Homeಅನುವಾದಿತ ಲೇಖನದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ...

ದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ ನಿರ್ಲಕ್ಷಿಸುತ್ತದೆ?

ದೆಹಲಿ ಹೈಕೋರ್ಟ್‌ನ 33 ಜಡ್ಜ್‌ಗಳು ಸೌರಭ್ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿ ಶಿಫಾರನ್ನು ಮಾಡಿದ 4 ವರ್ಷದ ನಂತರವೂ  ಅವರು ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗಿಲ್ಲ.

- Advertisement -
- Advertisement -

2017 ರ ಅಕ್ಟೋಬರ್‌ ನಲ್ಲಿ ದೆಹಲಿ ಹೈಕೋರ್ಟ್ ಹಿರಿಯ ನ್ಯಾಯವಾದಿ  ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್‌ ಗೆ ಶಿಫಾರಸ್ಸು ಮಾಡಿತ್ತು. ಸೌರಭ್ ಕಿರ್ಪಾಲ್ ಆ ಮೂಲಕ ದೇಶದಲ್ಲಿ ಆಯ್ಕೆಯಾದ ಮೊಟ್ಟ ಮೊದಲ ಗೇ ಜಡ್ಜ್ ಆದರು. ಆದರೆ ಅವರನ್ನು ದೆಹಲಿ ಹೈಕೋರ್ಟ್‌ನ 33 ಜಡ್ಜ್‌ಗಳು ಸೌರಭ್ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿ ಶಿಫಾರನ್ನು ಮಾಡಿದ 4 ವರ್ಷದ ನಂತರವೂ  ಅವರು ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗಿಲ್ಲ. ಭಾರತದಲ್ಲಿ ಒಬ್ಬ ನ್ಯಾಯಾಧೀಶರ ಆಯ್ಕೆಯ ಶಿಫಾರಸ್ಸು 4 ವರ್ಷಗಳ ನಂತರವೂ ನಡೆಯದೇ ಇರುವ ಮೊಟ್ಟ ಮೊದಲ ಘಟನೆ ಇದು. ನಡುವೆ ಸುಪ್ರೀಂ ಕೋರ್ಟ್ ಕಡೆಯಿಂದ ಸೌರಭ ಕಿರ್ಪಾಲ್ ಅವರನ್ನು ಯಾವ ಕಾರಣಕ್ಕೆ ನ್ಯಾಯಾಧೀಶರನ್ನಾಗಿ ನೇಮಕಮಾಡಲಾಗಿಲ್ಲ ಎಂಬ ಉತ್ತರ ಕೂಡ ಬಂದಿಲ್ಲ. ಹಾಗೇ ಶಿಫಾರಸ್ಸನ್ನು ತಿರಸ್ಕರಿಸಲಾಗಿದೆ ಎಂದು ಕೂಡ ಸುಪ್ರೀಂ ಕೋರ್ಟ್ ಇದುವರೆಗೆ ಹೇಳಿಲ್ಲ. ಹೀಗಾಗಿ ಸೌರಭ್‌ ಕಿರ್ಪಾಲ್ ಅವರ ಲೈಂಗಿಕ ಆಯ್ಕೆಯ ಕುರಿತಾದ ಕಾರಣಕ್ಕೆ ಅಥವಾ ಅವರು ಗೇ ಎನ್ನುವ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಸೌರಭ್ ಕಿರ್ಪಾಲ್ ಅವರು “ದೇಶದಲ್ಲಿ ಯಾವ ಕಾರಣಕ್ಕೆ ಗೇ ಸಮುದಾಯದ ಒಬ್ಬರೇ ಒಬ್ಬ ನ್ಯಾಯಾಧೀಶರಾಗಿ, ಈ ದೇಶದಲ್ಲಿ ಆಯ್ಕೆಯಾಗಲಿಲ್ಲ. ಈ ವಿಷಯವನ್ನು ಭಾರತ ಅಷ್ಟು ಸಲುಭವಾಗಿ ನಿರ್ಲಕ್ಷಿಸುವಂತಿಲ್ಲ. ಕೇವಲ ವ್ಯಕ್ತಿಯ ಲೈಂಗಿಕ ಆಯ್ಕೆಯ ಕಾರಣಕ್ಕೆ ನ್ಯಾಯಾಧೀಶರನ್ನಾಗಿ ಆಯ್ಕೆ ಮಾಡುತ್ತಿಲ್ಲವೆಂದಾದರೆ ಅದು ದೇಶದ ಸಂವಿಧಾನ ಹೇಳುವ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ಅವರು ಅಭಿಪ್ರಾಯ ಪಡುತ್ತಾರೆ.

