Homeಅಂಕಣಗಳುತಬ್ಲೀಘ ಜಮಾತು ಬಗ್ಗೆ ನಿಮಗೆಷ್ಟು ಗೊತ್ತು?

ತಬ್ಲೀಘ ಜಮಾತು ಬಗ್ಗೆ ನಿಮಗೆಷ್ಟು ಗೊತ್ತು?

- Advertisement -
- Advertisement -

ಈಗ ಎಲ್ಲೆ ನೋಡಿದರೂ ತಬ್ಲೀಘ ಜಮಾತಿನ ಮಾತೇ ಮಾತು. ಇದರಿಂದಾಗಿ ಠೀವಿಯವರಿಗೆ ಟಿಆರಪಿ ಜಮಾ ಆಗಿದ್ದೇ ಆಗಿದ್ದು.
ಹೀಗಾಗಿಯೇ ಈ ಬಾರಿ ಇಲ್ಲಿಯೂ ಅದೇ ಮಾತು.

ತಬ್ಲೀಘ ಜಮಾತು ಅಂದರ `ಸಂದೇಶ ವಾಹಕರ ಸಮಿತಿ’. ಮರಕಜ ಅಂದರ ಕೇಂದ್ರ. ಇಜ್ತೆಮಾ ಅಂದರ ಸಮಾರಂಭ. ನಿಜಾಮುದ್ದೀನ ಅಂದರ ದೆಹಲಿಯ ನಿಜಾಮುದ್ದೀನ ಪ್ರದೇಶದಾಗ ಇರೋ ತಬ್ಲೀಘಿನ ಮಸೀದಿ. ಅಲ್ಲಿ ಮಾರ್ಚು 10 ರಿಂದ 13 ರವರೆಗೆ ಇಸ್ಲಾಮಿನ ಅಂತಾರಾಷ್ಟ್ರೀಯ ಸಮಾವೇಶ ನಡೆಯಿತು. ಅದರಲ್ಲಿ ಸುಮಾರು 3,600 ಜನ ಸೇರಿದ್ದರು. ಅವರು ಫೆಬ್ರವರಿ ಒಂದರಿಂದ ಅಲ್ಲಿಗೆ ಹೋಗಿ ಸೇರಿಕೊಂಡು ಮಾರ್ಚ 29 ರವರೆಗೂ ಇದ್ದರು. ಫೆಬ್ರವರಿಯೊಳಗ ಇಂಡೋನೇಷಿಯಾದಾಗ ಇಂಥಾದ್ದ ಒಂದು ಮೀಟಿಂಗ ಆಗಿತ್ತು. ಅದಕ್ಕ ಹೋಗಿ ಬಂದವರು ಕೆಲವರು ಇಲ್ಲಿಗೆ ಬಂದಿದ್ದರು. ಅವರೊಳಗ ಕೆಲವರಿಗೆ ಸೋಂಕು ತಗಲಿ ಬ್ಯಾರೆದವರಿಗೆ ಬಂತು.ಅವರನ್ನ ದೆಹಲಿ ಮಹಾನಗರ ಪಾಲಿಕೆ ಅವರು ಅವರವರ ಊರಿಗೆ ವಾಪಸ್ಸು ಕಳಿಸಲಾರದೇ ದೆಹಲಿಯ ಫಿರೋಜ ಷಾ ಕೋಟ್ಲಾ ಕ್ರಿಕೆಟ್ಟು ಆಟದ ಮೈದಾನದಾಗ ಪ್ರತ್ಯೇಕಿಸಿ (ಐಸೋಲೇಷನ್ನು), ಸಂಪರ್ಕ ನಿರೋಧಿಸಿ (ಕ್ವಾರಂಟೈನು) ಮಾಡಿ ಬಿಟ್ಟಿದ್ದರ ಆ ಸೋಂಕು ಬ್ಯಾರೆದವರಿಗೆ ಹರಡತಿದ್ದಿಲ್ಲ.

