Homeಮುಖಪುಟಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

ಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

- Advertisement -
- Advertisement -

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿಗಳಾಗುತ್ತಿರುವ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಈ ವರ್ಷ ಗರಿಷ್ಠ ಆರು ಮುಸ್ಲಿಂ ಅಭ್ಯರ್ಥಿಗಳು ಮಾತ್ರ ಐಎಎಸ್ ಅಧಿಕಾರಿಗಳಾಗುವ ಸಾಧ್ಯತೆ ಇದೆ ಎಂದು ‘siasat.com’ ಎಂದು ವರದಿ ಮಾಡಿದೆ.

2022ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಯುಪಿಎಸ್‌ಸಿ ಇತ್ತೀಚೆಗೆ ಬಿಡುಗಡೆ ಮಾಡಿದೆ. ಲಿಖಿತ ಮತ್ತು ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ವಿವರಗಳನ್ನು ಪ್ರಕಟಿಸಿದೆ.

ಈ ವರ್ಷ ಆರು ಮುಸ್ಲಿಂ ಅಭ್ಯರ್ಥಿಗಳು ಐಎಎಸ್ ಆಗುವ ಸಾಧ್ಯತೆ ಇದೆ. ಹಿಂದಿನ ವರ್ಷದ ನಾಗರಿಕ ಸೇವಾ ಪರೀಕ್ಷೆಯ ಸೇವಾ ಹಂಚಿಕೆ ದತ್ತಾಂಶವನ್ನು ವಿಶ್ಲೇಷಿಸಿದಾಗ, ಈ ವರ್ಷ ಐಎಎಸ್ ಅಧಿಕಾರಿಗಳಾಗಲು ಕೇವಲ ಆರು ಮುಸ್ಲಿಂ ಅಭ್ಯರ್ಥಿಗಳು ಅರ್ಹರಾಗಿದ್ದಾರೆ ಎಂದು ಕಂಡುಬಂದಿದೆ.

ಆಯ್ಕೆಯಾಗಲಿರುವ ಆರು ಮಂದಿ ಮುಸ್ಲಿಂ ಅಭ್ಯರ್ಥಿಗಳು

  1. ಸಾಮಾನ್ಯ ವರ್ಗದ ಅಡಿಯಲ್ಲಿ ವಸೀಮ್ ಅಹ್ಮದ್ ಭಟ್ (ಅಖಿಲ ಭಾರತ ರ್‍ಯಾಂಕ್‌-7)
  2. ಸಾಮಾನ್ಯ ವರ್ಗದ ಅಡಿಯಲ್ಲಿ ನವೀದ್ ಅಹ್ಸಾನ್ ಭಟ್ (ರ್‍ಯಾಂಕ್‌- 84)
  3. ಒಬಿಸಿ ವರ್ಗದ ಅಡಿಯಲ್ಲಿ ಅಸದ್ ಜುಬೇರ್ (ರ್‍ಯಾಂಕ್‌-86)
  4. ಒಬಿಸಿ ವರ್ಗದ ಅಡಿಯಲ್ಲಿ ಆಕಿಪ್ ಖಾನ್ (ರ್‍ಯಾಂಕ್‌-268)
  5. ಒಬಿಸಿ ವರ್ಗದ ಅಡಿಯಲ್ಲಿ ಮೊಯಿನ್ ಅಹಮದ್ (ರ್‍ಯಾಂಕ್-296)
  6. ಎಸ್‌ಟಿ ವರ್ಗದ ಅಡಿಯಲ್ಲಿ ಮೊಹಮ್ಮದ್ ಇರ್ಫಾನ್ (ರ್‍ಯಾಂಕ್-476)

ಹಿಂದಿನ ವರ್ಷಗಳ ಅಂಕಿ-ಅಂಶ

2021ರಲ್ಲಿ ಒಟ್ಟು ಐಎಎಸ್‌ ಅಧಿಕಾರಿಗಳ ಪೈಕಿ ಕೇವಲ 1.6 ಪ್ರತಿಶತದಷ್ಟು ಮುಸ್ಲಿಮರಿದ್ದರು. 2020ಕ್ಕೆ ಹೋಲಿಸಿದರೆ ಶೇ. 4.4ರಷ್ಟು ಕುಸಿತವನ್ನು ಇಲ್ಲಿ ಕಾಣಬಹುದು. ಹಿಂದಿನ ವರ್ಷಗಳಲ್ಲಿಯೂ ಅಂತಹ ಏರಿಕೆ ಕಂಡುಬಂದಿಲ್ಲ. ಐಎಎಸ್‌ ಅಧಿಕಾರಿಗಳಾಗುವ ಮುಸ್ಲಿಮರ ಸಂಖ್ಯೆ ಶೇಕಡಾ 1 ರಿಂದ 5ರ ನಡುವೆ ಇತ್ತಷ್ಟೆ. ಮುಸ್ಲಿಂ ಜನಸಂಖ್ಯೆಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆ ಕುಸಿತ ಇರುವುದನ್ನು ಕಾಣಬಹುದು. ಭಾರತದಲ್ಲಿ 2011ರ ಜನಗಣತಿಯ ಪ್ರಕಾರ ಶೇ. 17.22 ಮುಸ್ಲಿಮರಿದ್ದಾರೆ.

ಮಾಹಿತಿ ಕೃಪೆ: www.siasat.com

ಯುಪಿಎಸ್‌ ನಾಗರಿಕ ಸೇವೆಗಳ ಪರೀಕ್ಷೆಯ ಹಂತಗಳು

ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದೆ. ಅವುಗಳೆಂದರೆ ಪ್ರಿಲಿಮ್ಸ್, ಮೇನ್ಸ್‌ ಮತ್ತು ಸಂದರ್ಶನ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌), ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಮತ್ತು ಇತರ ಸರ್ಕಾರಿ ಪ್ರತಿಷ್ಠಿತ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿರಿ: ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

ಸೀಮಿತ ಸಂಖ್ಯೆಯ ಖಾಲಿ ಹುದ್ದೆಗಳಿಗೆ ಲಕ್ಷಗಟ್ಟಲೆ ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿರುವುದರಿಂದ ಈ ಹುದ್ದೆಗಳಿಗೆ ಪೈಪೋಟಿ ತೀವ್ರವಾಗಿರುತ್ತದೆ.

ಯುಪಿಎಸ್‌ಸಿ, ಸಿಎಸ್‌ಇಯಲ್ಲಿ ಮುಸ್ಲಿಂ ಅಭ್ಯರ್ಥಿಗಳ ಪ್ರಾತಿನಿಧ್ಯ ಕಡಿಮೆಯಿರುವುದು ಕಳವಳಕಾರಿ ವಿಷಯವಾಗಿದೆ. ಸರ್ಕಾರ ಮಾತ್ರವಲ್ಲದೆ ನಾಗರಿಕ ಸಮಾಜ ಸಂಸ್ಥೆಗಳು ಸಹ ಈ ಸಮಸ್ಯೆಯನ್ನು ಪರಿಹರಿಸಬೇಕಿದೆ ಎಂದು ‘siasat.com’ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...