ನನ್ನನ್ನು ನ್ಯಾಯಾಧೀಶನನ್ನಾಗಿ ದೆಹಲಿ ಹೈಕೋರ್ಟ್ ಶಿಫಾರಸ್ಸು ಮಾಡಿದಾಗ ನಾನು ಎಲ್ಲ ರೀತಿಯಲ್ಲಿಯೂ ನ್ಯಾಯಾಧೀಶ ಹುದ್ದೆಗೆ ಅರ್ಹನಾಗಿದ್ದೆ. ಆದರೆ ದೇಶದಲ್ಲಿ ಇದುವರೆಗೆ ಪರ್ಯಾಯ ಲೈಂಗಿಕತೆಯ ವ್ಯಕ್ತಿ ಈ ದೇಶದಲ್ಲಿ ಆಯ್ಕೆಯಾಗದಿರುವುದು ನನ್ನ ನೇಮಕಾತಿ ಸಾಧ್ಯವೇ ಎಂಬ ಹಲವು ಅನುಮಾನಗಳನ್ನು ಹುಟ್ಟಿ ಹಾಕಿತ್ತು. ಯಾವುದಾದರೂ ಪ್ರಕ್ರಿಯೆ ದೇಶದಲ್ಲಿ ಮೊಟ್ಟ ಮೊದಲಿಗೆ ಸಂಭವಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಈ ನಾಲ್ಕು ವರ್ಷಗಳಲ್ಲಿ ದೇಶದ ಕಾನೂನಿನಲ್ಲಿ ಹಲವು ಬದಲಾವಣೆಗಳಾಗಿವೆ. ಮುಂದೆ ಭಾರತ ತನ್ನ ಮೊಟ್ಟಮೊದಲ ಗೇ ಜಡ್ಜ್ ಅನ್ನು ಹೊಂದಬಹುದು ಎಂಬ ನಂಬಿಕೆ ಇದೆ ಎಂದು ಸೌರಭ್ ಕಿರ್ಪಾಲ್ ಅಭಿಪ್ರಾಯ ಪಡುತ್ತಾರೆ.

ಮಾಧ್ಯಮಗಳ ವರದಿ‌ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಮದನ್ ಲೋಕುರ್ ಹೇಳಿಕೆಗಳ ಆಧಾರದಲ್ಲಿ ಹೇಳುವುದಾದರೆ ಸುಪ್ರೀಂ ಕೋರ್ಟ್ ಮುಂದೆ ಗೇ ಜಡ್ಜ್ ಆಯ್ಕೆಯ ಚರ್ಚೆ ನಡೆಯುತ್ತಿದೆ. ಮತ್ತು ದೇಶ ಇದನ್ನು ಹೇಗೆ ಸ್ವೀಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಜಿಜ್ಞಾಸೆಯಲ್ಲಿ ತೊಡಗಿದೆ ಎಂದು ಸೌರಭ್ ಕಿರ್ಪಾಲ್ ತಿಳಿಸಿದ್ದಾರೆ.

ಸೌರಭ್ ಕಿರ್ಪಾಲ್ ವಿದೇಶಿ ಪ್ರಜೆಯನ್ನು ತನ್ನ ಸಂಗಾತಿಯನ್ನಾಗಿ ಹೊಂದಿರುವುದು ದೇಶದ ಭದ್ರತೆಗೆ ಧಕ್ಕೆಯೆಂದು ಭಾವಿಸಲಾಗಿದೆಯೇ ?

