Homeಕರ್ನಾಟಕಖಾಯಮಾತಿಗೆ ಇನ್ನೆಷ್ಟು ವರ್ಷ ಕಾಯಬೇಕು?: ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಬೃಹತ್‌ ಪ್ರತಿಭಟನೆ ಆರಂಭ

ಖಾಯಮಾತಿಗೆ ಇನ್ನೆಷ್ಟು ವರ್ಷ ಕಾಯಬೇಕು?: ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಬೃಹತ್‌ ಪ್ರತಿಭಟನೆ ಆರಂಭ

- Advertisement -
- Advertisement -

ಕೆಲಸದ ಖಾಯಮಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯದ ಸ್ವಚ್ಛತಾ ಕಾರ್ಮಿಕರ ಆರಂಭಿಸಿದ್ದಾರೆ. ಸಾವಿರಾರು ಪೌರಕಾರ್ಮಿಕರು ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ಸೇರಿದ್ದು, ಸುರಿಯುತ್ತಿರುವ ಜಟಿ ಮಳೆಯನ್ನು ಲೆಕ್ಕಿಸದೆ ಹೋರಾಟಕ್ಕೆ ಕುಳಿತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, ಕರ್ನಾಟಕ ಪ್ರಗತಿಪರ ಪೌರ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮುಷ್ಕರ ಶುರುವಾಗಿದ್ದು, ಸರ್ಕಾರ ನೀಡಿದ ಭರವಸೆಗಳು ಈಡೇರಬೇಕೆಂದು ಬಿಗಿಪಟ್ಟು ಹಿಡಿಯಲಾಗಿದೆ.

ರಾಜ್ಯದ ಎಲ್ಲಾ ನೇರ ಪಾವತಿ ಪೌರಕಾರ್ಮಿಕರು, ನೆಪಮಾತ್ರ ಗುತ್ತಿಗೆ ಪದ್ಧತಿಯಲ್ಲಿ ಶೋಷಣೆ ಅನುಭವಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ವಾಹನ ಚಾಲಕರು ಮತ್ತು ಸಹಾಯಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರನ್ನು ಒಂದೇ ಬಾರಿಗೆ ಖಾಯಂಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ನಗರಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕೆಲಸವನ್ನು ಹೊರ ಗುತ್ತಿಗೆಗೆ ನೀಡಲಾಗಿದೆ. ಕಾರ್ಮಿಕರನ್ನು ಅಪಾರವಾಗಿ ಶೋಷಿಸುವ ಗುತ್ತಿಗೆ ಪದ್ಧತಿಯು ಸರ್ಕಾರವೇ ನಡೆಸುತ್ತಿರುವ ಗುಲಾಮಿ ಪದ್ಧತಿಯಾಗಿದೆ ಎಂದು ಸ್ವಚ್ಛತಾ ಕರ್ಮಿಗಳು ಪುನರುಚ್ಚರಿಸಿದ್ದಾರೆ.

ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಎಲ್ಲಾ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘ, ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ಹಾಗೂ ರಾಜ್ಯದ ವಿವಿಧ ಸಫಾಯಿಕರ್ಮಚಾರಿ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸಿದ ಫಲವಾಗಿ 2016-17ರಲ್ಲಿ ಅಂದಿನ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಗುತ್ತಿಗೆ ಪದ್ಧತಿ ರದ್ದುಪಡಿಸಿ ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಖಾಯಂ ಮಾಡುವ ನಿರ್ಣಯ ತೆಗೆದುಕೊಂಡಿತು. ಈ ನಿಯಮಾನುಸಾರ ಗುತ್ತಿಗೆ ಪದ್ಧತಿ ರದ್ದಾದ ಕೂಡಲೇ ಎಲ್ಲ ಕಾರ್ಮಿಕರನ್ನು ವಿಲೀನಗೊಳಿಸಿ ಖಾಯಂಗೊಳಿಸಬೇಕಾಗಿತ್ತು. ಆದರೆ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಮಧ್ಯೆ ಭೇದ-ಭಾವ ಉಂಟು ಮಾಡುವ ಉದ್ದೇಶದಿಂದ ಸರ್ಕಾರವು ದಲಿತ ಕಾರ್ಮಿಕರ ವಿರುದ್ಧವಾಗಿ ಕಸ ಗುಡಿಸುವವರು, ಕಸವನ್ನು ಮನೆಗಳಿಂದ ಸಂಗ್ರಹಿಸುವವರು, ಟ್ರಾಕ್ಟರ್ ಲಾರಿ ಅಥವಾ ಆಟೋಗಳಿಗೆ ತುಂಬುವವರನ್ನು ಲೋಡರ್ಸ್, ಕ‌ಸ ಸಾಗಿಸುವವರನ್ನು ಚಾಲಕರು, ಒಳಚರಂಡಿಗಳಲ್ಲಿ ಕಟ್ಟಿಕೊಂಡ ಮಲ ಮೂತ್ರಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡುವವರು- ಹೀಗೆ ವರ್ಗೀಕರಿಸಿ ವಿಂಗಡಿಸಲಾಗಿದೆ. ಈ ವಿಂಗಡಣೆಯ ಅನುಸಾರ ಸರ್ಕಾರವು ಪೊರಕೆ ಹಿಡಿದು ಕಸ ಗುಡಿಸುವವರನ್ನು ಮಾತ್ರ ಪೌರಕಾರ್ಮಿಕರೆಂದು ಪರಿಗಣಿಸಿ ಬೇರೆ ಕಾರ್ಮಿಕರನ್ನು ಪ್ರತ್ಯೇಕಗೊಳಿಸಿದ್ದಾರೆ. ಗುತ್ತಿಗೆ ಪದ್ಧತಿಯನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂಬುದು ಈ ವಿಂಗಡಣೆಯ ಹಿಂದಿನ ದುರುದ್ದೇಶವಾಗಿದೆ ಎಂದು ಕಾರ್ಮಿಕರು ಎಚ್ಚರಿಸಿದ್ದಾರೆ.

ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಪಡಿಸಲು ಇಷ್ಟವಿಲ್ಲದ ಅಧಿಕಾರಿಗಳು, ಗುತ್ತಿಗೆದಾರರು ನೀಡುವ ಕಮಿಷನ್‌ಗೆ ಆಸೆಯಿಂದ ಅವರೊಂದಿಗೆ ಶಾಮೀಲಾಗಿದ್ದಾರೆ. ಪೌರಕಾರ್ಮಿಕರೆಲ್ಲರನ್ನೂ ನೇರಪಾವತಿ, ನೇರ ನೇಮಕಾತಿ, ಹೊರಗುತ್ತಿಗೆ ಕ್ಷೇಮಾಭಿವೃದ್ಧಿ ಟೈಮ್‌ಸ್ಟೇಲ್‌ ಎಂಬಂತಹ ಅಸಂಬದ್ಧ ಗುಂಪುಗಳಾಗಿ ವಿಂಗಡಿಸಿದ್ದಾರೆ. ಅವರ ಕಪಿಮುಷ್ಟಿಯಲ್ಲಿರುವ ಅಧಿಕಾರಿಗಳು ತಮಗೆ ಹತ್ತಿರವಾಗಿರುವ, ಲಂಚ ನೀಡಿದ ಬೆರಳೆಣಿಕೆಯಷ್ಟು ನೌಕರರನ್ನು ನೆಪ ಮಾತ್ರಕ್ಕೆ ಖಾಯಂ ಮಾಡಿರುತ್ತಾರೆ ಎಂದು ಸಂಘಟನೆಗಳು ತಿಳಿಸಿವೆ.

