Homeಅಂಕಣಗಳುನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

ನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

- Advertisement -
- Advertisement -

ಚುನಾವಣೆಯ ಸಮಯದಲ್ಲಿ ವಿವಿಧ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗುವುದು, ಕೆಲವೊಮ್ಮೆ ಮಾತಿನ ಭರದಲ್ಲಿ ಗೆರೆ ದಾಟುವುದು- ಇವೆಲ್ಲಾ ಸಾಮಾನ್ಯ. ಇಂಥದನ್ನು ಹದ್ದುಬಸ್ತಿನಲ್ಲಿ ಇಡಲೆಂದೇ ಚುನಾವಣಾ ಆಯೋಗ ಹಲವು ನೀತಿಸಂಹಿತೆಗಳನ್ನು ಸೃಷ್ಟಿಸಿ ಹದ್ದಿನ ಕಣ್ಣಿಟ್ಟು ಕಾಯಬೇಕಿದೆ; ಇದು ಅದರ ಹಲವು ಕರ್ತವ್ಯಗಳಲ್ಲಿ ಅತಿ ಪ್ರಮುಖವಾದದ್ದು. ಸುಳ್ಳು, ದ್ವೇಷಗಳು ಚುನಾವಣಾ ಭಾಷಣಗಳಲ್ಲಿ ನುಸುಳದಂತೆ ಅದು ಎಚ್ಚರ ವಹಿಸಬೇಕು. ಚುನಾವಣಾ ನೀತಿಸಂಹಿತೆಯ ಪ್ರಕಾರ ’ಯಾವುದೇ ಪಕ್ಷವಾಗಲೀ ಅಥವಾ ಅಭ್ಯರ್ಥಿಯಾಗಲೀ, ಜಾತಿಗಳ ಮತ್ತು ಸಮುದಾಯಗಳ ನಡುವೆ, ಧಾರ್ಮಿಕ ಅಥವಾ ಭಾಷಿಕವಾಗಿ, ಪರಸ್ಪರ ದ್ವೇಷಿಸುವ ಅಥವಾ ಉದ್ವಿಘ್ನ ಪರಿಸ್ಥಿತಿ ಉಂಟುಮಾಡುವ ಅಥವಾ ಈಗಿರುವ ಭಿನ್ನಾಭಿಪ್ರಾಯಗಳನ್ನು ಹೆಚ್ಚಿಸುವಂತಹ ಯಾವುದೇ ಕ್ರಿಯೆಯಲ್ಲಿ ಭಾಗಿಯಾಗಬಾರದು’. ವಿರೋಧ ಪಕ್ಷಗಳ ಪಾಲಿಗೆ ಚುನಾವಣಾ ಆಯೋಗ ಕಾಯುವ ಕೆಲಸವನ್ನು ಒಂದು ಮಟ್ಟಿಗೆ ಮಾಡುತ್ತಿದೆಯಾದರೂ, ಒಕ್ಕೂಟದಲ್ಲಿ ಸದ್ಯಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಸದಸ್ಯರ ಭಾಷಣಗಳಿಗೆ ಅದರ ಕಿವಿ ಮತ್ತು ಕಣ್ಣು ಮುಚ್ಚಿಹೋಗಿದೆ. ಇನ್ನು ಪ್ರಧಾನ ಮಂತ್ರಿ ಮೋದಿಯವರ ಚುನಾವಣಾ ಭಾಷಣಗಳಿಗೆ ಲಂಗುಲಗಾಮೇ ಇಲ್ಲದಂತೆ ಆಗಲು ಚುನಾವಣಾ ಆಯೋಗದ ಪಕ್ಷಪಾತಿ ನಿಷ್ಕ್ರಿಯತೆ ಕೂಡ ಮುಖ್ಯ ಕಾರಣ. ಚುನಾವಣಾ ಆಯೋಗದ ನಿಷ್ಕ್ರಿಯತೆಯನ್ನು ಹೊರತುಪಡಿಸಿ ಹೇಳುವುದಾದರೂ, ಇಲ್ಲಿಯವರೆಗೂ ಪ್ರಧಾನ ಮಂತ್ರಿಯ ಹುದ್ದೆಯಲ್ಲಿದ್ದವರು ಆ ಹುದ್ದೆಯ ಘನತೆಯ ಕಾರಣವೂ ಸೇರಿದಂತೆ ತಮ್ಮ ಮಾತುಗಳು ತೂಕ ಕಳೆದುಕೊಳ್ಳಬಾರದೆಂಬ ಎಚ್ಚರಿಕೆ ವಹಿಸುತ್ತಿದ್ದರು; ಆದರೆ ಸದರಿ ಪ್ರಧಾನಿ ಮೋದಿಯವರು ಇಂತಹ ಯಾವುದೇ ಎಚ್ಚರಕ್ಕೆ ತಮ್ಮನ್ನು ತಾವು ಸೀಮಿತಗೊಳಿಸಿಕೊಂಡಿಲ್ಲ. ಸೀಮಾತೀತವಾಗಿ ವಿರೋಧಪಕ್ಷಗಳ ವಿರುದ್ಧ ದಾಳಿ ಮಾಡುತ್ತಾ, ಸುಳ್ಳಾದರೆ ಸುಳ್ಳು, ದಾರಿ ತಪ್ಪಿಸುವ ಮಾತಾದರೆ ಅದೂ ಇರಲಿ ಎಂದು ಮುನ್ನುಗ್ಗಿದ್ದಾರೆ. ಈ ಬಾರಿ 400 ದಾಟುತ್ತೇವೆ ಎಂಬ ಹುಸಿ ಪ್ರತಿಪಾದನೆಗೋಸ್ಕರ ಎಷ್ಟಾದರೂ ಸುಳ್ಳುಗಳ ಸರಮಾಲೆಯನ್ನು ಪೋಣಿಸಬಹುದೇ ಎಂಬುದು ಸಾಮಾನ್ಯ ನಾಗರಿಕರ ಪ್ರಶ್ನೆಯಾಗಿದೆ.