2021 ಮಾರ್ಚ್ ತಿಂಗಳಿನಲ್ಲಿ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಎಸ್. ಎ. ಬೋಬ್ಡೆ ಭಾರತದ ವಿದೇಶಾಂಗ ಮಂತ್ರಿ ಎಸ್ ಜೈ ಶಂಕರ್ ಅವರಿಗೆ ಪತ್ರ ಬರೆದು ಸೌರಭ್ ಕಿರ್ಪಾಲ್ ಅವರ ಆಯ್ಕೆಯ ಕುರಿತು ಸರ್ಕಾರದ ನಿರ್ಧಾರವನ್ನು ಅಂತಿಮ ಗೊಳಿಸುವಂತೆ ಕೇಳಿದ್ದಾರೆ. ಹಾಗೇ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್ ನೇಮಕ ಮಾಡಲು ಯಾಕೆ ತಡವಾಗುತ್ತಿದೆ ಎಂದು ಕಾರಣವನ್ನು ಕೇಳಿದ್ದಾರೆ.

ಎಸ್. ಜೈಶಂಕರ್ ಅವರು ಇದುವರೆಗೆ ಜಸ್ಟಿಸ್ ಎಸ್.ಎ. ಬೋಬ್ಡೆ ಅವರ ಪತ್ರಕ್ಕೆ ಉತ್ತರ ನೀಡಿಲ್ಲ. ಹಿಂದೆ ಕೇಂದ್ರ ಸರ್ಕಾರ ಸೌರಭ್ ಕಿರ್ಪಾಲ್ ನೇಮಕಾತಿಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಅವರು ವಿದೇಶಿ ಪ್ರಜೆಯನ್ನು ಸಂಗಾತಿಯಾಗಿ ಹೊಂದಿರುವುದು ದೇಶದ ಭದ್ರತೆಗೆ ತೊಂದರೆ ಆಗಲಿದೆ ಎಂಬ ಕಾರಣಗಳನ್ನು ಕೇಂದ್ರ ಸರ್ಕಾರ ನೀಡಿದೆ.

ಸೌರಭ್ ಕಿರ್ಪಾಲ್ ಅವರ ಹಿನ್ನಲೆಯನ್ನು ತನಿಖೆ ಮಾಡುವ ಕೆಲಸ ಮಾಡುತ್ತಿದ್ದ ಭಾರತದ ಗುಪ್ತಚರ ಇಲಾಖೆ ನೇರವಾಗಿ ಸೌರಭ್ ನೇಮಕಾತಿಗೆ ಆಕ್ಷೇಪವನ್ನು  ವ್ಯಕ್ತಪಡಿಸಿಲ್ಲ. ಆದರೆ ಸೌರಭ್ ವಿದೇಶಿ ಸಂಗಾತಿಯನ್ನು ಹೊಂದಿರುವುದು ದೇಶದ ಭದ್ರತೆಗೆ ತೊಡಕಾಗಬಹುದು ಎಂಬ ಅಭಿಪ್ರಾಯವನ್ನು ಭಾರತ ಸರ್ಕಾರಕ್ಕೆ ನೀಡಿದೆ. ಹಿಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ಮುಂದೆ ಕೂಡ ಸೌರಭ್ ಕಿರ್ಪಾಲ್ ಆಯ್ಕೆ ವಿಷಯ ಬಂದಿತ್ತು.  ಕೇಂದ್ರ ಸರ್ಕಾರದ ಆಕ್ಷೇಪದಿಂದ ಅದು ಮುಂದಕ್ಕೆ ಹೋಗಲಿಲ್ಲ.

ಈಗಾಗಲೇ ಜಸ್ಟಿಸ್ ವಿವಿನ್ ಬೋಸ್ ಅವರನ್ನು ಭಾರತದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರನ್ನಾಗಿ ಭಾರತ ನೋಡಿದೆ. ಅವರು ಅಮೆರಿಕನ್‌ ಪ್ರಜೆಯನ್ನು ಮದುವೆಯಾಗಿದ್ದವರು. ನಾವು ದೇಶದಲ್ಲಿ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್‌ ರವಿ ಧವನ್‌, ಮುಖ್ಯ ನ್ಯಾಯಾಧೀಶರಾದ ಪಟ್ನಾಯಕ್‌ ಅವರನ್ನು ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ದಕ್ಷವಾಗಿ ಕಾರ್ಯ ನಿರ್ವಹಿಸಿರುವುದನ್ನು ದೇಶದ ಇತಿಹಾಸದಲ್ಲಿ ನೋಡಿದ್ದೇವೆ. ಇವರುಗಳು ವಿದೇಶಿ ಪ್ರಜೆಗಳನ್ನು ಮದುವೆಯಾಗಿದ್ದರು. ವಿದೇಶಿ ಪ್ರಜೆಗಳನ್ನು ಮದುವೆಯಾಗುವುದು ಅಥವಾ ಸಂಗಾತಿಯನ್ನು ಹೊಂದಿರುವುದು ನ್ಯಾಯಾಧೀಶರ ಆಯ್ಕೆ ಪರಿಗಣನೆಗೆ ದೊಡ್ಡ ವಿಷಯವಲ್ಲವೆಂದು ಈ ಸಂಬಂಧ ಸೌರಭ್‌ ಕಿರ್ಪಾಲ್‌ ಅಭಿಪ್ರಾಯ ಪಡುತ್ತಾರೆ.

ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ಇರಲು ಸಾಧ್ಯವಿಲ್ಲ. ನಾವು ಈ ದೇಶದ ವ್ಯವಸ್ಥೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿಧ್ಯವಿರಬೇಕೆಂದು ಬಯಸಬೇಕು. ಹಾಗೇ ವ್ಯವಸ್ಥೆಯಲ್ಲಿ ನಂಬಿಕೆಯನ್ನೂ ಇಡಬೇಕು. ನಿರ್ಧಾರಗಳನ್ನು ಕೈಗೊಳ್ಳುವ ನ್ಯಾಯಾಧೀಶರಿರಲಿ ಅಥವಾ ಸರ್ಕಾರದಲ್ಲಿರುವ ವ್ಯಕ್ತಿಗಳು ಪ್ರಸ್ತುತ ಸಮಾಜದ ಪ್ರತಿಬಿಂಬವೇ ಆಗಿರುತ್ತಾರೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ.  ಬಹುತೇಕ ಮೇಲ್ಜಾತಿಯ ಪುರುಷರೇ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿದ್ದಾರೆ. ಇದು ನಮ್ಮ ಇಂದಿನ ಸಮಾಜದಲ್ಲಿ ಯಾರು ಪ್ರಾಬಲ್ಯವನ್ನು ಸಾಧಿಸಿದ್ದಾರೆ ಎಂಬುದರ ಸಂಕೇತವೇ ಆಗಿದೆ ಎಂದು ಹಿರಿಯ ನ್ಯಾಯವಾದಿಯೊಬ್ಬರು ಸೌರಭ್‌ ಕಿರ್ಪಾಲ್ ನೇಮಕಾತಿ ವಿಷಯದ ಕುರಿತು ತಮ್ಮ ಅಭಿಪ್ರಾಯವನ್ನು ಹೇಳುತ್ತಾರೆ.

ಸೌರಭ್‌ ಕಿರ್ಪಾಲ್ ನೇಮಕ ಭಾರತದಲ್ಲಿ ಸಲಿಂಗಿಗಳ ಕುರಿತಾದ ಅಭಿಪ್ರಾಯವನ್ನು ಬದಲಿಸಬಹುದೇ? ಶೋಷಣೆಯನ್ನು ತಡೆಯಬಹುದೇ?

 

