Homeಅಂಕಣಗಳುನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

ನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

- Advertisement -
- Advertisement -

ಚುನಾವಣೆಯ ಸಮಯದಲ್ಲಿ ವಿವಿಧ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗುವುದು, ಕೆಲವೊಮ್ಮೆ ಮಾತಿನ ಭರದಲ್ಲಿ ಗೆರೆ ದಾಟುವುದು- ಇವೆಲ್ಲಾ ಸಾಮಾನ್ಯ. ಇಂಥದನ್ನು ಹದ್ದುಬಸ್ತಿನಲ್ಲಿ ಇಡಲೆಂದೇ ಚುನಾವಣಾ ಆಯೋಗ ಹಲವು ನೀತಿಸಂಹಿತೆಗಳನ್ನು ಸೃಷ್ಟಿಸಿ ಹದ್ದಿನ ಕಣ್ಣಿಟ್ಟು ಕಾಯಬೇಕಿದೆ; ಇದು ಅದರ ಹಲವು ಕರ್ತವ್ಯಗಳಲ್ಲಿ ಅತಿ ಪ್ರಮುಖವಾದದ್ದು. ಸುಳ್ಳು, ದ್ವೇಷಗಳು ಚುನಾವಣಾ ಭಾಷಣಗಳಲ್ಲಿ ನುಸುಳದಂತೆ ಅದು ಎಚ್ಚರ ವಹಿಸಬೇಕು. ಚುನಾವಣಾ ನೀತಿಸಂಹಿತೆಯ ಪ್ರಕಾರ ’ಯಾವುದೇ ಪಕ್ಷವಾಗಲೀ ಅಥವಾ ಅಭ್ಯರ್ಥಿಯಾಗಲೀ, ಜಾತಿಗಳ ಮತ್ತು ಸಮುದಾಯಗಳ ನಡುವೆ, ಧಾರ್ಮಿಕ ಅಥವಾ ಭಾಷಿಕವಾಗಿ, ಪರಸ್ಪರ ದ್ವೇಷಿಸುವ ಅಥವಾ ಉದ್ವಿಘ್ನ ಪರಿಸ್ಥಿತಿ ಉಂಟುಮಾಡುವ ಅಥವಾ ಈಗಿರುವ ಭಿನ್ನಾಭಿಪ್ರಾಯಗಳನ್ನು ಹೆಚ್ಚಿಸುವಂತಹ ಯಾವುದೇ ಕ್ರಿಯೆಯಲ್ಲಿ ಭಾಗಿಯಾಗಬಾರದು’. ವಿರೋಧ ಪಕ್ಷಗಳ ಪಾಲಿಗೆ ಚುನಾವಣಾ ಆಯೋಗ ಕಾಯುವ ಕೆಲಸವನ್ನು ಒಂದು ಮಟ್ಟಿಗೆ ಮಾಡುತ್ತಿದೆಯಾದರೂ, ಒಕ್ಕೂಟದಲ್ಲಿ ಸದ್ಯಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಸದಸ್ಯರ ಭಾಷಣಗಳಿಗೆ ಅದರ ಕಿವಿ ಮತ್ತು ಕಣ್ಣು ಮುಚ್ಚಿಹೋಗಿದೆ. ಇನ್ನು ಪ್ರಧಾನ ಮಂತ್ರಿ ಮೋದಿಯವರ ಚುನಾವಣಾ ಭಾಷಣಗಳಿಗೆ ಲಂಗುಲಗಾಮೇ ಇಲ್ಲದಂತೆ ಆಗಲು ಚುನಾವಣಾ ಆಯೋಗದ ಪಕ್ಷಪಾತಿ ನಿಷ್ಕ್ರಿಯತೆ ಕೂಡ ಮುಖ್ಯ ಕಾರಣ. ಚುನಾವಣಾ ಆಯೋಗದ ನಿಷ್ಕ್ರಿಯತೆಯನ್ನು ಹೊರತುಪಡಿಸಿ ಹೇಳುವುದಾದರೂ, ಇಲ್ಲಿಯವರೆಗೂ ಪ್ರಧಾನ ಮಂತ್ರಿಯ ಹುದ್ದೆಯಲ್ಲಿದ್ದವರು ಆ ಹುದ್ದೆಯ ಘನತೆಯ ಕಾರಣವೂ ಸೇರಿದಂತೆ ತಮ್ಮ ಮಾತುಗಳು ತೂಕ ಕಳೆದುಕೊಳ್ಳಬಾರದೆಂಬ ಎಚ್ಚರಿಕೆ ವಹಿಸುತ್ತಿದ್ದರು; ಆದರೆ ಸದರಿ ಪ್ರಧಾನಿ ಮೋದಿಯವರು ಇಂತಹ ಯಾವುದೇ ಎಚ್ಚರಕ್ಕೆ ತಮ್ಮನ್ನು ತಾವು ಸೀಮಿತಗೊಳಿಸಿಕೊಂಡಿಲ್ಲ. ಸೀಮಾತೀತವಾಗಿ ವಿರೋಧಪಕ್ಷಗಳ ವಿರುದ್ಧ ದಾಳಿ ಮಾಡುತ್ತಾ, ಸುಳ್ಳಾದರೆ ಸುಳ್ಳು, ದಾರಿ ತಪ್ಪಿಸುವ ಮಾತಾದರೆ ಅದೂ ಇರಲಿ ಎಂದು ಮುನ್ನುಗ್ಗಿದ್ದಾರೆ. ಈ ಬಾರಿ 400 ದಾಟುತ್ತೇವೆ ಎಂಬ ಹುಸಿ ಪ್ರತಿಪಾದನೆಗೋಸ್ಕರ ಎಷ್ಟಾದರೂ ಸುಳ್ಳುಗಳ ಸರಮಾಲೆಯನ್ನು ಪೋಣಿಸಬಹುದೇ ಎಂಬುದು ಸಾಮಾನ್ಯ ನಾಗರಿಕರ ಪ್ರಶ್ನೆಯಾಗಿದೆ.

