Homeಮುಖಪುಟಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

- Advertisement -
- Advertisement -

ಭಾರತದ ಧಾರಾವಿ ಸ್ಲಂ ಏಷ್ಯಾ ಖಂಡದ ಅತ್ಯಂತ ಜನದಟ್ಟಣೆಯ ಸ್ಲಂ ಆಗಿದೆ. ಇಲ್ಲಿ ಸುಮಾರು ಎಂಟೂವರೆ ಲಕ್ಷ ಜನ ವಾಸಿಸುತ್ತಿದ್ದಾರೆ. ಇಲ್ಲಿ ಏಪ್ರಿಲ್ 1ರಂದು ಮೊದಲ ಕೊರೊನಾ ವೈರಸ್‌ ಕಾಣಿಸಿಕೊಂಡಾಗ ದೇಶವೇ ಬೆಚ್ಚಿ ಬಿದ್ದಿತ್ತು. ಏಕೆಂದರೆ ಕೊರೊನಾ ಒಂದು ಸಾಂಕ್ರಾಮಿಕ ವೈರಸ್ ಆದ್ದರಿಂದ ಈ ಜನದಟ್ಟಣೆಯ ಸ್ಲಂನಲ್ಲಿ ಕ್ವಾರಂಟೈನ್‌ ಆಗುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕನಸೇ ಸರಿ ಎಂದು ಹಲವರು ಭಯಭೀತರಾಗಿದ್ದರು. ಅಂತೆಯೇ ಮೇ ತಿಂಗಳಿನಲ್ಲಿ ದಿನಕ್ಕೆ ಸುಮಾರು 60 ಪ್ರಕರಣದಲ್ಲಿ ಈ ಸ್ಲಂನೊಂದರಿಂದಲೇ ದಾಖಲಾಗುತ್ತಿದ್ದವು. ಆದರೆ ಕೊರೊನಾ ಎದುರಿಸುವಲ್ಲಿ ಧಾರಾವಿ ಯಶಸ್ವಿಯಾಗಿದೆ. ಈಗ ದಿನಕ್ಕೆ ವರದಿಯಾಗುವ ಪ್ರಕರಣಗಳ ಸಂಖ್ಯೆ 20ಕ್ಕೆ ಇಳಿದಿದೆ. ಅಲ್ಲದೇ ಮುಂಬೈನ ಧಾರಾವಿ ಸ್ಲಂ ಹಾಟ್‌ಸ್ಪಾಟ್‌ನಿಂದ ಹೊರಬಂದಿದ್ದು, ಕೊರೊನಾ ನಿಯಂತ್ರಣದಲ್ಲಿ ಹೆಣಗಾಡುತ್ತಿರುವ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಒಂದು ಮಾದರಿಯಾಗಿದೆ.

ಸದ್ಯದ ಸ್ಥಿತಿ

ಜೂನ್ 12 ರ ಹೊತ್ತಿಗೆ, ಧಾರಾವಿ 2,013 ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಆದರೆ ಅದರ ದೈನಂದಿನ ಬೆಳವಣಿಗೆಯ ದರವು ಕೇವಲ 1.57 ಶೇಕಡಾ ಇದೆ. ಅಂದರೆ ಮುಂಬೈ ನಗರದಲ್ಲಿ ದೈನಂದಿನ ದರ 3 ಶೇಕಡಾ ಇದ್ದರೆ, ಪಿ ನಾರ್ತ್, ಆರ್ ಸೌತ್ ಮತ್ತು ಎಸ್ ವಾರ್ಡ್‌ಗಳಂತಹ ಇತರ ವಾರ್ಡ್‌ಗಳಲ್ಲಿ 5 ಪ್ರತಿಶತದಷ್ಟು ಇದೆ.

ಮೇ 30 ಮತ್ತು ಜೂನ್ 8 ರ ನಡುವೆ ಯಾವುದೇ ಸಾವುಗಳು ದಾಖಲಾಗಿಲ್ಲ. ಆದರೆ ಕಳೆದ ನಾಲ್ಕು ದಿನಗಳಲ್ಲಿ ಆರು ಸಾವುಗಳು ವರದಿಯಾಗಿದ್ದು ಈ ಸಂಖ್ಯೆ 77 ಕ್ಕೆ ತಲುಪಿದೆ.

ಸಾಧ್ಯವಾದುದ್ದಾದರೂ ಹೇಗೆ?

ನವೀನ ಸರಣಿ ಪ್ರಯೋಗಗಳನ್ನು ನಡೆಸಿದ್ದು, ಖಾಸಗಿ ವೈದ್ಯರನ್ನು ಕರೆತರುವುದು, ದುರ್ಬಲ ಜನರನ್ನು ಪ್ರತ್ಯೇಕಿಸುವುದು, ದೊಡ್ಡ ಕ್ವಾರಂಟೈನ್‌ ಸೌಲಭ್ಯಗಳನ್ನು ಪಡೆಯುವುದು ಮತ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದು – ಈ ತಂತ್ರವನ್ನು ಇಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.

