Homeಅಂಕಣಗಳುಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಅಪಾರ ಸಾರಜನಕ ಒಳಗೊಂಡ ಈ ಹಸಿರು ಸೊಪ್ಪನ್ನು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-10

ಕೆಲವು ಗಿಡಗಳಿಗೆ ಅದೇನು ಶಕ್ತಿಯೋ ಕಾಣೆ. ಕತ್ತರಿಸಿದರೆ ಹೊಸ ಜೀವ ಪಡೆದು ಚಿಗುರುತ್ತವೆ. ಚಿಗುರು ಕಡ್ಡಿಗಳ ಈ ಈ ಜಾತಿಗೆ ಸೇರಿದ್ದು ಈ ಗ್ಲಿರಿಸೀಡಿಯಾ. ಇದನ್ನು ನಮ್ಮ ಜನ ಗೊಬ್ಬರದ ಗಿಡ ಎಂದೇ ಕರೆಯುವುದು ರೂಢಿ. ನಮ್ಮ ತೋಟದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ಇದರ ಸೊಪ್ಪು ಅಪಾರ ಸಾರಜನದ ನೊರೆ ಹಾಲಿನಿಂದ ಕೂಡಿದೆ. ನೆಲಕ್ಕೂ ಸಾರಜನಕ ಸ್ಥೀರಿಕರಿಸುತ್ತದೆ.

ನನಗೆ ಈ ಗ್ಲಿರಿಸೀಡಿಯಾದ ಹುಚ್ಚು ಹತ್ತಿದ ಆ ವರ್ಷ ನಾನು ಮಾಡಿದ್ದು ಹೀಗೆ. ಕೇವಲ ಒಂದು ಅಡಿ ಆಳದ ಟ್ರೆಂಚ್‌ ತೆಗೆದು ಅದರೊಳಗೆ ಕಸಕಡ್ಡಿ ತುಂಬಿ ನೀರು ಬಿಟ್ಟು ಮುಚ್ಚಿ ಒಂದು ತಿಂಗಳು ಬಿಟ್ಟು ಆ ಟ್ರೆಂಚ್‌ಗೆ ಅಡಿಗೊಂದರಂತೆ ಎರಡು ಅಡಿ ಉದ್ದದ ಈ ಗ್ಲಿರಿಸಿಡಿಯಾ ಕಡ್ಡಿಗಳನ್ನು ಊರಿದೆ. ಒಂದೂ ಹುಸಿಹೋಗದಂತೆ ಹಸಿರು ದೀಪದಂತೆ ಹೊತ್ತಿಕೊಂಡವು. ಹದಿನೈದು ವರ್ಷವಾಯಿತು ಇನ್ನೂ ಉರಿಯುತ್ತಲೇ ಇವೆ. ಘನವಾದ ಸೊಪ್ಪು ಕೊಡುತ್ತಲೇ ಇವೆ.

ನೀವೇನಾದರೂ ಒಂದೆರಡು ವರ್ಷಗಳ ನಂತರ ಇವುಗಳನ್ನು ಕತ್ತರಿಸಿ ಒಪ್ಪವಾಗಿ ಇಟ್ಟುಕೊಳ್ಳದಿದ್ದರೆ, ನೀವು ನಿಯಂತ್ರಿಸಲಾಗದಂತೆ ಕೊಬ್ಬಿ ಬೆಳೆಯುತ್ತವೆ. ಇವಕ್ಕೆ ಗೊಬ್ಬರ ಗೋಡು ಏನೂ ಬೇಡ, ಕಾರಣ ಇವೇ ಗೊಬ್ಬರದ ಗಿಡಗಳು. ಬಿಸಿಲುಂಡು ವಾತಾವರಣದ ಗಾಳಿಯಲ್ಲಿನ ಅಪಾರ ಸಾರಜನಕವನ್ನು ಹಸಿರು ಎಲೆಗಳಾಗಿಸುವ ಶಕ್ತಿ ಇವಕ್ಕಿದೆ. ಗ್ಲಿರಿಸೀಡಿಯಾವನ್ನು ಕತ್ತರಿಸುವುದು ಅಷ್ಟು ಕಷ್ಟವಲ್ಲ, ಮುಳ್ಳಿಲ್ಲ , ತೀರಾ ಒರಟಲ್ಲ, ಅಲರ್ಜಿಯಿಲ್ಲ. ವರ್ಷಕ್ಕೆ ಎರಡು ಬಾರಿ ಕತ್ತಿರಿಸುತ್ತಿದ್ದರೆ ಒಳ್ಳೆಯ ಸೊಪ್ಪು ಸಿಗುತ್ತದೆ, ನಿಯಂತ್ರಣದಲ್ಲೂ ಇರುತ್ತದೆ. ಸೊಪ್ಪು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ. ಒಣಗಿದರೆ ಹೆಚ್ಚು ನಷ್ಟ.

