Homeಗೌರಿ ಕಣ್ಣೋಟನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! - ಗೌರಿ ಕಣ್ಣೋಟ

ನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! – ಗೌರಿ ಕಣ್ಣೋಟ

- Advertisement -
- Advertisement -

ನನಗೆ ಅಚ್ಚರಿ ಮೂಡಿಸಿದ್ದು ಬಿಹಾರದ ಮುಖ್ಯಮಂತ್ರಿ ಆಗಿರುವ ನಿತೀಶ್ ಕುಮಾರ್ ಅವರ ಸರ್ಕಾರದಲ್ಲಿ ಆಗುತ್ತಿರುವ ಪ್ರಜಾಪ್ರಭುತ್ವದ ದಮನ. ಸಭ್ಯನಂತೆ ಸ್ವಚ್ಛಹಸ್ತನಂತೆ ಕಾಣುವ ನಿತೀಶ್ ಕುಮಾರ್ ಹೇಗೆ ತಮ್ಮ ರಾಜ್ಯದ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂಬುದನ್ನು ಕುರಿತು ‘ಓಪನ್’ ಪತ್ರಿಕೆಯಲ್ಲಿ ಒಂದು ಸುದೀರ್ಘವಾದ ವರದಿ ಪ್ರಕಟಗೊಂಡಿದೆ. ಅದನ್ನು ಓದಿದನಂತರ ನಿತೀಶ್ ಕುಮಾರ್ ಅವರ ಬಗ್ಗೆ ಅಚ್ಚರಿ ಆಯಿತು.

‘ಓಪನ್’ ಪತ್ರಿಕೆಯಲ್ಲಿ ಧೀರೇಂದ್ರ ಕೆ. ಝಾ ಎಂಬುವವರು ಬರೆದಿರುವ ವರದಿಯ ಸಾರಾಂಶ ಹೀಗಿದೆ:

ಇತ್ತೀಚೆಗೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ಒಂದು ಮನೆಯ ಮೇಲೆ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದರು. ಆ ದಾಳಿಯಲ್ಲಿ ಅವರಿಗೆ ಐದು ಕೋಟಿ ರೂಪಾಯಿಗಳು ಸಿಕ್ಕವಲ್ಲದೆ, ಪಾಟ್ನಾದಲ್ಲಿರುವ ಸುಮಾರು ಐವತ್ತು ಮನೆಗಳ ಖರೀದಿ ಪತ್ರಗಳೂ ಸಿಕ್ಕವು. ಐದು ಕೋಟಿಯಷ್ಟು ದೊಡ್ಡಮೊತ್ತ ಮತ್ತು ಐವತ್ತು ಮನೆಗಳ ದಾಖಲೆಗಳು ಸಿಕ್ಕಿದ್ದರೂ ಬಿಹಾರದ ಯಾವ ಪತ್ರಿಕೆಯೂ ಈ ದಾಳಿಯ ಬಗ್ಗೆ ವರದಿ ಮಾಡಲಿಲ್ಲ. ಅದಕ್ಕೆ ಕಾರಣ ಆ ಮನೆಯಲ್ಲಿ ವಾಸಿಸುತ್ತಿರುವಾತ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರಿಗೆ ಆಪ್ತನಾಗಿರುವ ಮತ್ತು ನಿತೀಶ್‌ಕುಮಾರ್ ಅವರ ಸಂಯುಕ್ತ ಜನತಾದಳದ ಖಜಾಂಚಿ ಆಗಿರುವ ವಿನಯ್‌ಕುಮಾರ್ ಸಿನ್ಹಾ! ಅಂದಹಾಗೆ ನಿತೀಶ್‌ಕುಮಾರ್ ಅವರು ಮುಖ್ಯಮಂತ್ರಿ ಆಗುವತನಕ ಇದೇ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಈಗ ಅದನ್ನು ತಮ್ಮ ಆಪ್ತನಿಗೆ ಬಿಟ್ಟುಕೊಟ್ಟಿದ್ದಾರೆ.