ಪ್ರತಿಭಟನೆ ವೇಳೆ ಮಾತನಾಡಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“18 ಸಾವಿರ ಸಂಬಳ ಕೊಡುತ್ತಿದ್ದೇವೆ ಎನ್ನುತ್ತಾರೆ. ಎಲ್ಲಿ ಬರುತ್ತಿದೆ ಅಷ್ಟು ಸಂಬಳ. 13 ಸಾವಿರ ರೂಪಾಯಿ ಕೈ ಸೇರುತ್ತಿದೆ. ಮನೆ ಬಾಡಿಗೆ ಕಟ್ಟಲು, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಆಗುತ್ತಿಲ್ಲ. ಅವರ ಮಕ್ಕಳ ಮಾತ್ರ ಕಾರಲ್ಲೇ ಓಡಾಡಬೇಕು, ನಮ್ಮ ಮಕ್ಕಳು ನಡೆದುಕೊಂಡೇ ತಿರುಗಾಡಬೇಕಾ? ಸರ್ಕಾರ ನಮ್ಮನ್ನು ಖಾಯಂ ಮಾಡಲೇಬೇಕು” ಎಂದು ತಾಯಿಯೊಬ್ಬರು ಆಗ್ರಹಿಸಿದರು.

“ಪರ್ಮನೆಂಟ್ ಆಗುತ್ತೆ ಅಂತ ಇಪತ್ತು ವರ್ಷಗಳಿಂದ ಹೇಳುತ್ತಲೇ ಇದ್ದಾರೆ. ನಮ್ಮನ್ನು ಖಾಯಂ ಮಾಡಲಿಲ್ಲ. ನಮ್ಮ ಹುಡುಗರಿಗೆ ಯಾವುದೇ ಸಹಾಯವಾಗಲಿಲ್ಲ. ಪರ್ಮನೆಂಟ್ ಆಗುತ್ತೇವೆ ಎಂದು ಕಾಯುತ್ತಲೇ ಅರ್ಧದಷ್ಟು ಕಾರ್ಮಿಕರು ತೀರಿಹೋದರು. 14 ಸಾವಿರ ಸಂಬಳ ಅನ್ನುತ್ತಾರೆ. ಆದರೆ 11,500 ಅಥವಾ 12,000 ಇಷ್ಟೇ ನಮ್ಮ ಖಾತೆಗೆ ಬೀಳುತ್ತಿದೆ. ಹುಷಾರಿಲ್ಲ ಅಂದರೆ ಸಂಬಳ ಕಟ್ ಆಗುತ್ತದೆ” ಎಂದು ಮತ್ತೊಬ್ಬ ಪೌರಕಾರ್ಮಿಕ ಮಹಿಳೆ ನೊಂದು ಹೇಳಿದರು.

