Homeಮುಖಪುಟಚುನಾವಣಾ ಬಾಂಡ್: 745 ಕೋಟಿ ದೇಣಿಗೆ ಹೈದರಾಬಾದ್‌ ಮೂಲದ ಕಂಪೆನಿಗಳಿಂದ ಪಡೆದಿದ್ದ ಬಿಜೆಪಿ

ಚುನಾವಣಾ ಬಾಂಡ್: 745 ಕೋಟಿ ದೇಣಿಗೆ ಹೈದರಾಬಾದ್‌ ಮೂಲದ ಕಂಪೆನಿಗಳಿಂದ ಪಡೆದಿದ್ದ ಬಿಜೆಪಿ

- Advertisement -
- Advertisement -

ಬಿಜೆಪಿ ದೇಶದಲ್ಲಿ ಅತಿ ಹೆಚ್ಚು ಠೇವಣಿ ಅಂದರೆ 6,061 ಕೋಟಿ ರೂ. ಚುನಾವಣಾ ಬಾಂಡ್‌ ಮೂಲಕ ಪಡೆದಿದ್ದು, ಇದರಲ್ಲಿ ಶೇ.12ರಷ್ಟು ಅಂದರೆ 745 ಕೋಟಿ ರೂ.ಹೈದರಾಬಾದ್‌ ಮೂಲದ ಕಂಪೆನಿಗಳಿಂದ ದೇಣಿಗೆಯನ್ನು ಪಡೆದಿದೆ ಎನ್ನುವುದು ಇದೀಗ ಬಹಿರಂಗವಾಗಿದೆ.

2017-2018 ಮತ್ತು 2023-2024ರ ನಡುವೆ ಹೈದರಾಬಾದ್‌ನಲ್ಲಿ ಖರೀದಿಸಿದ ಸುಮಾರು 745 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ ನಿಧಿಯನ್ನು ಬಿಜೆಪಿ ಖಾತೆಗೆ ಜಮಾ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗದ ಡೇಟಾ ತೋರಿಸುತ್ತದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್, ರಿತ್ವಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್, ಗ್ರೀನ್ಕೋ ಅನಂತಪುರ ವಿಂಡ್ ಪವರ್ ಪ್ರೈವೇಟ್ ಲಿಮಿಟೆಡ್ ಮತ್ತು ದಿವ್ಯೇಶ್ ಪವರ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವಾರು ಸಂಸ್ಥೆಗಳು ಹೈದರಾಬಾದ್‌ನ ಎಸ್‌ಬಿಐ ಬ್ರಾಂಚ್‌ನಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಹೈದರಾಬಾದ್‌ನ ಮೇಘಾ ಇಂಜಿನಿಯರಿಂಗ್ (ಎಂಇಐಎಲ್) ಮಾತ್ರ ತಲಾ 1 ಕೋಟಿ ಮೌಲ್ಯದ 140 ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ, ಅವುಗಳಲ್ಲಿ ಹೆಚ್ಚಿನ ಹಣ ಬಿಜೆಪಿಗೆ ರವಾನೆಯಾಗಿದೆ. ಹೆಸರು ಸೂಚಿಸದ ಸಂಸ್ಥೆಯು ಬಿಜೆಪಿಗೆ ಅತ್ಯಧಿಕ ಮೊತ್ತದ ಸುಮಾರು 585 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ, ನಂತರ 195 ಕೋಟಿ ರೂಪಾಯಿಗಳನ್ನು ಬಿಆರ್‌ಎಸ್‌ಗೆ ಮತ್ತು 85 ಕೋಟಿ ರೂಪಾಯಿಗಳನ್ನು ಡಿಎಂಕೆಗೆ ನೀಡಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಅಕ್ಟೋಬರ್ 2020ರಲ್ಲಿ ರೂ 20 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅದೇ ವರ್ಷದ ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಏಷ್ಯಾದ ಅತಿ ಉದ್ದದ ರಸ್ತೆ ಸುರಂಗ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಕಂಪನಿಯು ಪಡೆದುಕೊಂಡಿದೆ.

ಹೈದರಾಬಾದ್‌ನಿಂದ ಎರಡನೇ ಮತ್ತು ಮೂರನೇ ಅತ್ಯಧಿಕ ಮೊತ್ತವು ಕ್ರಮವಾಗಿ 50 ಕೋಟಿ ರೂ. ಮತ್ತು 49 ಕೋಟಿ ರೂಗಳಾಗಿದ್ದು, ಕ್ರಮವಾಗಿ ನವೆಂಬರ್ 10, 2022 ಮತ್ತು ಡಿಸೆಂಬರ್ 12, 2022ರಂದು ಬಿಜೆಪಿಗೆ  ವರ್ಗಾವಣೆಯಾಗಿದೆ.

ಹೈದರಾಬಾದ್‌ನ ಇತರ ಚುನಾವಣಾ ಬಾಂಡ್‌ ದೇಣಿಗೆದಾರರಲ್ಲಿ ಈ ಹಿಂದೆ ಚುನಾವಣಾ ಬಾಂಡ್ ದೇಣಿಗೆ ನೀಡಲು ನಿರಾಕರಿಸಿದ್ದ ಯಶೋಧ ಆಸ್ಪತ್ರೆ ಸೇರಿದೆ. ಯಶೋಧ ಆಸ್ಪತ್ರೆ ಒಟ್ಟು 162 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ಬಿಆರ್‌ಎಸ್‌ಗೆ 94 ಕೋಟಿ, ಕಾಂಗ್ರೆಸ್‌ಗೆ 64 ಕೋಟಿ, ಬಿಜೆಪಿಗೆ 2 ಕೋಟಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ 1 ಕೋಟಿ ರೂಪಾಯಿ ನೀಡಲಾಗಿದೆ ಎಂದು ಇತ್ತೀಚಿನ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಆಸ್ಪತ್ರೆ ಡಿಸೆಂಬರ್ 2020 ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಗೆ ಒಳಪಟ್ಟಿತ್ತು ಎನ್ನಲಾಗಿದೆ.

ಮೊದಲ ಪಟ್ಟಿ ಬಿಡುಗಡೆಯಾದ ನಂತರ, ಹೈದರಾಬಾದ್‌ನ ಯಶೋದಾ ಆಸ್ಪತ್ರೆ ದೇಣಿಗೆ ನೀಡಿರುವುದನ್ನು ನಿರಾಕರಿಸಿದೆ ಮತ್ತು ಗಾಜಿಯಾಬಾದ್‌ನ ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿರಬಹುದು ಎಂದು ಹೇಳಿತ್ತು. ಆದರೆ ಗಾಜಿಯಾಬಾದ್‌ನ ಯಶೋಧ ಆಸ್ಪತ್ರೆ ಕೂಡ ದೇಣಿಗೆ ನೀಡಿರುವುದನ್ನು ತಳ್ಳಿಹಾಕಿದೆ.

ಇದನ್ನು ಓದಿ: ಚುನಾವಣಾ ಬಾಂಡ್ ಖರೀದಿಸಿದ್ದ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಆರೋಪಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...