ಭ್ರಷ್ಟಾಚಾರ ಮತ್ತು ರಾಜಕೀಯ ವಾಸನೆ ಇರುವ ಈ ದಾಳಿಯ ಬಗ್ಗೆ ಯಾಕೆ ಬಿಹಾರದ ಪತ್ರಿಕೆಗಳು ವರದಿ ಮಾಡಲಿಲ್ಲ ಎಂದು ನೋಡಿದಾಗ ಇದು ಒಂದು ವಿಶೇಷ ಸಂಗತಿ ಅಲ್ಲವೆಂದೂ, ಇಂತಹ ‘ಮರೆಮಾಚುವ’ ಕೆಲಸದಲ್ಲಿ ಆ ರಾಜ್ಯದ ಪತ್ರಿಕೆಗಳೂ ದಿನನಿತ್ಯ ತೊಡಗಿವೆ ಎಂದೂ ಗೊತ್ತಾಯಿತು.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆದಾಗಿನಿಂದಲೂ ಅವರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಅಲ್ಲಿನ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ. ಅವರನ್ನು ಟೀಕೆ ಮಾಡುವ ಪತ್ರಿಕೆಗಳ ಆದಾಯ ಮೂಲಗಳನ್ನು ಕಡಿದು ಹಾಕುವಮೂಲಕ ಅಂತಹ ‘ದಾರಿ ತಪ್ಪಿದ’ ಮಾಧ್ಯಮಗಳನ್ನು ‘ಸರಿದಾರಿಗೆ’ ತರುತ್ತಿದ್ದಾರೆ. ಹಾಗೆ ‘ಸರಿ ದಾರಿಗೆ’ ಎಳೆಯಲ್ಪಟ್ಟ ಪತ್ರಿಕೆಗಳಲ್ಲಿ ‘ಪಿಂಡಾರ್’ ಎಂಬ ಉರ್ದು ಪತ್ರಿಕೆಯೂ ಒಂದು.

ಈ ‘ಪಿಂಡಾರ್’ ಪತ್ರಿಕೆಗೆ ಡಾ. ರೈಹಾನ್ ಘಾಣಿ ಎಂಬುವವರು ಸಂಪಾದಕರಾಗಿದ್ದರು. 2007ರಲ್ಲಿ ನಿತೀಶ್ ಕುಮಾರ್ ಅವರ ಪತ್ನಿ ಮಡಿದಾಗ ಆಕೆಯ ಅಂತ್ಯಸಂಸ್ಕಾರವನ್ನು ಒಂದು ರಾಜಕೀಯ ಸಭೆಯಾಗಿ ಮುಖ್ಯಮಂತ್ರಿ ಪರಿವರ್ತಿಸಿದ್ದರು. ಇದನ್ನು ಟೀಕಿಸಿ ಘಾಣಿ ಅವರು ಮಾಡಿದ ಈ ‘ಪ್ರಮಾದ’ಕ್ಕೆ ಮಾರನೆ ದಿನವೇ ಅವರಿಗೆ ಬಿಸಿಮುಟ್ಟಿಸಿದ್ದರು ನಿತೀಶ್ ಕುಮಾರ್ ‘ಪಿಂಡಾರ್’ ಪತ್ರಿಕೆಯ ಮಾಲೀಕರ ಮೇಲೆ ಒತ್ತಡ ತಂದು ಘಾಣಿ ಅವರನ್ನು ಸಂಪಾದಕ ಹುದ್ದೆಯಿಂದ ಓಡಿಸಲಾಯಿತು, ಅವರು ಹಲವಾರು ವರ್ಷಗಳಿಂದ ಬರೆಯುತ್ತಿದ್ದ ಅಂಕಣಕ್ಕೆ ಕತ್ತರಿ ಬಿತ್ತು. ಇಂತಹ ಅವಮಾನವನ್ನು ಸಹಿಸದೆ ಘಾಣಿ ಅವರು ರಾಜೀನಾಮೆ ಕೊಟ್ಟು ಆ ಪತ್ರಿಕೆಯಿಂದ ಹೊರಬಿದ್ದರು.