ಏಪ್ರಿಲ್ 19ರಂದು ಈ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನವಾಯಿತು. ತಮಿಳುನಾಡಿನಲ್ಲಿ ಎಷ್ಟೇ ಸರ್ಕಸ್ ಮಾಡಿದರೂ ಎಲ್ಲಾ 39 ಸೀಟುಗಳನ್ನು ಡಿಎಂಕೆ ಗೆಲ್ಲುವ ಪರಿಸ್ಥಿತಿ ಇದೆ ಎಂಬ ಸಮೀಕ್ಷೆಗಳ ಕಾರಣಕ್ಕೂ, ತಮ್ಮ ಭದ್ರಕೋಟೆ ಎನಿಸಿಕೊಂಡಿದ್ದ ಉತ್ತರ ಪ್ರದೇಶದಲ್ಲಿಯೂ ಮುನ್ನಡೆ ಕಾಯ್ದುಕೊಳ್ಳಲು ಕಷ್ಟದ ಪರಿಸ್ಥಿತಿ ಇದೆ ಎಂಬ ವರದಿಗಳ ನಡುವೆ ಮೋದಿ ತಮ್ಮ ಭಾಷಣಗಳಲ್ಲಿ ಮತ್ತಷ್ಟು ಅಗ್ರೆಸ್ಸಿವ್ ಆದರು. ಏಪ್ರಿಲ್ 21ರಂದು ರಾಜಸ್ಥಾನದ ಬನಸವಾರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಸುಳ್ಳುಗಳ ಮಳೆಗೈದರು. ‘ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಹಿಂದೂ ಮಹಿಳೆಯರ ಮಂಗಳಸೂತ್ರವನ್ನು ಕಸಿಯಲಿದೆ; ನಿಮ್ಮ ಆಸ್ತಿಯನ್ನು ಕಸಿದು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೆರುವವರಿಗೆ ಹಂಚಲಿದೆ’ (ಮುಸಲ್ಮಾನರನ್ನು ಗುರಿಯಾಗಿಸಿಕೊಂಡು) ಎಂದರು. ಹಿಂದಿನ ಮನಮೋಹನ್ ಸಿಂಗ್ ಸರ್ಕಾರ ಭಾರತದ ಸಂಪನ್ಮೂಲಗಳ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದಿದೆ ಎಂಬ ಸುಳ್ಳನ್ನೂ ಹಿಂಜರಿಕೆಯಿಲ್ಲದೆ ಓಡಿಸಿದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದೆ ಎಂದು ಹೇಳಿದ ಮಾತು ಸುಳ್ಳಾದರೆ, ಮುಸಲ್ಮಾನರನ್ನು ನುಸುಳುಕೋರರು ಎಬಂತೆ ರೆಫರ್ ಮಾಡಿದ್ದು ದ್ವೇಷದ ನುಡಿ ಮತ್ತು ಮನಮೋಹನ್ ಸಿಂಗ್ ಸರ್ಕಾರದ ಹೇಳಿಕೆ ಎಂದು ಭಾಷಣ ಬಿಗಿದಿದ್ದು ತಿರುಚಿದ ಮಾತು ಎಂಬುದು ಈಗ ಜಗಜ್ಜಾಹೀರವಾಗಿದೆ. ಹೀಗಿದ್ದರೂ ಚುನಾವಣಾ ಆಯೋಗ ಹಲ್ಲು ಕಿತ್ತ ಹಾವಿನಂತಾಗಿದೆ; ಕನಿಷ್ಟ ಪಕ್ಷ ಬುಸುಗುಡುವ ನಾಟಕವನ್ನು ಕೂಡ ಆಡುತ್ತಿಲ್ಲ.

