Homeಮುಖಪುಟಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

- Advertisement -
- Advertisement -

ಭಾರತದ ಧಾರಾವಿ ಸ್ಲಂ ಏಷ್ಯಾ ಖಂಡದ ಅತ್ಯಂತ ಜನದಟ್ಟಣೆಯ ಸ್ಲಂ ಆಗಿದೆ. ಇಲ್ಲಿ ಸುಮಾರು ಎಂಟೂವರೆ ಲಕ್ಷ ಜನ ವಾಸಿಸುತ್ತಿದ್ದಾರೆ. ಇಲ್ಲಿ ಏಪ್ರಿಲ್ 1ರಂದು ಮೊದಲ ಕೊರೊನಾ ವೈರಸ್‌ ಕಾಣಿಸಿಕೊಂಡಾಗ ದೇಶವೇ ಬೆಚ್ಚಿ ಬಿದ್ದಿತ್ತು. ಏಕೆಂದರೆ ಕೊರೊನಾ ಒಂದು ಸಾಂಕ್ರಾಮಿಕ ವೈರಸ್ ಆದ್ದರಿಂದ ಈ ಜನದಟ್ಟಣೆಯ ಸ್ಲಂನಲ್ಲಿ ಕ್ವಾರಂಟೈನ್‌ ಆಗುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕನಸೇ ಸರಿ ಎಂದು ಹಲವರು ಭಯಭೀತರಾಗಿದ್ದರು. ಅಂತೆಯೇ ಮೇ ತಿಂಗಳಿನಲ್ಲಿ ದಿನಕ್ಕೆ ಸುಮಾರು 60 ಪ್ರಕರಣದಲ್ಲಿ ಈ ಸ್ಲಂನೊಂದರಿಂದಲೇ ದಾಖಲಾಗುತ್ತಿದ್ದವು. ಆದರೆ ಕೊರೊನಾ ಎದುರಿಸುವಲ್ಲಿ ಧಾರಾವಿ ಯಶಸ್ವಿಯಾಗಿದೆ. ಈಗ ದಿನಕ್ಕೆ ವರದಿಯಾಗುವ ಪ್ರಕರಣಗಳ ಸಂಖ್ಯೆ 20ಕ್ಕೆ ಇಳಿದಿದೆ. ಅಲ್ಲದೇ ಮುಂಬೈನ ಧಾರಾವಿ ಸ್ಲಂ ಹಾಟ್‌ಸ್ಪಾಟ್‌ನಿಂದ ಹೊರಬಂದಿದ್ದು, ಕೊರೊನಾ ನಿಯಂತ್ರಣದಲ್ಲಿ ಹೆಣಗಾಡುತ್ತಿರುವ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಒಂದು ಮಾದರಿಯಾಗಿದೆ.

ಸದ್ಯದ ಸ್ಥಿತಿ

ಜೂನ್ 12 ರ ಹೊತ್ತಿಗೆ, ಧಾರಾವಿ 2,013 ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಆದರೆ ಅದರ ದೈನಂದಿನ ಬೆಳವಣಿಗೆಯ ದರವು ಕೇವಲ 1.57 ಶೇಕಡಾ ಇದೆ. ಅಂದರೆ ಮುಂಬೈ ನಗರದಲ್ಲಿ ದೈನಂದಿನ ದರ 3 ಶೇಕಡಾ ಇದ್ದರೆ, ಪಿ ನಾರ್ತ್, ಆರ್ ಸೌತ್ ಮತ್ತು ಎಸ್ ವಾರ್ಡ್‌ಗಳಂತಹ ಇತರ ವಾರ್ಡ್‌ಗಳಲ್ಲಿ 5 ಪ್ರತಿಶತದಷ್ಟು ಇದೆ.

ಮೇ 30 ಮತ್ತು ಜೂನ್ 8 ರ ನಡುವೆ ಯಾವುದೇ ಸಾವುಗಳು ದಾಖಲಾಗಿಲ್ಲ. ಆದರೆ ಕಳೆದ ನಾಲ್ಕು ದಿನಗಳಲ್ಲಿ ಆರು ಸಾವುಗಳು ವರದಿಯಾಗಿದ್ದು ಈ ಸಂಖ್ಯೆ 77 ಕ್ಕೆ ತಲುಪಿದೆ.

ಸಾಧ್ಯವಾದುದ್ದಾದರೂ ಹೇಗೆ?

ನವೀನ ಸರಣಿ ಪ್ರಯೋಗಗಳನ್ನು ನಡೆಸಿದ್ದು, ಖಾಸಗಿ ವೈದ್ಯರನ್ನು ಕರೆತರುವುದು, ದುರ್ಬಲ ಜನರನ್ನು ಪ್ರತ್ಯೇಕಿಸುವುದು, ದೊಡ್ಡ ಕ್ವಾರಂಟೈನ್‌ ಸೌಲಭ್ಯಗಳನ್ನು ಪಡೆಯುವುದು ಮತ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದು – ಈ ತಂತ್ರವನ್ನು ಇಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.