ಇನ್ನು ಕೇಂದ್ರ ಗೃಹ ಮಂತ್ರಿಯ ಕೈಕೆಳಗೆ ಕೆಲಸ ಮಾಡೋ ದೆಹಲಿ ಪೋಲಿಸರು ಥೇಟು ಹಳೇ ಕನ್ನಡ ಸಿನಿಮಾದಾಗಿನ ಪೋಲಿಸರು ಮಾಡಿದಂಗ ಎಲ್ಲಾ ಮುಗದ ಮ್ಯಾಲೆ ಕ್ರೈಂ ಸೀನಿಗೆ ಬಂದರು. ನಿಜಾಮುದ್ದೀನದ ಮುಖ್ಯಸ್ಥರು ದೆಹಲಿ ಪೋಲಿಸರು ಮತ್ತು ದೆಹಲಿ ಸರಕಾರಕ್ಕ ತಮ್ಮ ಕಾರ್ಯಕ್ರಮ ಮುಗದ ಮ್ಯಾಲೆ ಎರಡು ಪತ್ರ ಬರದರು. ನಮಗ ವಾಹನ ಪರವಾನಗಿ ಮತ್ತು ಪಾಸು ಕೊಡರಿ ಅಂದರ ಕೊಟ್ಟಿಲ್ಲ ಅಂತ ಹೇಳಿದ್ದರು. ಅವು ಕಿವುಡು ಸರಕಾರಕ್ಕ ಕೇಳಲಿಲ್ಲ.

ಮಾರ್ಚು 29 ನೇ ತಾರೀಕಿಗೆ ಪೋಲಿಸರು ಹಾಗೂ ಪಾಲಿಕೆ ಅಧಿಕಾರಿಗಳು ಮರಕಜದಿಂದ ಸುಮಾರು ಒಂದು ಸಾವಿರ ಜನರನ್ನ ಹೊರಗೆ ಕಳಿಸಿದರು. ಇಲ್ಲೇ ತಪ್ಪು ಮಾಡಿದರು. ಅವರನ್ನ ಅವರವರ ರಾಜ್ಯಕ್ಕ ಕಳಸೋ ಬದಲಿಗೆ ಅಲ್ಲೇ ದೆಹಲಿ ಒಳಗ ಇಟಗೊಂಡಿದ್ದರ ಈ ಪರಿಸ್ಥಿತಿ ಬರತಿರಲಿಲ್ಲ.

