Homeಮುಖಪುಟಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

ಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

- Advertisement -
- Advertisement -

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿಗಳಾಗುತ್ತಿರುವ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಈ ವರ್ಷ ಗರಿಷ್ಠ ಆರು ಮುಸ್ಲಿಂ ಅಭ್ಯರ್ಥಿಗಳು ಮಾತ್ರ ಐಎಎಸ್ ಅಧಿಕಾರಿಗಳಾಗುವ ಸಾಧ್ಯತೆ ಇದೆ ಎಂದು ‘siasat.com’ ಎಂದು ವರದಿ ಮಾಡಿದೆ.

2022ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಯುಪಿಎಸ್‌ಸಿ ಇತ್ತೀಚೆಗೆ ಬಿಡುಗಡೆ ಮಾಡಿದೆ. ಲಿಖಿತ ಮತ್ತು ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ವಿವರಗಳನ್ನು ಪ್ರಕಟಿಸಿದೆ.

ಈ ವರ್ಷ ಆರು ಮುಸ್ಲಿಂ ಅಭ್ಯರ್ಥಿಗಳು ಐಎಎಸ್ ಆಗುವ ಸಾಧ್ಯತೆ ಇದೆ. ಹಿಂದಿನ ವರ್ಷದ ನಾಗರಿಕ ಸೇವಾ ಪರೀಕ್ಷೆಯ ಸೇವಾ ಹಂಚಿಕೆ ದತ್ತಾಂಶವನ್ನು ವಿಶ್ಲೇಷಿಸಿದಾಗ, ಈ ವರ್ಷ ಐಎಎಸ್ ಅಧಿಕಾರಿಗಳಾಗಲು ಕೇವಲ ಆರು ಮುಸ್ಲಿಂ ಅಭ್ಯರ್ಥಿಗಳು ಅರ್ಹರಾಗಿದ್ದಾರೆ ಎಂದು ಕಂಡುಬಂದಿದೆ.

ಆಯ್ಕೆಯಾಗಲಿರುವ ಆರು ಮಂದಿ ಮುಸ್ಲಿಂ ಅಭ್ಯರ್ಥಿಗಳು

  1. ಸಾಮಾನ್ಯ ವರ್ಗದ ಅಡಿಯಲ್ಲಿ ವಸೀಮ್ ಅಹ್ಮದ್ ಭಟ್ (ಅಖಿಲ ಭಾರತ ರ್‍ಯಾಂಕ್‌-7)
  2. ಸಾಮಾನ್ಯ ವರ್ಗದ ಅಡಿಯಲ್ಲಿ ನವೀದ್ ಅಹ್ಸಾನ್ ಭಟ್ (ರ್‍ಯಾಂಕ್‌- 84)
  3. ಒಬಿಸಿ ವರ್ಗದ ಅಡಿಯಲ್ಲಿ ಅಸದ್ ಜುಬೇರ್ (ರ್‍ಯಾಂಕ್‌-86)
  4. ಒಬಿಸಿ ವರ್ಗದ ಅಡಿಯಲ್ಲಿ ಆಕಿಪ್ ಖಾನ್ (ರ್‍ಯಾಂಕ್‌-268)
  5. ಒಬಿಸಿ ವರ್ಗದ ಅಡಿಯಲ್ಲಿ ಮೊಯಿನ್ ಅಹಮದ್ (ರ್‍ಯಾಂಕ್-296)
  6. ಎಸ್‌ಟಿ ವರ್ಗದ ಅಡಿಯಲ್ಲಿ ಮೊಹಮ್ಮದ್ ಇರ್ಫಾನ್ (ರ್‍ಯಾಂಕ್-476)

ಹಿಂದಿನ ವರ್ಷಗಳ ಅಂಕಿ-ಅಂಶ

2021ರಲ್ಲಿ ಒಟ್ಟು ಐಎಎಸ್‌ ಅಧಿಕಾರಿಗಳ ಪೈಕಿ ಕೇವಲ 1.6 ಪ್ರತಿಶತದಷ್ಟು ಮುಸ್ಲಿಮರಿದ್ದರು. 2020ಕ್ಕೆ ಹೋಲಿಸಿದರೆ ಶೇ. 4.4ರಷ್ಟು ಕುಸಿತವನ್ನು ಇಲ್ಲಿ ಕಾಣಬಹುದು. ಹಿಂದಿನ ವರ್ಷಗಳಲ್ಲಿಯೂ ಅಂತಹ ಏರಿಕೆ ಕಂಡುಬಂದಿಲ್ಲ. ಐಎಎಸ್‌ ಅಧಿಕಾರಿಗಳಾಗುವ ಮುಸ್ಲಿಮರ ಸಂಖ್ಯೆ ಶೇಕಡಾ 1 ರಿಂದ 5ರ ನಡುವೆ ಇತ್ತಷ್ಟೆ. ಮುಸ್ಲಿಂ ಜನಸಂಖ್ಯೆಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆ ಕುಸಿತ ಇರುವುದನ್ನು ಕಾಣಬಹುದು. ಭಾರತದಲ್ಲಿ 2011ರ ಜನಗಣತಿಯ ಪ್ರಕಾರ ಶೇ. 17.22 ಮುಸ್ಲಿಮರಿದ್ದಾರೆ.

ಮಾಹಿತಿ ಕೃಪೆ: www.siasat.com

ಯುಪಿಎಸ್‌ ನಾಗರಿಕ ಸೇವೆಗಳ ಪರೀಕ್ಷೆಯ ಹಂತಗಳು

ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದೆ. ಅವುಗಳೆಂದರೆ ಪ್ರಿಲಿಮ್ಸ್, ಮೇನ್ಸ್‌ ಮತ್ತು ಸಂದರ್ಶನ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌), ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಮತ್ತು ಇತರ ಸರ್ಕಾರಿ ಪ್ರತಿಷ್ಠಿತ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿರಿ: ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

ಸೀಮಿತ ಸಂಖ್ಯೆಯ ಖಾಲಿ ಹುದ್ದೆಗಳಿಗೆ ಲಕ್ಷಗಟ್ಟಲೆ ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿರುವುದರಿಂದ ಈ ಹುದ್ದೆಗಳಿಗೆ ಪೈಪೋಟಿ ತೀವ್ರವಾಗಿರುತ್ತದೆ.

ಯುಪಿಎಸ್‌ಸಿ, ಸಿಎಸ್‌ಇಯಲ್ಲಿ ಮುಸ್ಲಿಂ ಅಭ್ಯರ್ಥಿಗಳ ಪ್ರಾತಿನಿಧ್ಯ ಕಡಿಮೆಯಿರುವುದು ಕಳವಳಕಾರಿ ವಿಷಯವಾಗಿದೆ. ಸರ್ಕಾರ ಮಾತ್ರವಲ್ಲದೆ ನಾಗರಿಕ ಸಮಾಜ ಸಂಸ್ಥೆಗಳು ಸಹ ಈ ಸಮಸ್ಯೆಯನ್ನು ಪರಿಹರಿಸಬೇಕಿದೆ ಎಂದು ‘siasat.com’ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ನ ಸಿಯುಟಾಕ್ಕೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....