Homeಮುಖಪುಟಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ?

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸುತ್ತಿರುವ ಸಾರ್ವಕರ್ ಉತ್ಸವವನ್ನು ಟೀಕಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ನಂತರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಈ ಉತ್ಸವಗನ್ನು ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಾರ್ವಕರ್ ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ ಬರಲು ಯಾಕೆ ಒಪ್ಪಲಿಲ್ಲ? ಸಾರ್ವಕರ್ ಸೆರೆವಾಸದಲ್ಲಿದ್ದಾಗ ಬ್ರಿಟೀಷರಿಗೆ ಆರು ಬಾರಿ ಕ್ಷಮಾಪಣಾ ಪತ್ರ ಬರೆದಿದ್ದು ಯಾಕೆ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಸಾವರ್ಕರ್ ಜೈಲಿಂದ ಬಿಡುಗಡೆಯಾದ ನಂತರ ಎಷ್ಟು ಹೋರಾಟ ಮಾಡಿದರು? ಅದರ ಪರಿಣಾಮಗಳೇನು?ಮುಸ್ಲೀಂ ಲೀಗ್ ಜತೆ ಅವರು ದೇಶದ ಹಲವು ಕಡೆಗಳಲ್ಲಿ ಸರ್ಕಾರ ರಚಿಸಿದ್ದು ಯಾಕೆ? ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲಿಲ್ಲ ಯಾಕೆ? ಧರ್ಮದ ಆಧಾರದ ಮೇಲೆ ನಮ್ಮ ದೇಶ ವಿಭಜನೆ ಮಾಡಬೇಕು ಎಂದು ಮೊದಲು ಧ್ವನಿ ಎತ್ತಿದ ಸಾವರ್ಕರ್ ಪೂಜೆ ಯಾಕೆ ಮಾಡುತ್ತಿದ್ದೀರಿ? ಸಾರ್ವಕರ್ ನಾಸ್ತಿಕರಾಗಿದ್ದರು, ಈಗ ಪ್ರತಿ ಗಣೇಶೋತ್ಸವದ ಪೆಂಡಾಲ್ ನಲ್ಲಿ ಸಾರ್ವಕರ್ ಫೋಟೋ ಇಡುತ್ತಿರುವುದೇಕೆ? ಆ ಮೂಲಕ ದೇವರಿಗೆ ಅಪಮಾನ ಮಾಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

1940ರ ಮಥುರಾದಲ್ಲಿ ನಡೆದ ಹಿಂದು ಮಹಾಸಭಾ ಅಧಿವೇಶನದಲ್ಲಿ ಸಾರ್ವಕರ್ ಅವರು ನಾನು ಬ್ರಿಟೀಷರ ಸೇನೆಗೆ 1 ಲಕ್ಷ ಯೋಧರನ್ನು ಸೇರಿಸಿದ್ದೇನೆ ಎಂದು ಬಹಿರಂಗವಾಗಿ, ಹೆಮ್ಮೆಯಿಂದ ಹೇಳಿಕೊಂಡಿದ್ದರು. ಎರಡನೇ ಮಹಾಯುದ್ಧದಲ್ಲಿ ಸಾರ್ವಕರ್ ಅವರು ಬ್ರಿಟೀಷರಿಗೆ ಸಹಕಾರ ನೀಡುವುದಾಗಿ ಅಂದಿನ ವೈಸರಾಯ್ ಗಿಲ್ ಲಿತ್ ಗೌ ಅವರಿಗೆ ತಿಳಿಸಿದರು. ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ? ಅಲ್ಲದೆ ತಮಗೆ ತಾವೇ ವೀರ ಸಾರ್ವಕರ್ ಎಂಬ ಬಿರುದು ಕೊಟ್ಟಿಕೊಂಡ ಅವರೆಂಥ ಹೋರಾಟಗಾರ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಅವರು ಮಠಗಳಿಗೆ 30%, ಗುತ್ತಿಗೆದಾರರಿಗೆ 40%, ಬಿಬಿಎಂಪಿಯಲ್ಲಿ 50%, ತಮ್ಮ ಕಾರ್ಯಕರ್ತರಿಗೆ 60% ಕಮಿಷನ್ ನಿಗದಿ ಮಾಡಿದ್ದಾರೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಎರಡು ಪತ್ರ ಬರೆಯುತ್ತಿದ್ದಾರೆ. ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದು ಯುವಕರ ಭವಿಷ್ಯ ನಾಶವಾಗುತ್ತಿದೆ. ಕೋಮುಗಲಭೆ ಸೃಷ್ಟಿಸುತ್ತಿದ್ದೀರ. ಶಿವಮೊಗ್ಗದಲ್ಲಿ ಕೋಮುಗಲಭೆಯಿಂದ ಸಣ್ಣ ವ್ಯಾಪಾರಿಗಳಿಗೆ 300 ಕೋಟಿ ರೂ. ನಷ್ಟವಾಗಿದೆ. ಇವರ ಆಡಳಿತದಲ್ಲಿ ರಸ್ತೆ ಗುಂಡಿಗೆ ಸಾವು ಸಂಭವಿಸುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿಯವರಿಗೆ ಸಿದ್ದರಾಮಯ್ಯ ಏನು ತಿಂದರು, ಡಿ.ಕೆ. ಶಿವಕುಮಾರ್ ಏನು ಹೇಳಿದರು ಎಂಬುದರ ಮೇಲೆ ಆಸಕ್ತಿ ಇದೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾರ್ವಕರ್, ಹಿಂದುತ್ವ ಎಂಬಂತೆ ಭಾವಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...