Homeಮುಖಪುಟಮೋದಿ ಸರ್ಕಾರ ಬಿಬಿಸಿ ಸಾಕ್ಷ್ಯಚಿತ್ರವನ್ನು ಅಕ್ರಮವಾಗಿ ನಿಷೇಧಿಸಿದ್ದು ಹೇಗೆ?: ಸಾಕೇತ್ ಗೋಖಲೆ ಹಂಚಿಕೊಂಡ ವಿವರವಾದ ಮಾಹಿತಿ...

ಮೋದಿ ಸರ್ಕಾರ ಬಿಬಿಸಿ ಸಾಕ್ಷ್ಯಚಿತ್ರವನ್ನು ಅಕ್ರಮವಾಗಿ ನಿಷೇಧಿಸಿದ್ದು ಹೇಗೆ?: ಸಾಕೇತ್ ಗೋಖಲೆ ಹಂಚಿಕೊಂಡ ವಿವರವಾದ ಮಾಹಿತಿ ಇಲ್ಲಿದೆ..

- Advertisement -
- Advertisement -

ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ಹೇಗೆ ನಿಷೇಧಿಸಿತು ಎನ್ನುವ ಬಗ್ಗೆ ಟಿಎಂಸಿ ನಾಯಕ, ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರು RTI ಮೂಲಕ ಮಾಹಿತಿ ಪಡೆದುಕೊಂಡು ಟ್ವಿಟ್ ಮಾಡಿದ್ದಾರೆ.

“ಭಾರತ: ಮೋದಿ ಪ್ರಶ್ನೆ” ಎಂಬ ಬಿಬಿಸಿ ಸಾಕ್ಷ್ಯಚಿತ್ರವನ್ನು ಮೋದಿ ಸರ್ಕಾರವು ಯಾವುದೇ ಕಾರಣಗಳನ್ನು ನೀಡದೆ ಜನವರಿ 2022 ರಲ್ಲಿ ನಿಷೇಧಿಸಿತು. ಹಾಗಾಗಿ ಕಾರಣವನ್ನು ಕಂಡುಹಿಡಿಯಲು ನಾನು RTI ಅನ್ನು ಸಲ್ಲಿಸಿದೆ ಮತ್ತು ವಿಲಕ್ಷಣವಾದ ಉತ್ತರವನ್ನು ಸ್ವೀಕರಿಸಿದೆ” ಎಂದು ತಿಳಿಸಿದ್ದಾರೆ.

”ಪ್ರತಿಕ್ರಿಯೆಯಾಗಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು IT ನಿಯಮಗಳು 2021ರ ನಿಯಮ 16ರ “ಇಂಟರ್ ಡಿಪಾರ್ಟ್ಮೆಂಟ್ ಕಮಿಟಿಯ (IDC) ಶಿಫಾರಸುಗಳ” ಆಧಾರದ ಮೇಲೆ ಸಾಕ್ಷ್ಯಚಿತ್ರವನ್ನು ನಿಷೇಧಿಸಲಾಗಿದೆ” ಎಂದು ಹೇಳಿದೆ.

”ಈಗ ಸತ್ಯಗಳು ಇಲ್ಲಿವೆ: “ತುರ್ತು ಸಂದರ್ಭಗಳಲ್ಲಿ” ಮಾತ್ರ ಡಿಜಿಟಲ್ ವಿಷಯವನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನಿಯಮ 16 ಅನುಮತಿಸುತ್ತದೆ. ಅದರ ನಂತರ ನಿಷೇಧವನ್ನು ಪರಿಶೀಲಿಸಲು ಸಚಿವಾಲಯವು ಅಂತರ-ಇಲಾಖೆಯ ಸಮಿತಿಯನ್ನು (IDC) ರಚಿಸುವ ಅಗತ್ಯವಿದೆ. IDC ಕೇವಲ ಶಿಫಾರಸುಗಳನ್ನು ಮಾತ್ರ ನೀಡಬಹುದು, ಆದೇಶಗಳನ್ನು ನೀಡುವುದಿಲ್ಲ” ಎಂದು ಹೇಳಲಾಗುತ್ತದೆ.

”ಐಟಿ ನಿಯಮಗಳ ನಿಯಮ 17 ಏನು ಹೇಳುತ್ತದೆ ಎಂಬುದನ್ನು ಗಮನಿಸಿ, ಸಮಿತಿಯು ಉಲ್ಲೇಖಿಸಿದ ದೂರುಗಳು ಮತ್ತು ಶಿಫಾರಸುಗಳನ್ನು ಒಳಗೊಂಡಂತೆ ಸಮಿತಿಯ (IDC) ಪ್ರಕ್ರಿಯೆಗಳ ಸಂಪೂರ್ಣ ದಾಖಲೆಗಳನ್ನು ಸಚಿವಾಲಯ ನಿರ್ವಹಿಸುತ್ತದೆ. ಆದ್ದರಿಂದ, IDC ಯ ಪ್ರಕ್ರಿಯೆಗಳು RTI ಕಾಯಿದೆ ಅಡಿಯಲ್ಲಿ ಸಾರ್ವಜನಿಕ ದಾಖಲೆಗಳಾಗಿವೆ” ಎಂಬುದು ತಿಳಿದುಬಂದಿದೆ.

”ಇದಲ್ಲದೆ, ಐಟಿ ನಿಯಮಗಳ 17 ನೇ ನಿಯಮವು IDC ಯ ಚರ್ಚೆಗಳು ಸಾರ್ವಜನಿಕ ದಾಖಲೆಗಳು ಎಂದು ನಿರ್ದಿಷ್ಟಪಡಿಸುವ ಹೊರತಾಗಿಯೂ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸುವ ಸಂದರ್ಭದಲ್ಲಿ ಅವುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದೆ” ಎಂದು ಹೇಳಿದ್ದಾರೆ.

”ಪ್ರಧಾನಿ ಮೋದಿಯವರ ವಿರುದ್ಧದ ಟೀಕೆಗಳನ್ನು ಸೆನ್ಸಾರ್ ಮಾಡಲು ತುರ್ತು ಅಧಿಕಾರವನ್ನು ಬಳಸುವ ಸ್ಪಷ್ಟ ಪ್ರಯತ್ನವಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು “ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯ” ಆಧಾರದ ಮೇಲೆ ಸಾಕ್ಷ್ಯಚಿತ್ರವನ್ನು ನಿಷೇಧ ಮಾಡಿದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿಯ ಕುರಿತ BBC ಸಾಕ್ಷ್ಯಚಿತ್ರವನ್ನು ಏಕೆ ನಿಷೇಧಿಸಲಾಗಿದೆ? ಮೋದಿ ಏನು ಭಾರತವಲ್ಲ. ಅವರ ಟೀಕೆಯನ್ನು “ಭಾರತಕ್ಕೆ ಬೆದರಿಕೆ” ಎಂದು ನಿಷೇಧಿಸಲಾಗುವುದಿಲ್ಲ” ಎಂದು ಗೋಖಲೆ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...