Homeಅಂಕಣಗಳುನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

ನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

- Advertisement -
- Advertisement -

ಚುನಾವಣೆಯ ಸಮಯದಲ್ಲಿ ವಿವಿಧ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗುವುದು, ಕೆಲವೊಮ್ಮೆ ಮಾತಿನ ಭರದಲ್ಲಿ ಗೆರೆ ದಾಟುವುದು- ಇವೆಲ್ಲಾ ಸಾಮಾನ್ಯ. ಇಂಥದನ್ನು ಹದ್ದುಬಸ್ತಿನಲ್ಲಿ ಇಡಲೆಂದೇ ಚುನಾವಣಾ ಆಯೋಗ ಹಲವು ನೀತಿಸಂಹಿತೆಗಳನ್ನು ಸೃಷ್ಟಿಸಿ ಹದ್ದಿನ ಕಣ್ಣಿಟ್ಟು ಕಾಯಬೇಕಿದೆ; ಇದು ಅದರ ಹಲವು ಕರ್ತವ್ಯಗಳಲ್ಲಿ ಅತಿ ಪ್ರಮುಖವಾದದ್ದು. ಸುಳ್ಳು, ದ್ವೇಷಗಳು ಚುನಾವಣಾ ಭಾಷಣಗಳಲ್ಲಿ ನುಸುಳದಂತೆ ಅದು ಎಚ್ಚರ ವಹಿಸಬೇಕು. ಚುನಾವಣಾ ನೀತಿಸಂಹಿತೆಯ ಪ್ರಕಾರ ’ಯಾವುದೇ ಪಕ್ಷವಾಗಲೀ ಅಥವಾ ಅಭ್ಯರ್ಥಿಯಾಗಲೀ, ಜಾತಿಗಳ ಮತ್ತು ಸಮುದಾಯಗಳ ನಡುವೆ, ಧಾರ್ಮಿಕ ಅಥವಾ ಭಾಷಿಕವಾಗಿ, ಪರಸ್ಪರ ದ್ವೇಷಿಸುವ ಅಥವಾ ಉದ್ವಿಘ್ನ ಪರಿಸ್ಥಿತಿ ಉಂಟುಮಾಡುವ ಅಥವಾ ಈಗಿರುವ ಭಿನ್ನಾಭಿಪ್ರಾಯಗಳನ್ನು ಹೆಚ್ಚಿಸುವಂತಹ ಯಾವುದೇ ಕ್ರಿಯೆಯಲ್ಲಿ ಭಾಗಿಯಾಗಬಾರದು’. ವಿರೋಧ ಪಕ್ಷಗಳ ಪಾಲಿಗೆ ಚುನಾವಣಾ ಆಯೋಗ ಕಾಯುವ ಕೆಲಸವನ್ನು ಒಂದು ಮಟ್ಟಿಗೆ ಮಾಡುತ್ತಿದೆಯಾದರೂ, ಒಕ್ಕೂಟದಲ್ಲಿ ಸದ್ಯಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಸದಸ್ಯರ ಭಾಷಣಗಳಿಗೆ ಅದರ ಕಿವಿ ಮತ್ತು ಕಣ್ಣು ಮುಚ್ಚಿಹೋಗಿದೆ. ಇನ್ನು ಪ್ರಧಾನ ಮಂತ್ರಿ ಮೋದಿಯವರ ಚುನಾವಣಾ ಭಾಷಣಗಳಿಗೆ ಲಂಗುಲಗಾಮೇ ಇಲ್ಲದಂತೆ ಆಗಲು ಚುನಾವಣಾ ಆಯೋಗದ ಪಕ್ಷಪಾತಿ ನಿಷ್ಕ್ರಿಯತೆ ಕೂಡ ಮುಖ್ಯ ಕಾರಣ. ಚುನಾವಣಾ ಆಯೋಗದ ನಿಷ್ಕ್ರಿಯತೆಯನ್ನು ಹೊರತುಪಡಿಸಿ ಹೇಳುವುದಾದರೂ, ಇಲ್ಲಿಯವರೆಗೂ ಪ್ರಧಾನ ಮಂತ್ರಿಯ ಹುದ್ದೆಯಲ್ಲಿದ್ದವರು ಆ ಹುದ್ದೆಯ ಘನತೆಯ ಕಾರಣವೂ ಸೇರಿದಂತೆ ತಮ್ಮ ಮಾತುಗಳು ತೂಕ ಕಳೆದುಕೊಳ್ಳಬಾರದೆಂಬ ಎಚ್ಚರಿಕೆ ವಹಿಸುತ್ತಿದ್ದರು; ಆದರೆ ಸದರಿ ಪ್ರಧಾನಿ ಮೋದಿಯವರು ಇಂತಹ ಯಾವುದೇ ಎಚ್ಚರಕ್ಕೆ ತಮ್ಮನ್ನು ತಾವು ಸೀಮಿತಗೊಳಿಸಿಕೊಂಡಿಲ್ಲ. ಸೀಮಾತೀತವಾಗಿ ವಿರೋಧಪಕ್ಷಗಳ ವಿರುದ್ಧ ದಾಳಿ ಮಾಡುತ್ತಾ, ಸುಳ್ಳಾದರೆ ಸುಳ್ಳು, ದಾರಿ ತಪ್ಪಿಸುವ ಮಾತಾದರೆ ಅದೂ ಇರಲಿ ಎಂದು ಮುನ್ನುಗ್ಗಿದ್ದಾರೆ. ಈ ಬಾರಿ 400 ದಾಟುತ್ತೇವೆ ಎಂಬ ಹುಸಿ ಪ್ರತಿಪಾದನೆಗೋಸ್ಕರ ಎಷ್ಟಾದರೂ ಸುಳ್ಳುಗಳ ಸರಮಾಲೆಯನ್ನು ಪೋಣಿಸಬಹುದೇ ಎಂಬುದು ಸಾಮಾನ್ಯ ನಾಗರಿಕರ ಪ್ರಶ್ನೆಯಾಗಿದೆ.

