Homeಮುಖಪುಟಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ?

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸುತ್ತಿರುವ ಸಾರ್ವಕರ್ ಉತ್ಸವವನ್ನು ಟೀಕಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ನಂತರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಈ ಉತ್ಸವಗನ್ನು ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಾರ್ವಕರ್ ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ ಬರಲು ಯಾಕೆ ಒಪ್ಪಲಿಲ್ಲ? ಸಾರ್ವಕರ್ ಸೆರೆವಾಸದಲ್ಲಿದ್ದಾಗ ಬ್ರಿಟೀಷರಿಗೆ ಆರು ಬಾರಿ ಕ್ಷಮಾಪಣಾ ಪತ್ರ ಬರೆದಿದ್ದು ಯಾಕೆ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಸಾವರ್ಕರ್ ಜೈಲಿಂದ ಬಿಡುಗಡೆಯಾದ ನಂತರ ಎಷ್ಟು ಹೋರಾಟ ಮಾಡಿದರು? ಅದರ ಪರಿಣಾಮಗಳೇನು?ಮುಸ್ಲೀಂ ಲೀಗ್ ಜತೆ ಅವರು ದೇಶದ ಹಲವು ಕಡೆಗಳಲ್ಲಿ ಸರ್ಕಾರ ರಚಿಸಿದ್ದು ಯಾಕೆ? ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲಿಲ್ಲ ಯಾಕೆ? ಧರ್ಮದ ಆಧಾರದ ಮೇಲೆ ನಮ್ಮ ದೇಶ ವಿಭಜನೆ ಮಾಡಬೇಕು ಎಂದು ಮೊದಲು ಧ್ವನಿ ಎತ್ತಿದ ಸಾವರ್ಕರ್ ಪೂಜೆ ಯಾಕೆ ಮಾಡುತ್ತಿದ್ದೀರಿ? ಸಾರ್ವಕರ್ ನಾಸ್ತಿಕರಾಗಿದ್ದರು, ಈಗ ಪ್ರತಿ ಗಣೇಶೋತ್ಸವದ ಪೆಂಡಾಲ್ ನಲ್ಲಿ ಸಾರ್ವಕರ್ ಫೋಟೋ ಇಡುತ್ತಿರುವುದೇಕೆ? ಆ ಮೂಲಕ ದೇವರಿಗೆ ಅಪಮಾನ ಮಾಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

1940ರ ಮಥುರಾದಲ್ಲಿ ನಡೆದ ಹಿಂದು ಮಹಾಸಭಾ ಅಧಿವೇಶನದಲ್ಲಿ ಸಾರ್ವಕರ್ ಅವರು ನಾನು ಬ್ರಿಟೀಷರ ಸೇನೆಗೆ 1 ಲಕ್ಷ ಯೋಧರನ್ನು ಸೇರಿಸಿದ್ದೇನೆ ಎಂದು ಬಹಿರಂಗವಾಗಿ, ಹೆಮ್ಮೆಯಿಂದ ಹೇಳಿಕೊಂಡಿದ್ದರು. ಎರಡನೇ ಮಹಾಯುದ್ಧದಲ್ಲಿ ಸಾರ್ವಕರ್ ಅವರು ಬ್ರಿಟೀಷರಿಗೆ ಸಹಕಾರ ನೀಡುವುದಾಗಿ ಅಂದಿನ ವೈಸರಾಯ್ ಗಿಲ್ ಲಿತ್ ಗೌ ಅವರಿಗೆ ತಿಳಿಸಿದರು. ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ? ಅಲ್ಲದೆ ತಮಗೆ ತಾವೇ ವೀರ ಸಾರ್ವಕರ್ ಎಂಬ ಬಿರುದು ಕೊಟ್ಟಿಕೊಂಡ ಅವರೆಂಥ ಹೋರಾಟಗಾರ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಅವರು ಮಠಗಳಿಗೆ 30%, ಗುತ್ತಿಗೆದಾರರಿಗೆ 40%, ಬಿಬಿಎಂಪಿಯಲ್ಲಿ 50%, ತಮ್ಮ ಕಾರ್ಯಕರ್ತರಿಗೆ 60% ಕಮಿಷನ್ ನಿಗದಿ ಮಾಡಿದ್ದಾರೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಎರಡು ಪತ್ರ ಬರೆಯುತ್ತಿದ್ದಾರೆ. ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದು ಯುವಕರ ಭವಿಷ್ಯ ನಾಶವಾಗುತ್ತಿದೆ. ಕೋಮುಗಲಭೆ ಸೃಷ್ಟಿಸುತ್ತಿದ್ದೀರ. ಶಿವಮೊಗ್ಗದಲ್ಲಿ ಕೋಮುಗಲಭೆಯಿಂದ ಸಣ್ಣ ವ್ಯಾಪಾರಿಗಳಿಗೆ 300 ಕೋಟಿ ರೂ. ನಷ್ಟವಾಗಿದೆ. ಇವರ ಆಡಳಿತದಲ್ಲಿ ರಸ್ತೆ ಗುಂಡಿಗೆ ಸಾವು ಸಂಭವಿಸುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿಯವರಿಗೆ ಸಿದ್ದರಾಮಯ್ಯ ಏನು ತಿಂದರು, ಡಿ.ಕೆ. ಶಿವಕುಮಾರ್ ಏನು ಹೇಳಿದರು ಎಂಬುದರ ಮೇಲೆ ಆಸಕ್ತಿ ಇದೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾರ್ವಕರ್, ಹಿಂದುತ್ವ ಎಂಬಂತೆ ಭಾವಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...