Homeಕರ್ನಾಟಕಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ?: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ...

ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ?: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

- Advertisement -
- Advertisement -

”ಕೇಂದ್ರ ಸರ್ಕಾರಕ್ಕೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ಮೋದಿ ನೋಡಿ ವೋಟ್ ಹಾಕಲಿಲ್ಲ ಎಂದು ದ್ವೇಷ ತೀರಿಸಿ ಕೊಳ್ತಿದ್ದೀರಾ?” ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ನಿರಾಕರಣೆ ಮಾಡಿದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಎನ್‌ಡಿಎ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

”ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ? ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸದೇ ಇದ್ದಲ್ಲಿ, ಕೇಂದ್ರದ‌ ಆಶಿರ್ವಾದ ಸಿಗೋದಿಲ್ಲ ಎಂದು ಧಮಕಿ ಹಾಕಿದ್ದರು. ಈಗ ಅದನ್ನು ಅನುಷ್ಠಾನಕ್ಕೆ ತರುತ್ತೀರಾ? ಎಂದು ಕೇಳಿದರು.

”ಬಿಜೆಪಿಗೆ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ಮರೆತುಹೋಗಿದೆ. ಅವರ ಆಡಳಿತ ನೋಡಿಯೇ ಜನರು ಅವರನ್ನು ಪ್ರತಿಪಕ್ಷ ಸ್ಥಾನದಲ್ಲಿ ಇಟ್ಟಿದ್ದಾರೆ. ಬೇರೆ ಕಡೆಯಿಂದ ಅಕ್ಕಿ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಯಾವುದೇ ರಾಜ್ಯ ಸರ್ಕಾರವಾದರೂ ಕೇಂದ್ರದಿಂದಲೇ ಅಕ್ಕಿ ತರಿಸಿಕೊಳ್ಳುವುದು ಸಹಜ. ಅದು ಕೇಂದ್ರದಿಂದಲೇ ಖರೀದಿ ಮಾಡಬೇಕು ಅಂತ ಇದೆ” ಎಂದರು.

ಇದನ್ನೂ ಓದಿ: ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಮುಂದಾದ ಪಂಜಾಬ್ ಸಿಎಂ ಭಗವಂತ್ ಮಾನ್

”ಕೇಂದ್ರದ ವಿರುದ್ಧ ನಾಳೆ ಪ್ರತಿಭಟನೆಗೆ ರಾಜ್ಯ ಬಿಜೆಪಿಗೂ ಆಹ್ವಾನ ಇದೆ. ನೀವು ಬನ್ನಿ, 25 ಸಂಸದರು ಇದ್ದಾರೆ, ಈಗಲಾದರೂ ಬನ್ನಿ. ಧಮ್ಮು ತಾಕತ್ತು ಅಂತೀರಲ್ಲ, ಅದನ್ನ ಈಗ ಬಂದು ತೋರಿಸಿ” ಎಂದು ಸವಾಲು ಹಾಕಿದರು.

ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ: 

ಉಚಿತ ಪ್ರಯಾಣದ ಕುರಿತು ಮಾತನಾಡಿ, ”ಈ ಯೋಜನೆಗೆ ಸಾವಿರಾರು ಕೋಟಿ ಆಗುತ್ತೆ ಅಂತ ಲೆಕ್ಕ ಹಾಕಿದ್ದೇವೆ. BMTC, KSRTC, NERTC, KKRTC ಯಾವುದೇ ಇರಬಹುದು. ಮಾತು ಕೊಟ್ಟಿದ್ದೇವೆ, ಅದರಂತೆ ನಡೆದುಕೊಳ್ತಿದ್ದೇವೆ” ಎಂದರು.

”ಬಿಜೆಪಿಯವರು ದೇವಸ್ಥಾನಕ್ಕೆ ಹೋಗಿ ಎಂದು ಹೇಳಿದರೂ ಯಾರೂ ಹೋಗುತ್ತಿರಲಿಲ್ಲ. ನಾವು ಯೋಜನೆ ತಂದ ಬಳಿಕ ಎಲ್ಲರೂ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ.  ಬಿಜೆಪಿಯವರು ಇದನ್ನು ವಿರೋಧಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...