Homeಅಂಕಣಗಳುಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಅಪಾರ ಸಾರಜನಕ ಒಳಗೊಂಡ ಈ ಹಸಿರು ಸೊಪ್ಪನ್ನು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-10

ಕೆಲವು ಗಿಡಗಳಿಗೆ ಅದೇನು ಶಕ್ತಿಯೋ ಕಾಣೆ. ಕತ್ತರಿಸಿದರೆ ಹೊಸ ಜೀವ ಪಡೆದು ಚಿಗುರುತ್ತವೆ. ಚಿಗುರು ಕಡ್ಡಿಗಳ ಈ ಈ ಜಾತಿಗೆ ಸೇರಿದ್ದು ಈ ಗ್ಲಿರಿಸೀಡಿಯಾ. ಇದನ್ನು ನಮ್ಮ ಜನ ಗೊಬ್ಬರದ ಗಿಡ ಎಂದೇ ಕರೆಯುವುದು ರೂಢಿ. ನಮ್ಮ ತೋಟದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ಇದರ ಸೊಪ್ಪು ಅಪಾರ ಸಾರಜನದ ನೊರೆ ಹಾಲಿನಿಂದ ಕೂಡಿದೆ. ನೆಲಕ್ಕೂ ಸಾರಜನಕ ಸ್ಥೀರಿಕರಿಸುತ್ತದೆ.

ನನಗೆ ಈ ಗ್ಲಿರಿಸೀಡಿಯಾದ ಹುಚ್ಚು ಹತ್ತಿದ ಆ ವರ್ಷ ನಾನು ಮಾಡಿದ್ದು ಹೀಗೆ. ಕೇವಲ ಒಂದು ಅಡಿ ಆಳದ ಟ್ರೆಂಚ್‌ ತೆಗೆದು ಅದರೊಳಗೆ ಕಸಕಡ್ಡಿ ತುಂಬಿ ನೀರು ಬಿಟ್ಟು ಮುಚ್ಚಿ ಒಂದು ತಿಂಗಳು ಬಿಟ್ಟು ಆ ಟ್ರೆಂಚ್‌ಗೆ ಅಡಿಗೊಂದರಂತೆ ಎರಡು ಅಡಿ ಉದ್ದದ ಈ ಗ್ಲಿರಿಸಿಡಿಯಾ ಕಡ್ಡಿಗಳನ್ನು ಊರಿದೆ. ಒಂದೂ ಹುಸಿಹೋಗದಂತೆ ಹಸಿರು ದೀಪದಂತೆ ಹೊತ್ತಿಕೊಂಡವು. ಹದಿನೈದು ವರ್ಷವಾಯಿತು ಇನ್ನೂ ಉರಿಯುತ್ತಲೇ ಇವೆ. ಘನವಾದ ಸೊಪ್ಪು ಕೊಡುತ್ತಲೇ ಇವೆ.

ನೀವೇನಾದರೂ ಒಂದೆರಡು ವರ್ಷಗಳ ನಂತರ ಇವುಗಳನ್ನು ಕತ್ತರಿಸಿ ಒಪ್ಪವಾಗಿ ಇಟ್ಟುಕೊಳ್ಳದಿದ್ದರೆ, ನೀವು ನಿಯಂತ್ರಿಸಲಾಗದಂತೆ ಕೊಬ್ಬಿ ಬೆಳೆಯುತ್ತವೆ. ಇವಕ್ಕೆ ಗೊಬ್ಬರ ಗೋಡು ಏನೂ ಬೇಡ, ಕಾರಣ ಇವೇ ಗೊಬ್ಬರದ ಗಿಡಗಳು. ಬಿಸಿಲುಂಡು ವಾತಾವರಣದ ಗಾಳಿಯಲ್ಲಿನ ಅಪಾರ ಸಾರಜನಕವನ್ನು ಹಸಿರು ಎಲೆಗಳಾಗಿಸುವ ಶಕ್ತಿ ಇವಕ್ಕಿದೆ. ಗ್ಲಿರಿಸೀಡಿಯಾವನ್ನು ಕತ್ತರಿಸುವುದು ಅಷ್ಟು ಕಷ್ಟವಲ್ಲ, ಮುಳ್ಳಿಲ್ಲ , ತೀರಾ ಒರಟಲ್ಲ, ಅಲರ್ಜಿಯಿಲ್ಲ. ವರ್ಷಕ್ಕೆ ಎರಡು ಬಾರಿ ಕತ್ತಿರಿಸುತ್ತಿದ್ದರೆ ಒಳ್ಳೆಯ ಸೊಪ್ಪು ಸಿಗುತ್ತದೆ, ನಿಯಂತ್ರಣದಲ್ಲೂ ಇರುತ್ತದೆ. ಸೊಪ್ಪು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ. ಒಣಗಿದರೆ ಹೆಚ್ಚು ನಷ್ಟ.

