Homeಅನುವಾದಿತ ಲೇಖನದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ...

ದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ ನಿರ್ಲಕ್ಷಿಸುತ್ತದೆ?

ದೆಹಲಿ ಹೈಕೋರ್ಟ್‌ನ 33 ಜಡ್ಜ್‌ಗಳು ಸೌರಭ್ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿ ಶಿಫಾರನ್ನು ಮಾಡಿದ 4 ವರ್ಷದ ನಂತರವೂ  ಅವರು ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗಿಲ್ಲ.

- Advertisement -
- Advertisement -

2017 ರ ಅಕ್ಟೋಬರ್‌ ನಲ್ಲಿ ದೆಹಲಿ ಹೈಕೋರ್ಟ್ ಹಿರಿಯ ನ್ಯಾಯವಾದಿ  ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್‌ ಗೆ ಶಿಫಾರಸ್ಸು ಮಾಡಿತ್ತು. ಸೌರಭ್ ಕಿರ್ಪಾಲ್ ಆ ಮೂಲಕ ದೇಶದಲ್ಲಿ ಆಯ್ಕೆಯಾದ ಮೊಟ್ಟ ಮೊದಲ ಗೇ ಜಡ್ಜ್ ಆದರು. ಆದರೆ ಅವರನ್ನು ದೆಹಲಿ ಹೈಕೋರ್ಟ್‌ನ 33 ಜಡ್ಜ್‌ಗಳು ಸೌರಭ್ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿ ಶಿಫಾರನ್ನು ಮಾಡಿದ 4 ವರ್ಷದ ನಂತರವೂ  ಅವರು ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗಿಲ್ಲ. ಭಾರತದಲ್ಲಿ ಒಬ್ಬ ನ್ಯಾಯಾಧೀಶರ ಆಯ್ಕೆಯ ಶಿಫಾರಸ್ಸು 4 ವರ್ಷಗಳ ನಂತರವೂ ನಡೆಯದೇ ಇರುವ ಮೊಟ್ಟ ಮೊದಲ ಘಟನೆ ಇದು. ನಡುವೆ ಸುಪ್ರೀಂ ಕೋರ್ಟ್ ಕಡೆಯಿಂದ ಸೌರಭ ಕಿರ್ಪಾಲ್ ಅವರನ್ನು ಯಾವ ಕಾರಣಕ್ಕೆ ನ್ಯಾಯಾಧೀಶರನ್ನಾಗಿ ನೇಮಕಮಾಡಲಾಗಿಲ್ಲ ಎಂಬ ಉತ್ತರ ಕೂಡ ಬಂದಿಲ್ಲ. ಹಾಗೇ ಶಿಫಾರಸ್ಸನ್ನು ತಿರಸ್ಕರಿಸಲಾಗಿದೆ ಎಂದು ಕೂಡ ಸುಪ್ರೀಂ ಕೋರ್ಟ್ ಇದುವರೆಗೆ ಹೇಳಿಲ್ಲ. ಹೀಗಾಗಿ ಸೌರಭ್‌ ಕಿರ್ಪಾಲ್ ಅವರ ಲೈಂಗಿಕ ಆಯ್ಕೆಯ ಕುರಿತಾದ ಕಾರಣಕ್ಕೆ ಅಥವಾ ಅವರು ಗೇ ಎನ್ನುವ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಕವಾಗಲು ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಸೌರಭ್ ಕಿರ್ಪಾಲ್ ಅವರು “ದೇಶದಲ್ಲಿ ಯಾವ ಕಾರಣಕ್ಕೆ ಗೇ ಸಮುದಾಯದ ಒಬ್ಬರೇ ಒಬ್ಬ ನ್ಯಾಯಾಧೀಶರಾಗಿ, ಈ ದೇಶದಲ್ಲಿ ಆಯ್ಕೆಯಾಗಲಿಲ್ಲ. ಈ ವಿಷಯವನ್ನು ಭಾರತ ಅಷ್ಟು ಸಲುಭವಾಗಿ ನಿರ್ಲಕ್ಷಿಸುವಂತಿಲ್ಲ. ಕೇವಲ ವ್ಯಕ್ತಿಯ ಲೈಂಗಿಕ ಆಯ್ಕೆಯ ಕಾರಣಕ್ಕೆ ನ್ಯಾಯಾಧೀಶರನ್ನಾಗಿ ಆಯ್ಕೆ ಮಾಡುತ್ತಿಲ್ಲವೆಂದಾದರೆ ಅದು ದೇಶದ ಸಂವಿಧಾನ ಹೇಳುವ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ಅವರು ಅಭಿಪ್ರಾಯ ಪಡುತ್ತಾರೆ.

