Homeಮುಖಪುಟಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

- Advertisement -
- Advertisement -

ಭಾರತದ ಧಾರಾವಿ ಸ್ಲಂ ಏಷ್ಯಾ ಖಂಡದ ಅತ್ಯಂತ ಜನದಟ್ಟಣೆಯ ಸ್ಲಂ ಆಗಿದೆ. ಇಲ್ಲಿ ಸುಮಾರು ಎಂಟೂವರೆ ಲಕ್ಷ ಜನ ವಾಸಿಸುತ್ತಿದ್ದಾರೆ. ಇಲ್ಲಿ ಏಪ್ರಿಲ್ 1ರಂದು ಮೊದಲ ಕೊರೊನಾ ವೈರಸ್‌ ಕಾಣಿಸಿಕೊಂಡಾಗ ದೇಶವೇ ಬೆಚ್ಚಿ ಬಿದ್ದಿತ್ತು. ಏಕೆಂದರೆ ಕೊರೊನಾ ಒಂದು ಸಾಂಕ್ರಾಮಿಕ ವೈರಸ್ ಆದ್ದರಿಂದ ಈ ಜನದಟ್ಟಣೆಯ ಸ್ಲಂನಲ್ಲಿ ಕ್ವಾರಂಟೈನ್‌ ಆಗುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕನಸೇ ಸರಿ ಎಂದು ಹಲವರು ಭಯಭೀತರಾಗಿದ್ದರು. ಅಂತೆಯೇ ಮೇ ತಿಂಗಳಿನಲ್ಲಿ ದಿನಕ್ಕೆ ಸುಮಾರು 60 ಪ್ರಕರಣದಲ್ಲಿ ಈ ಸ್ಲಂನೊಂದರಿಂದಲೇ ದಾಖಲಾಗುತ್ತಿದ್ದವು. ಆದರೆ ಕೊರೊನಾ ಎದುರಿಸುವಲ್ಲಿ ಧಾರಾವಿ ಯಶಸ್ವಿಯಾಗಿದೆ. ಈಗ ದಿನಕ್ಕೆ ವರದಿಯಾಗುವ ಪ್ರಕರಣಗಳ ಸಂಖ್ಯೆ 20ಕ್ಕೆ ಇಳಿದಿದೆ. ಅಲ್ಲದೇ ಮುಂಬೈನ ಧಾರಾವಿ ಸ್ಲಂ ಹಾಟ್‌ಸ್ಪಾಟ್‌ನಿಂದ ಹೊರಬಂದಿದ್ದು, ಕೊರೊನಾ ನಿಯಂತ್ರಣದಲ್ಲಿ ಹೆಣಗಾಡುತ್ತಿರುವ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಒಂದು ಮಾದರಿಯಾಗಿದೆ.

ಸದ್ಯದ ಸ್ಥಿತಿ

ಜೂನ್ 12 ರ ಹೊತ್ತಿಗೆ, ಧಾರಾವಿ 2,013 ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಆದರೆ ಅದರ ದೈನಂದಿನ ಬೆಳವಣಿಗೆಯ ದರವು ಕೇವಲ 1.57 ಶೇಕಡಾ ಇದೆ. ಅಂದರೆ ಮುಂಬೈ ನಗರದಲ್ಲಿ ದೈನಂದಿನ ದರ 3 ಶೇಕಡಾ ಇದ್ದರೆ, ಪಿ ನಾರ್ತ್, ಆರ್ ಸೌತ್ ಮತ್ತು ಎಸ್ ವಾರ್ಡ್‌ಗಳಂತಹ ಇತರ ವಾರ್ಡ್‌ಗಳಲ್ಲಿ 5 ಪ್ರತಿಶತದಷ್ಟು ಇದೆ.

ಮೇ 30 ಮತ್ತು ಜೂನ್ 8 ರ ನಡುವೆ ಯಾವುದೇ ಸಾವುಗಳು ದಾಖಲಾಗಿಲ್ಲ. ಆದರೆ ಕಳೆದ ನಾಲ್ಕು ದಿನಗಳಲ್ಲಿ ಆರು ಸಾವುಗಳು ವರದಿಯಾಗಿದ್ದು ಈ ಸಂಖ್ಯೆ 77 ಕ್ಕೆ ತಲುಪಿದೆ.

ಸಾಧ್ಯವಾದುದ್ದಾದರೂ ಹೇಗೆ?

ನವೀನ ಸರಣಿ ಪ್ರಯೋಗಗಳನ್ನು ನಡೆಸಿದ್ದು, ಖಾಸಗಿ ವೈದ್ಯರನ್ನು ಕರೆತರುವುದು, ದುರ್ಬಲ ಜನರನ್ನು ಪ್ರತ್ಯೇಕಿಸುವುದು, ದೊಡ್ಡ ಕ್ವಾರಂಟೈನ್‌ ಸೌಲಭ್ಯಗಳನ್ನು ಪಡೆಯುವುದು ಮತ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದು – ಈ ತಂತ್ರವನ್ನು ಇಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.

