Homeಮುಖಪುಟಭಾರತದಲ್ಲಿ, ಪ್ರಪಂಚದಲ್ಲಿ ಎಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳಿವೆ? ನೀವು ತಿಳಿದಿರಬೇಕಾದ ಅಂಶಗಳು

ಭಾರತದಲ್ಲಿ, ಪ್ರಪಂಚದಲ್ಲಿ ಎಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳಿವೆ? ನೀವು ತಿಳಿದಿರಬೇಕಾದ ಅಂಶಗಳು

- Advertisement -
- Advertisement -

ವಿಶ್ವದ ಪ್ರತಿ 5 ಜನರಲ್ಲಿ ಒಬ್ಬರಿಗೆ ಆರೋಗ್ಯ ಸಮಸ್ಯೆಗಳಿದ್ದು, ಅವರಿಗೆ ಕೊರೊನಾ ಬಂದಲ್ಲಿ ಅಪಾಯ ಹೆಚ್ಚು ಎಂದು ಲ್ಯಾನ್ಸೆಟ್ ವರದಿ ತಿಳಿಸಿದೆ. ಆ ಅಧ್ಯಯನದ ಪ್ರಕಾರ, ಭಾರತದ ಜನಸಂಖ್ಯೆಯ ಕನಿಷ್ಠ 21.5 ಪ್ರತಿಶತದಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳಿವೆ. ಇಂತಹವರಿಗೆ ಕೊರೊನಾ ಸೋಂಕು ತಗುಲಿದರೆ ಸಮಸ್ಯೆ ಉಲ್ಬಣಗೊಳ್ಳಲಿದೆ ಎಂದು ವರದಿ ತಿಳಿಸಿದೆ.

188 ದೇಶಗಳ ಡೇಟಾವನ್ನು ಬಳಸಿ ನಡೆಸಿರುವ ಮಾಡೆಲಿಂಗ್ ಅಧ್ಯಯನದ ವರದಿಯನನ್ನು ದಿ ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್ ಜರ್ನಲ್ ಪ್ರಕಟಿಸಿದೆ. ಅದರಂತೆ ವಿಶ್ವದ ಶೇಕಡಾ 22 ರಷ್ಟು ಜನರು ಅಂದರೆ ಸುಮಾರು 170 ಕೋಟಿ ಜನರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಕೊರೊನಾ ಮುನ್ನೆಚ್ಚರಿಕೆಯ ಕ್ರಮವಾಗಿ ವಿಶ್ವದ ಜನಸಂಖ್ಯೆಯ 4 ಪ್ರತಿಶತದಷ್ಟು (780 ಕೋಟಿಯಲ್ಲಿ 34.9 ಕೋಟಿ ಜನರಿಗೆ) ಆಸ್ಪತ್ರೆಗೆ ದಾಖಲಾಗುವ ಅಗತ್ಯವಿರುತ್ತದೆ ಎಂದು ಲೇಖಕರು ಅಂದಾಜಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುಕೆ ಮತ್ತು ಯುಎಸ್ಎಯ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಪ್ರಕಟಿಸಿದ ಮಾರ್ಗಸೂಚಿಗಳು ಹೃದಯರಕ್ತನಾಳದ ಕಾಯಿಲೆ, ದೀರ್ಘಕಾಲದ ಮೂತ್ರಪಿಂಡ ಕಾಯಿಲೆ, ಮಧುಮೇಹ ಮತ್ತು ದೀರ್ಘಕಾಲದ ಉಸಿರಾಟದ ಕಾಯಿಲೆ ಹೊಂದಿರುವವರಿಗೆ ಕೋವಿಡ್ -19 ಸೋಂಕು ತಗುಲಿದರೆ ಅಪಾಯಕಾರಿ ಎನ್ನಲಾಗಿದೆ.

ಜಾಗತಿಕವಾಗಿ 20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರಲ್ಲಿ ಶೇಕಡಾ 5 ಕ್ಕಿಂತ ಕಡಿಮೆ, 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರಿಗೆ ಕನಿಷ್ಠ ಒಂದಾದರೂ ಆರೋಗ್ಯ ಸಮಸ್ಯೆಗಳಿವೆ.  ದುಡಿಯುವ ವಯಸ್ಸಿನ ಜನಸಂಖ್ಯೆಯಲ್ಲಿ (15 ರಿಂದ 64 ವರ್ಷಗಳು), ಶೇಕಡಾ 23 ರಷ್ಟು ಜನರು ಕನಿಷ್ಠ ಒಂದು ಆರೋಗ್ಯ ಸಮಸ್ಯೆಯನ್ನು ಹೊಂದಿದ್ದಾರೆಂದು ಅಂದಾಜಿಸಲಾಗಿದೆ.

“ದೇಶಗಳು ಲಾಕ್‌ಡೌನ್‌ನಿಂದ ಹೊರಬರುತ್ತಿದ್ದಂತೆ, ಇನ್ನೂ ಹರಡುತ್ತಿರುವ ವೈರಸ್‌ನಿಂದ ಹೆಚ್ಚು ದುರ್ಬಲರನ್ನು ರಕ್ಷಿಸುವ ಮಾರ್ಗಗಳನ್ನು ಸರ್ಕಾರಗಳು ಹುಡುಕುತ್ತಿವೆ. ತೀವ್ರ ರೋಗದ ಅಪಾಯದಲ್ಲಿರುವವರನ್ನು ರಕ್ಷಿಸಲು ನಮ್ಮ ಅಧ್ಯಯನ ಸಹಕಾರಿಯಾಗಲಿದೆ ಎಂದು ಭಾವಿಸುತ್ತೇವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜೀನ್ ಅಂಡ್ ಟ್ರಾಪಿಕಲ್ ಮೆಡಿಸಿನ್, ಇಂಗ್ಲೆಂಡ್ ನ ಸಹಾಯಕ ಪ್ರಾಧ್ಯಾಪಕ ಆಂಡ್ರ್ಯೂ ಕ್ಲಾರ್ಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನು ಓದಿ: ತುಮಕೂರಿನ ಮಧುಗಿರಿಯಲ್ಲಿ ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...