ಅದು ಹೋಗಲಿ ಬಿಡ್ರಿ. ತಬ್ಲೀಘು ಅಂದರೆ ಯಾರು? ಮುಸ್ಲೀಮರ ಒಳ ಪಂಗಡಗಳ ಬಗ್ಗೆ ತಿಳಕೊಂಡರ ಇದು ಅರ್ಥ ಆಗತದ. ಪ್ರವಾದಿ ಮೊಹಮ್ಮದ ಅವರು ಕಡೆಯ ಪ್ರವಾದಿ, ಸಂತ – ಸಂದೇಶವಾಹಕ ಅಂತ ತಿಳಕೊಂಡವರು ಸುನ್ನಿಗಳು. ಹಂಗೇನಿಲ್ಲ, ದೇವರು ಇಗಲೂ ಸಂದೇಶವಾಹಕರನ್ನ ಕಳಿಸಬಹುದು ಅಂತ ತಿಳಕೊಂಡವರು ಶಿಯಾ ಪಂಥಿಗಳು. ಭಾರತದೊಳಗ ಇರೋ ಮುಸ್ಲೀಮರ ಪೈಕಿ 90 ಶೇಕಡಾ ಜನ ಸುನ್ನಿಗಳು. ಅವರೊಳಗ ನಾಲ್ಕು – ಐದು ಸಿದ್ಧಾಂತ ಆಧಾರಿತ ಪಂಗಡಗಳು ಅವ. ಉದಾಹರಣಗೆ ಜಮಾತೇ ಇಸ್ಲಾಮಿ. ಇವರು ಮೌಲಾನಾ ಮೌದೂದಿ ಅನ್ನೂ ಧರ್ಮ ಗುರುವಿನ ಸಿದ್ಧಾಂತ ಪಾಲಿಸೋರು. ಮುಸ್ಲೀಮರು ಇತರ ಧರ್ಮದವರ ಜೊತೆ ಸ್ನೇಹ ಸಂಬಂಧ ಹೊಂದಿರಬೇಕು, ಕುರಾನನ್ನು ಭಾರತೀಯ ಭಾಷೆಗಳಿಗೆ ಭಾಷಾಂತರಿಸಬೇಕು, ವಿಜ್ಞಾನ, ರಾಜಕೀಯ ಪ್ರಜ್ಞೆ, ಆರ್ಥಿಕ ಪರಿಸ್ಥಿತಿ ಇವೆಲ್ಲದರ ಬಗ್ಗೆ ಮುಸ್ಲೀಮರು ಚಿಂತಿಸುತ್ತಾ ಇರಬೇಕು ಅಂತ ಇವರು ನಂಬತಾರ. ಅದರಂಗ ನಡಕೊಳ್ಳಲಿಕ್ಕೆ ಪ್ರಯತ್ನ ಮಾಡತಾರ. ಜಮಾತುಲ್ ಉಲೇಮಾ ಅನ್ನೋದು ಧರ್ಮಗುರುಗಳ ಸಂಘಟನೆ. ಅದರಾಗ ಬರೇ ಧರ್ಮದ ವಿಚಾರನ ಜಾಸ್ತಿ.

ತಬ್ಲೀಘ ಅನ್ನೋದು ಮುಸಲ್ಮಾನರು ಒಳ್ಳೆಯ ಮುಸಲ್ಮಾನರಾಗಿರಬೇಕು, ತಮ್ಮ ಧರ್ಮದ ಆಚರಣೆಗಳನ್ನ ಮರಿಯಬಾರದು, ದಿನಕ್ಕ ಐದು ಸಲೆ ನಮಾಜು ಮಾಡಬೇಕು, ರಮಝಾನಿನಲ್ಲಿ ಉಪವಾಸ ಮಾಡಬೇಕು, ಸುಳ್ಳು ಹೇಳಬಾರದು, ಜೂಜು ಆಡಬಾರದು, ಚುಗಲಿ (ಪುಕಾರು) ಎಬ್ಬಿಸಬಾರದು, ಇತ್ಯಾದಿಗಳನ್ನು ಮುಸಲ್ಮಾನರಿಗೆ ಹೇಳಿಕೊಡುವ ಸಂಸ್ಥೆ. ಇವರು ಮುಸಲ್ಮಾನೇತರರ ಹತ್ತಿರ ವ್ಯಾಪಾರ – ವ್ಯವಹಾರ ಮಾಡತಾರ ಆದರ ಧರ್ಮದ ಮಾತಾಡೋದಿಲ್ಲ. ಧರ್ಮ ಪ್ರಚಾರ ಅಂತೂ ದೂರದ ಮಾತು.