ನನ್ನನ್ನು ನ್ಯಾಯಾಧೀಶನನ್ನಾಗಿ ದೆಹಲಿ ಹೈಕೋರ್ಟ್ ಶಿಫಾರಸ್ಸು ಮಾಡಿದಾಗ ನಾನು ಎಲ್ಲ ರೀತಿಯಲ್ಲಿಯೂ ನ್ಯಾಯಾಧೀಶ ಹುದ್ದೆಗೆ ಅರ್ಹನಾಗಿದ್ದೆ. ಆದರೆ ದೇಶದಲ್ಲಿ ಇದುವರೆಗೆ ಪರ್ಯಾಯ ಲೈಂಗಿಕತೆಯ ವ್ಯಕ್ತಿ ಈ ದೇಶದಲ್ಲಿ ಆಯ್ಕೆಯಾಗದಿರುವುದು ನನ್ನ ನೇಮಕಾತಿ ಸಾಧ್ಯವೇ ಎಂಬ ಹಲವು ಅನುಮಾನಗಳನ್ನು ಹುಟ್ಟಿ ಹಾಕಿತ್ತು. ಯಾವುದಾದರೂ ಪ್ರಕ್ರಿಯೆ ದೇಶದಲ್ಲಿ ಮೊಟ್ಟ ಮೊದಲಿಗೆ ಸಂಭವಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಈ ನಾಲ್ಕು ವರ್ಷಗಳಲ್ಲಿ ದೇಶದ ಕಾನೂನಿನಲ್ಲಿ ಹಲವು ಬದಲಾವಣೆಗಳಾಗಿವೆ. ಮುಂದೆ ಭಾರತ ತನ್ನ ಮೊಟ್ಟಮೊದಲ ಗೇ ಜಡ್ಜ್ ಅನ್ನು ಹೊಂದಬಹುದು ಎಂಬ ನಂಬಿಕೆ ಇದೆ ಎಂದು ಸೌರಭ್ ಕಿರ್ಪಾಲ್ ಅಭಿಪ್ರಾಯ ಪಡುತ್ತಾರೆ.

ಮಾಧ್ಯಮಗಳ ವರದಿ‌ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಮದನ್ ಲೋಕುರ್ ಹೇಳಿಕೆಗಳ ಆಧಾರದಲ್ಲಿ ಹೇಳುವುದಾದರೆ ಸುಪ್ರೀಂ ಕೋರ್ಟ್ ಮುಂದೆ ಗೇ ಜಡ್ಜ್ ಆಯ್ಕೆಯ ಚರ್ಚೆ ನಡೆಯುತ್ತಿದೆ. ಮತ್ತು ದೇಶ ಇದನ್ನು ಹೇಗೆ ಸ್ವೀಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಜಿಜ್ಞಾಸೆಯಲ್ಲಿ ತೊಡಗಿದೆ ಎಂದು ಸೌರಭ್ ಕಿರ್ಪಾಲ್ ತಿಳಿಸಿದ್ದಾರೆ.

ಸೌರಭ್ ಕಿರ್ಪಾಲ್ ವಿದೇಶಿ ಪ್ರಜೆಯನ್ನು ತನ್ನ ಸಂಗಾತಿಯನ್ನಾಗಿ ಹೊಂದಿರುವುದು ದೇಶದ ಭದ್ರತೆಗೆ ಧಕ್ಕೆಯೆಂದು ಭಾವಿಸಲಾಗಿದೆಯೇ ?

