Homeಮುಖಪುಟರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

- Advertisement -
- Advertisement -

ರೈಲ್ವೆ ಸಚಿವಾಲಯ ವಲಸೆ ಕಾರ್ಮಿಕರಿಂದ ಶುಲ್ಕವನ್ನು ಪಡೆಯುವಂತೆ ಸೂಚಿಸಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಬಿಜೆಪಿಯ ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಕೇಂದ್ರ ಸರ್ಕಾರ ಮೂರ್ಖತನ ಮಾಡುತ್ತಿದೆ ಕೇಂದ್ರ ಸರ್ಕಾರದ ವಿರುದ್ದವೇ ಕಿಡಿಕಾರಿದ್ದಾರೆ.

ಸುಬ್ರಮಣ್ಯ ಸ್ವಾಮಿ ಟ್ವಿಟ್ಟರಿನಲ್ಲಿ “ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರಿಂದ ಮಿತಿಮೀರಿದ ರೈಲು ಪ್ರಯಾಣ ದರವನ್ನು ವಿಧಿಸುವ ಕೇಂದ್ರ ಸರ್ಕಾರ ಎಷ್ಟೊಂದು ಮೂರ್ಖತನದ್ದಾಗಿದೆ. ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಏರ್ ಇಂಡಿಯಾ ಉಚಿತವಾಗಿ ಕರೆತರಲಾಯಿತು. ರೈಲ್ವೆ ಇಲಾಖೇ ಇದಕ್ಕೆ ಅನುದಾನ ನೀಡಲು ನಿರಾಕರಿಸಿದರೆ PM CARES ನಿಂದ ಯಾಕೆ ಪಾವತಿಸಬಾರದು?” ಎಂದು ಕೇಂದ್ರದ ವಿರುದ್ದ ಹರಿಹಾಯ್ದಿದ್ದಾರೆ.

ಈ ಟ್ವೀಟಿನ ನಂತರ ಸುಬ್ರಮಣ್ಯ ಸ್ವಾಮಿ “ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ 85% ನೀಡುತ್ತದೆ ಹಾಗೂ ಉಳಿದ 15% ರಾಜ್ಯ ಪಾವತಿಸಲಿ, ವಲಸೆ ಕಾರ್ಮಿಕರು ಉಚಿತವಾಗಿ ಪ್ರಯಾಣಿಸಲಿ, ಸಚಿವಾಲಯ ಅಧೀಕೃತವಾಗಿ ಸ್ಪಷ್ಟನೆ ನೀಡಲಿದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಅಧಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಪ್ರಯಾಣದರವನ್ನು ಪಕ್ಷ ಭರಿಸುವುದಾಗಿ ಘೋಷಿಸಿದ್ದಾರೆ. ಈ ಕುರಿತು ವಲಸೆ ಕಾರ್ಮಿಕರ ಬಗ್ಗೆ ಕೇಂದ್ರದ ನಡೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಟ್ವಿಟ್ಟರಿನಲ್ಲಿ ಕೇಂದ್ರದ ವಿರುದ್ದ ಟೀಕೆ ವ್ಯಕ್ತಪಡಿಸಿದ್ದಾರೆ. “ಒಂದೆಡೆ, ರೈಲ್ವೆ ಇತರ ರಾಜ್ಯಗಳಲ್ಲಿ ಸಿಕ್ಕಿಬಿದ್ದ ಕಾರ್ಮಿಕರಿಂದ ಟಿಕೆಟ್ ದರವನ್ನು ವಿಧಿಸುತ್ತಿದ್ದರೆ, ಮತ್ತೊಂದೆಡೆ ರೈಲ್ವೆ ಸಚಿವಾಲಯವು ಪಿಎಂ ಕೇರ್ ಫಂಡ್‌ಗೆ 151 ಕೋಟಿ ರೂ. ನೀಡುತ್ತಿದೆ, ಇದನ್ನು ಪರಿಹರಿಸಿ” ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿಯವರ ಟ್ವಿಟ್ಟರಿಗೆ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಟ್ವೀಟ್ ಮಾಡಿ, “ರಾಹುಲ್ ಗಾಂಧಿಯವರೆ, ಮಾರ್ಗ ಸೂಚಿಯೂ ಯಾವುದೇ ನಿಲ್ದಾಣದಲ್ಲಿ ಯಾವುದೇ ಟಿಕೆಟ್‌ಗಳನ್ನು ಮಾರಾಟ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳುತ್ತದೆ ರೈಲ್ವೆ ಸಚಿವಾಲಯ 85% ಸಬ್ಸಿಡಿ ನೀಡಿದೆ ಮತ್ತು ರಾಜ್ಯ ಸರ್ಕಾರ 15% ಪಾವತಿಸಬೇಕಾಗಿದೆ, ಅದನ್ನು ಅನುಸರಿಸಲು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಸರ್ಕಾರಗಳಿಗೆ ಹೇಳಿ” ಎಂದಿದ್ದಾರೆ.

ಇದಕ್ಕೆ ಉತ್ತರವಾಗಿ ಟ್ವಿಟ್ಟರ್ ಬಳಕೆದಾರರೊಬ್ಬರು, ಯಾವುದೆ ಟಿಕೆಟುಗಳು ಮಾರುತ್ತಿಲ್ಲ ಎಂದು ಹೇಳುತ್ತಿರುವ ಸಂಬಿತ್ ಪಾತ್ರ, ಇದೇನು? ಎಂದು ಮೇ 02 ರಂದು ಪಡೆದ ರೂ. 740 ರ ರೈಲ್ವೇ ಟಿಕೆಟೊಂದರ ಚಿತ್ರವನ್ನು ಹಾಕಿದ್ದಾರೆ.


ಇದನ್ನೂ ಓದಿ:ಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ


ವಿಡಿಯೊ ನೋಡಿ: ಮರೆಯಲೆ ಬಾರದ ಈ ಹಿಂದಿನ ಸುದ್ದಿಗಳು

ಸದ್ದು ಈ ಸುದ್ದಿಗಳೇನಾಗಿವೆ? – 03 may 2020

ಹೊಸ ಸುದ್ದಿಗಳು, ಮರೆಯಬಾರದ ಹಳೆಯ ಸುದ್ದಿಗಳು ಮತ್ತು ಮುಂದಾಗಬೇಕಾದ ಸುದ್ದಿಗಳು – ಇವುಗಳನ್ನೊಳಗೊಂಡ ಇಂದಿನ #ಸದ್ದು_ಈ_ಸುದ್ದಿಗಳೇನಾಗಿವೆ?

Posted by Naanu Gauri on Sunday, May 3, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...