Homeಅಂಕಣಗಳುಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಅಪಾರ ಸಾರಜನಕ ಒಳಗೊಂಡ ಈ ಹಸಿರು ಸೊಪ್ಪನ್ನು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-10

ಕೆಲವು ಗಿಡಗಳಿಗೆ ಅದೇನು ಶಕ್ತಿಯೋ ಕಾಣೆ. ಕತ್ತರಿಸಿದರೆ ಹೊಸ ಜೀವ ಪಡೆದು ಚಿಗುರುತ್ತವೆ. ಚಿಗುರು ಕಡ್ಡಿಗಳ ಈ ಈ ಜಾತಿಗೆ ಸೇರಿದ್ದು ಈ ಗ್ಲಿರಿಸೀಡಿಯಾ. ಇದನ್ನು ನಮ್ಮ ಜನ ಗೊಬ್ಬರದ ಗಿಡ ಎಂದೇ ಕರೆಯುವುದು ರೂಢಿ. ನಮ್ಮ ತೋಟದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ಇದರ ಸೊಪ್ಪು ಅಪಾರ ಸಾರಜನದ ನೊರೆ ಹಾಲಿನಿಂದ ಕೂಡಿದೆ. ನೆಲಕ್ಕೂ ಸಾರಜನಕ ಸ್ಥೀರಿಕರಿಸುತ್ತದೆ.

ನನಗೆ ಈ ಗ್ಲಿರಿಸೀಡಿಯಾದ ಹುಚ್ಚು ಹತ್ತಿದ ಆ ವರ್ಷ ನಾನು ಮಾಡಿದ್ದು ಹೀಗೆ. ಕೇವಲ ಒಂದು ಅಡಿ ಆಳದ ಟ್ರೆಂಚ್‌ ತೆಗೆದು ಅದರೊಳಗೆ ಕಸಕಡ್ಡಿ ತುಂಬಿ ನೀರು ಬಿಟ್ಟು ಮುಚ್ಚಿ ಒಂದು ತಿಂಗಳು ಬಿಟ್ಟು ಆ ಟ್ರೆಂಚ್‌ಗೆ ಅಡಿಗೊಂದರಂತೆ ಎರಡು ಅಡಿ ಉದ್ದದ ಈ ಗ್ಲಿರಿಸಿಡಿಯಾ ಕಡ್ಡಿಗಳನ್ನು ಊರಿದೆ. ಒಂದೂ ಹುಸಿಹೋಗದಂತೆ ಹಸಿರು ದೀಪದಂತೆ ಹೊತ್ತಿಕೊಂಡವು. ಹದಿನೈದು ವರ್ಷವಾಯಿತು ಇನ್ನೂ ಉರಿಯುತ್ತಲೇ ಇವೆ. ಘನವಾದ ಸೊಪ್ಪು ಕೊಡುತ್ತಲೇ ಇವೆ.

ನೀವೇನಾದರೂ ಒಂದೆರಡು ವರ್ಷಗಳ ನಂತರ ಇವುಗಳನ್ನು ಕತ್ತರಿಸಿ ಒಪ್ಪವಾಗಿ ಇಟ್ಟುಕೊಳ್ಳದಿದ್ದರೆ, ನೀವು ನಿಯಂತ್ರಿಸಲಾಗದಂತೆ ಕೊಬ್ಬಿ ಬೆಳೆಯುತ್ತವೆ. ಇವಕ್ಕೆ ಗೊಬ್ಬರ ಗೋಡು ಏನೂ ಬೇಡ, ಕಾರಣ ಇವೇ ಗೊಬ್ಬರದ ಗಿಡಗಳು. ಬಿಸಿಲುಂಡು ವಾತಾವರಣದ ಗಾಳಿಯಲ್ಲಿನ ಅಪಾರ ಸಾರಜನಕವನ್ನು ಹಸಿರು ಎಲೆಗಳಾಗಿಸುವ ಶಕ್ತಿ ಇವಕ್ಕಿದೆ. ಗ್ಲಿರಿಸೀಡಿಯಾವನ್ನು ಕತ್ತರಿಸುವುದು ಅಷ್ಟು ಕಷ್ಟವಲ್ಲ, ಮುಳ್ಳಿಲ್ಲ , ತೀರಾ ಒರಟಲ್ಲ, ಅಲರ್ಜಿಯಿಲ್ಲ. ವರ್ಷಕ್ಕೆ ಎರಡು ಬಾರಿ ಕತ್ತಿರಿಸುತ್ತಿದ್ದರೆ ಒಳ್ಳೆಯ ಸೊಪ್ಪು ಸಿಗುತ್ತದೆ, ನಿಯಂತ್ರಣದಲ್ಲೂ ಇರುತ್ತದೆ. ಸೊಪ್ಪು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ. ಒಣಗಿದರೆ ಹೆಚ್ಚು ನಷ್ಟ.