ಏಪ್ರಿಲ್ 19ರಂದು ಈ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನವಾಯಿತು. ತಮಿಳುನಾಡಿನಲ್ಲಿ ಎಷ್ಟೇ ಸರ್ಕಸ್ ಮಾಡಿದರೂ ಎಲ್ಲಾ 39 ಸೀಟುಗಳನ್ನು ಡಿಎಂಕೆ ಗೆಲ್ಲುವ ಪರಿಸ್ಥಿತಿ ಇದೆ ಎಂಬ ಸಮೀಕ್ಷೆಗಳ ಕಾರಣಕ್ಕೂ, ತಮ್ಮ ಭದ್ರಕೋಟೆ ಎನಿಸಿಕೊಂಡಿದ್ದ ಉತ್ತರ ಪ್ರದೇಶದಲ್ಲಿಯೂ ಮುನ್ನಡೆ ಕಾಯ್ದುಕೊಳ್ಳಲು ಕಷ್ಟದ ಪರಿಸ್ಥಿತಿ ಇದೆ ಎಂಬ ವರದಿಗಳ ನಡುವೆ ಮೋದಿ ತಮ್ಮ ಭಾಷಣಗಳಲ್ಲಿ ಮತ್ತಷ್ಟು ಅಗ್ರೆಸ್ಸಿವ್ ಆದರು. ಏಪ್ರಿಲ್ 21ರಂದು ರಾಜಸ್ಥಾನದ ಬನಸವಾರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಸುಳ್ಳುಗಳ ಮಳೆಗೈದರು. ‘ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಹಿಂದೂ ಮಹಿಳೆಯರ ಮಂಗಳಸೂತ್ರವನ್ನು ಕಸಿಯಲಿದೆ; ನಿಮ್ಮ ಆಸ್ತಿಯನ್ನು ಕಸಿದು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೆರುವವರಿಗೆ ಹಂಚಲಿದೆ’ (ಮುಸಲ್ಮಾನರನ್ನು ಗುರಿಯಾಗಿಸಿಕೊಂಡು) ಎಂದರು. ಹಿಂದಿನ ಮನಮೋಹನ್ ಸಿಂಗ್ ಸರ್ಕಾರ ಭಾರತದ ಸಂಪನ್ಮೂಲಗಳ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದಿದೆ ಎಂಬ ಸುಳ್ಳನ್ನೂ ಹಿಂಜರಿಕೆಯಿಲ್ಲದೆ ಓಡಿಸಿದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದೆ ಎಂದು ಹೇಳಿದ ಮಾತು ಸುಳ್ಳಾದರೆ, ಮುಸಲ್ಮಾನರನ್ನು ನುಸುಳುಕೋರರು ಎಬಂತೆ ರೆಫರ್ ಮಾಡಿದ್ದು ದ್ವೇಷದ ನುಡಿ ಮತ್ತು ಮನಮೋಹನ್ ಸಿಂಗ್ ಸರ್ಕಾರದ ಹೇಳಿಕೆ ಎಂದು ಭಾಷಣ ಬಿಗಿದಿದ್ದು ತಿರುಚಿದ ಮಾತು ಎಂಬುದು ಈಗ ಜಗಜ್ಜಾಹೀರವಾಗಿದೆ. ಹೀಗಿದ್ದರೂ ಚುನಾವಣಾ ಆಯೋಗ ಹಲ್ಲು ಕಿತ್ತ ಹಾವಿನಂತಾಗಿದೆ; ಕನಿಷ್ಟ ಪಕ್ಷ ಬುಸುಗುಡುವ ನಾಟಕವನ್ನು ಕೂಡ ಆಡುತ್ತಿಲ್ಲ.

