Homeಮುಖಪುಟಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

- Advertisement -
- Advertisement -

ಭಾರತದ ಧಾರಾವಿ ಸ್ಲಂ ಏಷ್ಯಾ ಖಂಡದ ಅತ್ಯಂತ ಜನದಟ್ಟಣೆಯ ಸ್ಲಂ ಆಗಿದೆ. ಇಲ್ಲಿ ಸುಮಾರು ಎಂಟೂವರೆ ಲಕ್ಷ ಜನ ವಾಸಿಸುತ್ತಿದ್ದಾರೆ. ಇಲ್ಲಿ ಏಪ್ರಿಲ್ 1ರಂದು ಮೊದಲ ಕೊರೊನಾ ವೈರಸ್‌ ಕಾಣಿಸಿಕೊಂಡಾಗ ದೇಶವೇ ಬೆಚ್ಚಿ ಬಿದ್ದಿತ್ತು. ಏಕೆಂದರೆ ಕೊರೊನಾ ಒಂದು ಸಾಂಕ್ರಾಮಿಕ ವೈರಸ್ ಆದ್ದರಿಂದ ಈ ಜನದಟ್ಟಣೆಯ ಸ್ಲಂನಲ್ಲಿ ಕ್ವಾರಂಟೈನ್‌ ಆಗುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕನಸೇ ಸರಿ ಎಂದು ಹಲವರು ಭಯಭೀತರಾಗಿದ್ದರು. ಅಂತೆಯೇ ಮೇ ತಿಂಗಳಿನಲ್ಲಿ ದಿನಕ್ಕೆ ಸುಮಾರು 60 ಪ್ರಕರಣದಲ್ಲಿ ಈ ಸ್ಲಂನೊಂದರಿಂದಲೇ ದಾಖಲಾಗುತ್ತಿದ್ದವು. ಆದರೆ ಕೊರೊನಾ ಎದುರಿಸುವಲ್ಲಿ ಧಾರಾವಿ ಯಶಸ್ವಿಯಾಗಿದೆ. ಈಗ ದಿನಕ್ಕೆ ವರದಿಯಾಗುವ ಪ್ರಕರಣಗಳ ಸಂಖ್ಯೆ 20ಕ್ಕೆ ಇಳಿದಿದೆ. ಅಲ್ಲದೇ ಮುಂಬೈನ ಧಾರಾವಿ ಸ್ಲಂ ಹಾಟ್‌ಸ್ಪಾಟ್‌ನಿಂದ ಹೊರಬಂದಿದ್ದು, ಕೊರೊನಾ ನಿಯಂತ್ರಣದಲ್ಲಿ ಹೆಣಗಾಡುತ್ತಿರುವ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಒಂದು ಮಾದರಿಯಾಗಿದೆ.

ಸದ್ಯದ ಸ್ಥಿತಿ

ಜೂನ್ 12 ರ ಹೊತ್ತಿಗೆ, ಧಾರಾವಿ 2,013 ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಆದರೆ ಅದರ ದೈನಂದಿನ ಬೆಳವಣಿಗೆಯ ದರವು ಕೇವಲ 1.57 ಶೇಕಡಾ ಇದೆ. ಅಂದರೆ ಮುಂಬೈ ನಗರದಲ್ಲಿ ದೈನಂದಿನ ದರ 3 ಶೇಕಡಾ ಇದ್ದರೆ, ಪಿ ನಾರ್ತ್, ಆರ್ ಸೌತ್ ಮತ್ತು ಎಸ್ ವಾರ್ಡ್‌ಗಳಂತಹ ಇತರ ವಾರ್ಡ್‌ಗಳಲ್ಲಿ 5 ಪ್ರತಿಶತದಷ್ಟು ಇದೆ.

ಮೇ 30 ಮತ್ತು ಜೂನ್ 8 ರ ನಡುವೆ ಯಾವುದೇ ಸಾವುಗಳು ದಾಖಲಾಗಿಲ್ಲ. ಆದರೆ ಕಳೆದ ನಾಲ್ಕು ದಿನಗಳಲ್ಲಿ ಆರು ಸಾವುಗಳು ವರದಿಯಾಗಿದ್ದು ಈ ಸಂಖ್ಯೆ 77 ಕ್ಕೆ ತಲುಪಿದೆ.

ಸಾಧ್ಯವಾದುದ್ದಾದರೂ ಹೇಗೆ?

ನವೀನ ಸರಣಿ ಪ್ರಯೋಗಗಳನ್ನು ನಡೆಸಿದ್ದು, ಖಾಸಗಿ ವೈದ್ಯರನ್ನು ಕರೆತರುವುದು, ದುರ್ಬಲ ಜನರನ್ನು ಪ್ರತ್ಯೇಕಿಸುವುದು, ದೊಡ್ಡ ಕ್ವಾರಂಟೈನ್‌ ಸೌಲಭ್ಯಗಳನ್ನು ಪಡೆಯುವುದು ಮತ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದು – ಈ ತಂತ್ರವನ್ನು ಇಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.