ಈ ಸೊಪ್ಪನ್ನು ಸ್ವಲ್ಪ ಬಾಡಿಸಿ ದನಕರುಗಳಿಗೆ ಮೇವಾಗಿಯೂ ಬಳಸಬಹುದು. ಪೂರ್ಣ ಹಸಿಯ ಸೊಪ್ಪನ್ನು ಅದರ ಕಟು ವಾಸನೆಯ ಕಾರಣ ಕೆಲವು ದನಕರುಗಳು ತಿನ್ನಲು ನಿರಾಕರಿಸುವ ಸಾಧ್ಯತೆ ಇರುತ್ತದೆ. ಆಡುಕುರಿಗಳು ಮಾತ್ರ ಯಾವ ಭಿನ್ನಭೇದವೂ ಇಲ್ಲದೆ ಈ ಸೊಪ್ಪನ್ನು ಮೆಲ್ಲುತ್ತವೆ. ಚೆನ್ನಾಗಿ ಕೊಬ್ಬುತ್ತವೆ. ಬುದ್ದಿವಂತ ರೈತರು ಈ ಹಸಿ ಸೊಪ್ಪನ್ನು ಇತರ ಮೇವಿನೊಂದಿಗೆ ಬೆರೆಸಿ ಹಾಲು ಕೊಡುವ ರಾಸುಗಳು ತಿನ್ನುವಂತೆ ಮಾಡಿ ಹೆಚ್ಚು ಹಾಲು ಹಿಂಡಿ ಲಾಭ ಮಾಡಿಕೊಂಡವರಿದ್ದಾರೆ.

ಸಾವಯವ ಕೃಷಿ ಚಳುವಳಿಯ ಆರಂಭಿಕ ಸಂದರ್ಭದಲ್ಲಿ ಇದರ ಜನಪ್ರಿಯತೆ ಹೆಚ್ಚಾದಾಗ ಕೆಲವರು “ಇದು ನೆಲದ ಒರವು ತಿನ್ನುತ್ತದೆ” ಎಂಬ ತಕರಾರು ತೆಗೆದದ್ದು ಉಂಟು. ಆದರೆ ಇದರ ಬಗೆಗೆ ತಿಳಿಯುತ್ತಾ ಹೋದಂತೆ, ಇದು ನೆಲದ ಒರವು ತಿನ್ನುವುದಕ್ಕೆ ಬದಲಾಗಿ ನೆಲಕ್ಕೆ ಹೆಚ್ಚು ಒರವನ್ನು ಒದಗಿಸುತ್ತದೆ ಎಂಬುದು ರೈತರ ಅರಿವಿಗೆ ಬಂತು. ಆಗ ಬಹುತೇಕ ಸಾವಯವ ತೋಟಗಳಲ್ಲಿ ಇದು ಬೇಲಿಯಲ್ಲಷ್ಟೇ ಅಲ್ಲ ತೋಟದ ಬದುಗಳಲ್ಲೂ ಸ್ಥಾನ ಪಡೆಯಿತು.

ಈಗಲೂ ಕೆಲವು ರೈತರು ಇದರ ಸಹವಾಸ ಕಷ್ಟ ಎನ್ನುತ್ತಾರೆ. ಇದಕ್ಕೆ ಕಾರಣವಿದೆ. ಈ ಗ್ಲಿರಿಸೀಡಿಯಾವನ್ನು ಹೆಮ್ಮರವಾಗಲು ಬಿಡಬಾರದು. ಬಿಟ್ಟರೆ ಕೆಟ್ಟೆವು ಎಂದೇ ಅರ್ಥ. ಏಕೆಂದರೆ ಅದು ಸೂರ್ಯ ಸ್ನೇಹಿ ಗಿಡ, ಸೂರ್ಯನತ್ತಲೇ ಅದರ ಚಿತ್ತ. ಅದನ್ನು ಬುಡಕ್ಕೆ ಕತ್ತರಿಸುತ್ತಲೇ ಇರಬೇಕಾಗುತ್ತದೆ. ಕತ್ತರಿಸಿದಷ್ಟೂ ನಮಗೆ ಲಾಭವಾಗುತ್ತಲೇ ಇರುತ್ತದೆ. ಕುರಿಗೊಬ್ಬರ, ಕೋಳಿಗೊಬ್ಬರಕ್ಕೆ ಸಿಕ್ಕಾಪಟ್ಟೆ ದುಡ್ಡು ಸುರಿಯುವವರು ಏನು ಬೇಕಾದರೂ ಹೇಳುತ್ತಾರೆ. ನಿಜವಾದ ಕೃಷಿಕರು ತಮ್ಮ ಪರವಾಗಿ ಹಗಲು ರಾತ್ರಿ ದುಡಿಯುವ ಗಿಡಮರಗಳನ್ನು, ಹುಲ್ಲು ಸೊಪ್ಪು ತಿಂದು ಹಾಲು ಮತ್ತು ಗೊಬ್ಬರ ಕೊಡುವ ದನಕರು, ಕುರಿ ಆಡುಗಳನ್ನು  ನೆಚ್ಚಲೇಬೇಕಾಗುತ್ತದೆ.

ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...