Homeಮುಖಪುಟಭಾರತದಲ್ಲಿ, ಪ್ರಪಂಚದಲ್ಲಿ ಎಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳಿವೆ? ನೀವು ತಿಳಿದಿರಬೇಕಾದ ಅಂಶಗಳು

ಭಾರತದಲ್ಲಿ, ಪ್ರಪಂಚದಲ್ಲಿ ಎಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳಿವೆ? ನೀವು ತಿಳಿದಿರಬೇಕಾದ ಅಂಶಗಳು

- Advertisement -
- Advertisement -

ವಿಶ್ವದ ಪ್ರತಿ 5 ಜನರಲ್ಲಿ ಒಬ್ಬರಿಗೆ ಆರೋಗ್ಯ ಸಮಸ್ಯೆಗಳಿದ್ದು, ಅವರಿಗೆ ಕೊರೊನಾ ಬಂದಲ್ಲಿ ಅಪಾಯ ಹೆಚ್ಚು ಎಂದು ಲ್ಯಾನ್ಸೆಟ್ ವರದಿ ತಿಳಿಸಿದೆ. ಆ ಅಧ್ಯಯನದ ಪ್ರಕಾರ, ಭಾರತದ ಜನಸಂಖ್ಯೆಯ ಕನಿಷ್ಠ 21.5 ಪ್ರತಿಶತದಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳಿವೆ. ಇಂತಹವರಿಗೆ ಕೊರೊನಾ ಸೋಂಕು ತಗುಲಿದರೆ ಸಮಸ್ಯೆ ಉಲ್ಬಣಗೊಳ್ಳಲಿದೆ ಎಂದು ವರದಿ ತಿಳಿಸಿದೆ.

188 ದೇಶಗಳ ಡೇಟಾವನ್ನು ಬಳಸಿ ನಡೆಸಿರುವ ಮಾಡೆಲಿಂಗ್ ಅಧ್ಯಯನದ ವರದಿಯನನ್ನು ದಿ ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್ ಜರ್ನಲ್ ಪ್ರಕಟಿಸಿದೆ. ಅದರಂತೆ ವಿಶ್ವದ ಶೇಕಡಾ 22 ರಷ್ಟು ಜನರು ಅಂದರೆ ಸುಮಾರು 170 ಕೋಟಿ ಜನರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಕೊರೊನಾ ಮುನ್ನೆಚ್ಚರಿಕೆಯ ಕ್ರಮವಾಗಿ ವಿಶ್ವದ ಜನಸಂಖ್ಯೆಯ 4 ಪ್ರತಿಶತದಷ್ಟು (780 ಕೋಟಿಯಲ್ಲಿ 34.9 ಕೋಟಿ ಜನರಿಗೆ) ಆಸ್ಪತ್ರೆಗೆ ದಾಖಲಾಗುವ ಅಗತ್ಯವಿರುತ್ತದೆ ಎಂದು ಲೇಖಕರು ಅಂದಾಜಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುಕೆ ಮತ್ತು ಯುಎಸ್ಎಯ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಪ್ರಕಟಿಸಿದ ಮಾರ್ಗಸೂಚಿಗಳು ಹೃದಯರಕ್ತನಾಳದ ಕಾಯಿಲೆ, ದೀರ್ಘಕಾಲದ ಮೂತ್ರಪಿಂಡ ಕಾಯಿಲೆ, ಮಧುಮೇಹ ಮತ್ತು ದೀರ್ಘಕಾಲದ ಉಸಿರಾಟದ ಕಾಯಿಲೆ ಹೊಂದಿರುವವರಿಗೆ ಕೋವಿಡ್ -19 ಸೋಂಕು ತಗುಲಿದರೆ ಅಪಾಯಕಾರಿ ಎನ್ನಲಾಗಿದೆ.

ಜಾಗತಿಕವಾಗಿ 20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರಲ್ಲಿ ಶೇಕಡಾ 5 ಕ್ಕಿಂತ ಕಡಿಮೆ, 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರಿಗೆ ಕನಿಷ್ಠ ಒಂದಾದರೂ ಆರೋಗ್ಯ ಸಮಸ್ಯೆಗಳಿವೆ.  ದುಡಿಯುವ ವಯಸ್ಸಿನ ಜನಸಂಖ್ಯೆಯಲ್ಲಿ (15 ರಿಂದ 64 ವರ್ಷಗಳು), ಶೇಕಡಾ 23 ರಷ್ಟು ಜನರು ಕನಿಷ್ಠ ಒಂದು ಆರೋಗ್ಯ ಸಮಸ್ಯೆಯನ್ನು ಹೊಂದಿದ್ದಾರೆಂದು ಅಂದಾಜಿಸಲಾಗಿದೆ.

“ದೇಶಗಳು ಲಾಕ್‌ಡೌನ್‌ನಿಂದ ಹೊರಬರುತ್ತಿದ್ದಂತೆ, ಇನ್ನೂ ಹರಡುತ್ತಿರುವ ವೈರಸ್‌ನಿಂದ ಹೆಚ್ಚು ದುರ್ಬಲರನ್ನು ರಕ್ಷಿಸುವ ಮಾರ್ಗಗಳನ್ನು ಸರ್ಕಾರಗಳು ಹುಡುಕುತ್ತಿವೆ. ತೀವ್ರ ರೋಗದ ಅಪಾಯದಲ್ಲಿರುವವರನ್ನು ರಕ್ಷಿಸಲು ನಮ್ಮ ಅಧ್ಯಯನ ಸಹಕಾರಿಯಾಗಲಿದೆ ಎಂದು ಭಾವಿಸುತ್ತೇವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜೀನ್ ಅಂಡ್ ಟ್ರಾಪಿಕಲ್ ಮೆಡಿಸಿನ್, ಇಂಗ್ಲೆಂಡ್ ನ ಸಹಾಯಕ ಪ್ರಾಧ್ಯಾಪಕ ಆಂಡ್ರ್ಯೂ ಕ್ಲಾರ್ಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನು ಓದಿ: ತುಮಕೂರಿನ ಮಧುಗಿರಿಯಲ್ಲಿ ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...