ಅಲ್ಲಿನ ಜನರ ತಾಪಮಾನವನ್ನು ಅಳೆಯಲು ಅಧಿಕಾರಿಗಳು ಏಪ್ರಿಲ್‌ನಿಂದ ಇದುವರೆಗೆ 47,500 ಕುಟುಂಬಗಳ ಬಾಗಿಲು ಬಡಿದಿದ್ದಾರೆ. ಈ ಕೊಳೆಗೇರಿ ಕ್ಲಸ್ಟರ್‌ನಲ್ಲಿ ಸುಮಾರು 7,00,000 ಜನರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 9000 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ  ಜ್ವರ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದಾರೆ.  ಇಲ್ಲಿ ರೋಗಲಕ್ಷಣಗಳನ್ನು ತೋರಿಸುವವರನ್ನು ಹತ್ತಿರದ ಶಾಲೆಗಳಿಗೆ ಸ್ಥಳಾಂತರಿಸಲಾಯಿತು ಮತ್ತು ಕ್ರೀಡಾ ಕ್ಲಬ್‌ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಯಿತು. ಮೇ ಆರಂಭಕ್ಕೆ ಹೋಲಿಸಿದರೆ ತಾಜಾ ದೈನಂದಿನ ಸೋಂಕುಗಳು ಈಗ ಮೂರನೇ ಒಂದು ಭಾಗಕ್ಕೆ ಇಳಿದಿವೆ, ಅರ್ಧಕ್ಕಿಂತ ಹೆಚ್ಚು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ, ಮತ್ತು ಈ ತಿಂಗಳ ಸಾವಿನ ಸಂಖ್ಯೆಯು ಕುಸಿದಿದೆ.

ಈ ಸಂಖ್ಯೆಗಳು ಭಾರತದ ಉಳಿದ ಭಾಗಗಳಿಗೆ ತದ್ವಿರುದ್ಧವಾಗಿವೆ. ಏಕೆಂದರೆ ಮೇ ನಂತರ ಪ್ರಕರಣು ಕಂಡುಬಂದಲೆಲ್ಲಾ ನಿಯಂತ್ರಣಕ್ಕೆ ಸಿಗದೇ ಓಡುತ್ತಿವೆ. ಆದರೆ ಧಾರಾವಿ ಸಂಪೂರ್ಣ ನಿಯಂತ್ರನದಲ್ಲಿದೆ.

“ದೈಹಿಕ ದೂರವನ್ನು ಅನುಸರಿಸುವುದು ಅಸಾಧ್ಯವಾದದ್ದು” ಎಂದು ಧಾರಾವಿ ಯಲ್ಲಿ ಹೋರಾಟವನ್ನು ಮುನ್ನಡೆಸುವ ಉಸ್ತುವಾರಿ ವಹಿಸಿರುವ ಮುಂಬೈ ಪುರಸಭೆಯ ಸಹಾಯಕ ಆಯುಕ್ತ ಕಿರಣ್ ದಿಘವ್ಕರ್ ಹೇಳುತ್ತಾರೆ. “ಪ್ರಕರಣಗಳು ದಾಖಲಾಗುವವರೆಗೆ ಕಾಯುವ ಬದಲು ವೈರಸ್ ಅನ್ನು ಬೆನ್ನಟ್ಟುವುದು ಒಂದೇ ಆಯ್ಕೆಯಾಗಿದೆ. ಬನ್ನಿ ಪ್ರತಿಕ್ರಿಯೆಗೆ ಬದಲಾಗಿ ಪೂರ್ವಭಾವಿಯಾಗಿ ಕೆಲಸ ಮಾಡೋಣ ಎಂಬುದು ಅವರ ಧ್ಯೇಯವಾಕ್ಯವಾಗಿದೆ.”

“ನಾವು ಆರಂಭಿಕ ಹಂತಗಳಲ್ಲಿಯೇ ಜನರನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿದೆ ಮತ್ತು ಅಗತ್ಯವಿದ್ದವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದೆವೆ. ಅಂದರೆ ಮುಂಬಯಿಯ ಉಳಿದ ಭಾಗಗಳಲ್ಲಿ ಹೆಚ್ಚಿನ ರೋಗಿಗಳು ತಡವಾಗಿ ಆಸ್ಪತ್ರೆಗಳನ್ನು ತಲುಪುತ್ತಿದ್ದಾರೆ, ಆದರೆ ನಾವು ಅದಕ್ಕೆ ವಿರುದ್ಧವಾಗಿ ಕೂಡಲೇ ಚಿಕಿತ್ಸೆ ಆರಂಭಿಸುತ್ತಿರುವುದು ಫಲ ಕೊಟ್ಟಿದೆ. ಇದು ಮರಣ ಪ್ರಮಾಣವನ್ನು ಕುಗ್ಗಿಸಿದೆ ಎನ್ನುತ್ತಾರೆ.