ಅಲ್ಲಿನ ಜನರ ತಾಪಮಾನವನ್ನು ಅಳೆಯಲು ಅಧಿಕಾರಿಗಳು ಏಪ್ರಿಲ್‌ನಿಂದ ಇದುವರೆಗೆ 47,500 ಕುಟುಂಬಗಳ ಬಾಗಿಲು ಬಡಿದಿದ್ದಾರೆ. ಈ ಕೊಳೆಗೇರಿ ಕ್ಲಸ್ಟರ್‌ನಲ್ಲಿ ಸುಮಾರು 7,00,000 ಜನರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 9000 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ  ಜ್ವರ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದಾರೆ.  ಇಲ್ಲಿ ರೋಗಲಕ್ಷಣಗಳನ್ನು ತೋರಿಸುವವರನ್ನು ಹತ್ತಿರದ ಶಾಲೆಗಳಿಗೆ ಸ್ಥಳಾಂತರಿಸಲಾಯಿತು ಮತ್ತು ಕ್ರೀಡಾ ಕ್ಲಬ್‌ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಯಿತು. ಮೇ ಆರಂಭಕ್ಕೆ ಹೋಲಿಸಿದರೆ ತಾಜಾ ದೈನಂದಿನ ಸೋಂಕುಗಳು ಈಗ ಮೂರನೇ ಒಂದು ಭಾಗಕ್ಕೆ ಇಳಿದಿವೆ, ಅರ್ಧಕ್ಕಿಂತ ಹೆಚ್ಚು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ, ಮತ್ತು ಈ ತಿಂಗಳ ಸಾವಿನ ಸಂಖ್ಯೆಯು ಕುಸಿದಿದೆ.

ಈ ಸಂಖ್ಯೆಗಳು ಭಾರತದ ಉಳಿದ ಭಾಗಗಳಿಗೆ ತದ್ವಿರುದ್ಧವಾಗಿವೆ. ಏಕೆಂದರೆ ಮೇ ನಂತರ ಪ್ರಕರಣು ಕಂಡುಬಂದಲೆಲ್ಲಾ ನಿಯಂತ್ರಣಕ್ಕೆ ಸಿಗದೇ ಓಡುತ್ತಿವೆ. ಆದರೆ ಧಾರಾವಿ ಸಂಪೂರ್ಣ ನಿಯಂತ್ರನದಲ್ಲಿದೆ.

“ದೈಹಿಕ ದೂರವನ್ನು ಅನುಸರಿಸುವುದು ಅಸಾಧ್ಯವಾದದ್ದು” ಎಂದು ಧಾರಾವಿ ಯಲ್ಲಿ ಹೋರಾಟವನ್ನು ಮುನ್ನಡೆಸುವ ಉಸ್ತುವಾರಿ ವಹಿಸಿರುವ ಮುಂಬೈ ಪುರಸಭೆಯ ಸಹಾಯಕ ಆಯುಕ್ತ ಕಿರಣ್ ದಿಘವ್ಕರ್ ಹೇಳುತ್ತಾರೆ. “ಪ್ರಕರಣಗಳು ದಾಖಲಾಗುವವರೆಗೆ ಕಾಯುವ ಬದಲು ವೈರಸ್ ಅನ್ನು ಬೆನ್ನಟ್ಟುವುದು ಒಂದೇ ಆಯ್ಕೆಯಾಗಿದೆ. ಬನ್ನಿ ಪ್ರತಿಕ್ರಿಯೆಗೆ ಬದಲಾಗಿ ಪೂರ್ವಭಾವಿಯಾಗಿ ಕೆಲಸ ಮಾಡೋಣ ಎಂಬುದು ಅವರ ಧ್ಯೇಯವಾಕ್ಯವಾಗಿದೆ.”

“ನಾವು ಆರಂಭಿಕ ಹಂತಗಳಲ್ಲಿಯೇ ಜನರನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿದೆ ಮತ್ತು ಅಗತ್ಯವಿದ್ದವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದೆವೆ. ಅಂದರೆ ಮುಂಬಯಿಯ ಉಳಿದ ಭಾಗಗಳಲ್ಲಿ ಹೆಚ್ಚಿನ ರೋಗಿಗಳು ತಡವಾಗಿ ಆಸ್ಪತ್ರೆಗಳನ್ನು ತಲುಪುತ್ತಿದ್ದಾರೆ, ಆದರೆ ನಾವು ಅದಕ್ಕೆ ವಿರುದ್ಧವಾಗಿ ಕೂಡಲೇ ಚಿಕಿತ್ಸೆ ಆರಂಭಿಸುತ್ತಿರುವುದು ಫಲ ಕೊಟ್ಟಿದೆ. ಇದು ಮರಣ ಪ್ರಮಾಣವನ್ನು ಕುಗ್ಗಿಸಿದೆ ಎನ್ನುತ್ತಾರೆ.