ಇಷ್ಟಕ್ಕೆ ಈ ಸುಳ್ಳಿನ ಸರಮಾಲೆ ನಿಲ್ಲಲಿಲ್ಲ. ಏಪ್ರಿಲ್ 22ರಂದು ಅಲಿಘರ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯ ಸರ್ವೇ ಮಾಡಿ ಅದನ್ನು ಮರುಹಂಚಿಕೆ ಮಾಡಲಿದೆ ಎಂದು ಅದರ ಪ್ರಣಾಳಿಕೆ ಹೇಳುತ್ತದೆ ಎಂದು, ಅದೊಂದು ಭಯಭೀತಿಯ ಸಂಗತಿ ಎಂಬಂತೆ ಪ್ರಧಾನಿ ಮೋದಿ ಹೇಳಿದರು. ಮರುಹಂಚಿಕೆಯ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆ ಅಷ್ಟು ಸ್ಪಷ್ಟವಾಗಿ ಏನೂ ಹೇಳದೇ ಇದ್ದರೂ, ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಿರುಚಿ ಮಾಡಿದ ಭಾಷಣ ಅದಾಗಿತ್ತು. ಅಷ್ಟಕ್ಕೂ ಯಾರಾದರೂ ಮರುಹಂಚಿಕೆಯ ಮಾತುಗಳನ್ನು ಆಡಿದರೆ ಅದು ಮೋದಿ ಗೆಳೆಯರಾದ ಅದಾನಿ ಮತ್ತು ಅಂಬಾನಿಯಂಥವರ ಆಸ್ತಿಗೆ ತೆರಿಗೆಗಳನ್ನು ಹಾಕಿ ಮರುಹಂಚಿಕೆಯ ಮಾತುಗಳನ್ನಾಡುತ್ತಾರೆಯೇ ಹೊರತು, ಬಡಬಗ್ಗರ ಅಥವಾ ದಮನಿತರ ಬಳಿ ಇರುವ (ಸಾಮಾನ್ಯವಾಗಿ ಇರದಿರುವ) ಹಣ-ಆಸ್ತಿಯ ಬಗ್ಗೆ ಮಾತನಾಡುವುದಿಲ್ಲ. ಆದರೂ ತಾನು ಏನನ್ನಾದರೂ ಮಾತಾಡಿ ಮಂಕುಬೂಧಿ ಎರಚಬಹುದು ಎಂಬ ಮೋದಿಯವರ ಆತ್ಮಸ್ಥೈರ್ಯಕ್ಕೆ ದೊಡ್ಡಪೆಟ್ಟು ಬೀಳುವ ಸಾಧ್ಯತೆಗಳ ಬಗೆಗಿನ ವಿಶ್ಲೇಷಣೆಗಳ ನಡುವೆಯೂ ಅವರ ಫೇಕ್ ನರೆಟಿವ್‌ಗಳು ಎಗ್ಗಿಲ್ಲದೆ ಮುಂದುವರಿಯುತ್ತಲೇ ಇವೆ.