ಇನ್ನು ಅವರು ರಾಜಕೀಯ- ವಿಜ್ಞಾನ-ಆರ್ಥಿಕ – ಸಾಮಾಜಿಕ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡೋದಿಲ್ಲ. ಇಂಥಾ ಸಮಕಾಲಿನ ವಿಚಾರಗಳನ್ನು ಜಮಾತೆ ಇಸ್ಲಾಮನವರು ಚರ್ಚೆ ಮಾಡತಾರ. ತಬ್ಲೀಘನವರು ಮಾಡೋದಿಲ್ಲ. ಇಸ್ಲಾಮಿಕ್ ಇತಿಹಾಸಕಾರ ಸಯ್ಯದ ಉಬೇದುರ ರಹಮಾನ ಅವರು ತಬ್ಲೀಘಿನ ಈಗಿನ ಮುಖ್ಯಸ್ಥ ಮೌಲಾನಾ ಸಾದ ಅವರನ್ನು ನವಂಬರನಲ್ಲಿ ಭೇಟಿಯಾಗಿ ಎನ್‍ಆರ್‍ಸಿ ಸಿಎಎ ಬಗ್ಗೆ ಕೇಳಿದಾಗ “ಅದೇನೂ ಗಂಭೀರ ಸಮಸ್ಯೆ ಅಲ್ಲ, ಅದು ದೇಹಕ್ಕೆ ಸಣ್ಣ ರೋಗ ಬಂದಂತೆ. ಅದು ಕೆಲವು ದಿನಗಳ ನಂತರ ಸರಿ ಯಾಗುತ್ತದೆ” ಅಂತ ಹೇಳಿದರಂತ. ಅವರು ಹಾಗೇಕೆ ಹೇಳಿದರು ಅಂದರೆ ಅವರಿಗೆ ಅದರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ, ಅಂತ ಹೇಳಿ ರಹಮಾನ ಅವರು ಇತ್ತೀಚೆಗೆ ಬರೆದ ಲೇಖನದಲ್ಲಿ ಹೇಳಿಕೊಂಡಾರ.

ಸಾದ ಅವರನ್ನ ಇಸ್ಲಾಮಿನ ಇತರ ಪಂಗಡಗಳು ದೂರ ಇಟ್ಟಾರ. ಐದಾರು ವರ್ಷದ ಹಿಂದ ಅವರು `ದೆಹಲಿಯ ನಿಜಾಮುದ್ದೀನ ಅಂದರೆ ಇಸ್ಲಾಮಿನ ಮಕ್ಕಾ- ಮದೀನಾ ಬಿಟ್ಟರೆ ಅತಿ ಪವಿತ್ರ ಮಸೀದಿ’ ಅಂತ ಘೋಷಿಸಿದರು. ಮೊದಲನೇಯದಾಗಿ ಅದು ಸುಳ್ಳು ಯಾಕಂದರ ಇಸ್ಲಾಮಿನ ಮೂರನೇ ಪವಿತ್ರ ಮಸೀದಿ ಜರೂಸಲ್ಲಮಿನ ಮಸೀದಿ.

ಇನ್ನೊಂದು ಅದು ಅತಾರ್ಕಿಕ. ಒಂದು ನೂರಕ್ಕೂ ಕಮ್ಮಿ ವಯಸ್ಸಿನ ಮಸೀದಿ 1,400 ವರ್ಷದ ಧರ್ಮದ ಮೂರನೇ ಪವಿತ್ರ ಸ್ಥಾನ ಆಗಲಿಕ್ಕೆ ಹೆಂಗ ಸಾಧ್ಯ ಅದ?

ಸಾದ ಅವರ ವಿರುದ್ಧ ದೇವಬಂದನ ವಿಧ್ವಾಂಸರು ಫತ್ವಾ (ಅಭಿಪ್ರಾಯ) ಹೊರಡಿಸಿದರು. ಆ ನಂತರ ಅವರ ಗುಂಪು ವಿಭಜನೆ ಆತು. ಈಗ ನಿಜಾಮುದ್ದೀನ ಮಸೀದಿ ಹಾಗೂ ಶೂರಾ ಮಸೀದಿ ಅಂತ ಎರಡು ಗುಂಪು ಅವ. ನಿಜಾಮುದ್ದೀನನ ಹಿಂಬಾಲಕರು ಉತ್ತರ ಭಾರತದಾಗ ಜಾಸ್ತಿ ಇದ್ದರ ಶೂರಾದ ನಂಬಿಕಸ್ತರು ದಕ್ಷಿಣ ಭಾರತದಾಗ ಜಾಸ್ತಿ.