ಅಲ್ಲಿನ ಜನರ ತಾಪಮಾನವನ್ನು ಅಳೆಯಲು ಅಧಿಕಾರಿಗಳು ಏಪ್ರಿಲ್‌ನಿಂದ ಇದುವರೆಗೆ 47,500 ಕುಟುಂಬಗಳ ಬಾಗಿಲು ಬಡಿದಿದ್ದಾರೆ. ಈ ಕೊಳೆಗೇರಿ ಕ್ಲಸ್ಟರ್‌ನಲ್ಲಿ ಸುಮಾರು 7,00,000 ಜನರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 9000 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ  ಜ್ವರ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದಾರೆ.  ಇಲ್ಲಿ ರೋಗಲಕ್ಷಣಗಳನ್ನು ತೋರಿಸುವವರನ್ನು ಹತ್ತಿರದ ಶಾಲೆಗಳಿಗೆ ಸ್ಥಳಾಂತರಿಸಲಾಯಿತು ಮತ್ತು ಕ್ರೀಡಾ ಕ್ಲಬ್‌ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಯಿತು. ಮೇ ಆರಂಭಕ್ಕೆ ಹೋಲಿಸಿದರೆ ತಾಜಾ ದೈನಂದಿನ ಸೋಂಕುಗಳು ಈಗ ಮೂರನೇ ಒಂದು ಭಾಗಕ್ಕೆ ಇಳಿದಿವೆ, ಅರ್ಧಕ್ಕಿಂತ ಹೆಚ್ಚು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ, ಮತ್ತು ಈ ತಿಂಗಳ ಸಾವಿನ ಸಂಖ್ಯೆಯು ಕುಸಿದಿದೆ.

ಈ ಸಂಖ್ಯೆಗಳು ಭಾರತದ ಉಳಿದ ಭಾಗಗಳಿಗೆ ತದ್ವಿರುದ್ಧವಾಗಿವೆ. ಏಕೆಂದರೆ ಮೇ ನಂತರ ಪ್ರಕರಣು ಕಂಡುಬಂದಲೆಲ್ಲಾ ನಿಯಂತ್ರಣಕ್ಕೆ ಸಿಗದೇ ಓಡುತ್ತಿವೆ. ಆದರೆ ಧಾರಾವಿ ಸಂಪೂರ್ಣ ನಿಯಂತ್ರನದಲ್ಲಿದೆ.

“ದೈಹಿಕ ದೂರವನ್ನು ಅನುಸರಿಸುವುದು ಅಸಾಧ್ಯವಾದದ್ದು” ಎಂದು ಧಾರಾವಿ ಯಲ್ಲಿ ಹೋರಾಟವನ್ನು ಮುನ್ನಡೆಸುವ ಉಸ್ತುವಾರಿ ವಹಿಸಿರುವ ಮುಂಬೈ ಪುರಸಭೆಯ ಸಹಾಯಕ ಆಯುಕ್ತ ಕಿರಣ್ ದಿಘವ್ಕರ್ ಹೇಳುತ್ತಾರೆ. “ಪ್ರಕರಣಗಳು ದಾಖಲಾಗುವವರೆಗೆ ಕಾಯುವ ಬದಲು ವೈರಸ್ ಅನ್ನು ಬೆನ್ನಟ್ಟುವುದು ಒಂದೇ ಆಯ್ಕೆಯಾಗಿದೆ. ಬನ್ನಿ ಪ್ರತಿಕ್ರಿಯೆಗೆ ಬದಲಾಗಿ ಪೂರ್ವಭಾವಿಯಾಗಿ ಕೆಲಸ ಮಾಡೋಣ ಎಂಬುದು ಅವರ ಧ್ಯೇಯವಾಕ್ಯವಾಗಿದೆ.”

“ನಾವು ಆರಂಭಿಕ ಹಂತಗಳಲ್ಲಿಯೇ ಜನರನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿದೆ ಮತ್ತು ಅಗತ್ಯವಿದ್ದವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದೆವೆ. ಅಂದರೆ ಮುಂಬಯಿಯ ಉಳಿದ ಭಾಗಗಳಲ್ಲಿ ಹೆಚ್ಚಿನ ರೋಗಿಗಳು ತಡವಾಗಿ ಆಸ್ಪತ್ರೆಗಳನ್ನು ತಲುಪುತ್ತಿದ್ದಾರೆ, ಆದರೆ ನಾವು ಅದಕ್ಕೆ ವಿರುದ್ಧವಾಗಿ ಕೂಡಲೇ ಚಿಕಿತ್ಸೆ ಆರಂಭಿಸುತ್ತಿರುವುದು ಫಲ ಕೊಟ್ಟಿದೆ. ಇದು ಮರಣ ಪ್ರಮಾಣವನ್ನು ಕುಗ್ಗಿಸಿದೆ ಎನ್ನುತ್ತಾರೆ.