ಉಚಿತ ಸೇವೆಗಳು

ಐಸೋಲೇಶನ್‌ ಕೇಂದ್ರಗಳಲ್ಲಿರುವ ಪ್ರತಿಯೊಬ್ಬರೂ ಉಚಿತವಾಗಿ ದಿನದ 24 ಗಂಟೆಯೂ ಸಹ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವೀಚಾರಣೆ ಪಡೆಯುತ್ತಿದ್ದಾರೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಜನರು ತಮ್ಮನ್ನು ತಾವು ಕ್ವಾರಂಟೈನ್‌ಗೆ ಒಳಗಾಗಲು ಸ್ವಯಂಪ್ರೇರಿತರಾಗುತ್ತಾರೆ ಎಂದು ದಿಘವ್ಕರ್ ಹೇಳುತ್ತಾರೆ.

ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಯಾವುದೇ ಒತ್ತಡ ಮಾಡಬಾರದು ಎನ್ನುವ ಅವರು ಬದಲಿಗೆ ಸ್ಕ್ರೀನಿಂಗ್ ಮತ್ತು ಸಮಯೋಚಿತ ಚಿಕಿತ್ಸೆಯತ್ತ ಗಮನ ಹರಿಸಬೇಕಾಗಿದೆ. ಏಕೆಂದರೆ ನಮ್ಮ ಅಂತಿಮ ಗುರಿ ಜೀವಗಳನ್ನು ಉಳಿಸುವುದು ಎನ್ನುತ್ತಾರೆ.

ಇನ್ನು ಮುಗಿದಿಲ್ಲ ಯುದ್ಧ!

ಆದರೂ, ವೈರಸ್ ವಿರುದ್ಧದ ಧಾರಾವಿ ಯುದ್ಧ ಮುಗಿದಿಲ್ಲ. ಲಾಕ್ ಡೌನ್ ಸಮಯದಲ್ಲಿ ಪುರಸಭೆ ಇಲ್ಲಿನ 24,000 ಕುಟುಂಬಗಳಿಗೆ ಪಡಿತರವನ್ನು ನೀಡಿದೆ. 11,000 ಇಫ್ತಾರ್ ಊಟ ಸೇರಿದಂತೆ 19,000 ಜನರಿಗೆ ಆಹಾರವನ್ನು ನೀಡಿತು. ಆದರೂ ಇಲ್ಲಿನ ಜನಸಂಖ್ಯೆಗೆ ಹೋಲಿಸಿದರೆ ಇದು ಏನೇನೂ ಅಲ್ಲ. ಲಾಕ್ ಡೌನ್ ನಂತರ ಹೆಚ್ಚಿನ ನಿವಾಸಿಗಳು ಈಗ ನಿರುದ್ಯೋಗಿಗಳಾಗಿದ್ದಾರೆ ಮತ್ತು ಪಡಿತರ ಅಂಗಡಿಗಳು ಅಕ್ಕಿ ಮತ್ತು ಗೋಧಿಯನ್ನು ಮಾತ್ರ ನೀಡುತ್ತಿವೆ. ಇದು ಧಾರಾವಿಯನ್ನು ಚಿಂತೆಗೀಡು ಮಾಡಿದೆ.

ಮುಂದೆ ಲಾಕ್‌ಡೌನ್‌ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಿದ ನಂತರ ಮತ್ತು ಜನರು ತಮ್ಮ ಕೆಲಸಕ್ಕೆ ತೆರಳಿದಾಗ ಎರಡನೇ ಹಂತದಲ್ಲಿ ಸೋಂಕು ಹರಡುವ ಅಪಾಯವಿದೆ. ಹಾಗಾಗಿ ವೈರಸ್ ಇಡೀ ನಗರ, ರಾಜ್ಯ, ಮತ್ತು ದೇಶದಿಂದ ಹೋಗುವವರೆಗೆ ಯುದ್ಧವು ಮುಗಿಯುವುದಿಲ್ಲ ಎಂದು ದಿಘವ್ಕರ್ ಹೇಳುತ್ತಾರೆ”. ಜನರು ಹೇಗೆ ಸುರಕ್ಷಿತವಾಗಿರಬೇಕು ಎಂಬುದರ ಬಗ್ಗೆ ಈಗ ಸಾಕಷ್ಟು ತಿಳಿದಿದ್ದಾರೆ ಮತ್ತು ಲಾಕ್‌ಡೌನ್ ಮುಗಿಯುವ ಹೊತ್ತಿಗೆ, ನಮ್ಮಲ್ಲಿ ಹೆಚ್ಚಿನವರು ಹರ್ಡ್ ಇಮ್ಯುನಿಟಿ (ಹಿಂಡಿನ ಪ್ರತಿರಕ್ಷೆ) ಯನ್ನು ಪಡೆದಿರಬಹುದು ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ.


ಇದನ್ನೂ ಓದಿ: ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...