ಏಪ್ರಿಲ್ 19ರಂದು ಈ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನವಾಯಿತು. ತಮಿಳುನಾಡಿನಲ್ಲಿ ಎಷ್ಟೇ ಸರ್ಕಸ್ ಮಾಡಿದರೂ ಎಲ್ಲಾ 39 ಸೀಟುಗಳನ್ನು ಡಿಎಂಕೆ ಗೆಲ್ಲುವ ಪರಿಸ್ಥಿತಿ ಇದೆ ಎಂಬ ಸಮೀಕ್ಷೆಗಳ ಕಾರಣಕ್ಕೂ, ತಮ್ಮ ಭದ್ರಕೋಟೆ ಎನಿಸಿಕೊಂಡಿದ್ದ ಉತ್ತರ ಪ್ರದೇಶದಲ್ಲಿಯೂ ಮುನ್ನಡೆ ಕಾಯ್ದುಕೊಳ್ಳಲು ಕಷ್ಟದ ಪರಿಸ್ಥಿತಿ ಇದೆ ಎಂಬ ವರದಿಗಳ ನಡುವೆ ಮೋದಿ ತಮ್ಮ ಭಾಷಣಗಳಲ್ಲಿ ಮತ್ತಷ್ಟು ಅಗ್ರೆಸ್ಸಿವ್ ಆದರು. ಏಪ್ರಿಲ್ 21ರಂದು ರಾಜಸ್ಥಾನದ ಬನಸವಾರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಸುಳ್ಳುಗಳ ಮಳೆಗೈದರು. ‘ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಹಿಂದೂ ಮಹಿಳೆಯರ ಮಂಗಳಸೂತ್ರವನ್ನು ಕಸಿಯಲಿದೆ; ನಿಮ್ಮ ಆಸ್ತಿಯನ್ನು ಕಸಿದು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೆರುವವರಿಗೆ ಹಂಚಲಿದೆ’ (ಮುಸಲ್ಮಾನರನ್ನು ಗುರಿಯಾಗಿಸಿಕೊಂಡು) ಎಂದರು. ಹಿಂದಿನ ಮನಮೋಹನ್ ಸಿಂಗ್ ಸರ್ಕಾರ ಭಾರತದ ಸಂಪನ್ಮೂಲಗಳ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದಿದೆ ಎಂಬ ಸುಳ್ಳನ್ನೂ ಹಿಂಜರಿಕೆಯಿಲ್ಲದೆ ಓಡಿಸಿದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದೆ ಎಂದು ಹೇಳಿದ ಮಾತು ಸುಳ್ಳಾದರೆ, ಮುಸಲ್ಮಾನರನ್ನು ನುಸುಳುಕೋರರು ಎಬಂತೆ ರೆಫರ್ ಮಾಡಿದ್ದು ದ್ವೇಷದ ನುಡಿ ಮತ್ತು ಮನಮೋಹನ್ ಸಿಂಗ್ ಸರ್ಕಾರದ ಹೇಳಿಕೆ ಎಂದು ಭಾಷಣ ಬಿಗಿದಿದ್ದು ತಿರುಚಿದ ಮಾತು ಎಂಬುದು ಈಗ ಜಗಜ್ಜಾಹೀರವಾಗಿದೆ. ಹೀಗಿದ್ದರೂ ಚುನಾವಣಾ ಆಯೋಗ ಹಲ್ಲು ಕಿತ್ತ ಹಾವಿನಂತಾಗಿದೆ; ಕನಿಷ್ಟ ಪಕ್ಷ ಬುಸುಗುಡುವ ನಾಟಕವನ್ನು ಕೂಡ ಆಡುತ್ತಿಲ್ಲ.