ಈ ಸೊಪ್ಪನ್ನು ಸ್ವಲ್ಪ ಬಾಡಿಸಿ ದನಕರುಗಳಿಗೆ ಮೇವಾಗಿಯೂ ಬಳಸಬಹುದು. ಪೂರ್ಣ ಹಸಿಯ ಸೊಪ್ಪನ್ನು ಅದರ ಕಟು ವಾಸನೆಯ ಕಾರಣ ಕೆಲವು ದನಕರುಗಳು ತಿನ್ನಲು ನಿರಾಕರಿಸುವ ಸಾಧ್ಯತೆ ಇರುತ್ತದೆ. ಆಡುಕುರಿಗಳು ಮಾತ್ರ ಯಾವ ಭಿನ್ನಭೇದವೂ ಇಲ್ಲದೆ ಈ ಸೊಪ್ಪನ್ನು ಮೆಲ್ಲುತ್ತವೆ. ಚೆನ್ನಾಗಿ ಕೊಬ್ಬುತ್ತವೆ. ಬುದ್ದಿವಂತ ರೈತರು ಈ ಹಸಿ ಸೊಪ್ಪನ್ನು ಇತರ ಮೇವಿನೊಂದಿಗೆ ಬೆರೆಸಿ ಹಾಲು ಕೊಡುವ ರಾಸುಗಳು ತಿನ್ನುವಂತೆ ಮಾಡಿ ಹೆಚ್ಚು ಹಾಲು ಹಿಂಡಿ ಲಾಭ ಮಾಡಿಕೊಂಡವರಿದ್ದಾರೆ.

ಸಾವಯವ ಕೃಷಿ ಚಳುವಳಿಯ ಆರಂಭಿಕ ಸಂದರ್ಭದಲ್ಲಿ ಇದರ ಜನಪ್ರಿಯತೆ ಹೆಚ್ಚಾದಾಗ ಕೆಲವರು “ಇದು ನೆಲದ ಒರವು ತಿನ್ನುತ್ತದೆ” ಎಂಬ ತಕರಾರು ತೆಗೆದದ್ದು ಉಂಟು. ಆದರೆ ಇದರ ಬಗೆಗೆ ತಿಳಿಯುತ್ತಾ ಹೋದಂತೆ, ಇದು ನೆಲದ ಒರವು ತಿನ್ನುವುದಕ್ಕೆ ಬದಲಾಗಿ ನೆಲಕ್ಕೆ ಹೆಚ್ಚು ಒರವನ್ನು ಒದಗಿಸುತ್ತದೆ ಎಂಬುದು ರೈತರ ಅರಿವಿಗೆ ಬಂತು. ಆಗ ಬಹುತೇಕ ಸಾವಯವ ತೋಟಗಳಲ್ಲಿ ಇದು ಬೇಲಿಯಲ್ಲಷ್ಟೇ ಅಲ್ಲ ತೋಟದ ಬದುಗಳಲ್ಲೂ ಸ್ಥಾನ ಪಡೆಯಿತು.

ಈಗಲೂ ಕೆಲವು ರೈತರು ಇದರ ಸಹವಾಸ ಕಷ್ಟ ಎನ್ನುತ್ತಾರೆ. ಇದಕ್ಕೆ ಕಾರಣವಿದೆ. ಈ ಗ್ಲಿರಿಸೀಡಿಯಾವನ್ನು ಹೆಮ್ಮರವಾಗಲು ಬಿಡಬಾರದು. ಬಿಟ್ಟರೆ ಕೆಟ್ಟೆವು ಎಂದೇ ಅರ್ಥ. ಏಕೆಂದರೆ ಅದು ಸೂರ್ಯ ಸ್ನೇಹಿ ಗಿಡ, ಸೂರ್ಯನತ್ತಲೇ ಅದರ ಚಿತ್ತ. ಅದನ್ನು ಬುಡಕ್ಕೆ ಕತ್ತರಿಸುತ್ತಲೇ ಇರಬೇಕಾಗುತ್ತದೆ. ಕತ್ತರಿಸಿದಷ್ಟೂ ನಮಗೆ ಲಾಭವಾಗುತ್ತಲೇ ಇರುತ್ತದೆ. ಕುರಿಗೊಬ್ಬರ, ಕೋಳಿಗೊಬ್ಬರಕ್ಕೆ ಸಿಕ್ಕಾಪಟ್ಟೆ ದುಡ್ಡು ಸುರಿಯುವವರು ಏನು ಬೇಕಾದರೂ ಹೇಳುತ್ತಾರೆ. ನಿಜವಾದ ಕೃಷಿಕರು ತಮ್ಮ ಪರವಾಗಿ ಹಗಲು ರಾತ್ರಿ ದುಡಿಯುವ ಗಿಡಮರಗಳನ್ನು, ಹುಲ್ಲು ಸೊಪ್ಪು ತಿಂದು ಹಾಲು ಮತ್ತು ಗೊಬ್ಬರ ಕೊಡುವ ದನಕರು, ಕುರಿ ಆಡುಗಳನ್ನು  ನೆಚ್ಚಲೇಬೇಕಾಗುತ್ತದೆ.

ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...