Homeಮುಖಪುಟಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ?

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸುತ್ತಿರುವ ಸಾರ್ವಕರ್ ಉತ್ಸವವನ್ನು ಟೀಕಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ನಂತರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಈ ಉತ್ಸವಗನ್ನು ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಾರ್ವಕರ್ ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ ಬರಲು ಯಾಕೆ ಒಪ್ಪಲಿಲ್ಲ? ಸಾರ್ವಕರ್ ಸೆರೆವಾಸದಲ್ಲಿದ್ದಾಗ ಬ್ರಿಟೀಷರಿಗೆ ಆರು ಬಾರಿ ಕ್ಷಮಾಪಣಾ ಪತ್ರ ಬರೆದಿದ್ದು ಯಾಕೆ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಸಾವರ್ಕರ್ ಜೈಲಿಂದ ಬಿಡುಗಡೆಯಾದ ನಂತರ ಎಷ್ಟು ಹೋರಾಟ ಮಾಡಿದರು? ಅದರ ಪರಿಣಾಮಗಳೇನು?ಮುಸ್ಲೀಂ ಲೀಗ್ ಜತೆ ಅವರು ದೇಶದ ಹಲವು ಕಡೆಗಳಲ್ಲಿ ಸರ್ಕಾರ ರಚಿಸಿದ್ದು ಯಾಕೆ? ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲಿಲ್ಲ ಯಾಕೆ? ಧರ್ಮದ ಆಧಾರದ ಮೇಲೆ ನಮ್ಮ ದೇಶ ವಿಭಜನೆ ಮಾಡಬೇಕು ಎಂದು ಮೊದಲು ಧ್ವನಿ ಎತ್ತಿದ ಸಾವರ್ಕರ್ ಪೂಜೆ ಯಾಕೆ ಮಾಡುತ್ತಿದ್ದೀರಿ? ಸಾರ್ವಕರ್ ನಾಸ್ತಿಕರಾಗಿದ್ದರು, ಈಗ ಪ್ರತಿ ಗಣೇಶೋತ್ಸವದ ಪೆಂಡಾಲ್ ನಲ್ಲಿ ಸಾರ್ವಕರ್ ಫೋಟೋ ಇಡುತ್ತಿರುವುದೇಕೆ? ಆ ಮೂಲಕ ದೇವರಿಗೆ ಅಪಮಾನ ಮಾಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

1940ರ ಮಥುರಾದಲ್ಲಿ ನಡೆದ ಹಿಂದು ಮಹಾಸಭಾ ಅಧಿವೇಶನದಲ್ಲಿ ಸಾರ್ವಕರ್ ಅವರು ನಾನು ಬ್ರಿಟೀಷರ ಸೇನೆಗೆ 1 ಲಕ್ಷ ಯೋಧರನ್ನು ಸೇರಿಸಿದ್ದೇನೆ ಎಂದು ಬಹಿರಂಗವಾಗಿ, ಹೆಮ್ಮೆಯಿಂದ ಹೇಳಿಕೊಂಡಿದ್ದರು. ಎರಡನೇ ಮಹಾಯುದ್ಧದಲ್ಲಿ ಸಾರ್ವಕರ್ ಅವರು ಬ್ರಿಟೀಷರಿಗೆ ಸಹಕಾರ ನೀಡುವುದಾಗಿ ಅಂದಿನ ವೈಸರಾಯ್ ಗಿಲ್ ಲಿತ್ ಗೌ ಅವರಿಗೆ ತಿಳಿಸಿದರು. ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ? ಅಲ್ಲದೆ ತಮಗೆ ತಾವೇ ವೀರ ಸಾರ್ವಕರ್ ಎಂಬ ಬಿರುದು ಕೊಟ್ಟಿಕೊಂಡ ಅವರೆಂಥ ಹೋರಾಟಗಾರ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಅವರು ಮಠಗಳಿಗೆ 30%, ಗುತ್ತಿಗೆದಾರರಿಗೆ 40%, ಬಿಬಿಎಂಪಿಯಲ್ಲಿ 50%, ತಮ್ಮ ಕಾರ್ಯಕರ್ತರಿಗೆ 60% ಕಮಿಷನ್ ನಿಗದಿ ಮಾಡಿದ್ದಾರೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಎರಡು ಪತ್ರ ಬರೆಯುತ್ತಿದ್ದಾರೆ. ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದು ಯುವಕರ ಭವಿಷ್ಯ ನಾಶವಾಗುತ್ತಿದೆ. ಕೋಮುಗಲಭೆ ಸೃಷ್ಟಿಸುತ್ತಿದ್ದೀರ. ಶಿವಮೊಗ್ಗದಲ್ಲಿ ಕೋಮುಗಲಭೆಯಿಂದ ಸಣ್ಣ ವ್ಯಾಪಾರಿಗಳಿಗೆ 300 ಕೋಟಿ ರೂ. ನಷ್ಟವಾಗಿದೆ. ಇವರ ಆಡಳಿತದಲ್ಲಿ ರಸ್ತೆ ಗುಂಡಿಗೆ ಸಾವು ಸಂಭವಿಸುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿಯವರಿಗೆ ಸಿದ್ದರಾಮಯ್ಯ ಏನು ತಿಂದರು, ಡಿ.ಕೆ. ಶಿವಕುಮಾರ್ ಏನು ಹೇಳಿದರು ಎಂಬುದರ ಮೇಲೆ ಆಸಕ್ತಿ ಇದೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾರ್ವಕರ್, ಹಿಂದುತ್ವ ಎಂಬಂತೆ ಭಾವಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...