ಉಚಿತ ಸೇವೆಗಳು

ಐಸೋಲೇಶನ್‌ ಕೇಂದ್ರಗಳಲ್ಲಿರುವ ಪ್ರತಿಯೊಬ್ಬರೂ ಉಚಿತವಾಗಿ ದಿನದ 24 ಗಂಟೆಯೂ ಸಹ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವೀಚಾರಣೆ ಪಡೆಯುತ್ತಿದ್ದಾರೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಜನರು ತಮ್ಮನ್ನು ತಾವು ಕ್ವಾರಂಟೈನ್‌ಗೆ ಒಳಗಾಗಲು ಸ್ವಯಂಪ್ರೇರಿತರಾಗುತ್ತಾರೆ ಎಂದು ದಿಘವ್ಕರ್ ಹೇಳುತ್ತಾರೆ.

ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಯಾವುದೇ ಒತ್ತಡ ಮಾಡಬಾರದು ಎನ್ನುವ ಅವರು ಬದಲಿಗೆ ಸ್ಕ್ರೀನಿಂಗ್ ಮತ್ತು ಸಮಯೋಚಿತ ಚಿಕಿತ್ಸೆಯತ್ತ ಗಮನ ಹರಿಸಬೇಕಾಗಿದೆ. ಏಕೆಂದರೆ ನಮ್ಮ ಅಂತಿಮ ಗುರಿ ಜೀವಗಳನ್ನು ಉಳಿಸುವುದು ಎನ್ನುತ್ತಾರೆ.

ಇನ್ನು ಮುಗಿದಿಲ್ಲ ಯುದ್ಧ!

ಆದರೂ, ವೈರಸ್ ವಿರುದ್ಧದ ಧಾರಾವಿ ಯುದ್ಧ ಮುಗಿದಿಲ್ಲ. ಲಾಕ್ ಡೌನ್ ಸಮಯದಲ್ಲಿ ಪುರಸಭೆ ಇಲ್ಲಿನ 24,000 ಕುಟುಂಬಗಳಿಗೆ ಪಡಿತರವನ್ನು ನೀಡಿದೆ. 11,000 ಇಫ್ತಾರ್ ಊಟ ಸೇರಿದಂತೆ 19,000 ಜನರಿಗೆ ಆಹಾರವನ್ನು ನೀಡಿತು. ಆದರೂ ಇಲ್ಲಿನ ಜನಸಂಖ್ಯೆಗೆ ಹೋಲಿಸಿದರೆ ಇದು ಏನೇನೂ ಅಲ್ಲ. ಲಾಕ್ ಡೌನ್ ನಂತರ ಹೆಚ್ಚಿನ ನಿವಾಸಿಗಳು ಈಗ ನಿರುದ್ಯೋಗಿಗಳಾಗಿದ್ದಾರೆ ಮತ್ತು ಪಡಿತರ ಅಂಗಡಿಗಳು ಅಕ್ಕಿ ಮತ್ತು ಗೋಧಿಯನ್ನು ಮಾತ್ರ ನೀಡುತ್ತಿವೆ. ಇದು ಧಾರಾವಿಯನ್ನು ಚಿಂತೆಗೀಡು ಮಾಡಿದೆ.

ಮುಂದೆ ಲಾಕ್‌ಡೌನ್‌ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಿದ ನಂತರ ಮತ್ತು ಜನರು ತಮ್ಮ ಕೆಲಸಕ್ಕೆ ತೆರಳಿದಾಗ ಎರಡನೇ ಹಂತದಲ್ಲಿ ಸೋಂಕು ಹರಡುವ ಅಪಾಯವಿದೆ. ಹಾಗಾಗಿ ವೈರಸ್ ಇಡೀ ನಗರ, ರಾಜ್ಯ, ಮತ್ತು ದೇಶದಿಂದ ಹೋಗುವವರೆಗೆ ಯುದ್ಧವು ಮುಗಿಯುವುದಿಲ್ಲ ಎಂದು ದಿಘವ್ಕರ್ ಹೇಳುತ್ತಾರೆ”. ಜನರು ಹೇಗೆ ಸುರಕ್ಷಿತವಾಗಿರಬೇಕು ಎಂಬುದರ ಬಗ್ಗೆ ಈಗ ಸಾಕಷ್ಟು ತಿಳಿದಿದ್ದಾರೆ ಮತ್ತು ಲಾಕ್‌ಡೌನ್ ಮುಗಿಯುವ ಹೊತ್ತಿಗೆ, ನಮ್ಮಲ್ಲಿ ಹೆಚ್ಚಿನವರು ಹರ್ಡ್ ಇಮ್ಯುನಿಟಿ (ಹಿಂಡಿನ ಪ್ರತಿರಕ್ಷೆ) ಯನ್ನು ಪಡೆದಿರಬಹುದು ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ.


ಇದನ್ನೂ ಓದಿ: ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...