Homeಮುಖಪುಟಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ?

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸುತ್ತಿರುವ ಸಾರ್ವಕರ್ ಉತ್ಸವವನ್ನು ಟೀಕಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ನಂತರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಈ ಉತ್ಸವಗನ್ನು ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಾರ್ವಕರ್ ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ ಬರಲು ಯಾಕೆ ಒಪ್ಪಲಿಲ್ಲ? ಸಾರ್ವಕರ್ ಸೆರೆವಾಸದಲ್ಲಿದ್ದಾಗ ಬ್ರಿಟೀಷರಿಗೆ ಆರು ಬಾರಿ ಕ್ಷಮಾಪಣಾ ಪತ್ರ ಬರೆದಿದ್ದು ಯಾಕೆ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಸಾವರ್ಕರ್ ಜೈಲಿಂದ ಬಿಡುಗಡೆಯಾದ ನಂತರ ಎಷ್ಟು ಹೋರಾಟ ಮಾಡಿದರು? ಅದರ ಪರಿಣಾಮಗಳೇನು?ಮುಸ್ಲೀಂ ಲೀಗ್ ಜತೆ ಅವರು ದೇಶದ ಹಲವು ಕಡೆಗಳಲ್ಲಿ ಸರ್ಕಾರ ರಚಿಸಿದ್ದು ಯಾಕೆ? ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲಿಲ್ಲ ಯಾಕೆ? ಧರ್ಮದ ಆಧಾರದ ಮೇಲೆ ನಮ್ಮ ದೇಶ ವಿಭಜನೆ ಮಾಡಬೇಕು ಎಂದು ಮೊದಲು ಧ್ವನಿ ಎತ್ತಿದ ಸಾವರ್ಕರ್ ಪೂಜೆ ಯಾಕೆ ಮಾಡುತ್ತಿದ್ದೀರಿ? ಸಾರ್ವಕರ್ ನಾಸ್ತಿಕರಾಗಿದ್ದರು, ಈಗ ಪ್ರತಿ ಗಣೇಶೋತ್ಸವದ ಪೆಂಡಾಲ್ ನಲ್ಲಿ ಸಾರ್ವಕರ್ ಫೋಟೋ ಇಡುತ್ತಿರುವುದೇಕೆ? ಆ ಮೂಲಕ ದೇವರಿಗೆ ಅಪಮಾನ ಮಾಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

1940ರ ಮಥುರಾದಲ್ಲಿ ನಡೆದ ಹಿಂದು ಮಹಾಸಭಾ ಅಧಿವೇಶನದಲ್ಲಿ ಸಾರ್ವಕರ್ ಅವರು ನಾನು ಬ್ರಿಟೀಷರ ಸೇನೆಗೆ 1 ಲಕ್ಷ ಯೋಧರನ್ನು ಸೇರಿಸಿದ್ದೇನೆ ಎಂದು ಬಹಿರಂಗವಾಗಿ, ಹೆಮ್ಮೆಯಿಂದ ಹೇಳಿಕೊಂಡಿದ್ದರು. ಎರಡನೇ ಮಹಾಯುದ್ಧದಲ್ಲಿ ಸಾರ್ವಕರ್ ಅವರು ಬ್ರಿಟೀಷರಿಗೆ ಸಹಕಾರ ನೀಡುವುದಾಗಿ ಅಂದಿನ ವೈಸರಾಯ್ ಗಿಲ್ ಲಿತ್ ಗೌ ಅವರಿಗೆ ತಿಳಿಸಿದರು. ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ? ಅಲ್ಲದೆ ತಮಗೆ ತಾವೇ ವೀರ ಸಾರ್ವಕರ್ ಎಂಬ ಬಿರುದು ಕೊಟ್ಟಿಕೊಂಡ ಅವರೆಂಥ ಹೋರಾಟಗಾರ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಅವರು ಮಠಗಳಿಗೆ 30%, ಗುತ್ತಿಗೆದಾರರಿಗೆ 40%, ಬಿಬಿಎಂಪಿಯಲ್ಲಿ 50%, ತಮ್ಮ ಕಾರ್ಯಕರ್ತರಿಗೆ 60% ಕಮಿಷನ್ ನಿಗದಿ ಮಾಡಿದ್ದಾರೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಎರಡು ಪತ್ರ ಬರೆಯುತ್ತಿದ್ದಾರೆ. ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದು ಯುವಕರ ಭವಿಷ್ಯ ನಾಶವಾಗುತ್ತಿದೆ. ಕೋಮುಗಲಭೆ ಸೃಷ್ಟಿಸುತ್ತಿದ್ದೀರ. ಶಿವಮೊಗ್ಗದಲ್ಲಿ ಕೋಮುಗಲಭೆಯಿಂದ ಸಣ್ಣ ವ್ಯಾಪಾರಿಗಳಿಗೆ 300 ಕೋಟಿ ರೂ. ನಷ್ಟವಾಗಿದೆ. ಇವರ ಆಡಳಿತದಲ್ಲಿ ರಸ್ತೆ ಗುಂಡಿಗೆ ಸಾವು ಸಂಭವಿಸುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿಯವರಿಗೆ ಸಿದ್ದರಾಮಯ್ಯ ಏನು ತಿಂದರು, ಡಿ.ಕೆ. ಶಿವಕುಮಾರ್ ಏನು ಹೇಳಿದರು ಎಂಬುದರ ಮೇಲೆ ಆಸಕ್ತಿ ಇದೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾರ್ವಕರ್, ಹಿಂದುತ್ವ ಎಂಬಂತೆ ಭಾವಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...