ಕರ್ನಾಟಕದ ಹೆಚ್ಚಾನು ಹೆಚ್ಚು ಮುಸ್ಲೀಮರು ಶೂರಾ ಮಸೀದಿಗೆ ನಡಕೊಳ್ಳೋರು.

ಮಹಮ್ಮದ ಇಲ್ಯಾಸ ಅನ್ನುವ ದೇವಬಂದಿ ಧರ್ಮ ಗುರುಗಳು ತಬ್ಲೀಘ ಜಮಾತನ್ನು 1926-27 ರೊಳಗ ಆರಂಭ ಮಾಡಿದರು. ಅವರಿಗೆ ಮುಸ್ಲೀಮರಿಗೆ ತಮ್ಮ ಧರ್ಮದ ಅರಿವಿಲ್ಲ. ಅವರ ಆಚಾರ – ವಿಚಾರ ಧರ್ಮಸಿಂಧುವಿನ ಪ್ರಕಾರ ಇಲ್ಲ ಅನ್ನುವ ಕೊರಗು ಇತ್ತು. ಅತಿ ಕಮ್ಮಿ ಖರ್ಚಿನಲ್ಲಿ ಸಂಘಟನೆ ಕಟ್ಟಬೇಕು, ಅತಿ ಬಡವರು, ಅಶಿಕ್ಷಿತರು ಇದರಿಂದ ಲಾಭ ಪಡಿಬೇಕು ಅಂತ ಅವರಿಗೆ ಅನ್ನಿಸಿತು. ಅವರ ಚಿಂತನೆ ಪ್ರಕಾರ ಇಂದಿಗೂ ತಬ್ಲೀಘಿನವರು ಸಮಾಜದ ಅತ್ಯಂತ ಬಡ- ಅಶಿಕ್ಷಿತರ ನಡುವೆ ಕೆಲಸಾ ಮಾಡತಾರ. ಕೂಲಿಕಾರರು, ದುಡಕೊಂಡು ತಿನ್ನೋರು, ಟೈರು ಪಂಚರ ಮಾಡೊರು, ಕಾಯಿಪಲ್ಯಾ ಮಾರಾಟ ಮಾಡೋರು, ಭಿಕ್ಷಾ ಬೇಡೋ ಫಕೀರರು, ಇಂಥವರೆಲ್ಲಾ ಇದರ. ಅವರ ನಡೂವನ ಇರತಾರ. ಸಂಘಟನೆಗೆ ಬಹಳ ಕಟ್ಟು ಪಾಡು ಇಲ್ಲ. ಸಭೆಗೆ ಅವರು ಖರ್ಚು ಮಾಡೋದಿಲ್ಲ. ಮಸೀದಿ ಪ್ರಾಂಗಣದಾಗನ ಸಭೆ.

ಸದಸ್ಯರು ಪ್ರವಾಸ ಮಾಡೋದು ಕಡ್ಡಾಯ. ಅವರು ವರ್ಷಕ್ಕ 10 ರಿಂದ 40 ದಿವಸ ಪ್ರವಾಸ ಮಾಡತಾರ. ಅವರು ಪ್ರವಾಸ ಮಾಡುವಾಗ ಕಡ್ಡಾಯವಾಗಿ ಮಸೀದಿಯೊಳಗ ಇರತಾರ. ಅಲ್ಲೇ ಒಲಿ ಹಚ್ಚಿ ಅಡಗಿ ಮಾಡತಾರ. ಅಲ್ಲೇ ಮಲಕೋತಾರ. ಸಂಜೆ ನಮಾಜಿಗೆ ಮೊದಲು ಸ್ಥಳೀಯ ನಾಯಕನೊಬ್ಬನನ್ನು ಕರಕೊಂಡು ಹೋಗಿ ಮುಸ್ಲೀಮ ಮನಿ- ಮನಿಗೆ ಹೋಗಿ ಪ್ರಾರ್ಥನೆಗೆ ಕರೀತಾರ. ಪ್ರಾರ್ಥನೆ ನಂತರದ ಭಾಷಣ ಸಂಘಟನೆಯ ನಾಯಕರೇ ಮಾಡಬೇಕಂತ ಇಲ್ಲ. ಹೊಸದಾಗಿ ಸೇರಿದ ಯುವಕರ ಹತ್ತರನೂ ಭಾಷಣ ಮಾಡಸ್ತಾರ. ಅತಿ ಕಮ್ಮಿ ಖರ್ಚಿನಾಗ ಸಂಘಟನೆ ನಡಸಬೇಕು ಅನ್ನೋದು ಒಂದು ಅವರ ನಿಯಮ.