ಈ ಕತೆ ಅಲ್ಲಿಗೇ ಮುಗಿಯುವುದಿಲ್ಲ. ನಿತೀಶ್ ಕುಮಾರ್ ಅವರ ಆಸೆಗೆ ತಕ್ಕಂತೆ ‘ಪಿಂಡಾರ್’ ಪತ್ರಿಕೆಯ ಮಾಲೀಕ ಎ.ಕೆ.ಎಹಸಾನಿ ಅವರು ನಡೆದುಕೊಂಡಿದ್ದರಿಂದ ಆ ಪತ್ರಿಕೆಗೆ ಬಿಹಾರ ಸರ್ಕಾರದಿಂದ ಸಾಕಷ್ಟು ಲಾಭ ಸಿಕ್ಕಿತು. ಘಾಣಿ ಅವರು ಸಂಪಾದಕರಾಗಿದ್ದಾಗ 2007ರಲ್ಲಿ ‘ಪಿಂಡಾರ್’ ಪತ್ರಿಕೆಗೆ ಬಿಹಾರದ ಸರ್ಕಾರದಿಂದ ಕೇವಲ ಒಂದು ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಸಿಕ್ಕಿದ್ದವು. ಆದರೆ ಘಾಣಿ ಅವರು ಹೊರನಡೆದ ನಂತರ ಮಾಲೀಕ ಎಹಸಾನಿ ಅವರೇ ಸಂಪಾದಕರಾದ ನಂತರ ಅದೇ ಪತ್ರಿಕೆಗೆ 2008 ರಲ್ಲಿ 24 ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಹರಿದುಬಂದವು. ಅದರ ಮುಂದಿನ ವರ್ಷವೂ ‘ಪಿಂಡಾರ್’ ಪತ್ರಿಕೆ ನಿತೀಶ್ ಕುಮಾರ್ ಅವರ ತಾಳಕ್ಕೆ ಕುಣಿದಿದ್ದರಿಂದ 2009ರಲ್ಲಿ ಬರೋಬ್ಬರಿ 40 ಲಕ್ಷದ ಸರ್ಕಾರಿ ಜಾಹೀರಾತುಗಳು ಸಿಕ್ಕಿದವು. 2010ರಲ್ಲಿ ಅದು 48 ಲಕ್ಷಕ್ಕೆ ಏರಿತು! ಸಹಜವಾಗಿಯೇ ‘ಪಿಂಡಾರ್’ ಪತ್ರಿಕೆ ಇವತ್ತು ನಿತೀಶ್ ಕುಮಾರರ ಭಟ್ಟಂಗಿ ಪತ್ರಿಕೆಯಾಗಿದೆ.

