Homeಮುಖಪುಟತೆಲಂಗಾಣ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ 'ಎಮ್ಮೆ ಕಾಯುವ' ಹುಡುಗಿ ಏನಾದ್ರು?

ತೆಲಂಗಾಣ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ‘ಎಮ್ಮೆ ಕಾಯುವ’ ಹುಡುಗಿ ಏನಾದ್ರು?

- Advertisement -
- Advertisement -

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೊಲ್ಲಾಪುರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ದೇಶದ ಗಮನ ಸೆಳೆದಿದ್ದ ಶಿರಿಷಾ (ಬರ್‍ರೆಲಕ್ಕ) ಏನಾದ್ರು?. ಸೋತ್ರಾ, ಗೆದ್ರಾ? ಎಂಬ ಕುತೂಹಲ ನಿಮಗೆಲ್ಲರಿಗೂ ಇರಬಹುದು. ಅದಕ್ಕೆ ಉತ್ತರ ಇಲ್ಲಿದೆ.

ಯೂಟ್ಯೂಬ್‌ನಲ್ಲಿ ‘ಬರ್‍ರೆಲಕ್ಕ’ ಎಂದು ಖ್ಯಾತಿ ಪಡೆದಿದ್ದ ಕರ್ನೆ ಶಿರಿಷಾ ಕೊಲ್ಲಾಪುರದಲ್ಲಿ 5,754 ಮತಗಳನ್ನು ಗಳಿಸಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೂಪಲ್ಲಿ ಕೃಷ್ಣರಾವ್ ಅವರು ಬಿಆರ್‌ಎಸ್‌ ಶಾಸಕ ಬೀರಂ ಹರ್ಷವರ್ಧನ್ ರೆಡ್ಡಿ ಅವರಿಗಿಂತ ಸುಮಾರು 29,000 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಆಕೆಯೇ ಹೇಳಿಕೊಂಡಂತೆ ಎಮ್ಮೆ ಕಾಯುತ್ತಿದ್ದ ಹುಡುಗಿ ಬರ್‍ರೆಲಕ್ಕ ಘಟಾನುಘಟಿ ರಾಜಕೀಯ ನಾಯಕರನ್ನು ಎದುರು ಹಾಕಿಕೊಂಡು ಚುನಾವಣಾ ಅಖಾಡಕ್ಕೆ ಧುಮುಕಿದ್ದರು. ಸಾಮಾಜಿಕ ಜಾಲಗಳಲ್ಲಿ ಮತ್ತು ಆಕೆ ಮತ ಯಾಚನೆಗೆ ತೆರಳುತ್ತಿದ್ದಾಗ ಸಿಗುತ್ತಿದ್ದ ಅಪಾರ ಜನ ಬೆಂಬಲ, ಬರ್‍ರೆಲಕ್ಕ ಗೆಲ್ಲೋದು ಖಚಿತ ಎಂಬಂತೆ ಮಾಡಿತ್ತು. ಆದರೆ, ಸಾಮಾಜಿಕ ಜಾಲತಾಣದ ಬರ್‍ರೆಲಕ್ಕರ ಜನಪ್ರಿಯತೆ ಮತಗಳಾಗಿ ಬದಲಾಗಿಲ್ಲ.

ಯಾರು ಈ ಬರ್‍ರೆಲಕ್ಕ ?

ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಪೆದ್ದಕೊತ್ತಪಲ್ಲಿ ಮರಿಕಲ್ ಗ್ರಾಮದ ಕರ್ನೆ ಶಿರಿಷಾ ಕೊಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆರಂಭದಲ್ಲಿ, ಎಷ್ಟೇ ಡಿಗ್ರಿ ಓದಿದರೂ ಸರ್ಕಾರಿ ನೌಕರಿ ಸಿಗುತ್ತಿಲ್ಲ ಎಂದು ಕೊರಗುವ ವಿಡಿಯೋ ಮೂಲಕ ಶಿರಿಷಾ ಸುದ್ದಿಯಾಗಿದ್ದರು. ಅಲ್ಲದೆ ರಾಜಕೀಯ ವ್ಯವಸ್ಥೆಯನ್ನು ಛೇಡಿಸುವ ವಿಡಿಯೋ ಮೂಲಕ ಆಕೆ ಭಾರೀ ಖ್ಯಾತಿ ಗಳಿಸಿದ್ದರು. ಟಿವಿ, ಯೂಟ್ಯೂಬ್ ಸಂದರ್ಶನಗಳ ಮೂಲಕವೂ ಸುದ್ದಿಯಾಗಿದ್ದರು. ಟ್ರೋಲ್‌ ಪೇಜ್‌ಗಳ ಕೂಡ ಆಕೆಗೆ ಹೆಚ್ಚಿನ ಪ್ರಚಾರ ಕೊಟ್ಟಿತ್ತು.

ತನ್ನ ಕುಟುಂಬಸ್ಥರ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ, ಭದ್ರತೆ ಒದಗಿಸುವಂತೆ ಬರ್‍ರೆಲಕ್ಕ ತೆಲಂಗಾಣ ಹೈಕೋರ್ಟ್‌ ಮೊರೆ ಹೋಗಿದ್ದರು. ಕೋರ್ಟ್‌ ಬರ್‍ರೆಲಕ್ಕಳ ಕುಟುಂಬಕ್ಕೆ ಗನ್‌ ಮ್ಯಾನ್‌ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ವಿಧಾನಸಭಾ ಚುನಾವಣೆಯ ಸಂದರ್ಭ ನಿರುದ್ಯೋಗಿಗಳ ಪರ ಧ್ವನಿಯೆತ್ತಿ ಬರ್‍ರೆಲಕ್ಕ ಗಮನಸೆಳೆದಿದ್ದರು. ನಿರೋದ್ಯೋಗ ವಿಚಾರವನ್ನೇ ತನ್ನ ಚುನಾವಣಾ ಅಸ್ತ್ರವಾಗಿ ಬಳಸಿಕೊಂಡಿದ್ದರು. ಇದು ಕೊಲ್ಲಾಪುರ ರಾಜಕೀಯದಲ್ಲಿ ಭಾರೀ ಚರ್ಚೆಯ ವಿಷಯವಾಗಿ ಮಾರ್ಪಟ್ಟಿತ್ತು. ಬರ್‍ರೆಲಕ್ಕರ ಹವಾ ಕಂಡು ಕಾಂಗ್ರೆಸ್‌, ಬಿಆರ್‌ಎಸ್‌ ಮತ್ತು ಬಿಜೆಪಿಯ ಘಟಾನುಘಟಿ ಅಭ್ಯರ್ಥಿಗಳು ಬೆವರಿದ್ದರು.

ಬರ್‍ರೆಲಕ್ಕಗೆ ಮಹಿಳೆಯರು, ಯುವಜನರು ಭಾರೀ ಬೆಂಬಲ ವ್ಯಕ್ತಪಡಿಸಿದ್ದರು. ಆಕೆಯ ಚುನಾವಣಾ ಪ್ರಚಾರಕ್ಕಾಗಿ ಕ್ರಾಂತಿ ಗೀತೆಯನ್ನೂ ಮಾಡಲಾಗಿತ್ತು. ಪುದುಚೇರಿ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಮಲ್ಲಾಡಿ ಕೃಷ್ಣ ರಾವ್ ಅವರು ಬರ್‍ರೆಲಕ್ಕಳ ಚುನಾವಣಾ ಕರ್ಚಿಗೆ ಲಕ್ಷಾಂತರ ರೂಪಾಯಿ ದೇಣಿಗೆಯನ್ನೂ ನೀಡಿದ್ದರು. ಆದರೆ, ಇದ್ಯಾವುದೂ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಯಾಗಿಲ್ಲ. ಬರ್‍ರೆಲಕ್ಕ ಚುನಾವಣಾ ಸಮರದಲ್ಲಿ ಸೋಲು ಕಂಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಬಟ್ಟೆ ವ್ಯಾಪಾರಿ ಈಗ ರಾಜಸ್ಥಾನದ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...