Homeಮುಖಪುಟಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

ಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

- Advertisement -
- Advertisement -

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿಗಳಾಗುತ್ತಿರುವ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಈ ವರ್ಷ ಗರಿಷ್ಠ ಆರು ಮುಸ್ಲಿಂ ಅಭ್ಯರ್ಥಿಗಳು ಮಾತ್ರ ಐಎಎಸ್ ಅಧಿಕಾರಿಗಳಾಗುವ ಸಾಧ್ಯತೆ ಇದೆ ಎಂದು ‘siasat.com’ ಎಂದು ವರದಿ ಮಾಡಿದೆ.

2022ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಯುಪಿಎಸ್‌ಸಿ ಇತ್ತೀಚೆಗೆ ಬಿಡುಗಡೆ ಮಾಡಿದೆ. ಲಿಖಿತ ಮತ್ತು ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ವಿವರಗಳನ್ನು ಪ್ರಕಟಿಸಿದೆ.

ಈ ವರ್ಷ ಆರು ಮುಸ್ಲಿಂ ಅಭ್ಯರ್ಥಿಗಳು ಐಎಎಸ್ ಆಗುವ ಸಾಧ್ಯತೆ ಇದೆ. ಹಿಂದಿನ ವರ್ಷದ ನಾಗರಿಕ ಸೇವಾ ಪರೀಕ್ಷೆಯ ಸೇವಾ ಹಂಚಿಕೆ ದತ್ತಾಂಶವನ್ನು ವಿಶ್ಲೇಷಿಸಿದಾಗ, ಈ ವರ್ಷ ಐಎಎಸ್ ಅಧಿಕಾರಿಗಳಾಗಲು ಕೇವಲ ಆರು ಮುಸ್ಲಿಂ ಅಭ್ಯರ್ಥಿಗಳು ಅರ್ಹರಾಗಿದ್ದಾರೆ ಎಂದು ಕಂಡುಬಂದಿದೆ.

ಆಯ್ಕೆಯಾಗಲಿರುವ ಆರು ಮಂದಿ ಮುಸ್ಲಿಂ ಅಭ್ಯರ್ಥಿಗಳು

  1. ಸಾಮಾನ್ಯ ವರ್ಗದ ಅಡಿಯಲ್ಲಿ ವಸೀಮ್ ಅಹ್ಮದ್ ಭಟ್ (ಅಖಿಲ ಭಾರತ ರ್‍ಯಾಂಕ್‌-7)
  2. ಸಾಮಾನ್ಯ ವರ್ಗದ ಅಡಿಯಲ್ಲಿ ನವೀದ್ ಅಹ್ಸಾನ್ ಭಟ್ (ರ್‍ಯಾಂಕ್‌- 84)
  3. ಒಬಿಸಿ ವರ್ಗದ ಅಡಿಯಲ್ಲಿ ಅಸದ್ ಜುಬೇರ್ (ರ್‍ಯಾಂಕ್‌-86)
  4. ಒಬಿಸಿ ವರ್ಗದ ಅಡಿಯಲ್ಲಿ ಆಕಿಪ್ ಖಾನ್ (ರ್‍ಯಾಂಕ್‌-268)
  5. ಒಬಿಸಿ ವರ್ಗದ ಅಡಿಯಲ್ಲಿ ಮೊಯಿನ್ ಅಹಮದ್ (ರ್‍ಯಾಂಕ್-296)
  6. ಎಸ್‌ಟಿ ವರ್ಗದ ಅಡಿಯಲ್ಲಿ ಮೊಹಮ್ಮದ್ ಇರ್ಫಾನ್ (ರ್‍ಯಾಂಕ್-476)

ಹಿಂದಿನ ವರ್ಷಗಳ ಅಂಕಿ-ಅಂಶ

2021ರಲ್ಲಿ ಒಟ್ಟು ಐಎಎಸ್‌ ಅಧಿಕಾರಿಗಳ ಪೈಕಿ ಕೇವಲ 1.6 ಪ್ರತಿಶತದಷ್ಟು ಮುಸ್ಲಿಮರಿದ್ದರು. 2020ಕ್ಕೆ ಹೋಲಿಸಿದರೆ ಶೇ. 4.4ರಷ್ಟು ಕುಸಿತವನ್ನು ಇಲ್ಲಿ ಕಾಣಬಹುದು. ಹಿಂದಿನ ವರ್ಷಗಳಲ್ಲಿಯೂ ಅಂತಹ ಏರಿಕೆ ಕಂಡುಬಂದಿಲ್ಲ. ಐಎಎಸ್‌ ಅಧಿಕಾರಿಗಳಾಗುವ ಮುಸ್ಲಿಮರ ಸಂಖ್ಯೆ ಶೇಕಡಾ 1 ರಿಂದ 5ರ ನಡುವೆ ಇತ್ತಷ್ಟೆ. ಮುಸ್ಲಿಂ ಜನಸಂಖ್ಯೆಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆ ಕುಸಿತ ಇರುವುದನ್ನು ಕಾಣಬಹುದು. ಭಾರತದಲ್ಲಿ 2011ರ ಜನಗಣತಿಯ ಪ್ರಕಾರ ಶೇ. 17.22 ಮುಸ್ಲಿಮರಿದ್ದಾರೆ.

ಮಾಹಿತಿ ಕೃಪೆ: www.siasat.com

ಯುಪಿಎಸ್‌ ನಾಗರಿಕ ಸೇವೆಗಳ ಪರೀಕ್ಷೆಯ ಹಂತಗಳು

ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದೆ. ಅವುಗಳೆಂದರೆ ಪ್ರಿಲಿಮ್ಸ್, ಮೇನ್ಸ್‌ ಮತ್ತು ಸಂದರ್ಶನ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌), ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಮತ್ತು ಇತರ ಸರ್ಕಾರಿ ಪ್ರತಿಷ್ಠಿತ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿರಿ: ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

ಸೀಮಿತ ಸಂಖ್ಯೆಯ ಖಾಲಿ ಹುದ್ದೆಗಳಿಗೆ ಲಕ್ಷಗಟ್ಟಲೆ ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿರುವುದರಿಂದ ಈ ಹುದ್ದೆಗಳಿಗೆ ಪೈಪೋಟಿ ತೀವ್ರವಾಗಿರುತ್ತದೆ.

ಯುಪಿಎಸ್‌ಸಿ, ಸಿಎಸ್‌ಇಯಲ್ಲಿ ಮುಸ್ಲಿಂ ಅಭ್ಯರ್ಥಿಗಳ ಪ್ರಾತಿನಿಧ್ಯ ಕಡಿಮೆಯಿರುವುದು ಕಳವಳಕಾರಿ ವಿಷಯವಾಗಿದೆ. ಸರ್ಕಾರ ಮಾತ್ರವಲ್ಲದೆ ನಾಗರಿಕ ಸಮಾಜ ಸಂಸ್ಥೆಗಳು ಸಹ ಈ ಸಮಸ್ಯೆಯನ್ನು ಪರಿಹರಿಸಬೇಕಿದೆ ಎಂದು ‘siasat.com’ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....