Homeಮುಖಪುಟರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

- Advertisement -
- Advertisement -

ರೈಲ್ವೆ ಸಚಿವಾಲಯ ವಲಸೆ ಕಾರ್ಮಿಕರಿಂದ ಶುಲ್ಕವನ್ನು ಪಡೆಯುವಂತೆ ಸೂಚಿಸಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಬಿಜೆಪಿಯ ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಕೇಂದ್ರ ಸರ್ಕಾರ ಮೂರ್ಖತನ ಮಾಡುತ್ತಿದೆ ಕೇಂದ್ರ ಸರ್ಕಾರದ ವಿರುದ್ದವೇ ಕಿಡಿಕಾರಿದ್ದಾರೆ.

ಸುಬ್ರಮಣ್ಯ ಸ್ವಾಮಿ ಟ್ವಿಟ್ಟರಿನಲ್ಲಿ “ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರಿಂದ ಮಿತಿಮೀರಿದ ರೈಲು ಪ್ರಯಾಣ ದರವನ್ನು ವಿಧಿಸುವ ಕೇಂದ್ರ ಸರ್ಕಾರ ಎಷ್ಟೊಂದು ಮೂರ್ಖತನದ್ದಾಗಿದೆ. ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಏರ್ ಇಂಡಿಯಾ ಉಚಿತವಾಗಿ ಕರೆತರಲಾಯಿತು. ರೈಲ್ವೆ ಇಲಾಖೇ ಇದಕ್ಕೆ ಅನುದಾನ ನೀಡಲು ನಿರಾಕರಿಸಿದರೆ PM CARES ನಿಂದ ಯಾಕೆ ಪಾವತಿಸಬಾರದು?” ಎಂದು ಕೇಂದ್ರದ ವಿರುದ್ದ ಹರಿಹಾಯ್ದಿದ್ದಾರೆ.

ಈ ಟ್ವೀಟಿನ ನಂತರ ಸುಬ್ರಮಣ್ಯ ಸ್ವಾಮಿ “ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ 85% ನೀಡುತ್ತದೆ ಹಾಗೂ ಉಳಿದ 15% ರಾಜ್ಯ ಪಾವತಿಸಲಿ, ವಲಸೆ ಕಾರ್ಮಿಕರು ಉಚಿತವಾಗಿ ಪ್ರಯಾಣಿಸಲಿ, ಸಚಿವಾಲಯ ಅಧೀಕೃತವಾಗಿ ಸ್ಪಷ್ಟನೆ ನೀಡಲಿದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಅಧಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಪ್ರಯಾಣದರವನ್ನು ಪಕ್ಷ ಭರಿಸುವುದಾಗಿ ಘೋಷಿಸಿದ್ದಾರೆ. ಈ ಕುರಿತು ವಲಸೆ ಕಾರ್ಮಿಕರ ಬಗ್ಗೆ ಕೇಂದ್ರದ ನಡೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಟ್ವಿಟ್ಟರಿನಲ್ಲಿ ಕೇಂದ್ರದ ವಿರುದ್ದ ಟೀಕೆ ವ್ಯಕ್ತಪಡಿಸಿದ್ದಾರೆ. “ಒಂದೆಡೆ, ರೈಲ್ವೆ ಇತರ ರಾಜ್ಯಗಳಲ್ಲಿ ಸಿಕ್ಕಿಬಿದ್ದ ಕಾರ್ಮಿಕರಿಂದ ಟಿಕೆಟ್ ದರವನ್ನು ವಿಧಿಸುತ್ತಿದ್ದರೆ, ಮತ್ತೊಂದೆಡೆ ರೈಲ್ವೆ ಸಚಿವಾಲಯವು ಪಿಎಂ ಕೇರ್ ಫಂಡ್‌ಗೆ 151 ಕೋಟಿ ರೂ. ನೀಡುತ್ತಿದೆ, ಇದನ್ನು ಪರಿಹರಿಸಿ” ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿಯವರ ಟ್ವಿಟ್ಟರಿಗೆ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಟ್ವೀಟ್ ಮಾಡಿ, “ರಾಹುಲ್ ಗಾಂಧಿಯವರೆ, ಮಾರ್ಗ ಸೂಚಿಯೂ ಯಾವುದೇ ನಿಲ್ದಾಣದಲ್ಲಿ ಯಾವುದೇ ಟಿಕೆಟ್‌ಗಳನ್ನು ಮಾರಾಟ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳುತ್ತದೆ ರೈಲ್ವೆ ಸಚಿವಾಲಯ 85% ಸಬ್ಸಿಡಿ ನೀಡಿದೆ ಮತ್ತು ರಾಜ್ಯ ಸರ್ಕಾರ 15% ಪಾವತಿಸಬೇಕಾಗಿದೆ, ಅದನ್ನು ಅನುಸರಿಸಲು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಸರ್ಕಾರಗಳಿಗೆ ಹೇಳಿ” ಎಂದಿದ್ದಾರೆ.

ಇದಕ್ಕೆ ಉತ್ತರವಾಗಿ ಟ್ವಿಟ್ಟರ್ ಬಳಕೆದಾರರೊಬ್ಬರು, ಯಾವುದೆ ಟಿಕೆಟುಗಳು ಮಾರುತ್ತಿಲ್ಲ ಎಂದು ಹೇಳುತ್ತಿರುವ ಸಂಬಿತ್ ಪಾತ್ರ, ಇದೇನು? ಎಂದು ಮೇ 02 ರಂದು ಪಡೆದ ರೂ. 740 ರ ರೈಲ್ವೇ ಟಿಕೆಟೊಂದರ ಚಿತ್ರವನ್ನು ಹಾಕಿದ್ದಾರೆ.


ಇದನ್ನೂ ಓದಿ:ಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ


ವಿಡಿಯೊ ನೋಡಿ: ಮರೆಯಲೆ ಬಾರದ ಈ ಹಿಂದಿನ ಸುದ್ದಿಗಳು

ಸದ್ದು ಈ ಸುದ್ದಿಗಳೇನಾಗಿವೆ? – 03 may 2020

ಹೊಸ ಸುದ್ದಿಗಳು, ಮರೆಯಬಾರದ ಹಳೆಯ ಸುದ್ದಿಗಳು ಮತ್ತು ಮುಂದಾಗಬೇಕಾದ ಸುದ್ದಿಗಳು – ಇವುಗಳನ್ನೊಳಗೊಂಡ ಇಂದಿನ #ಸದ್ದು_ಈ_ಸುದ್ದಿಗಳೇನಾಗಿವೆ?

Posted by Naanu Gauri on Sunday, May 3, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...