Homeಅಂಕಣಗಳುಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಅಪಾರ ಸಾರಜನಕ ಒಳಗೊಂಡ ಈ ಹಸಿರು ಸೊಪ್ಪನ್ನು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-10

ಕೆಲವು ಗಿಡಗಳಿಗೆ ಅದೇನು ಶಕ್ತಿಯೋ ಕಾಣೆ. ಕತ್ತರಿಸಿದರೆ ಹೊಸ ಜೀವ ಪಡೆದು ಚಿಗುರುತ್ತವೆ. ಚಿಗುರು ಕಡ್ಡಿಗಳ ಈ ಈ ಜಾತಿಗೆ ಸೇರಿದ್ದು ಈ ಗ್ಲಿರಿಸೀಡಿಯಾ. ಇದನ್ನು ನಮ್ಮ ಜನ ಗೊಬ್ಬರದ ಗಿಡ ಎಂದೇ ಕರೆಯುವುದು ರೂಢಿ. ನಮ್ಮ ತೋಟದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ಇದರ ಸೊಪ್ಪು ಅಪಾರ ಸಾರಜನದ ನೊರೆ ಹಾಲಿನಿಂದ ಕೂಡಿದೆ. ನೆಲಕ್ಕೂ ಸಾರಜನಕ ಸ್ಥೀರಿಕರಿಸುತ್ತದೆ.

ನನಗೆ ಈ ಗ್ಲಿರಿಸೀಡಿಯಾದ ಹುಚ್ಚು ಹತ್ತಿದ ಆ ವರ್ಷ ನಾನು ಮಾಡಿದ್ದು ಹೀಗೆ. ಕೇವಲ ಒಂದು ಅಡಿ ಆಳದ ಟ್ರೆಂಚ್‌ ತೆಗೆದು ಅದರೊಳಗೆ ಕಸಕಡ್ಡಿ ತುಂಬಿ ನೀರು ಬಿಟ್ಟು ಮುಚ್ಚಿ ಒಂದು ತಿಂಗಳು ಬಿಟ್ಟು ಆ ಟ್ರೆಂಚ್‌ಗೆ ಅಡಿಗೊಂದರಂತೆ ಎರಡು ಅಡಿ ಉದ್ದದ ಈ ಗ್ಲಿರಿಸಿಡಿಯಾ ಕಡ್ಡಿಗಳನ್ನು ಊರಿದೆ. ಒಂದೂ ಹುಸಿಹೋಗದಂತೆ ಹಸಿರು ದೀಪದಂತೆ ಹೊತ್ತಿಕೊಂಡವು. ಹದಿನೈದು ವರ್ಷವಾಯಿತು ಇನ್ನೂ ಉರಿಯುತ್ತಲೇ ಇವೆ. ಘನವಾದ ಸೊಪ್ಪು ಕೊಡುತ್ತಲೇ ಇವೆ.

ನೀವೇನಾದರೂ ಒಂದೆರಡು ವರ್ಷಗಳ ನಂತರ ಇವುಗಳನ್ನು ಕತ್ತರಿಸಿ ಒಪ್ಪವಾಗಿ ಇಟ್ಟುಕೊಳ್ಳದಿದ್ದರೆ, ನೀವು ನಿಯಂತ್ರಿಸಲಾಗದಂತೆ ಕೊಬ್ಬಿ ಬೆಳೆಯುತ್ತವೆ. ಇವಕ್ಕೆ ಗೊಬ್ಬರ ಗೋಡು ಏನೂ ಬೇಡ, ಕಾರಣ ಇವೇ ಗೊಬ್ಬರದ ಗಿಡಗಳು. ಬಿಸಿಲುಂಡು ವಾತಾವರಣದ ಗಾಳಿಯಲ್ಲಿನ ಅಪಾರ ಸಾರಜನಕವನ್ನು ಹಸಿರು ಎಲೆಗಳಾಗಿಸುವ ಶಕ್ತಿ ಇವಕ್ಕಿದೆ. ಗ್ಲಿರಿಸೀಡಿಯಾವನ್ನು ಕತ್ತರಿಸುವುದು ಅಷ್ಟು ಕಷ್ಟವಲ್ಲ, ಮುಳ್ಳಿಲ್ಲ , ತೀರಾ ಒರಟಲ್ಲ, ಅಲರ್ಜಿಯಿಲ್ಲ. ವರ್ಷಕ್ಕೆ ಎರಡು ಬಾರಿ ಕತ್ತಿರಿಸುತ್ತಿದ್ದರೆ ಒಳ್ಳೆಯ ಸೊಪ್ಪು ಸಿಗುತ್ತದೆ, ನಿಯಂತ್ರಣದಲ್ಲೂ ಇರುತ್ತದೆ. ಸೊಪ್ಪು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ. ಒಣಗಿದರೆ ಹೆಚ್ಚು ನಷ್ಟ.