ಇಷ್ಟಕ್ಕೆ ಈ ಸುಳ್ಳಿನ ಸರಮಾಲೆ ನಿಲ್ಲಲಿಲ್ಲ. ಏಪ್ರಿಲ್ 22ರಂದು ಅಲಿಘರ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯ ಸರ್ವೇ ಮಾಡಿ ಅದನ್ನು ಮರುಹಂಚಿಕೆ ಮಾಡಲಿದೆ ಎಂದು ಅದರ ಪ್ರಣಾಳಿಕೆ ಹೇಳುತ್ತದೆ ಎಂದು, ಅದೊಂದು ಭಯಭೀತಿಯ ಸಂಗತಿ ಎಂಬಂತೆ ಪ್ರಧಾನಿ ಮೋದಿ ಹೇಳಿದರು. ಮರುಹಂಚಿಕೆಯ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆ ಅಷ್ಟು ಸ್ಪಷ್ಟವಾಗಿ ಏನೂ ಹೇಳದೇ ಇದ್ದರೂ, ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಿರುಚಿ ಮಾಡಿದ ಭಾಷಣ ಅದಾಗಿತ್ತು. ಅಷ್ಟಕ್ಕೂ ಯಾರಾದರೂ ಮರುಹಂಚಿಕೆಯ ಮಾತುಗಳನ್ನು ಆಡಿದರೆ ಅದು ಮೋದಿ ಗೆಳೆಯರಾದ ಅದಾನಿ ಮತ್ತು ಅಂಬಾನಿಯಂಥವರ ಆಸ್ತಿಗೆ ತೆರಿಗೆಗಳನ್ನು ಹಾಕಿ ಮರುಹಂಚಿಕೆಯ ಮಾತುಗಳನ್ನಾಡುತ್ತಾರೆಯೇ ಹೊರತು, ಬಡಬಗ್ಗರ ಅಥವಾ ದಮನಿತರ ಬಳಿ ಇರುವ (ಸಾಮಾನ್ಯವಾಗಿ ಇರದಿರುವ) ಹಣ-ಆಸ್ತಿಯ ಬಗ್ಗೆ ಮಾತನಾಡುವುದಿಲ್ಲ. ಆದರೂ ತಾನು ಏನನ್ನಾದರೂ ಮಾತಾಡಿ ಮಂಕುಬೂಧಿ ಎರಚಬಹುದು ಎಂಬ ಮೋದಿಯವರ ಆತ್ಮಸ್ಥೈರ್ಯಕ್ಕೆ ದೊಡ್ಡಪೆಟ್ಟು ಬೀಳುವ ಸಾಧ್ಯತೆಗಳ ಬಗೆಗಿನ ವಿಶ್ಲೇಷಣೆಗಳ ನಡುವೆಯೂ ಅವರ ಫೇಕ್ ನರೆಟಿವ್‌ಗಳು ಎಗ್ಗಿಲ್ಲದೆ ಮುಂದುವರಿಯುತ್ತಲೇ ಇವೆ.

