Homeಮುಖಪುಟಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ?

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸುತ್ತಿರುವ ಸಾರ್ವಕರ್ ಉತ್ಸವವನ್ನು ಟೀಕಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ನಂತರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಈ ಉತ್ಸವಗನ್ನು ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಾರ್ವಕರ್ ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ ಬರಲು ಯಾಕೆ ಒಪ್ಪಲಿಲ್ಲ? ಸಾರ್ವಕರ್ ಸೆರೆವಾಸದಲ್ಲಿದ್ದಾಗ ಬ್ರಿಟೀಷರಿಗೆ ಆರು ಬಾರಿ ಕ್ಷಮಾಪಣಾ ಪತ್ರ ಬರೆದಿದ್ದು ಯಾಕೆ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಸಾವರ್ಕರ್ ಜೈಲಿಂದ ಬಿಡುಗಡೆಯಾದ ನಂತರ ಎಷ್ಟು ಹೋರಾಟ ಮಾಡಿದರು? ಅದರ ಪರಿಣಾಮಗಳೇನು?ಮುಸ್ಲೀಂ ಲೀಗ್ ಜತೆ ಅವರು ದೇಶದ ಹಲವು ಕಡೆಗಳಲ್ಲಿ ಸರ್ಕಾರ ರಚಿಸಿದ್ದು ಯಾಕೆ? ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲಿಲ್ಲ ಯಾಕೆ? ಧರ್ಮದ ಆಧಾರದ ಮೇಲೆ ನಮ್ಮ ದೇಶ ವಿಭಜನೆ ಮಾಡಬೇಕು ಎಂದು ಮೊದಲು ಧ್ವನಿ ಎತ್ತಿದ ಸಾವರ್ಕರ್ ಪೂಜೆ ಯಾಕೆ ಮಾಡುತ್ತಿದ್ದೀರಿ? ಸಾರ್ವಕರ್ ನಾಸ್ತಿಕರಾಗಿದ್ದರು, ಈಗ ಪ್ರತಿ ಗಣೇಶೋತ್ಸವದ ಪೆಂಡಾಲ್ ನಲ್ಲಿ ಸಾರ್ವಕರ್ ಫೋಟೋ ಇಡುತ್ತಿರುವುದೇಕೆ? ಆ ಮೂಲಕ ದೇವರಿಗೆ ಅಪಮಾನ ಮಾಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

1940ರ ಮಥುರಾದಲ್ಲಿ ನಡೆದ ಹಿಂದು ಮಹಾಸಭಾ ಅಧಿವೇಶನದಲ್ಲಿ ಸಾರ್ವಕರ್ ಅವರು ನಾನು ಬ್ರಿಟೀಷರ ಸೇನೆಗೆ 1 ಲಕ್ಷ ಯೋಧರನ್ನು ಸೇರಿಸಿದ್ದೇನೆ ಎಂದು ಬಹಿರಂಗವಾಗಿ, ಹೆಮ್ಮೆಯಿಂದ ಹೇಳಿಕೊಂಡಿದ್ದರು. ಎರಡನೇ ಮಹಾಯುದ್ಧದಲ್ಲಿ ಸಾರ್ವಕರ್ ಅವರು ಬ್ರಿಟೀಷರಿಗೆ ಸಹಕಾರ ನೀಡುವುದಾಗಿ ಅಂದಿನ ವೈಸರಾಯ್ ಗಿಲ್ ಲಿತ್ ಗೌ ಅವರಿಗೆ ತಿಳಿಸಿದರು. ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ? ಅಲ್ಲದೆ ತಮಗೆ ತಾವೇ ವೀರ ಸಾರ್ವಕರ್ ಎಂಬ ಬಿರುದು ಕೊಟ್ಟಿಕೊಂಡ ಅವರೆಂಥ ಹೋರಾಟಗಾರ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಅವರು ಮಠಗಳಿಗೆ 30%, ಗುತ್ತಿಗೆದಾರರಿಗೆ 40%, ಬಿಬಿಎಂಪಿಯಲ್ಲಿ 50%, ತಮ್ಮ ಕಾರ್ಯಕರ್ತರಿಗೆ 60% ಕಮಿಷನ್ ನಿಗದಿ ಮಾಡಿದ್ದಾರೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಎರಡು ಪತ್ರ ಬರೆಯುತ್ತಿದ್ದಾರೆ. ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದು ಯುವಕರ ಭವಿಷ್ಯ ನಾಶವಾಗುತ್ತಿದೆ. ಕೋಮುಗಲಭೆ ಸೃಷ್ಟಿಸುತ್ತಿದ್ದೀರ. ಶಿವಮೊಗ್ಗದಲ್ಲಿ ಕೋಮುಗಲಭೆಯಿಂದ ಸಣ್ಣ ವ್ಯಾಪಾರಿಗಳಿಗೆ 300 ಕೋಟಿ ರೂ. ನಷ್ಟವಾಗಿದೆ. ಇವರ ಆಡಳಿತದಲ್ಲಿ ರಸ್ತೆ ಗುಂಡಿಗೆ ಸಾವು ಸಂಭವಿಸುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿಯವರಿಗೆ ಸಿದ್ದರಾಮಯ್ಯ ಏನು ತಿಂದರು, ಡಿ.ಕೆ. ಶಿವಕುಮಾರ್ ಏನು ಹೇಳಿದರು ಎಂಬುದರ ಮೇಲೆ ಆಸಕ್ತಿ ಇದೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾರ್ವಕರ್, ಹಿಂದುತ್ವ ಎಂಬಂತೆ ಭಾವಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...