ಈ ಸೊಪ್ಪನ್ನು ಸ್ವಲ್ಪ ಬಾಡಿಸಿ ದನಕರುಗಳಿಗೆ ಮೇವಾಗಿಯೂ ಬಳಸಬಹುದು. ಪೂರ್ಣ ಹಸಿಯ ಸೊಪ್ಪನ್ನು ಅದರ ಕಟು ವಾಸನೆಯ ಕಾರಣ ಕೆಲವು ದನಕರುಗಳು ತಿನ್ನಲು ನಿರಾಕರಿಸುವ ಸಾಧ್ಯತೆ ಇರುತ್ತದೆ. ಆಡುಕುರಿಗಳು ಮಾತ್ರ ಯಾವ ಭಿನ್ನಭೇದವೂ ಇಲ್ಲದೆ ಈ ಸೊಪ್ಪನ್ನು ಮೆಲ್ಲುತ್ತವೆ. ಚೆನ್ನಾಗಿ ಕೊಬ್ಬುತ್ತವೆ. ಬುದ್ದಿವಂತ ರೈತರು ಈ ಹಸಿ ಸೊಪ್ಪನ್ನು ಇತರ ಮೇವಿನೊಂದಿಗೆ ಬೆರೆಸಿ ಹಾಲು ಕೊಡುವ ರಾಸುಗಳು ತಿನ್ನುವಂತೆ ಮಾಡಿ ಹೆಚ್ಚು ಹಾಲು ಹಿಂಡಿ ಲಾಭ ಮಾಡಿಕೊಂಡವರಿದ್ದಾರೆ.

ಸಾವಯವ ಕೃಷಿ ಚಳುವಳಿಯ ಆರಂಭಿಕ ಸಂದರ್ಭದಲ್ಲಿ ಇದರ ಜನಪ್ರಿಯತೆ ಹೆಚ್ಚಾದಾಗ ಕೆಲವರು “ಇದು ನೆಲದ ಒರವು ತಿನ್ನುತ್ತದೆ” ಎಂಬ ತಕರಾರು ತೆಗೆದದ್ದು ಉಂಟು. ಆದರೆ ಇದರ ಬಗೆಗೆ ತಿಳಿಯುತ್ತಾ ಹೋದಂತೆ, ಇದು ನೆಲದ ಒರವು ತಿನ್ನುವುದಕ್ಕೆ ಬದಲಾಗಿ ನೆಲಕ್ಕೆ ಹೆಚ್ಚು ಒರವನ್ನು ಒದಗಿಸುತ್ತದೆ ಎಂಬುದು ರೈತರ ಅರಿವಿಗೆ ಬಂತು. ಆಗ ಬಹುತೇಕ ಸಾವಯವ ತೋಟಗಳಲ್ಲಿ ಇದು ಬೇಲಿಯಲ್ಲಷ್ಟೇ ಅಲ್ಲ ತೋಟದ ಬದುಗಳಲ್ಲೂ ಸ್ಥಾನ ಪಡೆಯಿತು.

ಈಗಲೂ ಕೆಲವು ರೈತರು ಇದರ ಸಹವಾಸ ಕಷ್ಟ ಎನ್ನುತ್ತಾರೆ. ಇದಕ್ಕೆ ಕಾರಣವಿದೆ. ಈ ಗ್ಲಿರಿಸೀಡಿಯಾವನ್ನು ಹೆಮ್ಮರವಾಗಲು ಬಿಡಬಾರದು. ಬಿಟ್ಟರೆ ಕೆಟ್ಟೆವು ಎಂದೇ ಅರ್ಥ. ಏಕೆಂದರೆ ಅದು ಸೂರ್ಯ ಸ್ನೇಹಿ ಗಿಡ, ಸೂರ್ಯನತ್ತಲೇ ಅದರ ಚಿತ್ತ. ಅದನ್ನು ಬುಡಕ್ಕೆ ಕತ್ತರಿಸುತ್ತಲೇ ಇರಬೇಕಾಗುತ್ತದೆ. ಕತ್ತರಿಸಿದಷ್ಟೂ ನಮಗೆ ಲಾಭವಾಗುತ್ತಲೇ ಇರುತ್ತದೆ. ಕುರಿಗೊಬ್ಬರ, ಕೋಳಿಗೊಬ್ಬರಕ್ಕೆ ಸಿಕ್ಕಾಪಟ್ಟೆ ದುಡ್ಡು ಸುರಿಯುವವರು ಏನು ಬೇಕಾದರೂ ಹೇಳುತ್ತಾರೆ. ನಿಜವಾದ ಕೃಷಿಕರು ತಮ್ಮ ಪರವಾಗಿ ಹಗಲು ರಾತ್ರಿ ದುಡಿಯುವ ಗಿಡಮರಗಳನ್ನು, ಹುಲ್ಲು ಸೊಪ್ಪು ತಿಂದು ಹಾಲು ಮತ್ತು ಗೊಬ್ಬರ ಕೊಡುವ ದನಕರು, ಕುರಿ ಆಡುಗಳನ್ನು  ನೆಚ್ಚಲೇಬೇಕಾಗುತ್ತದೆ.

ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...