ಈ ಪಟ್ಟಿ ಇಲ್ಲಿಗೆ ನಿಲ್ಲುವುದಿಲ್ಲ. ಉತ್ತರಾಧಿಕಾರಿ ಆಸ್ತಿ ತೆರಿಗೆ ಬಗೆಗೆ, ಅಲ್ಪಸಂಖ್ಯಾತರ ಮೀಸಲಾತಿ ಬಗೆಗೆ ಸುಳ್ಳುಗಳ ಕಂತೆಯನ್ನು ಬಿಚ್ಚುತ್ತಿದ್ದಾರೆ. ತಳ ಸಮುದಾಯಗಳ ಮನಸ್ಸಿನಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ದ್ವೇಷ ತುಂಬುವಂತಹ ಮಾತುಗಳನ್ನು ಮೀಸಲಾತಿ ವಿಷಯದ ಜತೆಗೆ ಬೆರೆಸಿ ಆಡುತ್ತಿದ್ದಾರೆ. ಇನ್ನೂ ಅವರ ತೆಕ್ಕೆಯಲ್ಲಿ ಎಂತೆಂಥ ದ್ವೇಷಪೂರಿತ ಸುಳ್ಳುಗಳ ತುಂಬಿವೆಯೋ ಊಹಿಸಲು ಅಸಾಧ್ಯ. ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯ ಸಾಧನೆಗಳು ಬಗ್ಗೆ ಹೇಳಿಕೊಳ್ಳುವಂಥದ್ದು ಏನಿಲ್ಲವಾದ್ದರಿಂದ ಇಂಥ ಮನೆಮುರುಕ ಮಾತುಗಳ ಮೊರೆ ಹೋಗುವ ಒತ್ತಡದಲ್ಲಿ ಅವರಿದ್ದಾರೆ. ಆದರೆ ಈಗ ಅದು ಜನಸಾಮಾನ್ಯರಿಗೆ ತಿಳಿಯದ ವಿಷಯವಾಗೇನೂ ಉಳಿದಿಲ್ಲ.

ಈಗ ಮೂರನೇ ಸುತ್ತಿನ ಮತದಾನ ಮೇ7ರಂದು ನಡೆಯಲಿದೆ. ಕರ್ನಾಟಕದ ಉಳಿದ 14 ಕ್ಷೇತ್ರಗಳ ಮತದಾನ ಅಂದು ನಡೆಯಲಿದೆ. ಬಹುತೇಕ ಆ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಮತ್ತು ಕೆಲವು ಕಡೆ ಸಮಬಲದ ಸ್ಪರ್ಧೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನು ಉತ್ತರಪ್ರದೇಶದಲ್ಲಿಯೂ ಬಿಜೆಪಿಗೆ ನೆಲ ಮೊದಲಿನಂತಿಲ್ಲ. 2019ರಲ್ಲಿ ಗೆದ್ದ 62 ಸ್ಥಾನಗಳನ್ನು ಉಳಿಸಿಕೊಳ್ಳಲು ಕಷ್ಟ ಎಂಬ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರ ಚುನಾವಣಾ ಭಾಷಣಗಳ ಮಟ್ಟ ಇನ್ನೂ ಪಾತಾಳಕ್ಕೆ ಕುಸಿಯುವುದನ್ನು ಊಹಿಸಲು ಕಷ್ಟವೇನಿಲ್ಲ.