ಈ ಪ್ರಶ್ನೆಗೆ ಉತ್ತರ ಹೌದು ಮತ್ತು ಇಲ್ಲ. ಹೈಕೋರ್ಟ್‌ ನಂತಹ ಉನ್ನತ ಸಂಸ್ಥೆಯಲ್ಲಿ ಭಾರತ ಬಹಿರಂಗವಾಗಿ ತಾನು ಎಂದು ಹೇಳಿಕೊಳ್ಳುವ ನ್ಯಾಯಾಧೀಶರನ್ನು ಹೊಂದಿದ್ದರೆ ಭಾರತದಲ್ಲಿ ಸಾಕಷ್ಟು ಬದಲಾವಣೆಗಳು ಸಾಧ್ಯವಾಗಬಹುದು. ದೇಶದಲ್ಲಿ ಸಲಿಂಗಿಗಳ ಕುರಿತಾಗಿ ನಿಂದನಾತ್ಮಕ ಹೇಳಿಕೆಗಳು, ಅಭಿಪ್ರಾಯಗಳು ನಿಲ್ಲಬಹುದು. ನ್ಯಾಯಾಲಯದ ಮುಂದೆ ಪ್ರಕರಣಗಳು ಬಂದಾಗ ಸಂವಿಧಾನದ ಸಮಾನತೆಯ ತತ್ವವನ್ನು ಸಲಿಂಗಿಗಳ ವಿಷಯದಲ್ಲೂ ಅನ್ವಯಿಸಬಹುದು. ಆದರೆ ಈಗ ದೇಶದ ಸರ್ವೋಚ್ಛ ನ್ಯಾಯಾಲಯ ಹಾಗೂ ಹೈಕೋರ್ಟ್‌ ಗಳಲ್ಲಿ ಮಹಿಳಾ ನ್ಯಾಯಾಧೀಶರಿದ್ದರೂ ಸಹ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ತಾರತಮ್ಯ, ಅತ್ಯಾಚಾರಗಳು ನಿಂತಿಲ್ಲ. ಕನಿಷ್ಠ ನ್ಯಾಯಾಲಯದಲ್ಲಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಮೇಲಿನ ತಾರತಮ್ಯ ಮತ್ತು ದೌರ್ಜನ್ಯಗಳು ನಿಂತಿಲ್ಲ. ಹೀಗಿರುವಾಗ ಸೌರಭ್‌ ಕಿರ್ಪಾಲ್ ಅಥವಾ ಬೇರೇ  ವ್ಯಕ್ತಿ ನ್ಯಾಯಾಧೀಶರಾದ ಮಾತ್ರಕ್ಕೆ ಭಾರತದ ಸಮಾಜದಲ್ಲಿ ಸಲಿಂಗಿಗಳಿಗೆ ಗೌರವ ಮತ್ತು ಮಾನ್ಯತೆಗಳು ಬಂದು ಬಿಡುತ್ತವೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ಆದರೆ ಗೇ ಎಂಬ ಒಂದೇ ಕಾರಣಕ್ಕೆ ನಾಗರೀಕರ ಹಕ್ಕುಗಳಿಗಾಗಿ ತೀವ್ರ ಹೋರಾಟವನ್ನು ನಡೆಸುತ್ತ ಅರ್ಹತೆಯನ್ನು ಹೊಂದಿದ ವ್ಯಕ್ತಿಯನ್ನು ಹೈಕೋರ್ಟ್‌ ನ್ಯಾಯಾಧೀಶರಾಗುವ ಅವಕಾಶವನ್ನು ನಿರಾಕರಿಸುವುದು ಸಾಧ್ಯವಿಲ್ಲ. ದೆಹಲಿ ಹೈಕೋರ್ಟ್‌ನ 33  ಜನ ನ್ಯಾಯಾಧೀಶರು ಒಮ್ಮತದಿಂದ ಸೌರಭ್‌ ಕಿರ್ಪಾಲ್ ಅವರ ಹೆಸರನ್ನು ಶಿಫಾರಸ್ಸು ಮಾಡಿರುವಾಗ ಕೇಂದ್ರ ಸರ್ಕಾರ ಇದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ.

ಗೇ ಹಕ್ಕುಗಳ ಹೋರಾಟದ ತಿಂಗಳೆಂದು ಕರೆಯುವ ಜೂನ್‌ ತಿಂಗಳಿನಲ್ಲಿ ಅನೇಕ ವರ್ಷದಿಂದ ಚರ್ಚೆಯಾಗುತ್ತಿರವ ಸೌರಭ್‌ ಕಿರ್ಪಾಲ್ ನೇಮಕಾತಿ ವಿಚಾರ ಇನ್ನಷ್ಟು ಚರ್ಚೆಯಾಗಬೇಕಿದೆ.

ಮೂಲ : ಕ್ವಿಂಟ್‌ ನಡೆಸಿದ ಸೌರಭ್‌ ಕಿರ್ಪಾಲ್‌ ಸಂದರ್ಶನ

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ; ಪಿಕೆ ಟಾಕೀಸ್: LGBT ಸಮುದಾಯದ ನೋವು-ನಲಿವಿನ ಪಯಣವನ್ನು ಹಿಡಿಯುವ ಪಾನೋಸ್‌ನ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...