Homeಮುಖಪುಟಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಎಷ್ಟು? ಮಾಹಿತಿ ಬಿಚ್ಚಿಟ್ಟ ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಎಷ್ಟು? ಮಾಹಿತಿ ಬಿಚ್ಚಿಟ್ಟ ಸುಪ್ರೀಂ ತೀರ್ಪು

- Advertisement -
- Advertisement -

ನಿನ್ನೆ(ಫೆ.15) ಸುಪ್ರೀಂ ಕೋರ್ಟ್‌ ರದ್ದುಗೊಳಿಸಿರುವ ಚುನಾವಣಾ ಬಾಂಡ್ ಯೋಜನೆಯ ಮೂಲಕ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) 6,566 ಕೋಟಿ ರೂ.ಗಳನ್ನು ಗಳಿಸಿತ್ತು ಎಂದು ತಿಳಿದು ಬಂದಿದೆ. ಮತದಾರರ ಮಾಹಿತಿ ಹಕ್ಕಿನ ಉಲ್ಲಂಘನೆಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬರೆದ ಪ್ರತ್ಯೇಕ ತೀರ್ಪಿನಲ್ಲಿ ರಾಜಕೀಯ ಪಕ್ಷಗಳು ಸಂಗ್ರಹಿಸಿರುವ ಹಣದ ವಿವರಗಳು ಬೆಳಕಿಗೆ ಬಂದಿವೆ.

ಬಿಜೆಪಿಯ ಚುನಾವಣಾ ಬಾಂಡ್ ಗಳಿಕೆಯು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬಾಂಡ್‌ಗಳ ಮೂಲಕ ಗಳಿಸಿದ್ದಕ್ಕಿಂತ ಸುಮಾರು ಆರು ಪಟ್ಟು ಹೆಚ್ಚಿದೆ. ಕಾಂಗ್ರೆಸ್‌ ಕೇವಲ 1,123 ಕೋಟಿ ರೂ. ಗಳಿಸಿತ್ತು ಎಂದು ವರದಿಗಳು ತಿಳಿಸಿವೆ. ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ದಾವೆ ಹೂಡಿದ್ದ ಸಿಪಿಎಂ ಪಕ್ಷ ಮಾತ್ರ ಬಾಂಡ್‌ಗಳ ಮೂಲಕ ಒಂದು ರೂಪಾಯಿಯನ್ನು ಕೂಡ ಸ್ವೀಕರಿಸಿಲ್ಲ ಎಂಬ ಮಾಹಿತಿ ದೊರೆತಿದೆ.

ಸಂಸತ್ತಿನಲ್ಲಿ ನೀಡಲಾದ ಅಂಕಿ ಅಂಶಗಳ ಪ್ರಕಾರ, ಇದುವರೆಗೆ 16,518 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಪ್ರತಿ ಪಕ್ಷಗಳು ಎಷ್ಟು ಪಡೆದಿವೆ ಎಂಬ ವಿವರಗಳನ್ನು ಸಂಸತ್ತಿನಲ್ಲಿ ಬಹಿರಂಗಪಡಿಸಿರಲಿಲ್ಲ. ಆಗ ಮಾಹಿತಿ ಈಗ ಸುಪ್ರೀಂ ಕೋರ್ಟ್‌ನ ತೀರ್ಪಿನ ಮೂಲಕ ಹೊರಬಿದ್ದಿದೆ.

ಇದುವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದವರ ಮಾಹಿತಿ ಸಿಗುತ್ತಿರಲಿಲ್ಲ. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಮಾರ್ಚ್ ಒಳಗೆ ಆ ಮಾಹಿತಿಯನ್ನು ಸ್ಟೇಟ್‌ ಬ್ಯಾಂಕ್ ಇಂಡಿಯಾ ಚುನಾವಣಾ ಆಯೋಗಕ್ಕೆ ನೀಡಬೇಕಾಗಿದೆ. ಚುನಾವಣಾ ಆಯೋಗ ಮಾರ್ಚ್ 13ರ ಒಳಗೆ ಆ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿಬೇಕು. ಪ್ರಸ್ತುತ ಲಭ್ಯವಿರುವ ಮಾಹಿತಿ ಪ್ರಕಾರ, 2017 ರಿಂದ 2023 ರ ಅವಧಿಯಲ್ಲಿ ಬಿಜೆಪಿಗೆ ಬಂದಿರುವ ದೇಣಿಗೆ 6,566 ಕೋಟಿ ತಲುಪಿದೆ ರೂಪಾಯಿ. ಚುನಾವಣಾ ಬಾಂಡ್‌ಗಳಿಂದ ಕೇಂದ್ರ ಅಥವಾ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷಗಳು ಹೆಚ್ಚು ಲಾಭ ಪಡೆದಿವೆ ಎಂದು ತಿಳಿದುಬಂದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ಇತರ ಪಕ್ಷಗಳ ಗಳಿಕೆ:
ತೃಣಮೂಲ ಕಾಂಗ್ರೆಸ್ : 1,092 ಕೋಟಿ ರೂ
ಬಿಜು ಜನತಾ ದಳ : 774 ಕೋಟಿ ರೂ
ಡಿಎಂಕೆ : 616 ಕೋಟಿ ರೂ
ಭಾರತ್ ರಾಷ್ಟ್ರ ಸಮಿತಿ (ಹಳೆಯ ಟಿಆರ್‌ಎಸ್) : 386 ಕೋಟಿ ರೂ
ವೈಎಸ್ಆರ್ ಕಾಂಗ್ರೆಸ್ : 382 ಕೋಟಿ ರೂ
ಟಿಡಿಪಿ : 146 ಕೋಟಿ ರೂ
ಶಿವಸೇನೆ : 101.38 ಕೋಟಿ ರೂ
ಆಮ್ ಆದ್ಮಿ ಪಕ್ಷ: 94.28 ಕೋಟಿ ರೂ

ಮಾರ್ಚ್ ನಂತರ ಪ್ರಸಕ್ತ ಹಣಕಾಸು ವರ್ಷದ ಅಂಕಿ ಅಂಶಗಳನ್ನು ಆಡಿಟ್ ಮಾಡಿದಾಗ ಈ ಅಂಕಿ ಅಂಶಗಳು ಮತ್ತೆ ಏರಿಕೆಯಾಗಲಿವೆ. ಶೇ. 92.45 ರಷ್ಟು ಚುನಾವಣಾ ಬಾಂಡ್‌ಗಳ ಮೌಲ್ಯವು 1 ಕೋಟಿ ರೂ. 1 ಸಾವಿರ ಮೌಲ್ಯದ ಕೇವಲ 99 ಬಾಂಡ್‌ಗಳನ್ನು ಮಾತ್ರ ನೀಡಲಾಗಿತ್ತು ಎಂದು ವರದಿಗಳಿಂದ ತಿಳಿದು ಬಂದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಸಾಂವಿಧಾನಿಕ ಪೀಠದ ಮುಂದೆ ಮಂಡಿಸಲಾಗಿದ್ದ ಪ್ರಮುಖ ವಾದಗಳಲ್ಲಿ ದೇಣಿಗೆಯ ಹೆಚ್ಚಿನ ಭಾಗವು ಕೇಂದ್ರದಲ್ಲಿ ಆಡಳಿತ ಪಕ್ಷಕ್ಕೆ ಹೋಗುತ್ತಿದೆ ಎಂಬುದಾಗಿತ್ತು. ಈ ಆತಂಕವು ಸರಿಯಾಗಿದೆ ಎಂದು ಮೇಲಿನ ದತ್ತಾಂಶ ಬಹಿರಂಗಪಡಿಸಿದೆ.

2014-15ರಿಂದ 2016-17ರ ಅವಧಿಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಅಪರಿಚಿತ ಮೂಲಗಳಿಂದ ಬಂದಿದ್ದ ದೇಣಿಗೆಯ ಪಾಲು ಶೇ.66ರಿಂದ 2018-19ರಿಂದ 2021-22ರ ಅವಧಿಯಲ್ಲಿ ಶೇ.72ಕ್ಕೆ ಏರಿಕೆಯಾಗಿದೆ.

2014-15ರಿಂದ 2016-17ರ ಅವಧಿಯಲ್ಲಿ ರಾಷ್ಟ್ರೀಯ ರಾಜಕೀಯ ಪಕ್ಷಗಳ ಒಟ್ಟು ಆದಾಯ ₹3,864 ಕೋಟಿಗಳಿಂದ 2018-19ರಿಂದ 2021-22ರ ಅವಧಿಯಲ್ಲಿ ₹11,829 ಕೋಟಿಗೆ ಏರಿದೆ.

ಒಟ್ಟಾರೆಯಾಗಿ, 2018-19 ರಿಂದ 2021-22 ರ ನಡುವೆ ಚುನಾವಣಾ ಬಾಂಡ್ ಯೋಜನೆಯಿಂದ ಬಂದ ಆದಾಯವು ರಾಷ್ಟ್ರೀಯ ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇಕಡಾ 58 ರಷ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:  ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...