Homeಮುಖಪುಟಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

- Advertisement -
- Advertisement -

ಭಾರತದ ಧಾರಾವಿ ಸ್ಲಂ ಏಷ್ಯಾ ಖಂಡದ ಅತ್ಯಂತ ಜನದಟ್ಟಣೆಯ ಸ್ಲಂ ಆಗಿದೆ. ಇಲ್ಲಿ ಸುಮಾರು ಎಂಟೂವರೆ ಲಕ್ಷ ಜನ ವಾಸಿಸುತ್ತಿದ್ದಾರೆ. ಇಲ್ಲಿ ಏಪ್ರಿಲ್ 1ರಂದು ಮೊದಲ ಕೊರೊನಾ ವೈರಸ್‌ ಕಾಣಿಸಿಕೊಂಡಾಗ ದೇಶವೇ ಬೆಚ್ಚಿ ಬಿದ್ದಿತ್ತು. ಏಕೆಂದರೆ ಕೊರೊನಾ ಒಂದು ಸಾಂಕ್ರಾಮಿಕ ವೈರಸ್ ಆದ್ದರಿಂದ ಈ ಜನದಟ್ಟಣೆಯ ಸ್ಲಂನಲ್ಲಿ ಕ್ವಾರಂಟೈನ್‌ ಆಗುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕನಸೇ ಸರಿ ಎಂದು ಹಲವರು ಭಯಭೀತರಾಗಿದ್ದರು. ಅಂತೆಯೇ ಮೇ ತಿಂಗಳಿನಲ್ಲಿ ದಿನಕ್ಕೆ ಸುಮಾರು 60 ಪ್ರಕರಣದಲ್ಲಿ ಈ ಸ್ಲಂನೊಂದರಿಂದಲೇ ದಾಖಲಾಗುತ್ತಿದ್ದವು. ಆದರೆ ಕೊರೊನಾ ಎದುರಿಸುವಲ್ಲಿ ಧಾರಾವಿ ಯಶಸ್ವಿಯಾಗಿದೆ. ಈಗ ದಿನಕ್ಕೆ ವರದಿಯಾಗುವ ಪ್ರಕರಣಗಳ ಸಂಖ್ಯೆ 20ಕ್ಕೆ ಇಳಿದಿದೆ. ಅಲ್ಲದೇ ಮುಂಬೈನ ಧಾರಾವಿ ಸ್ಲಂ ಹಾಟ್‌ಸ್ಪಾಟ್‌ನಿಂದ ಹೊರಬಂದಿದ್ದು, ಕೊರೊನಾ ನಿಯಂತ್ರಣದಲ್ಲಿ ಹೆಣಗಾಡುತ್ತಿರುವ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಒಂದು ಮಾದರಿಯಾಗಿದೆ.

ಸದ್ಯದ ಸ್ಥಿತಿ

ಜೂನ್ 12 ರ ಹೊತ್ತಿಗೆ, ಧಾರಾವಿ 2,013 ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಆದರೆ ಅದರ ದೈನಂದಿನ ಬೆಳವಣಿಗೆಯ ದರವು ಕೇವಲ 1.57 ಶೇಕಡಾ ಇದೆ. ಅಂದರೆ ಮುಂಬೈ ನಗರದಲ್ಲಿ ದೈನಂದಿನ ದರ 3 ಶೇಕಡಾ ಇದ್ದರೆ, ಪಿ ನಾರ್ತ್, ಆರ್ ಸೌತ್ ಮತ್ತು ಎಸ್ ವಾರ್ಡ್‌ಗಳಂತಹ ಇತರ ವಾರ್ಡ್‌ಗಳಲ್ಲಿ 5 ಪ್ರತಿಶತದಷ್ಟು ಇದೆ.

ಮೇ 30 ಮತ್ತು ಜೂನ್ 8 ರ ನಡುವೆ ಯಾವುದೇ ಸಾವುಗಳು ದಾಖಲಾಗಿಲ್ಲ. ಆದರೆ ಕಳೆದ ನಾಲ್ಕು ದಿನಗಳಲ್ಲಿ ಆರು ಸಾವುಗಳು ವರದಿಯಾಗಿದ್ದು ಈ ಸಂಖ್ಯೆ 77 ಕ್ಕೆ ತಲುಪಿದೆ.

ಸಾಧ್ಯವಾದುದ್ದಾದರೂ ಹೇಗೆ?

ನವೀನ ಸರಣಿ ಪ್ರಯೋಗಗಳನ್ನು ನಡೆಸಿದ್ದು, ಖಾಸಗಿ ವೈದ್ಯರನ್ನು ಕರೆತರುವುದು, ದುರ್ಬಲ ಜನರನ್ನು ಪ್ರತ್ಯೇಕಿಸುವುದು, ದೊಡ್ಡ ಕ್ವಾರಂಟೈನ್‌ ಸೌಲಭ್ಯಗಳನ್ನು ಪಡೆಯುವುದು ಮತ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದು – ಈ ತಂತ್ರವನ್ನು ಇಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.

