Homeಮುಖಪುಟರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

- Advertisement -
- Advertisement -

ರೈಲ್ವೆ ಸಚಿವಾಲಯ ವಲಸೆ ಕಾರ್ಮಿಕರಿಂದ ಶುಲ್ಕವನ್ನು ಪಡೆಯುವಂತೆ ಸೂಚಿಸಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಬಿಜೆಪಿಯ ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಕೇಂದ್ರ ಸರ್ಕಾರ ಮೂರ್ಖತನ ಮಾಡುತ್ತಿದೆ ಕೇಂದ್ರ ಸರ್ಕಾರದ ವಿರುದ್ದವೇ ಕಿಡಿಕಾರಿದ್ದಾರೆ.

ಸುಬ್ರಮಣ್ಯ ಸ್ವಾಮಿ ಟ್ವಿಟ್ಟರಿನಲ್ಲಿ “ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರಿಂದ ಮಿತಿಮೀರಿದ ರೈಲು ಪ್ರಯಾಣ ದರವನ್ನು ವಿಧಿಸುವ ಕೇಂದ್ರ ಸರ್ಕಾರ ಎಷ್ಟೊಂದು ಮೂರ್ಖತನದ್ದಾಗಿದೆ. ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಏರ್ ಇಂಡಿಯಾ ಉಚಿತವಾಗಿ ಕರೆತರಲಾಯಿತು. ರೈಲ್ವೆ ಇಲಾಖೇ ಇದಕ್ಕೆ ಅನುದಾನ ನೀಡಲು ನಿರಾಕರಿಸಿದರೆ PM CARES ನಿಂದ ಯಾಕೆ ಪಾವತಿಸಬಾರದು?” ಎಂದು ಕೇಂದ್ರದ ವಿರುದ್ದ ಹರಿಹಾಯ್ದಿದ್ದಾರೆ.

ಈ ಟ್ವೀಟಿನ ನಂತರ ಸುಬ್ರಮಣ್ಯ ಸ್ವಾಮಿ “ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ 85% ನೀಡುತ್ತದೆ ಹಾಗೂ ಉಳಿದ 15% ರಾಜ್ಯ ಪಾವತಿಸಲಿ, ವಲಸೆ ಕಾರ್ಮಿಕರು ಉಚಿತವಾಗಿ ಪ್ರಯಾಣಿಸಲಿ, ಸಚಿವಾಲಯ ಅಧೀಕೃತವಾಗಿ ಸ್ಪಷ್ಟನೆ ನೀಡಲಿದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಅಧಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಪ್ರಯಾಣದರವನ್ನು ಪಕ್ಷ ಭರಿಸುವುದಾಗಿ ಘೋಷಿಸಿದ್ದಾರೆ. ಈ ಕುರಿತು ವಲಸೆ ಕಾರ್ಮಿಕರ ಬಗ್ಗೆ ಕೇಂದ್ರದ ನಡೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಟ್ವಿಟ್ಟರಿನಲ್ಲಿ ಕೇಂದ್ರದ ವಿರುದ್ದ ಟೀಕೆ ವ್ಯಕ್ತಪಡಿಸಿದ್ದಾರೆ. “ಒಂದೆಡೆ, ರೈಲ್ವೆ ಇತರ ರಾಜ್ಯಗಳಲ್ಲಿ ಸಿಕ್ಕಿಬಿದ್ದ ಕಾರ್ಮಿಕರಿಂದ ಟಿಕೆಟ್ ದರವನ್ನು ವಿಧಿಸುತ್ತಿದ್ದರೆ, ಮತ್ತೊಂದೆಡೆ ರೈಲ್ವೆ ಸಚಿವಾಲಯವು ಪಿಎಂ ಕೇರ್ ಫಂಡ್‌ಗೆ 151 ಕೋಟಿ ರೂ. ನೀಡುತ್ತಿದೆ, ಇದನ್ನು ಪರಿಹರಿಸಿ” ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿಯವರ ಟ್ವಿಟ್ಟರಿಗೆ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಟ್ವೀಟ್ ಮಾಡಿ, “ರಾಹುಲ್ ಗಾಂಧಿಯವರೆ, ಮಾರ್ಗ ಸೂಚಿಯೂ ಯಾವುದೇ ನಿಲ್ದಾಣದಲ್ಲಿ ಯಾವುದೇ ಟಿಕೆಟ್‌ಗಳನ್ನು ಮಾರಾಟ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳುತ್ತದೆ ರೈಲ್ವೆ ಸಚಿವಾಲಯ 85% ಸಬ್ಸಿಡಿ ನೀಡಿದೆ ಮತ್ತು ರಾಜ್ಯ ಸರ್ಕಾರ 15% ಪಾವತಿಸಬೇಕಾಗಿದೆ, ಅದನ್ನು ಅನುಸರಿಸಲು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಸರ್ಕಾರಗಳಿಗೆ ಹೇಳಿ” ಎಂದಿದ್ದಾರೆ.

ಇದಕ್ಕೆ ಉತ್ತರವಾಗಿ ಟ್ವಿಟ್ಟರ್ ಬಳಕೆದಾರರೊಬ್ಬರು, ಯಾವುದೆ ಟಿಕೆಟುಗಳು ಮಾರುತ್ತಿಲ್ಲ ಎಂದು ಹೇಳುತ್ತಿರುವ ಸಂಬಿತ್ ಪಾತ್ರ, ಇದೇನು? ಎಂದು ಮೇ 02 ರಂದು ಪಡೆದ ರೂ. 740 ರ ರೈಲ್ವೇ ಟಿಕೆಟೊಂದರ ಚಿತ್ರವನ್ನು ಹಾಕಿದ್ದಾರೆ.


ಇದನ್ನೂ ಓದಿ:ಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ


ವಿಡಿಯೊ ನೋಡಿ: ಮರೆಯಲೆ ಬಾರದ ಈ ಹಿಂದಿನ ಸುದ್ದಿಗಳು

ಸದ್ದು ಈ ಸುದ್ದಿಗಳೇನಾಗಿವೆ? – 03 may 2020

ಹೊಸ ಸುದ್ದಿಗಳು, ಮರೆಯಬಾರದ ಹಳೆಯ ಸುದ್ದಿಗಳು ಮತ್ತು ಮುಂದಾಗಬೇಕಾದ ಸುದ್ದಿಗಳು – ಇವುಗಳನ್ನೊಳಗೊಂಡ ಇಂದಿನ #ಸದ್ದು_ಈ_ಸುದ್ದಿಗಳೇನಾಗಿವೆ?

Posted by Naanu Gauri on Sunday, May 3, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...