ಈ ಪಟ್ಟಿ ಇಲ್ಲಿಗೆ ನಿಲ್ಲುವುದಿಲ್ಲ. ಉತ್ತರಾಧಿಕಾರಿ ಆಸ್ತಿ ತೆರಿಗೆ ಬಗೆಗೆ, ಅಲ್ಪಸಂಖ್ಯಾತರ ಮೀಸಲಾತಿ ಬಗೆಗೆ ಸುಳ್ಳುಗಳ ಕಂತೆಯನ್ನು ಬಿಚ್ಚುತ್ತಿದ್ದಾರೆ. ತಳ ಸಮುದಾಯಗಳ ಮನಸ್ಸಿನಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ದ್ವೇಷ ತುಂಬುವಂತಹ ಮಾತುಗಳನ್ನು ಮೀಸಲಾತಿ ವಿಷಯದ ಜತೆಗೆ ಬೆರೆಸಿ ಆಡುತ್ತಿದ್ದಾರೆ. ಇನ್ನೂ ಅವರ ತೆಕ್ಕೆಯಲ್ಲಿ ಎಂತೆಂಥ ದ್ವೇಷಪೂರಿತ ಸುಳ್ಳುಗಳ ತುಂಬಿವೆಯೋ ಊಹಿಸಲು ಅಸಾಧ್ಯ. ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯ ಸಾಧನೆಗಳು ಬಗ್ಗೆ ಹೇಳಿಕೊಳ್ಳುವಂಥದ್ದು ಏನಿಲ್ಲವಾದ್ದರಿಂದ ಇಂಥ ಮನೆಮುರುಕ ಮಾತುಗಳ ಮೊರೆ ಹೋಗುವ ಒತ್ತಡದಲ್ಲಿ ಅವರಿದ್ದಾರೆ. ಆದರೆ ಈಗ ಅದು ಜನಸಾಮಾನ್ಯರಿಗೆ ತಿಳಿಯದ ವಿಷಯವಾಗೇನೂ ಉಳಿದಿಲ್ಲ.

ಈಗ ಮೂರನೇ ಸುತ್ತಿನ ಮತದಾನ ಮೇ7ರಂದು ನಡೆಯಲಿದೆ. ಕರ್ನಾಟಕದ ಉಳಿದ 14 ಕ್ಷೇತ್ರಗಳ ಮತದಾನ ಅಂದು ನಡೆಯಲಿದೆ. ಬಹುತೇಕ ಆ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಮತ್ತು ಕೆಲವು ಕಡೆ ಸಮಬಲದ ಸ್ಪರ್ಧೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನು ಉತ್ತರಪ್ರದೇಶದಲ್ಲಿಯೂ ಬಿಜೆಪಿಗೆ ನೆಲ ಮೊದಲಿನಂತಿಲ್ಲ. 2019ರಲ್ಲಿ ಗೆದ್ದ 62 ಸ್ಥಾನಗಳನ್ನು ಉಳಿಸಿಕೊಳ್ಳಲು ಕಷ್ಟ ಎಂಬ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರ ಚುನಾವಣಾ ಭಾಷಣಗಳ ಮಟ್ಟ ಇನ್ನೂ ಪಾತಾಳಕ್ಕೆ ಕುಸಿಯುವುದನ್ನು ಊಹಿಸಲು ಕಷ್ಟವೇನಿಲ್ಲ.