ಅಲ್ಲಿನ ಜನರ ತಾಪಮಾನವನ್ನು ಅಳೆಯಲು ಅಧಿಕಾರಿಗಳು ಏಪ್ರಿಲ್‌ನಿಂದ ಇದುವರೆಗೆ 47,500 ಕುಟುಂಬಗಳ ಬಾಗಿಲು ಬಡಿದಿದ್ದಾರೆ. ಈ ಕೊಳೆಗೇರಿ ಕ್ಲಸ್ಟರ್‌ನಲ್ಲಿ ಸುಮಾರು 7,00,000 ಜನರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 9000 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ  ಜ್ವರ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದಾರೆ.  ಇಲ್ಲಿ ರೋಗಲಕ್ಷಣಗಳನ್ನು ತೋರಿಸುವವರನ್ನು ಹತ್ತಿರದ ಶಾಲೆಗಳಿಗೆ ಸ್ಥಳಾಂತರಿಸಲಾಯಿತು ಮತ್ತು ಕ್ರೀಡಾ ಕ್ಲಬ್‌ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಯಿತು. ಮೇ ಆರಂಭಕ್ಕೆ ಹೋಲಿಸಿದರೆ ತಾಜಾ ದೈನಂದಿನ ಸೋಂಕುಗಳು ಈಗ ಮೂರನೇ ಒಂದು ಭಾಗಕ್ಕೆ ಇಳಿದಿವೆ, ಅರ್ಧಕ್ಕಿಂತ ಹೆಚ್ಚು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ, ಮತ್ತು ಈ ತಿಂಗಳ ಸಾವಿನ ಸಂಖ್ಯೆಯು ಕುಸಿದಿದೆ.

ಈ ಸಂಖ್ಯೆಗಳು ಭಾರತದ ಉಳಿದ ಭಾಗಗಳಿಗೆ ತದ್ವಿರುದ್ಧವಾಗಿವೆ. ಏಕೆಂದರೆ ಮೇ ನಂತರ ಪ್ರಕರಣು ಕಂಡುಬಂದಲೆಲ್ಲಾ ನಿಯಂತ್ರಣಕ್ಕೆ ಸಿಗದೇ ಓಡುತ್ತಿವೆ. ಆದರೆ ಧಾರಾವಿ ಸಂಪೂರ್ಣ ನಿಯಂತ್ರನದಲ್ಲಿದೆ.

“ದೈಹಿಕ ದೂರವನ್ನು ಅನುಸರಿಸುವುದು ಅಸಾಧ್ಯವಾದದ್ದು” ಎಂದು ಧಾರಾವಿ ಯಲ್ಲಿ ಹೋರಾಟವನ್ನು ಮುನ್ನಡೆಸುವ ಉಸ್ತುವಾರಿ ವಹಿಸಿರುವ ಮುಂಬೈ ಪುರಸಭೆಯ ಸಹಾಯಕ ಆಯುಕ್ತ ಕಿರಣ್ ದಿಘವ್ಕರ್ ಹೇಳುತ್ತಾರೆ. “ಪ್ರಕರಣಗಳು ದಾಖಲಾಗುವವರೆಗೆ ಕಾಯುವ ಬದಲು ವೈರಸ್ ಅನ್ನು ಬೆನ್ನಟ್ಟುವುದು ಒಂದೇ ಆಯ್ಕೆಯಾಗಿದೆ. ಬನ್ನಿ ಪ್ರತಿಕ್ರಿಯೆಗೆ ಬದಲಾಗಿ ಪೂರ್ವಭಾವಿಯಾಗಿ ಕೆಲಸ ಮಾಡೋಣ ಎಂಬುದು ಅವರ ಧ್ಯೇಯವಾಕ್ಯವಾಗಿದೆ.”

“ನಾವು ಆರಂಭಿಕ ಹಂತಗಳಲ್ಲಿಯೇ ಜನರನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿದೆ ಮತ್ತು ಅಗತ್ಯವಿದ್ದವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದೆವೆ. ಅಂದರೆ ಮುಂಬಯಿಯ ಉಳಿದ ಭಾಗಗಳಲ್ಲಿ ಹೆಚ್ಚಿನ ರೋಗಿಗಳು ತಡವಾಗಿ ಆಸ್ಪತ್ರೆಗಳನ್ನು ತಲುಪುತ್ತಿದ್ದಾರೆ, ಆದರೆ ನಾವು ಅದಕ್ಕೆ ವಿರುದ್ಧವಾಗಿ ಕೂಡಲೇ ಚಿಕಿತ್ಸೆ ಆರಂಭಿಸುತ್ತಿರುವುದು ಫಲ ಕೊಟ್ಟಿದೆ. ಇದು ಮರಣ ಪ್ರಮಾಣವನ್ನು ಕುಗ್ಗಿಸಿದೆ ಎನ್ನುತ್ತಾರೆ.