ಇಷ್ಟಕ್ಕೆ ಈ ಸುಳ್ಳಿನ ಸರಮಾಲೆ ನಿಲ್ಲಲಿಲ್ಲ. ಏಪ್ರಿಲ್ 22ರಂದು ಅಲಿಘರ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯ ಸರ್ವೇ ಮಾಡಿ ಅದನ್ನು ಮರುಹಂಚಿಕೆ ಮಾಡಲಿದೆ ಎಂದು ಅದರ ಪ್ರಣಾಳಿಕೆ ಹೇಳುತ್ತದೆ ಎಂದು, ಅದೊಂದು ಭಯಭೀತಿಯ ಸಂಗತಿ ಎಂಬಂತೆ ಪ್ರಧಾನಿ ಮೋದಿ ಹೇಳಿದರು. ಮರುಹಂಚಿಕೆಯ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆ ಅಷ್ಟು ಸ್ಪಷ್ಟವಾಗಿ ಏನೂ ಹೇಳದೇ ಇದ್ದರೂ, ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಿರುಚಿ ಮಾಡಿದ ಭಾಷಣ ಅದಾಗಿತ್ತು. ಅಷ್ಟಕ್ಕೂ ಯಾರಾದರೂ ಮರುಹಂಚಿಕೆಯ ಮಾತುಗಳನ್ನು ಆಡಿದರೆ ಅದು ಮೋದಿ ಗೆಳೆಯರಾದ ಅದಾನಿ ಮತ್ತು ಅಂಬಾನಿಯಂಥವರ ಆಸ್ತಿಗೆ ತೆರಿಗೆಗಳನ್ನು ಹಾಕಿ ಮರುಹಂಚಿಕೆಯ ಮಾತುಗಳನ್ನಾಡುತ್ತಾರೆಯೇ ಹೊರತು, ಬಡಬಗ್ಗರ ಅಥವಾ ದಮನಿತರ ಬಳಿ ಇರುವ (ಸಾಮಾನ್ಯವಾಗಿ ಇರದಿರುವ) ಹಣ-ಆಸ್ತಿಯ ಬಗ್ಗೆ ಮಾತನಾಡುವುದಿಲ್ಲ. ಆದರೂ ತಾನು ಏನನ್ನಾದರೂ ಮಾತಾಡಿ ಮಂಕುಬೂಧಿ ಎರಚಬಹುದು ಎಂಬ ಮೋದಿಯವರ ಆತ್ಮಸ್ಥೈರ್ಯಕ್ಕೆ ದೊಡ್ಡಪೆಟ್ಟು ಬೀಳುವ ಸಾಧ್ಯತೆಗಳ ಬಗೆಗಿನ ವಿಶ್ಲೇಷಣೆಗಳ ನಡುವೆಯೂ ಅವರ ಫೇಕ್ ನರೆಟಿವ್‌ಗಳು ಎಗ್ಗಿಲ್ಲದೆ ಮುಂದುವರಿಯುತ್ತಲೇ ಇವೆ.