2021 ಮಾರ್ಚ್ ತಿಂಗಳಿನಲ್ಲಿ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಎಸ್. ಎ. ಬೋಬ್ಡೆ ಭಾರತದ ವಿದೇಶಾಂಗ ಮಂತ್ರಿ ಎಸ್ ಜೈ ಶಂಕರ್ ಅವರಿಗೆ ಪತ್ರ ಬರೆದು ಸೌರಭ್ ಕಿರ್ಪಾಲ್ ಅವರ ಆಯ್ಕೆಯ ಕುರಿತು ಸರ್ಕಾರದ ನಿರ್ಧಾರವನ್ನು ಅಂತಿಮ ಗೊಳಿಸುವಂತೆ ಕೇಳಿದ್ದಾರೆ. ಹಾಗೇ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್ ನೇಮಕ ಮಾಡಲು ಯಾಕೆ ತಡವಾಗುತ್ತಿದೆ ಎಂದು ಕಾರಣವನ್ನು ಕೇಳಿದ್ದಾರೆ.

ಎಸ್. ಜೈಶಂಕರ್ ಅವರು ಇದುವರೆಗೆ ಜಸ್ಟಿಸ್ ಎಸ್.ಎ. ಬೋಬ್ಡೆ ಅವರ ಪತ್ರಕ್ಕೆ ಉತ್ತರ ನೀಡಿಲ್ಲ. ಹಿಂದೆ ಕೇಂದ್ರ ಸರ್ಕಾರ ಸೌರಭ್ ಕಿರ್ಪಾಲ್ ನೇಮಕಾತಿಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಅವರು ವಿದೇಶಿ ಪ್ರಜೆಯನ್ನು ಸಂಗಾತಿಯಾಗಿ ಹೊಂದಿರುವುದು ದೇಶದ ಭದ್ರತೆಗೆ ತೊಂದರೆ ಆಗಲಿದೆ ಎಂಬ ಕಾರಣಗಳನ್ನು ಕೇಂದ್ರ ಸರ್ಕಾರ ನೀಡಿದೆ.

ಸೌರಭ್ ಕಿರ್ಪಾಲ್ ಅವರ ಹಿನ್ನಲೆಯನ್ನು ತನಿಖೆ ಮಾಡುವ ಕೆಲಸ ಮಾಡುತ್ತಿದ್ದ ಭಾರತದ ಗುಪ್ತಚರ ಇಲಾಖೆ ನೇರವಾಗಿ ಸೌರಭ್ ನೇಮಕಾತಿಗೆ ಆಕ್ಷೇಪವನ್ನು  ವ್ಯಕ್ತಪಡಿಸಿಲ್ಲ. ಆದರೆ ಸೌರಭ್ ವಿದೇಶಿ ಸಂಗಾತಿಯನ್ನು ಹೊಂದಿರುವುದು ದೇಶದ ಭದ್ರತೆಗೆ ತೊಡಕಾಗಬಹುದು ಎಂಬ ಅಭಿಪ್ರಾಯವನ್ನು ಭಾರತ ಸರ್ಕಾರಕ್ಕೆ ನೀಡಿದೆ. ಹಿಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ಮುಂದೆ ಕೂಡ ಸೌರಭ್ ಕಿರ್ಪಾಲ್ ಆಯ್ಕೆ ವಿಷಯ ಬಂದಿತ್ತು.  ಕೇಂದ್ರ ಸರ್ಕಾರದ ಆಕ್ಷೇಪದಿಂದ ಅದು ಮುಂದಕ್ಕೆ ಹೋಗಲಿಲ್ಲ.

ಈಗಾಗಲೇ ಜಸ್ಟಿಸ್ ವಿವಿನ್ ಬೋಸ್ ಅವರನ್ನು ಭಾರತದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರನ್ನಾಗಿ ಭಾರತ ನೋಡಿದೆ. ಅವರು ಅಮೆರಿಕನ್‌ ಪ್ರಜೆಯನ್ನು ಮದುವೆಯಾಗಿದ್ದವರು. ನಾವು ದೇಶದಲ್ಲಿ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್‌ ರವಿ ಧವನ್‌, ಮುಖ್ಯ ನ್ಯಾಯಾಧೀಶರಾದ ಪಟ್ನಾಯಕ್‌ ಅವರನ್ನು ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ದಕ್ಷವಾಗಿ ಕಾರ್ಯ ನಿರ್ವಹಿಸಿರುವುದನ್ನು ದೇಶದ ಇತಿಹಾಸದಲ್ಲಿ ನೋಡಿದ್ದೇವೆ. ಇವರುಗಳು ವಿದೇಶಿ ಪ್ರಜೆಗಳನ್ನು ಮದುವೆಯಾಗಿದ್ದರು. ವಿದೇಶಿ ಪ್ರಜೆಗಳನ್ನು ಮದುವೆಯಾಗುವುದು ಅಥವಾ ಸಂಗಾತಿಯನ್ನು ಹೊಂದಿರುವುದು ನ್ಯಾಯಾಧೀಶರ ಆಯ್ಕೆ ಪರಿಗಣನೆಗೆ ದೊಡ್ಡ ವಿಷಯವಲ್ಲವೆಂದು ಈ ಸಂಬಂಧ ಸೌರಭ್‌ ಕಿರ್ಪಾಲ್‌ ಅಭಿಪ್ರಾಯ ಪಡುತ್ತಾರೆ.

ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ಇರಲು ಸಾಧ್ಯವಿಲ್ಲ. ನಾವು ಈ ದೇಶದ ವ್ಯವಸ್ಥೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿಧ್ಯವಿರಬೇಕೆಂದು ಬಯಸಬೇಕು. ಹಾಗೇ ವ್ಯವಸ್ಥೆಯಲ್ಲಿ ನಂಬಿಕೆಯನ್ನೂ ಇಡಬೇಕು. ನಿರ್ಧಾರಗಳನ್ನು ಕೈಗೊಳ್ಳುವ ನ್ಯಾಯಾಧೀಶರಿರಲಿ ಅಥವಾ ಸರ್ಕಾರದಲ್ಲಿರುವ ವ್ಯಕ್ತಿಗಳು ಪ್ರಸ್ತುತ ಸಮಾಜದ ಪ್ರತಿಬಿಂಬವೇ ಆಗಿರುತ್ತಾರೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ.  ಬಹುತೇಕ ಮೇಲ್ಜಾತಿಯ ಪುರುಷರೇ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿದ್ದಾರೆ. ಇದು ನಮ್ಮ ಇಂದಿನ ಸಮಾಜದಲ್ಲಿ ಯಾರು ಪ್ರಾಬಲ್ಯವನ್ನು ಸಾಧಿಸಿದ್ದಾರೆ ಎಂಬುದರ ಸಂಕೇತವೇ ಆಗಿದೆ ಎಂದು ಹಿರಿಯ ನ್ಯಾಯವಾದಿಯೊಬ್ಬರು ಸೌರಭ್‌ ಕಿರ್ಪಾಲ್ ನೇಮಕಾತಿ ವಿಷಯದ ಕುರಿತು ತಮ್ಮ ಅಭಿಪ್ರಾಯವನ್ನು ಹೇಳುತ್ತಾರೆ.

ಸೌರಭ್‌ ಕಿರ್ಪಾಲ್ ನೇಮಕ ಭಾರತದಲ್ಲಿ ಸಲಿಂಗಿಗಳ ಕುರಿತಾದ ಅಭಿಪ್ರಾಯವನ್ನು ಬದಲಿಸಬಹುದೇ? ಶೋಷಣೆಯನ್ನು ತಡೆಯಬಹುದೇ?

 

