Homeಮುಖಪುಟಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ?

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸುತ್ತಿರುವ ಸಾರ್ವಕರ್ ಉತ್ಸವವನ್ನು ಟೀಕಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ನಂತರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಈ ಉತ್ಸವಗನ್ನು ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಾರ್ವಕರ್ ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ ಬರಲು ಯಾಕೆ ಒಪ್ಪಲಿಲ್ಲ? ಸಾರ್ವಕರ್ ಸೆರೆವಾಸದಲ್ಲಿದ್ದಾಗ ಬ್ರಿಟೀಷರಿಗೆ ಆರು ಬಾರಿ ಕ್ಷಮಾಪಣಾ ಪತ್ರ ಬರೆದಿದ್ದು ಯಾಕೆ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಸಾವರ್ಕರ್ ಜೈಲಿಂದ ಬಿಡುಗಡೆಯಾದ ನಂತರ ಎಷ್ಟು ಹೋರಾಟ ಮಾಡಿದರು? ಅದರ ಪರಿಣಾಮಗಳೇನು?ಮುಸ್ಲೀಂ ಲೀಗ್ ಜತೆ ಅವರು ದೇಶದ ಹಲವು ಕಡೆಗಳಲ್ಲಿ ಸರ್ಕಾರ ರಚಿಸಿದ್ದು ಯಾಕೆ? ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲಿಲ್ಲ ಯಾಕೆ? ಧರ್ಮದ ಆಧಾರದ ಮೇಲೆ ನಮ್ಮ ದೇಶ ವಿಭಜನೆ ಮಾಡಬೇಕು ಎಂದು ಮೊದಲು ಧ್ವನಿ ಎತ್ತಿದ ಸಾವರ್ಕರ್ ಪೂಜೆ ಯಾಕೆ ಮಾಡುತ್ತಿದ್ದೀರಿ? ಸಾರ್ವಕರ್ ನಾಸ್ತಿಕರಾಗಿದ್ದರು, ಈಗ ಪ್ರತಿ ಗಣೇಶೋತ್ಸವದ ಪೆಂಡಾಲ್ ನಲ್ಲಿ ಸಾರ್ವಕರ್ ಫೋಟೋ ಇಡುತ್ತಿರುವುದೇಕೆ? ಆ ಮೂಲಕ ದೇವರಿಗೆ ಅಪಮಾನ ಮಾಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

1940ರ ಮಥುರಾದಲ್ಲಿ ನಡೆದ ಹಿಂದು ಮಹಾಸಭಾ ಅಧಿವೇಶನದಲ್ಲಿ ಸಾರ್ವಕರ್ ಅವರು ನಾನು ಬ್ರಿಟೀಷರ ಸೇನೆಗೆ 1 ಲಕ್ಷ ಯೋಧರನ್ನು ಸೇರಿಸಿದ್ದೇನೆ ಎಂದು ಬಹಿರಂಗವಾಗಿ, ಹೆಮ್ಮೆಯಿಂದ ಹೇಳಿಕೊಂಡಿದ್ದರು. ಎರಡನೇ ಮಹಾಯುದ್ಧದಲ್ಲಿ ಸಾರ್ವಕರ್ ಅವರು ಬ್ರಿಟೀಷರಿಗೆ ಸಹಕಾರ ನೀಡುವುದಾಗಿ ಅಂದಿನ ವೈಸರಾಯ್ ಗಿಲ್ ಲಿತ್ ಗೌ ಅವರಿಗೆ ತಿಳಿಸಿದರು. ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ? ಅಲ್ಲದೆ ತಮಗೆ ತಾವೇ ವೀರ ಸಾರ್ವಕರ್ ಎಂಬ ಬಿರುದು ಕೊಟ್ಟಿಕೊಂಡ ಅವರೆಂಥ ಹೋರಾಟಗಾರ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಅವರು ಮಠಗಳಿಗೆ 30%, ಗುತ್ತಿಗೆದಾರರಿಗೆ 40%, ಬಿಬಿಎಂಪಿಯಲ್ಲಿ 50%, ತಮ್ಮ ಕಾರ್ಯಕರ್ತರಿಗೆ 60% ಕಮಿಷನ್ ನಿಗದಿ ಮಾಡಿದ್ದಾರೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಎರಡು ಪತ್ರ ಬರೆಯುತ್ತಿದ್ದಾರೆ. ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದು ಯುವಕರ ಭವಿಷ್ಯ ನಾಶವಾಗುತ್ತಿದೆ. ಕೋಮುಗಲಭೆ ಸೃಷ್ಟಿಸುತ್ತಿದ್ದೀರ. ಶಿವಮೊಗ್ಗದಲ್ಲಿ ಕೋಮುಗಲಭೆಯಿಂದ ಸಣ್ಣ ವ್ಯಾಪಾರಿಗಳಿಗೆ 300 ಕೋಟಿ ರೂ. ನಷ್ಟವಾಗಿದೆ. ಇವರ ಆಡಳಿತದಲ್ಲಿ ರಸ್ತೆ ಗುಂಡಿಗೆ ಸಾವು ಸಂಭವಿಸುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿಯವರಿಗೆ ಸಿದ್ದರಾಮಯ್ಯ ಏನು ತಿಂದರು, ಡಿ.ಕೆ. ಶಿವಕುಮಾರ್ ಏನು ಹೇಳಿದರು ಎಂಬುದರ ಮೇಲೆ ಆಸಕ್ತಿ ಇದೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾರ್ವಕರ್, ಹಿಂದುತ್ವ ಎಂಬಂತೆ ಭಾವಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...