Homeಅಂಕಣಗಳುಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಅಪಾರ ಸಾರಜನಕ ಒಳಗೊಂಡ ಈ ಹಸಿರು ಸೊಪ್ಪನ್ನು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-10

ಕೆಲವು ಗಿಡಗಳಿಗೆ ಅದೇನು ಶಕ್ತಿಯೋ ಕಾಣೆ. ಕತ್ತರಿಸಿದರೆ ಹೊಸ ಜೀವ ಪಡೆದು ಚಿಗುರುತ್ತವೆ. ಚಿಗುರು ಕಡ್ಡಿಗಳ ಈ ಈ ಜಾತಿಗೆ ಸೇರಿದ್ದು ಈ ಗ್ಲಿರಿಸೀಡಿಯಾ. ಇದನ್ನು ನಮ್ಮ ಜನ ಗೊಬ್ಬರದ ಗಿಡ ಎಂದೇ ಕರೆಯುವುದು ರೂಢಿ. ನಮ್ಮ ತೋಟದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ಇದರ ಸೊಪ್ಪು ಅಪಾರ ಸಾರಜನದ ನೊರೆ ಹಾಲಿನಿಂದ ಕೂಡಿದೆ. ನೆಲಕ್ಕೂ ಸಾರಜನಕ ಸ್ಥೀರಿಕರಿಸುತ್ತದೆ.

ನನಗೆ ಈ ಗ್ಲಿರಿಸೀಡಿಯಾದ ಹುಚ್ಚು ಹತ್ತಿದ ಆ ವರ್ಷ ನಾನು ಮಾಡಿದ್ದು ಹೀಗೆ. ಕೇವಲ ಒಂದು ಅಡಿ ಆಳದ ಟ್ರೆಂಚ್‌ ತೆಗೆದು ಅದರೊಳಗೆ ಕಸಕಡ್ಡಿ ತುಂಬಿ ನೀರು ಬಿಟ್ಟು ಮುಚ್ಚಿ ಒಂದು ತಿಂಗಳು ಬಿಟ್ಟು ಆ ಟ್ರೆಂಚ್‌ಗೆ ಅಡಿಗೊಂದರಂತೆ ಎರಡು ಅಡಿ ಉದ್ದದ ಈ ಗ್ಲಿರಿಸಿಡಿಯಾ ಕಡ್ಡಿಗಳನ್ನು ಊರಿದೆ. ಒಂದೂ ಹುಸಿಹೋಗದಂತೆ ಹಸಿರು ದೀಪದಂತೆ ಹೊತ್ತಿಕೊಂಡವು. ಹದಿನೈದು ವರ್ಷವಾಯಿತು ಇನ್ನೂ ಉರಿಯುತ್ತಲೇ ಇವೆ. ಘನವಾದ ಸೊಪ್ಪು ಕೊಡುತ್ತಲೇ ಇವೆ.

ನೀವೇನಾದರೂ ಒಂದೆರಡು ವರ್ಷಗಳ ನಂತರ ಇವುಗಳನ್ನು ಕತ್ತರಿಸಿ ಒಪ್ಪವಾಗಿ ಇಟ್ಟುಕೊಳ್ಳದಿದ್ದರೆ, ನೀವು ನಿಯಂತ್ರಿಸಲಾಗದಂತೆ ಕೊಬ್ಬಿ ಬೆಳೆಯುತ್ತವೆ. ಇವಕ್ಕೆ ಗೊಬ್ಬರ ಗೋಡು ಏನೂ ಬೇಡ, ಕಾರಣ ಇವೇ ಗೊಬ್ಬರದ ಗಿಡಗಳು. ಬಿಸಿಲುಂಡು ವಾತಾವರಣದ ಗಾಳಿಯಲ್ಲಿನ ಅಪಾರ ಸಾರಜನಕವನ್ನು ಹಸಿರು ಎಲೆಗಳಾಗಿಸುವ ಶಕ್ತಿ ಇವಕ್ಕಿದೆ. ಗ್ಲಿರಿಸೀಡಿಯಾವನ್ನು ಕತ್ತರಿಸುವುದು ಅಷ್ಟು ಕಷ್ಟವಲ್ಲ, ಮುಳ್ಳಿಲ್ಲ , ತೀರಾ ಒರಟಲ್ಲ, ಅಲರ್ಜಿಯಿಲ್ಲ. ವರ್ಷಕ್ಕೆ ಎರಡು ಬಾರಿ ಕತ್ತಿರಿಸುತ್ತಿದ್ದರೆ ಒಳ್ಳೆಯ ಸೊಪ್ಪು ಸಿಗುತ್ತದೆ, ನಿಯಂತ್ರಣದಲ್ಲೂ ಇರುತ್ತದೆ. ಸೊಪ್ಪು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ. ಒಣಗಿದರೆ ಹೆಚ್ಚು ನಷ್ಟ.

