Homeಮುಖಪುಟತೆಲಂಗಾಣ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ 'ಎಮ್ಮೆ ಕಾಯುವ' ಹುಡುಗಿ ಏನಾದ್ರು?

ತೆಲಂಗಾಣ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ‘ಎಮ್ಮೆ ಕಾಯುವ’ ಹುಡುಗಿ ಏನಾದ್ರು?

- Advertisement -
- Advertisement -

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೊಲ್ಲಾಪುರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ದೇಶದ ಗಮನ ಸೆಳೆದಿದ್ದ ಶಿರಿಷಾ (ಬರ್‍ರೆಲಕ್ಕ) ಏನಾದ್ರು?. ಸೋತ್ರಾ, ಗೆದ್ರಾ? ಎಂಬ ಕುತೂಹಲ ನಿಮಗೆಲ್ಲರಿಗೂ ಇರಬಹುದು. ಅದಕ್ಕೆ ಉತ್ತರ ಇಲ್ಲಿದೆ.

ಯೂಟ್ಯೂಬ್‌ನಲ್ಲಿ ‘ಬರ್‍ರೆಲಕ್ಕ’ ಎಂದು ಖ್ಯಾತಿ ಪಡೆದಿದ್ದ ಕರ್ನೆ ಶಿರಿಷಾ ಕೊಲ್ಲಾಪುರದಲ್ಲಿ 5,754 ಮತಗಳನ್ನು ಗಳಿಸಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೂಪಲ್ಲಿ ಕೃಷ್ಣರಾವ್ ಅವರು ಬಿಆರ್‌ಎಸ್‌ ಶಾಸಕ ಬೀರಂ ಹರ್ಷವರ್ಧನ್ ರೆಡ್ಡಿ ಅವರಿಗಿಂತ ಸುಮಾರು 29,000 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಆಕೆಯೇ ಹೇಳಿಕೊಂಡಂತೆ ಎಮ್ಮೆ ಕಾಯುತ್ತಿದ್ದ ಹುಡುಗಿ ಬರ್‍ರೆಲಕ್ಕ ಘಟಾನುಘಟಿ ರಾಜಕೀಯ ನಾಯಕರನ್ನು ಎದುರು ಹಾಕಿಕೊಂಡು ಚುನಾವಣಾ ಅಖಾಡಕ್ಕೆ ಧುಮುಕಿದ್ದರು. ಸಾಮಾಜಿಕ ಜಾಲಗಳಲ್ಲಿ ಮತ್ತು ಆಕೆ ಮತ ಯಾಚನೆಗೆ ತೆರಳುತ್ತಿದ್ದಾಗ ಸಿಗುತ್ತಿದ್ದ ಅಪಾರ ಜನ ಬೆಂಬಲ, ಬರ್‍ರೆಲಕ್ಕ ಗೆಲ್ಲೋದು ಖಚಿತ ಎಂಬಂತೆ ಮಾಡಿತ್ತು. ಆದರೆ, ಸಾಮಾಜಿಕ ಜಾಲತಾಣದ ಬರ್‍ರೆಲಕ್ಕರ ಜನಪ್ರಿಯತೆ ಮತಗಳಾಗಿ ಬದಲಾಗಿಲ್ಲ.

ಯಾರು ಈ ಬರ್‍ರೆಲಕ್ಕ ?

ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಪೆದ್ದಕೊತ್ತಪಲ್ಲಿ ಮರಿಕಲ್ ಗ್ರಾಮದ ಕರ್ನೆ ಶಿರಿಷಾ ಕೊಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆರಂಭದಲ್ಲಿ, ಎಷ್ಟೇ ಡಿಗ್ರಿ ಓದಿದರೂ ಸರ್ಕಾರಿ ನೌಕರಿ ಸಿಗುತ್ತಿಲ್ಲ ಎಂದು ಕೊರಗುವ ವಿಡಿಯೋ ಮೂಲಕ ಶಿರಿಷಾ ಸುದ್ದಿಯಾಗಿದ್ದರು. ಅಲ್ಲದೆ ರಾಜಕೀಯ ವ್ಯವಸ್ಥೆಯನ್ನು ಛೇಡಿಸುವ ವಿಡಿಯೋ ಮೂಲಕ ಆಕೆ ಭಾರೀ ಖ್ಯಾತಿ ಗಳಿಸಿದ್ದರು. ಟಿವಿ, ಯೂಟ್ಯೂಬ್ ಸಂದರ್ಶನಗಳ ಮೂಲಕವೂ ಸುದ್ದಿಯಾಗಿದ್ದರು. ಟ್ರೋಲ್‌ ಪೇಜ್‌ಗಳ ಕೂಡ ಆಕೆಗೆ ಹೆಚ್ಚಿನ ಪ್ರಚಾರ ಕೊಟ್ಟಿತ್ತು.

ತನ್ನ ಕುಟುಂಬಸ್ಥರ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ, ಭದ್ರತೆ ಒದಗಿಸುವಂತೆ ಬರ್‍ರೆಲಕ್ಕ ತೆಲಂಗಾಣ ಹೈಕೋರ್ಟ್‌ ಮೊರೆ ಹೋಗಿದ್ದರು. ಕೋರ್ಟ್‌ ಬರ್‍ರೆಲಕ್ಕಳ ಕುಟುಂಬಕ್ಕೆ ಗನ್‌ ಮ್ಯಾನ್‌ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ವಿಧಾನಸಭಾ ಚುನಾವಣೆಯ ಸಂದರ್ಭ ನಿರುದ್ಯೋಗಿಗಳ ಪರ ಧ್ವನಿಯೆತ್ತಿ ಬರ್‍ರೆಲಕ್ಕ ಗಮನಸೆಳೆದಿದ್ದರು. ನಿರೋದ್ಯೋಗ ವಿಚಾರವನ್ನೇ ತನ್ನ ಚುನಾವಣಾ ಅಸ್ತ್ರವಾಗಿ ಬಳಸಿಕೊಂಡಿದ್ದರು. ಇದು ಕೊಲ್ಲಾಪುರ ರಾಜಕೀಯದಲ್ಲಿ ಭಾರೀ ಚರ್ಚೆಯ ವಿಷಯವಾಗಿ ಮಾರ್ಪಟ್ಟಿತ್ತು. ಬರ್‍ರೆಲಕ್ಕರ ಹವಾ ಕಂಡು ಕಾಂಗ್ರೆಸ್‌, ಬಿಆರ್‌ಎಸ್‌ ಮತ್ತು ಬಿಜೆಪಿಯ ಘಟಾನುಘಟಿ ಅಭ್ಯರ್ಥಿಗಳು ಬೆವರಿದ್ದರು.

ಬರ್‍ರೆಲಕ್ಕಗೆ ಮಹಿಳೆಯರು, ಯುವಜನರು ಭಾರೀ ಬೆಂಬಲ ವ್ಯಕ್ತಪಡಿಸಿದ್ದರು. ಆಕೆಯ ಚುನಾವಣಾ ಪ್ರಚಾರಕ್ಕಾಗಿ ಕ್ರಾಂತಿ ಗೀತೆಯನ್ನೂ ಮಾಡಲಾಗಿತ್ತು. ಪುದುಚೇರಿ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಮಲ್ಲಾಡಿ ಕೃಷ್ಣ ರಾವ್ ಅವರು ಬರ್‍ರೆಲಕ್ಕಳ ಚುನಾವಣಾ ಕರ್ಚಿಗೆ ಲಕ್ಷಾಂತರ ರೂಪಾಯಿ ದೇಣಿಗೆಯನ್ನೂ ನೀಡಿದ್ದರು. ಆದರೆ, ಇದ್ಯಾವುದೂ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಯಾಗಿಲ್ಲ. ಬರ್‍ರೆಲಕ್ಕ ಚುನಾವಣಾ ಸಮರದಲ್ಲಿ ಸೋಲು ಕಂಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಬಟ್ಟೆ ವ್ಯಾಪಾರಿ ಈಗ ರಾಜಸ್ಥಾನದ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...