ಅಂದಹಾಗೆ ಈ ವಿದ್ಯಮಾನ ಕೇವಲ ‘ಪಿಂಡಾರ್’ ಪತ್ರಿಕೆಗೆ ಸೀಮಿತವಾಗಿಲ್ಲ. ಬಿಹಾರ ರಾಜ್ಯದಲ್ಲಿ ಹೇಳಿಕೊಳ್ಳುವಂತಹ ಖಾಸಗಿ ಉದ್ಯಮ, ಕಾರ್ಖಾನೆ, ಸಂಸ್ಥೆಗಳು ಇಲ್ಲ ಆದ್ದರಿಂದ ಅಲ್ಲಿನ ಪತ್ರಿಕೆಗಳು ತಮ್ಮ ಉಳಿವಿಗಾಗಿ ಸರ್ಕಾರಿ ಜಾಹೀರಾತುಗಳನ್ನೇ ಅವಲಂಬಿಸಲೇಬೇಕಿದೆ. ಇದನ್ನೇ ತನ್ನ ಅಸ್ತ್ರವಾಗಿಸಿಕೊಂಡಿರುವ ನಿತೀಶ್‌ಕುಮಾರ್ ಅಲ್ಲಿನ ಪತ್ರಿಕೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅದನ್ನು ಅವರು ಅದೆಷ್ಟು ಚಾಕಚಕ್ಯತೆಯಿಂದ ಮಾಡಿದ್ದಾರೆಂಬುದು ಅಚ್ಚರಿ ಮೂಡಿಸುತ್ತದೆ.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆಗುವತನಕ ಆ ರಾಜ್ಯದ ಬಜೆಟ್‌ನಲ್ಲಿ ಸರ್ಕಾರಿ ಜಾಹೀರಾತುಗಳಿಗೆ ಕಡಿಮೆ ಹಣವನ್ನು ಎತ್ತಿಡಲಾಗುತ್ತಿತ್ತು. ಉದಾಹರಣೆಗೆ ಲಾಲೂ ಪ್ರಸಾದ್ ಯಾದವ್ ಅವರ ಆರ್‌ಜೆಡಿ ಪಕ್ಷ ಬಿಹಾರದಲ್ಲಿ ಅಧಿಕಾರದಲ್ಲಿದ್ದ 2005-06ರಲ್ಲಿ ಇಂತಹ ಜಾಹೀರಾತುಗಳಿಗೆ 4.5 ಕೋಟಿ ರೂಪಾಯಿಗಳನ್ನು ಸರ್ಕಾರಿ ಖಜಾನೆಯಿಂದ ವೆಚ್ಚ ಮಾಡಲಾಗಿತ್ತು. ಆದರೆ ನಿತೀಶ್‌ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮರುವರ್ಷವೇ (2006-07ರಲ್ಲಿ) ಆ ಮೊತ್ತವನ್ನು 5.4 ಕೋಟಿಗಳಿಗೆ ಏರಿಸಲಾಯಿತು. 2007-08ರಲ್ಲಿ ಅದು ದುಪ್ಪಟ್ಟುಗೊಂಡು 9.65 ಕೋಟಿಯಾಯಿತು. 2008-09ರಲ್ಲಿ ಅದು ಮೂರುಪಟ್ಟು ಹೆಚ್ಚಾಗಿ 27.5 ಕೋಟಿಗೆ ಏರಿತು. 2009-10ರಲ್ಲಿ ಮತ್ತಷ್ಟು ಹೆಚ್ಚಾಗಿ 34.5 ಕೋಟಿ ರೂ. ಗೆ ಮುಟ್ಟಿತು.

ಇಷ್ಟು ದೊಡ್ಡ ಮೊತ್ತದಲ್ಲಿ ಯಾವ ಪತ್ರಿಕೆಗೆ ಎಷ್ಟು ಕೊಡಬೇಕೆಂಬ ನಿರ್ಧಾರವನ್ನು ಸ್ವತಃ ನಿತೀಶ್‌ಕುಮಾರ್ ಅವರೇ ತೆಗೆದುಕೊಳ್ಳುವುದರಿಂದ ಇವತ್ತು ಅಲ್ಲಿಯ ಬಹಳಷ್ಟು ಪತ್ರಿಕೆಗಳು ಅವರ ಹೊಗಳುಭಟ್ಟ ಪತ್ರಿಕೆಗಳಾಗಿ ಮಾರ್ಪಾಟುಗೊಂಡಿವೆ. ಇದರ ಬಗ್ಗೆ ‘ಪಿಂಡಾರ್’ ಪತ್ರಿಕೆಯ ಮಾಜಿ ಸಂಪಾದಕ ಘಾಣಿ ಅವರು ಹೇಳುವುದೇನೆಂದರೆ “ತುರ್ತುಪರಿಸ್ಥಿತಿ ಸಂದರ್ಭದಲ್ಲಿ ದೇಶದಾದ್ಯಂತ ಘೋಷಿತ ಪತ್ರಿಕಾ ಸೆನ್ಸಾರ್‌ಶಿಪ್ ಇತ್ತು. ಆದರೆ ನಿತೀಶ್‌ಕುಮಾರ್ ಆಡಳಿತದಡಿ ಬಿಹಾರದಲ್ಲಿ ಅಘೋಷಿತ ಸೆನ್ಸಾರ್‌ಶಿಪ್ ಜಾರಿಯಲ್ಲಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹಳಷ್ಟು ಅಪಾಯಕಾರಿ” ಎಂದು.

  • ಗೌರಿ ಲಂಕೇಶ್.

ಮೇ 2, 2012

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...