Homeಅನುವಾದಿತ ಲೇಖನದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ...

ದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ ನಿರ್ಲಕ್ಷಿಸುತ್ತದೆ?

ದೆಹಲಿ ಹೈಕೋರ್ಟ್‌ನ 33 ಜಡ್ಜ್‌ಗಳು ಸೌರಭ್ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿ ಶಿಫಾರನ್ನು ಮಾಡಿದ 4 ವರ್ಷದ ನಂತರವೂ  ಅವರು ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗಿಲ್ಲ.

- Advertisement -
- Advertisement -

2017 ರ ಅಕ್ಟೋಬರ್‌ ನಲ್ಲಿ ದೆಹಲಿ ಹೈಕೋರ್ಟ್ ಹಿರಿಯ ನ್ಯಾಯವಾದಿ  ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್‌ ಗೆ ಶಿಫಾರಸ್ಸು ಮಾಡಿತ್ತು. ಸೌರಭ್ ಕಿರ್ಪಾಲ್ ಆ ಮೂಲಕ ದೇಶದಲ್ಲಿ ಆಯ್ಕೆಯಾದ ಮೊಟ್ಟ ಮೊದಲ ಗೇ ಜಡ್ಜ್ ಆದರು. ಆದರೆ ಅವರನ್ನು ದೆಹಲಿ ಹೈಕೋರ್ಟ್‌ನ 33 ಜಡ್ಜ್‌ಗಳು ಸೌರಭ್ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿ ಶಿಫಾರನ್ನು ಮಾಡಿದ 4 ವರ್ಷದ ನಂತರವೂ  ಅವರು ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗಿಲ್ಲ. ಭಾರತದಲ್ಲಿ ಒಬ್ಬ ನ್ಯಾಯಾಧೀಶರ ಆಯ್ಕೆಯ ಶಿಫಾರಸ್ಸು 4 ವರ್ಷಗಳ ನಂತರವೂ ನಡೆಯದೇ ಇರುವ ಮೊಟ್ಟ ಮೊದಲ ಘಟನೆ ಇದು. ನಡುವೆ ಸುಪ್ರೀಂ ಕೋರ್ಟ್ ಕಡೆಯಿಂದ ಸೌರಭ ಕಿರ್ಪಾಲ್ ಅವರನ್ನು ಯಾವ ಕಾರಣಕ್ಕೆ ನ್ಯಾಯಾಧೀಶರನ್ನಾಗಿ ನೇಮಕಮಾಡಲಾಗಿಲ್ಲ ಎಂಬ ಉತ್ತರ ಕೂಡ ಬಂದಿಲ್ಲ. ಹಾಗೇ ಶಿಫಾರಸ್ಸನ್ನು ತಿರಸ್ಕರಿಸಲಾಗಿದೆ ಎಂದು ಕೂಡ ಸುಪ್ರೀಂ ಕೋರ್ಟ್ ಇದುವರೆಗೆ ಹೇಳಿಲ್ಲ. ಹೀಗಾಗಿ ಸೌರಭ್‌ ಕಿರ್ಪಾಲ್ ಅವರ ಲೈಂಗಿಕ ಆಯ್ಕೆಯ ಕುರಿತಾದ ಕಾರಣಕ್ಕೆ ಅಥವಾ ಅವರು ಗೇ ಎನ್ನುವ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಸೌರಭ್ ಕಿರ್ಪಾಲ್ ಅವರು “ದೇಶದಲ್ಲಿ ಯಾವ ಕಾರಣಕ್ಕೆ ಗೇ ಸಮುದಾಯದ ಒಬ್ಬರೇ ಒಬ್ಬ ನ್ಯಾಯಾಧೀಶರಾಗಿ, ಈ ದೇಶದಲ್ಲಿ ಆಯ್ಕೆಯಾಗಲಿಲ್ಲ. ಈ ವಿಷಯವನ್ನು ಭಾರತ ಅಷ್ಟು ಸಲುಭವಾಗಿ ನಿರ್ಲಕ್ಷಿಸುವಂತಿಲ್ಲ. ಕೇವಲ ವ್ಯಕ್ತಿಯ ಲೈಂಗಿಕ ಆಯ್ಕೆಯ ಕಾರಣಕ್ಕೆ ನ್ಯಾಯಾಧೀಶರನ್ನಾಗಿ ಆಯ್ಕೆ ಮಾಡುತ್ತಿಲ್ಲವೆಂದಾದರೆ ಅದು ದೇಶದ ಸಂವಿಧಾನ ಹೇಳುವ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ಅವರು ಅಭಿಪ್ರಾಯ ಪಡುತ್ತಾರೆ.