ಉಚಿತ ಸೇವೆಗಳು

ಐಸೋಲೇಶನ್‌ ಕೇಂದ್ರಗಳಲ್ಲಿರುವ ಪ್ರತಿಯೊಬ್ಬರೂ ಉಚಿತವಾಗಿ ದಿನದ 24 ಗಂಟೆಯೂ ಸಹ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವೀಚಾರಣೆ ಪಡೆಯುತ್ತಿದ್ದಾರೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಜನರು ತಮ್ಮನ್ನು ತಾವು ಕ್ವಾರಂಟೈನ್‌ಗೆ ಒಳಗಾಗಲು ಸ್ವಯಂಪ್ರೇರಿತರಾಗುತ್ತಾರೆ ಎಂದು ದಿಘವ್ಕರ್ ಹೇಳುತ್ತಾರೆ.

ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಯಾವುದೇ ಒತ್ತಡ ಮಾಡಬಾರದು ಎನ್ನುವ ಅವರು ಬದಲಿಗೆ ಸ್ಕ್ರೀನಿಂಗ್ ಮತ್ತು ಸಮಯೋಚಿತ ಚಿಕಿತ್ಸೆಯತ್ತ ಗಮನ ಹರಿಸಬೇಕಾಗಿದೆ. ಏಕೆಂದರೆ ನಮ್ಮ ಅಂತಿಮ ಗುರಿ ಜೀವಗಳನ್ನು ಉಳಿಸುವುದು ಎನ್ನುತ್ತಾರೆ.

ಇನ್ನು ಮುಗಿದಿಲ್ಲ ಯುದ್ಧ!

ಆದರೂ, ವೈರಸ್ ವಿರುದ್ಧದ ಧಾರಾವಿ ಯುದ್ಧ ಮುಗಿದಿಲ್ಲ. ಲಾಕ್ ಡೌನ್ ಸಮಯದಲ್ಲಿ ಪುರಸಭೆ ಇಲ್ಲಿನ 24,000 ಕುಟುಂಬಗಳಿಗೆ ಪಡಿತರವನ್ನು ನೀಡಿದೆ. 11,000 ಇಫ್ತಾರ್ ಊಟ ಸೇರಿದಂತೆ 19,000 ಜನರಿಗೆ ಆಹಾರವನ್ನು ನೀಡಿತು. ಆದರೂ ಇಲ್ಲಿನ ಜನಸಂಖ್ಯೆಗೆ ಹೋಲಿಸಿದರೆ ಇದು ಏನೇನೂ ಅಲ್ಲ. ಲಾಕ್ ಡೌನ್ ನಂತರ ಹೆಚ್ಚಿನ ನಿವಾಸಿಗಳು ಈಗ ನಿರುದ್ಯೋಗಿಗಳಾಗಿದ್ದಾರೆ ಮತ್ತು ಪಡಿತರ ಅಂಗಡಿಗಳು ಅಕ್ಕಿ ಮತ್ತು ಗೋಧಿಯನ್ನು ಮಾತ್ರ ನೀಡುತ್ತಿವೆ. ಇದು ಧಾರಾವಿಯನ್ನು ಚಿಂತೆಗೀಡು ಮಾಡಿದೆ.

ಮುಂದೆ ಲಾಕ್‌ಡೌನ್‌ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಿದ ನಂತರ ಮತ್ತು ಜನರು ತಮ್ಮ ಕೆಲಸಕ್ಕೆ ತೆರಳಿದಾಗ ಎರಡನೇ ಹಂತದಲ್ಲಿ ಸೋಂಕು ಹರಡುವ ಅಪಾಯವಿದೆ. ಹಾಗಾಗಿ ವೈರಸ್ ಇಡೀ ನಗರ, ರಾಜ್ಯ, ಮತ್ತು ದೇಶದಿಂದ ಹೋಗುವವರೆಗೆ ಯುದ್ಧವು ಮುಗಿಯುವುದಿಲ್ಲ ಎಂದು ದಿಘವ್ಕರ್ ಹೇಳುತ್ತಾರೆ”. ಜನರು ಹೇಗೆ ಸುರಕ್ಷಿತವಾಗಿರಬೇಕು ಎಂಬುದರ ಬಗ್ಗೆ ಈಗ ಸಾಕಷ್ಟು ತಿಳಿದಿದ್ದಾರೆ ಮತ್ತು ಲಾಕ್‌ಡೌನ್ ಮುಗಿಯುವ ಹೊತ್ತಿಗೆ, ನಮ್ಮಲ್ಲಿ ಹೆಚ್ಚಿನವರು ಹರ್ಡ್ ಇಮ್ಯುನಿಟಿ (ಹಿಂಡಿನ ಪ್ರತಿರಕ್ಷೆ) ಯನ್ನು ಪಡೆದಿರಬಹುದು ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ.


ಇದನ್ನೂ ಓದಿ: ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...