ಇದನ್ನೂ ಓದಿ : ಕಳೆದ ಒಂದು ವರ್ಷದಲ್ಲಿ ಒಂದು ಬಾರಿಯೂ ಮಣಿಪುರಕ್ಕೆ ತೆರಳದ ಮೋದಿ: ಈ ಅವಧಿಯಲ್ಲಿ ವಿವಿಧ…

ಆದರೆ ಈ ಬಾರಿ ಜನ ಈ ಸುಳ್ಳು ಮತ್ತು ದ್ವೇಷಪೂರಿತ ಭಾಷಣಗಳನ್ನು ಸುಲಭವಾಗಿ ನಂಬುವ ಸ್ಥಿತಿಯಲ್ಲಿಲ್ಲ. ಜನ ಬೆಲೆ ಏರಿಕೆ, ನಿರುದ್ಯೋಗ, ಅಸಮಾನತೆ, ಸರ್ಕಾರದ ಕಾರ್ಪೊರೆಟ್ ಹಿತಾಸಕ್ತಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಎನ್ನುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳಷ್ಟು ಸಂಪನ್ಮೂಲಗಳು ಇಲ್ಲದೇ ಇದ್ದರೂ ಜನಪರ ಮಾಧ್ಯಮಗಳು ಬಿಜೆಪಿ ಪಕ್ಷದ ಸುಳ್ಳ್ಳುಗಳನ್ನು ಬಯಲಿಗೆಳೆದು ಮನೆಮನೆಗಳಿಗೆ ತಲುಪಿಸುವ ಕೆಲಸ ಮಾಡುತ್ತಿವೆ. ಈ ಎಚ್ಚೆತ್ತ ಪರಿಸ್ಥಿತಿಯಲ್ಲಿ ಅಧಿಕಾರದ ದುರ್ಬಳಕೆ ಎಷ್ಟೇ ದೊಡ್ಡಮಟ್ಟದಲ್ಲಿದ್ದರೂ ಅದು 2019ರಂತೆ ಸಫಲವಾಗಲು ಜನಸಾಮಾನ್ಯರ ’ನಂಬಿಕೆ’ ಫ್ಯಾಕ್ಟರ್ ಈ ಬಾರಿ ಕೈಕೊಡುತ್ತಿದೆ. ಈ ನಿಟ್ಟಿನಲ್ಲಿ 400 ಸೀಟುಗಳನ್ನು ಗೆಲ್ಲಲು ಇಷ್ಟು ಸುಳ್ಳುಗಳು ಖಂಡಿತಾ ಸಾಕಾಗುವುದಿಲ್ಲ ಎಂದು ಅವರು ನಂಬಿದ್ದಾರೆ. ಅದಕ್ಕಾಗಿ ಇನ್ನೂ ಹೆಚ್ಚು ಸುಳ್ಳುಗಳನ್ನು ಹೇಳಬೇಕು. ಫೇಕ್ ಫ್ಯಾಕ್ಟರಿ ಹೆಚ್ಚೆಚ್ಚು ಉತ್ಪಾದಿಸಬೇಕು, ಜನರ ವಿಶ್ವಾಸಕ್ಕೆ ವಿವೇಕಕ್ಕೆ ಸವಾಲು ಎಸೆಯಬೇಕು! ಆದರೆ ಇದು ಸುಲಭಕ್ಕೆ ಕೈಗೂಡುತ್ತಿಲ್ಲ ಎನ್ನುವಂತಿದೆ ಚುನಾವಣಾ ವಾತಾವರಣ; ಜೂನ್ ನಾಲ್ಕಕ್ಕೆ ಫಲಿತಾಂಶ ಕಂಡುಕೊಳ್ಳಬೇಕು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...