ಈ ಪ್ರಶ್ನೆಗೆ ಉತ್ತರ ಹೌದು ಮತ್ತು ಇಲ್ಲ. ಹೈಕೋರ್ಟ್‌ ನಂತಹ ಉನ್ನತ ಸಂಸ್ಥೆಯಲ್ಲಿ ಭಾರತ ಬಹಿರಂಗವಾಗಿ ತಾನು ಎಂದು ಹೇಳಿಕೊಳ್ಳುವ ನ್ಯಾಯಾಧೀಶರನ್ನು ಹೊಂದಿದ್ದರೆ ಭಾರತದಲ್ಲಿ ಸಾಕಷ್ಟು ಬದಲಾವಣೆಗಳು ಸಾಧ್ಯವಾಗಬಹುದು. ದೇಶದಲ್ಲಿ ಸಲಿಂಗಿಗಳ ಕುರಿತಾಗಿ ನಿಂದನಾತ್ಮಕ ಹೇಳಿಕೆಗಳು, ಅಭಿಪ್ರಾಯಗಳು ನಿಲ್ಲಬಹುದು. ನ್ಯಾಯಾಲಯದ ಮುಂದೆ ಪ್ರಕರಣಗಳು ಬಂದಾಗ ಸಂವಿಧಾನದ ಸಮಾನತೆಯ ತತ್ವವನ್ನು ಸಲಿಂಗಿಗಳ ವಿಷಯದಲ್ಲೂ ಅನ್ವಯಿಸಬಹುದು. ಆದರೆ ಈಗ ದೇಶದ ಸರ್ವೋಚ್ಛ ನ್ಯಾಯಾಲಯ ಹಾಗೂ ಹೈಕೋರ್ಟ್‌ ಗಳಲ್ಲಿ ಮಹಿಳಾ ನ್ಯಾಯಾಧೀಶರಿದ್ದರೂ ಸಹ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ತಾರತಮ್ಯ, ಅತ್ಯಾಚಾರಗಳು ನಿಂತಿಲ್ಲ. ಕನಿಷ್ಠ ನ್ಯಾಯಾಲಯದಲ್ಲಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಮೇಲಿನ ತಾರತಮ್ಯ ಮತ್ತು ದೌರ್ಜನ್ಯಗಳು ನಿಂತಿಲ್ಲ. ಹೀಗಿರುವಾಗ ಸೌರಭ್‌ ಕಿರ್ಪಾಲ್ ಅಥವಾ ಬೇರೇ  ವ್ಯಕ್ತಿ ನ್ಯಾಯಾಧೀಶರಾದ ಮಾತ್ರಕ್ಕೆ ಭಾರತದ ಸಮಾಜದಲ್ಲಿ ಸಲಿಂಗಿಗಳಿಗೆ ಗೌರವ ಮತ್ತು ಮಾನ್ಯತೆಗಳು ಬಂದು ಬಿಡುತ್ತವೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ಆದರೆ ಗೇ ಎಂಬ ಒಂದೇ ಕಾರಣಕ್ಕೆ ನಾಗರೀಕರ ಹಕ್ಕುಗಳಿಗಾಗಿ ತೀವ್ರ ಹೋರಾಟವನ್ನು ನಡೆಸುತ್ತ ಅರ್ಹತೆಯನ್ನು ಹೊಂದಿದ ವ್ಯಕ್ತಿಯನ್ನು ಹೈಕೋರ್ಟ್‌ ನ್ಯಾಯಾಧೀಶರಾಗುವ ಅವಕಾಶವನ್ನು ನಿರಾಕರಿಸುವುದು ಸಾಧ್ಯವಿಲ್ಲ. ದೆಹಲಿ ಹೈಕೋರ್ಟ್‌ನ 33  ಜನ ನ್ಯಾಯಾಧೀಶರು ಒಮ್ಮತದಿಂದ ಸೌರಭ್‌ ಕಿರ್ಪಾಲ್ ಅವರ ಹೆಸರನ್ನು ಶಿಫಾರಸ್ಸು ಮಾಡಿರುವಾಗ ಕೇಂದ್ರ ಸರ್ಕಾರ ಇದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ.

ಗೇ ಹಕ್ಕುಗಳ ಹೋರಾಟದ ತಿಂಗಳೆಂದು ಕರೆಯುವ ಜೂನ್‌ ತಿಂಗಳಿನಲ್ಲಿ ಅನೇಕ ವರ್ಷದಿಂದ ಚರ್ಚೆಯಾಗುತ್ತಿರವ ಸೌರಭ್‌ ಕಿರ್ಪಾಲ್ ನೇಮಕಾತಿ ವಿಚಾರ ಇನ್ನಷ್ಟು ಚರ್ಚೆಯಾಗಬೇಕಿದೆ.

ಮೂಲ : ಕ್ವಿಂಟ್‌ ನಡೆಸಿದ ಸೌರಭ್‌ ಕಿರ್ಪಾಲ್‌ ಸಂದರ್ಶನ

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ; ಪಿಕೆ ಟಾಕೀಸ್: LGBT ಸಮುದಾಯದ ನೋವು-ನಲಿವಿನ ಪಯಣವನ್ನು ಹಿಡಿಯುವ ಪಾನೋಸ್‌ನ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...