ಅಲ್ಲಿನ ಜನರ ತಾಪಮಾನವನ್ನು ಅಳೆಯಲು ಅಧಿಕಾರಿಗಳು ಏಪ್ರಿಲ್‌ನಿಂದ ಇದುವರೆಗೆ 47,500 ಕುಟುಂಬಗಳ ಬಾಗಿಲು ಬಡಿದಿದ್ದಾರೆ. ಈ ಕೊಳೆಗೇರಿ ಕ್ಲಸ್ಟರ್‌ನಲ್ಲಿ ಸುಮಾರು 7,00,000 ಜನರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 9000 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ  ಜ್ವರ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದಾರೆ.  ಇಲ್ಲಿ ರೋಗಲಕ್ಷಣಗಳನ್ನು ತೋರಿಸುವವರನ್ನು ಹತ್ತಿರದ ಶಾಲೆಗಳಿಗೆ ಸ್ಥಳಾಂತರಿಸಲಾಯಿತು ಮತ್ತು ಕ್ರೀಡಾ ಕ್ಲಬ್‌ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಯಿತು. ಮೇ ಆರಂಭಕ್ಕೆ ಹೋಲಿಸಿದರೆ ತಾಜಾ ದೈನಂದಿನ ಸೋಂಕುಗಳು ಈಗ ಮೂರನೇ ಒಂದು ಭಾಗಕ್ಕೆ ಇಳಿದಿವೆ, ಅರ್ಧಕ್ಕಿಂತ ಹೆಚ್ಚು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ, ಮತ್ತು ಈ ತಿಂಗಳ ಸಾವಿನ ಸಂಖ್ಯೆಯು ಕುಸಿದಿದೆ.

ಈ ಸಂಖ್ಯೆಗಳು ಭಾರತದ ಉಳಿದ ಭಾಗಗಳಿಗೆ ತದ್ವಿರುದ್ಧವಾಗಿವೆ. ಏಕೆಂದರೆ ಮೇ ನಂತರ ಪ್ರಕರಣು ಕಂಡುಬಂದಲೆಲ್ಲಾ ನಿಯಂತ್ರಣಕ್ಕೆ ಸಿಗದೇ ಓಡುತ್ತಿವೆ. ಆದರೆ ಧಾರಾವಿ ಸಂಪೂರ್ಣ ನಿಯಂತ್ರನದಲ್ಲಿದೆ.

“ದೈಹಿಕ ದೂರವನ್ನು ಅನುಸರಿಸುವುದು ಅಸಾಧ್ಯವಾದದ್ದು” ಎಂದು ಧಾರಾವಿ ಯಲ್ಲಿ ಹೋರಾಟವನ್ನು ಮುನ್ನಡೆಸುವ ಉಸ್ತುವಾರಿ ವಹಿಸಿರುವ ಮುಂಬೈ ಪುರಸಭೆಯ ಸಹಾಯಕ ಆಯುಕ್ತ ಕಿರಣ್ ದಿಘವ್ಕರ್ ಹೇಳುತ್ತಾರೆ. “ಪ್ರಕರಣಗಳು ದಾಖಲಾಗುವವರೆಗೆ ಕಾಯುವ ಬದಲು ವೈರಸ್ ಅನ್ನು ಬೆನ್ನಟ್ಟುವುದು ಒಂದೇ ಆಯ್ಕೆಯಾಗಿದೆ. ಬನ್ನಿ ಪ್ರತಿಕ್ರಿಯೆಗೆ ಬದಲಾಗಿ ಪೂರ್ವಭಾವಿಯಾಗಿ ಕೆಲಸ ಮಾಡೋಣ ಎಂಬುದು ಅವರ ಧ್ಯೇಯವಾಕ್ಯವಾಗಿದೆ.”

“ನಾವು ಆರಂಭಿಕ ಹಂತಗಳಲ್ಲಿಯೇ ಜನರನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿದೆ ಮತ್ತು ಅಗತ್ಯವಿದ್ದವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದೆವೆ. ಅಂದರೆ ಮುಂಬಯಿಯ ಉಳಿದ ಭಾಗಗಳಲ್ಲಿ ಹೆಚ್ಚಿನ ರೋಗಿಗಳು ತಡವಾಗಿ ಆಸ್ಪತ್ರೆಗಳನ್ನು ತಲುಪುತ್ತಿದ್ದಾರೆ, ಆದರೆ ನಾವು ಅದಕ್ಕೆ ವಿರುದ್ಧವಾಗಿ ಕೂಡಲೇ ಚಿಕಿತ್ಸೆ ಆರಂಭಿಸುತ್ತಿರುವುದು ಫಲ ಕೊಟ್ಟಿದೆ. ಇದು ಮರಣ ಪ್ರಮಾಣವನ್ನು ಕುಗ್ಗಿಸಿದೆ ಎನ್ನುತ್ತಾರೆ.