ಈ ಪಟ್ಟಿ ಇಲ್ಲಿಗೆ ನಿಲ್ಲುವುದಿಲ್ಲ. ಉತ್ತರಾಧಿಕಾರಿ ಆಸ್ತಿ ತೆರಿಗೆ ಬಗೆಗೆ, ಅಲ್ಪಸಂಖ್ಯಾತರ ಮೀಸಲಾತಿ ಬಗೆಗೆ ಸುಳ್ಳುಗಳ ಕಂತೆಯನ್ನು ಬಿಚ್ಚುತ್ತಿದ್ದಾರೆ. ತಳ ಸಮುದಾಯಗಳ ಮನಸ್ಸಿನಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ದ್ವೇಷ ತುಂಬುವಂತಹ ಮಾತುಗಳನ್ನು ಮೀಸಲಾತಿ ವಿಷಯದ ಜತೆಗೆ ಬೆರೆಸಿ ಆಡುತ್ತಿದ್ದಾರೆ. ಇನ್ನೂ ಅವರ ತೆಕ್ಕೆಯಲ್ಲಿ ಎಂತೆಂಥ ದ್ವೇಷಪೂರಿತ ಸುಳ್ಳುಗಳ ತುಂಬಿವೆಯೋ ಊಹಿಸಲು ಅಸಾಧ್ಯ. ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯ ಸಾಧನೆಗಳು ಬಗ್ಗೆ ಹೇಳಿಕೊಳ್ಳುವಂಥದ್ದು ಏನಿಲ್ಲವಾದ್ದರಿಂದ ಇಂಥ ಮನೆಮುರುಕ ಮಾತುಗಳ ಮೊರೆ ಹೋಗುವ ಒತ್ತಡದಲ್ಲಿ ಅವರಿದ್ದಾರೆ. ಆದರೆ ಈಗ ಅದು ಜನಸಾಮಾನ್ಯರಿಗೆ ತಿಳಿಯದ ವಿಷಯವಾಗೇನೂ ಉಳಿದಿಲ್ಲ.

ಈಗ ಮೂರನೇ ಸುತ್ತಿನ ಮತದಾನ ಮೇ7ರಂದು ನಡೆಯಲಿದೆ. ಕರ್ನಾಟಕದ ಉಳಿದ 14 ಕ್ಷೇತ್ರಗಳ ಮತದಾನ ಅಂದು ನಡೆಯಲಿದೆ. ಬಹುತೇಕ ಆ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಮತ್ತು ಕೆಲವು ಕಡೆ ಸಮಬಲದ ಸ್ಪರ್ಧೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನು ಉತ್ತರಪ್ರದೇಶದಲ್ಲಿಯೂ ಬಿಜೆಪಿಗೆ ನೆಲ ಮೊದಲಿನಂತಿಲ್ಲ. 2019ರಲ್ಲಿ ಗೆದ್ದ 62 ಸ್ಥಾನಗಳನ್ನು ಉಳಿಸಿಕೊಳ್ಳಲು ಕಷ್ಟ ಎಂಬ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರ ಚುನಾವಣಾ ಭಾಷಣಗಳ ಮಟ್ಟ ಇನ್ನೂ ಪಾತಾಳಕ್ಕೆ ಕುಸಿಯುವುದನ್ನು ಊಹಿಸಲು ಕಷ್ಟವೇನಿಲ್ಲ.