ನನ್ನನ್ನು ನ್ಯಾಯಾಧೀಶನನ್ನಾಗಿ ದೆಹಲಿ ಹೈಕೋರ್ಟ್ ಶಿಫಾರಸ್ಸು ಮಾಡಿದಾಗ ನಾನು ಎಲ್ಲ ರೀತಿಯಲ್ಲಿಯೂ ನ್ಯಾಯಾಧೀಶ ಹುದ್ದೆಗೆ ಅರ್ಹನಾಗಿದ್ದೆ. ಆದರೆ ದೇಶದಲ್ಲಿ ಇದುವರೆಗೆ ಪರ್ಯಾಯ ಲೈಂಗಿಕತೆಯ ವ್ಯಕ್ತಿ ಈ ದೇಶದಲ್ಲಿ ಆಯ್ಕೆಯಾಗದಿರುವುದು ನನ್ನ ನೇಮಕಾತಿ ಸಾಧ್ಯವೇ ಎಂಬ ಹಲವು ಅನುಮಾನಗಳನ್ನು ಹುಟ್ಟಿ ಹಾಕಿತ್ತು. ಯಾವುದಾದರೂ ಪ್ರಕ್ರಿಯೆ ದೇಶದಲ್ಲಿ ಮೊಟ್ಟ ಮೊದಲಿಗೆ ಸಂಭವಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಈ ನಾಲ್ಕು ವರ್ಷಗಳಲ್ಲಿ ದೇಶದ ಕಾನೂನಿನಲ್ಲಿ ಹಲವು ಬದಲಾವಣೆಗಳಾಗಿವೆ. ಮುಂದೆ ಭಾರತ ತನ್ನ ಮೊಟ್ಟಮೊದಲ ಗೇ ಜಡ್ಜ್ ಅನ್ನು ಹೊಂದಬಹುದು ಎಂಬ ನಂಬಿಕೆ ಇದೆ ಎಂದು ಸೌರಭ್ ಕಿರ್ಪಾಲ್ ಅಭಿಪ್ರಾಯ ಪಡುತ್ತಾರೆ.

ಮಾಧ್ಯಮಗಳ ವರದಿ‌ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಮದನ್ ಲೋಕುರ್ ಹೇಳಿಕೆಗಳ ಆಧಾರದಲ್ಲಿ ಹೇಳುವುದಾದರೆ ಸುಪ್ರೀಂ ಕೋರ್ಟ್ ಮುಂದೆ ಗೇ ಜಡ್ಜ್ ಆಯ್ಕೆಯ ಚರ್ಚೆ ನಡೆಯುತ್ತಿದೆ. ಮತ್ತು ದೇಶ ಇದನ್ನು ಹೇಗೆ ಸ್ವೀಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಜಿಜ್ಞಾಸೆಯಲ್ಲಿ ತೊಡಗಿದೆ ಎಂದು ಸೌರಭ್ ಕಿರ್ಪಾಲ್ ತಿಳಿಸಿದ್ದಾರೆ.

ಸೌರಭ್ ಕಿರ್ಪಾಲ್ ವಿದೇಶಿ ಪ್ರಜೆಯನ್ನು ತನ್ನ ಸಂಗಾತಿಯನ್ನಾಗಿ ಹೊಂದಿರುವುದು ದೇಶದ ಭದ್ರತೆಗೆ ಧಕ್ಕೆಯೆಂದು ಭಾವಿಸಲಾಗಿದೆಯೇ ?