ಉಚಿತ ಸೇವೆಗಳು

ಐಸೋಲೇಶನ್‌ ಕೇಂದ್ರಗಳಲ್ಲಿರುವ ಪ್ರತಿಯೊಬ್ಬರೂ ಉಚಿತವಾಗಿ ದಿನದ 24 ಗಂಟೆಯೂ ಸಹ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವೀಚಾರಣೆ ಪಡೆಯುತ್ತಿದ್ದಾರೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಜನರು ತಮ್ಮನ್ನು ತಾವು ಕ್ವಾರಂಟೈನ್‌ಗೆ ಒಳಗಾಗಲು ಸ್ವಯಂಪ್ರೇರಿತರಾಗುತ್ತಾರೆ ಎಂದು ದಿಘವ್ಕರ್ ಹೇಳುತ್ತಾರೆ.

ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಯಾವುದೇ ಒತ್ತಡ ಮಾಡಬಾರದು ಎನ್ನುವ ಅವರು ಬದಲಿಗೆ ಸ್ಕ್ರೀನಿಂಗ್ ಮತ್ತು ಸಮಯೋಚಿತ ಚಿಕಿತ್ಸೆಯತ್ತ ಗಮನ ಹರಿಸಬೇಕಾಗಿದೆ. ಏಕೆಂದರೆ ನಮ್ಮ ಅಂತಿಮ ಗುರಿ ಜೀವಗಳನ್ನು ಉಳಿಸುವುದು ಎನ್ನುತ್ತಾರೆ.

ಇನ್ನು ಮುಗಿದಿಲ್ಲ ಯುದ್ಧ!

ಆದರೂ, ವೈರಸ್ ವಿರುದ್ಧದ ಧಾರಾವಿ ಯುದ್ಧ ಮುಗಿದಿಲ್ಲ. ಲಾಕ್ ಡೌನ್ ಸಮಯದಲ್ಲಿ ಪುರಸಭೆ ಇಲ್ಲಿನ 24,000 ಕುಟುಂಬಗಳಿಗೆ ಪಡಿತರವನ್ನು ನೀಡಿದೆ. 11,000 ಇಫ್ತಾರ್ ಊಟ ಸೇರಿದಂತೆ 19,000 ಜನರಿಗೆ ಆಹಾರವನ್ನು ನೀಡಿತು. ಆದರೂ ಇಲ್ಲಿನ ಜನಸಂಖ್ಯೆಗೆ ಹೋಲಿಸಿದರೆ ಇದು ಏನೇನೂ ಅಲ್ಲ. ಲಾಕ್ ಡೌನ್ ನಂತರ ಹೆಚ್ಚಿನ ನಿವಾಸಿಗಳು ಈಗ ನಿರುದ್ಯೋಗಿಗಳಾಗಿದ್ದಾರೆ ಮತ್ತು ಪಡಿತರ ಅಂಗಡಿಗಳು ಅಕ್ಕಿ ಮತ್ತು ಗೋಧಿಯನ್ನು ಮಾತ್ರ ನೀಡುತ್ತಿವೆ. ಇದು ಧಾರಾವಿಯನ್ನು ಚಿಂತೆಗೀಡು ಮಾಡಿದೆ.

ಮುಂದೆ ಲಾಕ್‌ಡೌನ್‌ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಿದ ನಂತರ ಮತ್ತು ಜನರು ತಮ್ಮ ಕೆಲಸಕ್ಕೆ ತೆರಳಿದಾಗ ಎರಡನೇ ಹಂತದಲ್ಲಿ ಸೋಂಕು ಹರಡುವ ಅಪಾಯವಿದೆ. ಹಾಗಾಗಿ ವೈರಸ್ ಇಡೀ ನಗರ, ರಾಜ್ಯ, ಮತ್ತು ದೇಶದಿಂದ ಹೋಗುವವರೆಗೆ ಯುದ್ಧವು ಮುಗಿಯುವುದಿಲ್ಲ ಎಂದು ದಿಘವ್ಕರ್ ಹೇಳುತ್ತಾರೆ”. ಜನರು ಹೇಗೆ ಸುರಕ್ಷಿತವಾಗಿರಬೇಕು ಎಂಬುದರ ಬಗ್ಗೆ ಈಗ ಸಾಕಷ್ಟು ತಿಳಿದಿದ್ದಾರೆ ಮತ್ತು ಲಾಕ್‌ಡೌನ್ ಮುಗಿಯುವ ಹೊತ್ತಿಗೆ, ನಮ್ಮಲ್ಲಿ ಹೆಚ್ಚಿನವರು ಹರ್ಡ್ ಇಮ್ಯುನಿಟಿ (ಹಿಂಡಿನ ಪ್ರತಿರಕ್ಷೆ) ಯನ್ನು ಪಡೆದಿರಬಹುದು ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ.


ಇದನ್ನೂ ಓದಿ: ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...