ಪೌರಕಾರ್ಮಿಕರ ಬೇಡಿಕೆಗಳು

  • ನೇರಪಾವತಿ ಪೌರಕಾರ್ಮಿಕರು, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರು, ಹಾಗೂ ಪೌರಕಾರ್ಮಿಕರ ಮೇಲ್ವಿಚಾರಕರು ಎಂಬ ಅಸಂಬದ್ಧ ವಿಗಂಡಣೆಯನ್ನು ಕೈಬಿಟ್ಟು ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಏಕ ಕಾಲಕ್ಕೆ ಖಾಯಂ ಮಾಡಲೇಬೇಕು.
  • ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳಾ ಪೌರಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ಹೆರಿಗೆ ಭತ್ಯೆ, ಹೆರಿಗೆ ರಜೆ, ಬಾಲವಾಡಿ, ವಿಶ್ರಾಂತಿ ಗೃಹದಂತಹ ಅತ್ಯವಶ್ಯಕ ಮೂಲಭೂತ ಸೌಲಭ್ಯಗಳನ್ನು ಎಲ್ಲಿಯೂ ನೀಡಿಲ್ಲ. ಈ ಸೌಲಭ್ಯಗಳನ್ನು ರಾಜ್ಯದ ಎಲ್ಲಾ ಕಡೆ ನೀಡಲೇಬೇಕು ಎಂಬ ಸರ್ಕಾರಿ ಆದೇಶವನ್ನು ಕೂಡಲೇ ಹೊರಡಿಸಬೇಕು.
  • ಪೌರಕಾರ್ಮಿಕರಿಗಾಗಿ ಜಾರಿ ಮಾಡಿರುವ ಗೃಹ ಭಾಗ್ಯ ಯೋಜನೆಯನ್ನು ಕೇವಲ ಖಾಯಂ ಪೌರಕಾರ್ಮಿಕರಿಗೆ ಸೀಮಿತ ಮಾಡಿ ಶೇ.85 ರಷ್ಟು ಸ್ವಚ್ಛತಾ ಕಾರ್ಮಿಕರಿಗೆ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಎಲ್ಲಾ ನೇರಪಾವತಿ, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನಚಾಲಕರು, ಸಹಾಯಕರನ್ನು ಗೃಹ ಭಾಗ್ಯ ಯೋಜನೆಗೆ ಸೇರಿಸುವ ಸರ್ಕಾರಿ ಆದೇಶವನ್ನು ಕೂಡಲೇ ಹೊರಡಿಸಬೇಕು.
  • ನೇರಪಾವತಿ, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರ ಮಕ್ಕಳು ಖಾಸಗಿ ಶಾಲೆ-ಕಾಲೇಜುಗಳಲ್ಲಿಯೂ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಅದಕ್ಕೆ ಅಗತ್ಯವಿರುವ ಹಣಕಾಸಿನ ನೆರವು ನೀಡಲು ಸೂಕ್ತ ಆದೇಶ ಹೊರಡಿಸಬೇಕು.
  • ನೇರ ಪಾವತಿಯಡಿ 60 ವರ್ಷದವರೆಗೂ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗುತ್ತಿರುವ ಸ್ವಚ್ಛತಾ ಕಾರ್ಮಿಕರು ಯಾವ ನಿವೃತ್ತಿ ಸೌಕರ್ಯಗಳಿಲ್ಲದೆ ಬರಿಗೈಲಿ ಹೋಗುತ್ತಿದ್ದಾರೆ. ಈ ಕಾರ್ಮಿಕರಿಗೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು, ಮಾಸಿಕ ರೂ. 10,000 ಪಿಂಚಣಿ ಹಾಗೂ ಅವರ ಅವಲಂಬಿತರಿಗೆ ಉದ್ಯೋಗ ನೀಡಬೇಕು, ಮತ್ತು ಅವರ ಆರೋಗ್ಯ ಭದ್ರತೆಗಾಗಿ ಆರೋಗ್ಯ ಕಾರ್ಡ್ ನೀಡಬೇಕು.
  • ರಾಜ್ಯಾದ್ಯಂತ ನಗರ ಪ್ರದೇಶಗಳು (ನಗರ ಸ್ಥಳೀಯ ಸಂಸ್ಥೆಗಳು), ಗ್ರಾಮೀಣ ಭಾಗಗಳಲ್ಲಿ (ಗ್ರಾಮ ಪಂಚಾಯಿತಿಗಳು), ಖಾಸಗಿವಲಯಗಳಲ್ಲಿ (ಬಸ್‌ನಿಲ್ದಾಣ, ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳು, ಕಂಪನಿಗಳು, ದೊಡ್ಡ ಕಚೇರಿಗಳು, ಲಾರ್ಡ್‌ಗಳು, ಹೋಟೆಲ್ ಇತ್ಯಾದಿ) ಸ್ವಚ್ಛತಾ ಕೆಲಸಗಳನ್ನು ಮಾಡುತ್ತಿರುವ ಸಾವಿರಾರು ಸ್ವಚ್ಛತಾ ಕಾರ್ಮಿಕರ ನೇಮಕಾತಿ, ವೇತನ ಮತ್ತು ಇತರ ಸಾಮಾಜಿಕ ಭದ್ರತೆಗಾಗಿ ಬೇಕಾದ ಸೂಕ್ತ ಕಾಯ್ದೆ ನಮ್ಮ ರಾಜ್ಯದಲ್ಲಿಲ್ಲ. ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ, ಬೆಂಗಳೂರು ಇವರು ನಡೆಸಿರುವ ಅಧ್ಯಯನದ ಶಿಫಾರಸ್ಸಿನಂತೆ ಸ್ವಚ್ಛತಾ ಕಾರ್ಮಿಕರ ಭದ್ರತೆ, ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ನ್ಯಾಯಕ್ಕಾಗಿ ಸೂಕ್ತ ಕಾನೂನು ಜಾರಿಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...