2021 ಮಾರ್ಚ್ ತಿಂಗಳಿನಲ್ಲಿ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಎಸ್. ಎ. ಬೋಬ್ಡೆ ಭಾರತದ ವಿದೇಶಾಂಗ ಮಂತ್ರಿ ಎಸ್ ಜೈ ಶಂಕರ್ ಅವರಿಗೆ ಪತ್ರ ಬರೆದು ಸೌರಭ್ ಕಿರ್ಪಾಲ್ ಅವರ ಆಯ್ಕೆಯ ಕುರಿತು ಸರ್ಕಾರದ ನಿರ್ಧಾರವನ್ನು ಅಂತಿಮ ಗೊಳಿಸುವಂತೆ ಕೇಳಿದ್ದಾರೆ. ಹಾಗೇ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್ ನೇಮಕ ಮಾಡಲು ಯಾಕೆ ತಡವಾಗುತ್ತಿದೆ ಎಂದು ಕಾರಣವನ್ನು ಕೇಳಿದ್ದಾರೆ.

ಎಸ್. ಜೈಶಂಕರ್ ಅವರು ಇದುವರೆಗೆ ಜಸ್ಟಿಸ್ ಎಸ್.ಎ. ಬೋಬ್ಡೆ ಅವರ ಪತ್ರಕ್ಕೆ ಉತ್ತರ ನೀಡಿಲ್ಲ. ಹಿಂದೆ ಕೇಂದ್ರ ಸರ್ಕಾರ ಸೌರಭ್ ಕಿರ್ಪಾಲ್ ನೇಮಕಾತಿಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಅವರು ವಿದೇಶಿ ಪ್ರಜೆಯನ್ನು ಸಂಗಾತಿಯಾಗಿ ಹೊಂದಿರುವುದು ದೇಶದ ಭದ್ರತೆಗೆ ತೊಂದರೆ ಆಗಲಿದೆ ಎಂಬ ಕಾರಣಗಳನ್ನು ಕೇಂದ್ರ ಸರ್ಕಾರ ನೀಡಿದೆ.

ಸೌರಭ್ ಕಿರ್ಪಾಲ್ ಅವರ ಹಿನ್ನಲೆಯನ್ನು ತನಿಖೆ ಮಾಡುವ ಕೆಲಸ ಮಾಡುತ್ತಿದ್ದ ಭಾರತದ ಗುಪ್ತಚರ ಇಲಾಖೆ ನೇರವಾಗಿ ಸೌರಭ್ ನೇಮಕಾತಿಗೆ ಆಕ್ಷೇಪವನ್ನು  ವ್ಯಕ್ತಪಡಿಸಿಲ್ಲ. ಆದರೆ ಸೌರಭ್ ವಿದೇಶಿ ಸಂಗಾತಿಯನ್ನು ಹೊಂದಿರುವುದು ದೇಶದ ಭದ್ರತೆಗೆ ತೊಡಕಾಗಬಹುದು ಎಂಬ ಅಭಿಪ್ರಾಯವನ್ನು ಭಾರತ ಸರ್ಕಾರಕ್ಕೆ ನೀಡಿದೆ. ಹಿಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ಮುಂದೆ ಕೂಡ ಸೌರಭ್ ಕಿರ್ಪಾಲ್ ಆಯ್ಕೆ ವಿಷಯ ಬಂದಿತ್ತು.  ಕೇಂದ್ರ ಸರ್ಕಾರದ ಆಕ್ಷೇಪದಿಂದ ಅದು ಮುಂದಕ್ಕೆ ಹೋಗಲಿಲ್ಲ.

ಈಗಾಗಲೇ ಜಸ್ಟಿಸ್ ವಿವಿನ್ ಬೋಸ್ ಅವರನ್ನು ಭಾರತದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರನ್ನಾಗಿ ಭಾರತ ನೋಡಿದೆ. ಅವರು ಅಮೆರಿಕನ್‌ ಪ್ರಜೆಯನ್ನು ಮದುವೆಯಾಗಿದ್ದವರು. ನಾವು ದೇಶದಲ್ಲಿ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್‌ ರವಿ ಧವನ್‌, ಮುಖ್ಯ ನ್ಯಾಯಾಧೀಶರಾದ ಪಟ್ನಾಯಕ್‌ ಅವರನ್ನು ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ದಕ್ಷವಾಗಿ ಕಾರ್ಯ ನಿರ್ವಹಿಸಿರುವುದನ್ನು ದೇಶದ ಇತಿಹಾಸದಲ್ಲಿ ನೋಡಿದ್ದೇವೆ. ಇವರುಗಳು ವಿದೇಶಿ ಪ್ರಜೆಗಳನ್ನು ಮದುವೆಯಾಗಿದ್ದರು. ವಿದೇಶಿ ಪ್ರಜೆಗಳನ್ನು ಮದುವೆಯಾಗುವುದು ಅಥವಾ ಸಂಗಾತಿಯನ್ನು ಹೊಂದಿರುವುದು ನ್ಯಾಯಾಧೀಶರ ಆಯ್ಕೆ ಪರಿಗಣನೆಗೆ ದೊಡ್ಡ ವಿಷಯವಲ್ಲವೆಂದು ಈ ಸಂಬಂಧ ಸೌರಭ್‌ ಕಿರ್ಪಾಲ್‌ ಅಭಿಪ್ರಾಯ ಪಡುತ್ತಾರೆ.

ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ಇರಲು ಸಾಧ್ಯವಿಲ್ಲ. ನಾವು ಈ ದೇಶದ ವ್ಯವಸ್ಥೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿಧ್ಯವಿರಬೇಕೆಂದು ಬಯಸಬೇಕು. ಹಾಗೇ ವ್ಯವಸ್ಥೆಯಲ್ಲಿ ನಂಬಿಕೆಯನ್ನೂ ಇಡಬೇಕು. ನಿರ್ಧಾರಗಳನ್ನು ಕೈಗೊಳ್ಳುವ ನ್ಯಾಯಾಧೀಶರಿರಲಿ ಅಥವಾ ಸರ್ಕಾರದಲ್ಲಿರುವ ವ್ಯಕ್ತಿಗಳು ಪ್ರಸ್ತುತ ಸಮಾಜದ ಪ್ರತಿಬಿಂಬವೇ ಆಗಿರುತ್ತಾರೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ.  ಬಹುತೇಕ ಮೇಲ್ಜಾತಿಯ ಪುರುಷರೇ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿದ್ದಾರೆ. ಇದು ನಮ್ಮ ಇಂದಿನ ಸಮಾಜದಲ್ಲಿ ಯಾರು ಪ್ರಾಬಲ್ಯವನ್ನು ಸಾಧಿಸಿದ್ದಾರೆ ಎಂಬುದರ ಸಂಕೇತವೇ ಆಗಿದೆ ಎಂದು ಹಿರಿಯ ನ್ಯಾಯವಾದಿಯೊಬ್ಬರು ಸೌರಭ್‌ ಕಿರ್ಪಾಲ್ ನೇಮಕಾತಿ ವಿಷಯದ ಕುರಿತು ತಮ್ಮ ಅಭಿಪ್ರಾಯವನ್ನು ಹೇಳುತ್ತಾರೆ.

ಸೌರಭ್‌ ಕಿರ್ಪಾಲ್ ನೇಮಕ ಭಾರತದಲ್ಲಿ ಸಲಿಂಗಿಗಳ ಕುರಿತಾದ ಅಭಿಪ್ರಾಯವನ್ನು ಬದಲಿಸಬಹುದೇ? ಶೋಷಣೆಯನ್ನು ತಡೆಯಬಹುದೇ?

 