ಅವರು ಹೆಚ್ಚು ಓದಿರೋದಿಲ್ಲ. ಅರ್ಧಕ್ಕ ಸಾಲಿ ಬಿಟ್ಟಿರತಾರ. ದಿನ ನಿತ್ಯ ಪೇಪರ್ ಓದೋದಿಲ್ಲ. ಠೀವಿ ನೋಡಿ- ಚರ್ಚೆ ಮಾಡಿ, ಸೋಷಿಯಲ್ ಮೀಡಿಯಾದಾಗ ವಿಚಾರ ವಿನಿಮಯ ಮಾಡೋ ಅಷ್ಟು ಅವರಿಗೆ ಶಿಕ್ಷಣ ಇರಂಗಿಲ್ಲ. ಹೊಟ್ಟಿ ತುಂಬಿಕೊಳ್ಳೋದರಾಗ ಅವರ ಶಕ್ತಿ- ಬುದ್ಧಿ ಖರ್ಚಾಗಿರತದ. ನಾ ಎಲ್ಲೆ ಧರ್ಮ ಬಿಟ್ಟು ಹೊಂಟೇನೋ ಅನ್ನೋ ಹೆದರಿಕಿ ಒಳಗ ಅವರು ತಬ್ಲೀಘಿಗೆ ಬಂದಿರತಾರ.

ತಬ್ಲೀಘು- ಜಮಾತು-ನಿಜಾಮುದ್ದೀನು- ಮರಕಜು- ಇಜ್ತೆಮಾ ಅನ್ನೋದು ಇತರರಿಗೆ ಎಷ್ಟು ಅಪರಿಚಿತನೋ, ಇವರಿಗೆ ಕೋವಿಡ್ಡು-ಐಸೋಲೇಷನ್ನು – ಕ್ವಾರಂಟೈನು- ಪಿಸಿಆರು- ಥ್ರೋಟು ಸ್ವಾಬು- ಹರ್ಡು ಇಮ್ಯನಿಟಿ ಅನ್ನೋವೆಲ್ಲಾ ಅಷ್ಟೇ ಅಪರಿಚಿತ.
ಇದು ಇತರರಿಗೆ ಅರ್ಥ ಆದರೆ ಅರ್ಧ ಕೆಲಸ ಆದಹಂಗ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮ್ಮ ಪತ್ರಿಕೆಯ ಬರಹಗಳು ಅಚ್ಚುಕಟ್ಟಾಗಿ ಮೂಡಿ ಬರ್ತಿವೆ ಸರ್ ತಮ್ಮ ಪತ್ರಿಕೆ ಇನ್ನಷ್ಟು ಹೆಸರು ಮಾಡಲಿ…..

    ನಿಮ್ಮ ಪತ್ರಿಕೆಯಲ್ಲಿ ನನ್ನತ ಅವ್ಯಾಸ ಬರಗಾರರಿಗೆ
    ಅವಕಾಶ ಕೊಡಿ.. ಸರ್
    ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...