು ಅನುಮೋದಿಸಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೇ 9 ರಂದು, ಪಾಕಿಸ್ತಾನದ ವಾಯುಪಡೆಯ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಅವರು ಪತನಗೊಂಡ ಐದು ವಿಮಾನಗಳಲ್ಲಿ ಮೂರು ರಫೇಲ್‌ಗಳು, ಒಂದು ಮಿಗ್ -29 ಮತ್ತು ಒಂದು ಸು -30 ಸೇರಿವೆ ಎಂದು ಹೇಳಿಕೊಂಡಿದ್ದು, ವಿಮಾನಗಳು ಎಲ್ಲಿ ಹೊಡೆದುರುಳಿಸಲಾಗಿದೆ ಎಂಬುದರ ಎಲೆಕ್ಟ್ರಾನಿಕ್ ಸಹಿಗಳು ಮತ್ತು ನಿರ್ದಿಷ್ಟ ನಿರ್ದೇಶಾಂಕಗಳನ್ನು ಸಹ ಪ್ರಸ್ತುತಪಡಿಸಿದ್ದರು.

ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ದಿ ಗ್ಲೋಬಲ್ ಟೈಮ್ಸ್ ಮೇ 14 ರಂದು ಪಾಕಿಸ್ತಾನವು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು. ಅದಾಗ್ಯೂ, ಚೀನಾದಲ್ಲಿರುವ ಭಾರತದ ರಾಯಭಾರ ಕಚೇರಿ ಈ ವರದಿಯನ್ನು “ತಪ್ಪು ಮಾಹಿತಿ” ಎಂದು ಕರೆದಿದೆ. ಆದರೆ, ವರದಿಯಾದ ನಷ್ಟಗಳ ಬಗ್ಗೆ ಭಾರತವು ಔಪಚಾರಿಕ ದೃಢೀಕರಣ ಅಥವಾ ನಿರಾಕರಣೆಯನ್ನು ಈ ವರೆಗೆ ನೀಡಿಲ್ಲ.

ಕದನ ವಿರಾಮ ಘೋಷಣೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾರತದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, “ನಾವು ಯುದ್ಧ ಸನ್ನಿವೇಶದಲ್ಲಿದ್ದೇವೆ ಮತ್ತು ನಷ್ಟಗಳು ಅದರ ಒಂದು ಭಾಗವಾಗಿದೆ. ವಿವರಗಳಿಗೆ ಸಂಬಂಧಿಸಿದಂತೆ, ಈ ಸಮಯದಲ್ಲಿ ನಾವು ಇನ್ನೂ ಯುದ್ಧದಲ್ಲಿರುವುದರಿಂದ ಮತ್ತು ಎದುರಾಳಿಗೆ ಅನುಕೂಲವನ್ನು ನೀಡುವುದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮ ಎಲ್ಲಾ ಪೈಲಟ್‌ಗಳು ಮನೆಗೆ ಮರಳಿದ್ದಾರೆ.” ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...