ಇದನ್ನೂ ಓದಿ : ಕಳೆದ ಒಂದು ವರ್ಷದಲ್ಲಿ ಒಂದು ಬಾರಿಯೂ ಮಣಿಪುರಕ್ಕೆ ತೆರಳದ ಮೋದಿ: ಈ ಅವಧಿಯಲ್ಲಿ ವಿವಿಧ…

ಆದರೆ ಈ ಬಾರಿ ಜನ ಈ ಸುಳ್ಳು ಮತ್ತು ದ್ವೇಷಪೂರಿತ ಭಾಷಣಗಳನ್ನು ಸುಲಭವಾಗಿ ನಂಬುವ ಸ್ಥಿತಿಯಲ್ಲಿಲ್ಲ. ಜನ ಬೆಲೆ ಏರಿಕೆ, ನಿರುದ್ಯೋಗ, ಅಸಮಾನತೆ, ಸರ್ಕಾರದ ಕಾರ್ಪೊರೆಟ್ ಹಿತಾಸಕ್ತಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಎನ್ನುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳಷ್ಟು ಸಂಪನ್ಮೂಲಗಳು ಇಲ್ಲದೇ ಇದ್ದರೂ ಜನಪರ ಮಾಧ್ಯಮಗಳು ಬಿಜೆಪಿ ಪಕ್ಷದ ಸುಳ್ಳ್ಳುಗಳನ್ನು ಬಯಲಿಗೆಳೆದು ಮನೆಮನೆಗಳಿಗೆ ತಲುಪಿಸುವ ಕೆಲಸ ಮಾಡುತ್ತಿವೆ. ಈ ಎಚ್ಚೆತ್ತ ಪರಿಸ್ಥಿತಿಯಲ್ಲಿ ಅಧಿಕಾರದ ದುರ್ಬಳಕೆ ಎಷ್ಟೇ ದೊಡ್ಡಮಟ್ಟದಲ್ಲಿದ್ದರೂ ಅದು 2019ರಂತೆ ಸಫಲವಾಗಲು ಜನಸಾಮಾನ್ಯರ ’ನಂಬಿಕೆ’ ಫ್ಯಾಕ್ಟರ್ ಈ ಬಾರಿ ಕೈಕೊಡುತ್ತಿದೆ. ಈ ನಿಟ್ಟಿನಲ್ಲಿ 400 ಸೀಟುಗಳನ್ನು ಗೆಲ್ಲಲು ಇಷ್ಟು ಸುಳ್ಳುಗಳು ಖಂಡಿತಾ ಸಾಕಾಗುವುದಿಲ್ಲ ಎಂದು ಅವರು ನಂಬಿದ್ದಾರೆ. ಅದಕ್ಕಾಗಿ ಇನ್ನೂ ಹೆಚ್ಚು ಸುಳ್ಳುಗಳನ್ನು ಹೇಳಬೇಕು. ಫೇಕ್ ಫ್ಯಾಕ್ಟರಿ ಹೆಚ್ಚೆಚ್ಚು ಉತ್ಪಾದಿಸಬೇಕು, ಜನರ ವಿಶ್ವಾಸಕ್ಕೆ ವಿವೇಕಕ್ಕೆ ಸವಾಲು ಎಸೆಯಬೇಕು! ಆದರೆ ಇದು ಸುಲಭಕ್ಕೆ ಕೈಗೂಡುತ್ತಿಲ್ಲ ಎನ್ನುವಂತಿದೆ ಚುನಾವಣಾ ವಾತಾವರಣ; ಜೂನ್ ನಾಲ್ಕಕ್ಕೆ ಫಲಿತಾಂಶ ಕಂಡುಕೊಳ್ಳಬೇಕು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...