ಉಚಿತ ಸೇವೆಗಳು

ಐಸೋಲೇಶನ್‌ ಕೇಂದ್ರಗಳಲ್ಲಿರುವ ಪ್ರತಿಯೊಬ್ಬರೂ ಉಚಿತವಾಗಿ ದಿನದ 24 ಗಂಟೆಯೂ ಸಹ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವೀಚಾರಣೆ ಪಡೆಯುತ್ತಿದ್ದಾರೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಜನರು ತಮ್ಮನ್ನು ತಾವು ಕ್ವಾರಂಟೈನ್‌ಗೆ ಒಳಗಾಗಲು ಸ್ವಯಂಪ್ರೇರಿತರಾಗುತ್ತಾರೆ ಎಂದು ದಿಘವ್ಕರ್ ಹೇಳುತ್ತಾರೆ.

ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಯಾವುದೇ ಒತ್ತಡ ಮಾಡಬಾರದು ಎನ್ನುವ ಅವರು ಬದಲಿಗೆ ಸ್ಕ್ರೀನಿಂಗ್ ಮತ್ತು ಸಮಯೋಚಿತ ಚಿಕಿತ್ಸೆಯತ್ತ ಗಮನ ಹರಿಸಬೇಕಾಗಿದೆ. ಏಕೆಂದರೆ ನಮ್ಮ ಅಂತಿಮ ಗುರಿ ಜೀವಗಳನ್ನು ಉಳಿಸುವುದು ಎನ್ನುತ್ತಾರೆ.

ಇನ್ನು ಮುಗಿದಿಲ್ಲ ಯುದ್ಧ!

ಆದರೂ, ವೈರಸ್ ವಿರುದ್ಧದ ಧಾರಾವಿ ಯುದ್ಧ ಮುಗಿದಿಲ್ಲ. ಲಾಕ್ ಡೌನ್ ಸಮಯದಲ್ಲಿ ಪುರಸಭೆ ಇಲ್ಲಿನ 24,000 ಕುಟುಂಬಗಳಿಗೆ ಪಡಿತರವನ್ನು ನೀಡಿದೆ. 11,000 ಇಫ್ತಾರ್ ಊಟ ಸೇರಿದಂತೆ 19,000 ಜನರಿಗೆ ಆಹಾರವನ್ನು ನೀಡಿತು. ಆದರೂ ಇಲ್ಲಿನ ಜನಸಂಖ್ಯೆಗೆ ಹೋಲಿಸಿದರೆ ಇದು ಏನೇನೂ ಅಲ್ಲ. ಲಾಕ್ ಡೌನ್ ನಂತರ ಹೆಚ್ಚಿನ ನಿವಾಸಿಗಳು ಈಗ ನಿರುದ್ಯೋಗಿಗಳಾಗಿದ್ದಾರೆ ಮತ್ತು ಪಡಿತರ ಅಂಗಡಿಗಳು ಅಕ್ಕಿ ಮತ್ತು ಗೋಧಿಯನ್ನು ಮಾತ್ರ ನೀಡುತ್ತಿವೆ. ಇದು ಧಾರಾವಿಯನ್ನು ಚಿಂತೆಗೀಡು ಮಾಡಿದೆ.

ಮುಂದೆ ಲಾಕ್‌ಡೌನ್‌ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಿದ ನಂತರ ಮತ್ತು ಜನರು ತಮ್ಮ ಕೆಲಸಕ್ಕೆ ತೆರಳಿದಾಗ ಎರಡನೇ ಹಂತದಲ್ಲಿ ಸೋಂಕು ಹರಡುವ ಅಪಾಯವಿದೆ. ಹಾಗಾಗಿ ವೈರಸ್ ಇಡೀ ನಗರ, ರಾಜ್ಯ, ಮತ್ತು ದೇಶದಿಂದ ಹೋಗುವವರೆಗೆ ಯುದ್ಧವು ಮುಗಿಯುವುದಿಲ್ಲ ಎಂದು ದಿಘವ್ಕರ್ ಹೇಳುತ್ತಾರೆ”. ಜನರು ಹೇಗೆ ಸುರಕ್ಷಿತವಾಗಿರಬೇಕು ಎಂಬುದರ ಬಗ್ಗೆ ಈಗ ಸಾಕಷ್ಟು ತಿಳಿದಿದ್ದಾರೆ ಮತ್ತು ಲಾಕ್‌ಡೌನ್ ಮುಗಿಯುವ ಹೊತ್ತಿಗೆ, ನಮ್ಮಲ್ಲಿ ಹೆಚ್ಚಿನವರು ಹರ್ಡ್ ಇಮ್ಯುನಿಟಿ (ಹಿಂಡಿನ ಪ್ರತಿರಕ್ಷೆ) ಯನ್ನು ಪಡೆದಿರಬಹುದು ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ.


ಇದನ್ನೂ ಓದಿ: ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...