ಈ ಪ್ರಶ್ನೆಗೆ ಉತ್ತರ ಹೌದು ಮತ್ತು ಇಲ್ಲ. ಹೈಕೋರ್ಟ್‌ ನಂತಹ ಉನ್ನತ ಸಂಸ್ಥೆಯಲ್ಲಿ ಭಾರತ ಬಹಿರಂಗವಾಗಿ ತಾನು ಎಂದು ಹೇಳಿಕೊಳ್ಳುವ ನ್ಯಾಯಾಧೀಶರನ್ನು ಹೊಂದಿದ್ದರೆ ಭಾರತದಲ್ಲಿ ಸಾಕಷ್ಟು ಬದಲಾವಣೆಗಳು ಸಾಧ್ಯವಾಗಬಹುದು. ದೇಶದಲ್ಲಿ ಸಲಿಂಗಿಗಳ ಕುರಿತಾಗಿ ನಿಂದನಾತ್ಮಕ ಹೇಳಿಕೆಗಳು, ಅಭಿಪ್ರಾಯಗಳು ನಿಲ್ಲಬಹುದು. ನ್ಯಾಯಾಲಯದ ಮುಂದೆ ಪ್ರಕರಣಗಳು ಬಂದಾಗ ಸಂವಿಧಾನದ ಸಮಾನತೆಯ ತತ್ವವನ್ನು ಸಲಿಂಗಿಗಳ ವಿಷಯದಲ್ಲೂ ಅನ್ವಯಿಸಬಹುದು. ಆದರೆ ಈಗ ದೇಶದ ಸರ್ವೋಚ್ಛ ನ್ಯಾಯಾಲಯ ಹಾಗೂ ಹೈಕೋರ್ಟ್‌ ಗಳಲ್ಲಿ ಮಹಿಳಾ ನ್ಯಾಯಾಧೀಶರಿದ್ದರೂ ಸಹ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ತಾರತಮ್ಯ, ಅತ್ಯಾಚಾರಗಳು ನಿಂತಿಲ್ಲ. ಕನಿಷ್ಠ ನ್ಯಾಯಾಲಯದಲ್ಲಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಮೇಲಿನ ತಾರತಮ್ಯ ಮತ್ತು ದೌರ್ಜನ್ಯಗಳು ನಿಂತಿಲ್ಲ. ಹೀಗಿರುವಾಗ ಸೌರಭ್‌ ಕಿರ್ಪಾಲ್ ಅಥವಾ ಬೇರೇ  ವ್ಯಕ್ತಿ ನ್ಯಾಯಾಧೀಶರಾದ ಮಾತ್ರಕ್ಕೆ ಭಾರತದ ಸಮಾಜದಲ್ಲಿ ಸಲಿಂಗಿಗಳಿಗೆ ಗೌರವ ಮತ್ತು ಮಾನ್ಯತೆಗಳು ಬಂದು ಬಿಡುತ್ತವೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ಆದರೆ ಗೇ ಎಂಬ ಒಂದೇ ಕಾರಣಕ್ಕೆ ನಾಗರೀಕರ ಹಕ್ಕುಗಳಿಗಾಗಿ ತೀವ್ರ ಹೋರಾಟವನ್ನು ನಡೆಸುತ್ತ ಅರ್ಹತೆಯನ್ನು ಹೊಂದಿದ ವ್ಯಕ್ತಿಯನ್ನು ಹೈಕೋರ್ಟ್‌ ನ್ಯಾಯಾಧೀಶರಾಗುವ ಅವಕಾಶವನ್ನು ನಿರಾಕರಿಸುವುದು ಸಾಧ್ಯವಿಲ್ಲ. ದೆಹಲಿ ಹೈಕೋರ್ಟ್‌ನ 33  ಜನ ನ್ಯಾಯಾಧೀಶರು ಒಮ್ಮತದಿಂದ ಸೌರಭ್‌ ಕಿರ್ಪಾಲ್ ಅವರ ಹೆಸರನ್ನು ಶಿಫಾರಸ್ಸು ಮಾಡಿರುವಾಗ ಕೇಂದ್ರ ಸರ್ಕಾರ ಇದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ.

ಗೇ ಹಕ್ಕುಗಳ ಹೋರಾಟದ ತಿಂಗಳೆಂದು ಕರೆಯುವ ಜೂನ್‌ ತಿಂಗಳಿನಲ್ಲಿ ಅನೇಕ ವರ್ಷದಿಂದ ಚರ್ಚೆಯಾಗುತ್ತಿರವ ಸೌರಭ್‌ ಕಿರ್ಪಾಲ್ ನೇಮಕಾತಿ ವಿಚಾರ ಇನ್ನಷ್ಟು ಚರ್ಚೆಯಾಗಬೇಕಿದೆ.

ಮೂಲ : ಕ್ವಿಂಟ್‌ ನಡೆಸಿದ ಸೌರಭ್‌ ಕಿರ್ಪಾಲ್‌ ಸಂದರ್ಶನ

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ; ಪಿಕೆ ಟಾಕೀಸ್: LGBT ಸಮುದಾಯದ ನೋವು-ನಲಿವಿನ ಪಯಣವನ್ನು ಹಿಡಿಯುವ ಪಾನೋಸ್‌ನ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...