ಈ ಸೊಪ್ಪನ್ನು ಸ್ವಲ್ಪ ಬಾಡಿಸಿ ದನಕರುಗಳಿಗೆ ಮೇವಾಗಿಯೂ ಬಳಸಬಹುದು. ಪೂರ್ಣ ಹಸಿಯ ಸೊಪ್ಪನ್ನು ಅದರ ಕಟು ವಾಸನೆಯ ಕಾರಣ ಕೆಲವು ದನಕರುಗಳು ತಿನ್ನಲು ನಿರಾಕರಿಸುವ ಸಾಧ್ಯತೆ ಇರುತ್ತದೆ. ಆಡುಕುರಿಗಳು ಮಾತ್ರ ಯಾವ ಭಿನ್ನಭೇದವೂ ಇಲ್ಲದೆ ಈ ಸೊಪ್ಪನ್ನು ಮೆಲ್ಲುತ್ತವೆ. ಚೆನ್ನಾಗಿ ಕೊಬ್ಬುತ್ತವೆ. ಬುದ್ದಿವಂತ ರೈತರು ಈ ಹಸಿ ಸೊಪ್ಪನ್ನು ಇತರ ಮೇವಿನೊಂದಿಗೆ ಬೆರೆಸಿ ಹಾಲು ಕೊಡುವ ರಾಸುಗಳು ತಿನ್ನುವಂತೆ ಮಾಡಿ ಹೆಚ್ಚು ಹಾಲು ಹಿಂಡಿ ಲಾಭ ಮಾಡಿಕೊಂಡವರಿದ್ದಾರೆ.

ಸಾವಯವ ಕೃಷಿ ಚಳುವಳಿಯ ಆರಂಭಿಕ ಸಂದರ್ಭದಲ್ಲಿ ಇದರ ಜನಪ್ರಿಯತೆ ಹೆಚ್ಚಾದಾಗ ಕೆಲವರು “ಇದು ನೆಲದ ಒರವು ತಿನ್ನುತ್ತದೆ” ಎಂಬ ತಕರಾರು ತೆಗೆದದ್ದು ಉಂಟು. ಆದರೆ ಇದರ ಬಗೆಗೆ ತಿಳಿಯುತ್ತಾ ಹೋದಂತೆ, ಇದು ನೆಲದ ಒರವು ತಿನ್ನುವುದಕ್ಕೆ ಬದಲಾಗಿ ನೆಲಕ್ಕೆ ಹೆಚ್ಚು ಒರವನ್ನು ಒದಗಿಸುತ್ತದೆ ಎಂಬುದು ರೈತರ ಅರಿವಿಗೆ ಬಂತು. ಆಗ ಬಹುತೇಕ ಸಾವಯವ ತೋಟಗಳಲ್ಲಿ ಇದು ಬೇಲಿಯಲ್ಲಷ್ಟೇ ಅಲ್ಲ ತೋಟದ ಬದುಗಳಲ್ಲೂ ಸ್ಥಾನ ಪಡೆಯಿತು.

ಈಗಲೂ ಕೆಲವು ರೈತರು ಇದರ ಸಹವಾಸ ಕಷ್ಟ ಎನ್ನುತ್ತಾರೆ. ಇದಕ್ಕೆ ಕಾರಣವಿದೆ. ಈ ಗ್ಲಿರಿಸೀಡಿಯಾವನ್ನು ಹೆಮ್ಮರವಾಗಲು ಬಿಡಬಾರದು. ಬಿಟ್ಟರೆ ಕೆಟ್ಟೆವು ಎಂದೇ ಅರ್ಥ. ಏಕೆಂದರೆ ಅದು ಸೂರ್ಯ ಸ್ನೇಹಿ ಗಿಡ, ಸೂರ್ಯನತ್ತಲೇ ಅದರ ಚಿತ್ತ. ಅದನ್ನು ಬುಡಕ್ಕೆ ಕತ್ತರಿಸುತ್ತಲೇ ಇರಬೇಕಾಗುತ್ತದೆ. ಕತ್ತರಿಸಿದಷ್ಟೂ ನಮಗೆ ಲಾಭವಾಗುತ್ತಲೇ ಇರುತ್ತದೆ. ಕುರಿಗೊಬ್ಬರ, ಕೋಳಿಗೊಬ್ಬರಕ್ಕೆ ಸಿಕ್ಕಾಪಟ್ಟೆ ದುಡ್ಡು ಸುರಿಯುವವರು ಏನು ಬೇಕಾದರೂ ಹೇಳುತ್ತಾರೆ. ನಿಜವಾದ ಕೃಷಿಕರು ತಮ್ಮ ಪರವಾಗಿ ಹಗಲು ರಾತ್ರಿ ದುಡಿಯುವ ಗಿಡಮರಗಳನ್ನು, ಹುಲ್ಲು ಸೊಪ್ಪು ತಿಂದು ಹಾಲು ಮತ್ತು ಗೊಬ್ಬರ ಕೊಡುವ ದನಕರು, ಕುರಿ ಆಡುಗಳನ್ನು  ನೆಚ್ಚಲೇಬೇಕಾಗುತ್ತದೆ.

ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...