ಈ ಸೊಪ್ಪನ್ನು ಸ್ವಲ್ಪ ಬಾಡಿಸಿ ದನಕರುಗಳಿಗೆ ಮೇವಾಗಿಯೂ ಬಳಸಬಹುದು. ಪೂರ್ಣ ಹಸಿಯ ಸೊಪ್ಪನ್ನು ಅದರ ಕಟು ವಾಸನೆಯ ಕಾರಣ ಕೆಲವು ದನಕರುಗಳು ತಿನ್ನಲು ನಿರಾಕರಿಸುವ ಸಾಧ್ಯತೆ ಇರುತ್ತದೆ. ಆಡುಕುರಿಗಳು ಮಾತ್ರ ಯಾವ ಭಿನ್ನಭೇದವೂ ಇಲ್ಲದೆ ಈ ಸೊಪ್ಪನ್ನು ಮೆಲ್ಲುತ್ತವೆ. ಚೆನ್ನಾಗಿ ಕೊಬ್ಬುತ್ತವೆ. ಬುದ್ದಿವಂತ ರೈತರು ಈ ಹಸಿ ಸೊಪ್ಪನ್ನು ಇತರ ಮೇವಿನೊಂದಿಗೆ ಬೆರೆಸಿ ಹಾಲು ಕೊಡುವ ರಾಸುಗಳು ತಿನ್ನುವಂತೆ ಮಾಡಿ ಹೆಚ್ಚು ಹಾಲು ಹಿಂಡಿ ಲಾಭ ಮಾಡಿಕೊಂಡವರಿದ್ದಾರೆ.

ಸಾವಯವ ಕೃಷಿ ಚಳುವಳಿಯ ಆರಂಭಿಕ ಸಂದರ್ಭದಲ್ಲಿ ಇದರ ಜನಪ್ರಿಯತೆ ಹೆಚ್ಚಾದಾಗ ಕೆಲವರು “ಇದು ನೆಲದ ಒರವು ತಿನ್ನುತ್ತದೆ” ಎಂಬ ತಕರಾರು ತೆಗೆದದ್ದು ಉಂಟು. ಆದರೆ ಇದರ ಬಗೆಗೆ ತಿಳಿಯುತ್ತಾ ಹೋದಂತೆ, ಇದು ನೆಲದ ಒರವು ತಿನ್ನುವುದಕ್ಕೆ ಬದಲಾಗಿ ನೆಲಕ್ಕೆ ಹೆಚ್ಚು ಒರವನ್ನು ಒದಗಿಸುತ್ತದೆ ಎಂಬುದು ರೈತರ ಅರಿವಿಗೆ ಬಂತು. ಆಗ ಬಹುತೇಕ ಸಾವಯವ ತೋಟಗಳಲ್ಲಿ ಇದು ಬೇಲಿಯಲ್ಲಷ್ಟೇ ಅಲ್ಲ ತೋಟದ ಬದುಗಳಲ್ಲೂ ಸ್ಥಾನ ಪಡೆಯಿತು.

ಈಗಲೂ ಕೆಲವು ರೈತರು ಇದರ ಸಹವಾಸ ಕಷ್ಟ ಎನ್ನುತ್ತಾರೆ. ಇದಕ್ಕೆ ಕಾರಣವಿದೆ. ಈ ಗ್ಲಿರಿಸೀಡಿಯಾವನ್ನು ಹೆಮ್ಮರವಾಗಲು ಬಿಡಬಾರದು. ಬಿಟ್ಟರೆ ಕೆಟ್ಟೆವು ಎಂದೇ ಅರ್ಥ. ಏಕೆಂದರೆ ಅದು ಸೂರ್ಯ ಸ್ನೇಹಿ ಗಿಡ, ಸೂರ್ಯನತ್ತಲೇ ಅದರ ಚಿತ್ತ. ಅದನ್ನು ಬುಡಕ್ಕೆ ಕತ್ತರಿಸುತ್ತಲೇ ಇರಬೇಕಾಗುತ್ತದೆ. ಕತ್ತರಿಸಿದಷ್ಟೂ ನಮಗೆ ಲಾಭವಾಗುತ್ತಲೇ ಇರುತ್ತದೆ. ಕುರಿಗೊಬ್ಬರ, ಕೋಳಿಗೊಬ್ಬರಕ್ಕೆ ಸಿಕ್ಕಾಪಟ್ಟೆ ದುಡ್ಡು ಸುರಿಯುವವರು ಏನು ಬೇಕಾದರೂ ಹೇಳುತ್ತಾರೆ. ನಿಜವಾದ ಕೃಷಿಕರು ತಮ್ಮ ಪರವಾಗಿ ಹಗಲು ರಾತ್ರಿ ದುಡಿಯುವ ಗಿಡಮರಗಳನ್ನು, ಹುಲ್ಲು ಸೊಪ್ಪು ತಿಂದು ಹಾಲು ಮತ್ತು ಗೊಬ್ಬರ ಕೊಡುವ ದನಕರು, ಕುರಿ ಆಡುಗಳನ್ನು  ನೆಚ್ಚಲೇಬೇಕಾಗುತ್ತದೆ.

ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...