ಇದನ್ನೂ ಓದಿ : ಕಳೆದ ಒಂದು ವರ್ಷದಲ್ಲಿ ಒಂದು ಬಾರಿಯೂ ಮಣಿಪುರಕ್ಕೆ ತೆರಳದ ಮೋದಿ: ಈ ಅವಧಿಯಲ್ಲಿ ವಿವಿಧ…

ಆದರೆ ಈ ಬಾರಿ ಜನ ಈ ಸುಳ್ಳು ಮತ್ತು ದ್ವೇಷಪೂರಿತ ಭಾಷಣಗಳನ್ನು ಸುಲಭವಾಗಿ ನಂಬುವ ಸ್ಥಿತಿಯಲ್ಲಿಲ್ಲ. ಜನ ಬೆಲೆ ಏರಿಕೆ, ನಿರುದ್ಯೋಗ, ಅಸಮಾನತೆ, ಸರ್ಕಾರದ ಕಾರ್ಪೊರೆಟ್ ಹಿತಾಸಕ್ತಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಎನ್ನುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳಷ್ಟು ಸಂಪನ್ಮೂಲಗಳು ಇಲ್ಲದೇ ಇದ್ದರೂ ಜನಪರ ಮಾಧ್ಯಮಗಳು ಬಿಜೆಪಿ ಪಕ್ಷದ ಸುಳ್ಳ್ಳುಗಳನ್ನು ಬಯಲಿಗೆಳೆದು ಮನೆಮನೆಗಳಿಗೆ ತಲುಪಿಸುವ ಕೆಲಸ ಮಾಡುತ್ತಿವೆ. ಈ ಎಚ್ಚೆತ್ತ ಪರಿಸ್ಥಿತಿಯಲ್ಲಿ ಅಧಿಕಾರದ ದುರ್ಬಳಕೆ ಎಷ್ಟೇ ದೊಡ್ಡಮಟ್ಟದಲ್ಲಿದ್ದರೂ ಅದು 2019ರಂತೆ ಸಫಲವಾಗಲು ಜನಸಾಮಾನ್ಯರ ’ನಂಬಿಕೆ’ ಫ್ಯಾಕ್ಟರ್ ಈ ಬಾರಿ ಕೈಕೊಡುತ್ತಿದೆ. ಈ ನಿಟ್ಟಿನಲ್ಲಿ 400 ಸೀಟುಗಳನ್ನು ಗೆಲ್ಲಲು ಇಷ್ಟು ಸುಳ್ಳುಗಳು ಖಂಡಿತಾ ಸಾಕಾಗುವುದಿಲ್ಲ ಎಂದು ಅವರು ನಂಬಿದ್ದಾರೆ. ಅದಕ್ಕಾಗಿ ಇನ್ನೂ ಹೆಚ್ಚು ಸುಳ್ಳುಗಳನ್ನು ಹೇಳಬೇಕು. ಫೇಕ್ ಫ್ಯಾಕ್ಟರಿ ಹೆಚ್ಚೆಚ್ಚು ಉತ್ಪಾದಿಸಬೇಕು, ಜನರ ವಿಶ್ವಾಸಕ್ಕೆ ವಿವೇಕಕ್ಕೆ ಸವಾಲು ಎಸೆಯಬೇಕು! ಆದರೆ ಇದು ಸುಲಭಕ್ಕೆ ಕೈಗೂಡುತ್ತಿಲ್ಲ ಎನ್ನುವಂತಿದೆ ಚುನಾವಣಾ ವಾತಾವರಣ; ಜೂನ್ ನಾಲ್ಕಕ್ಕೆ ಫಲಿತಾಂಶ ಕಂಡುಕೊಳ್ಳಬೇಕು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...