Homeಗೌರಿ ಕಣ್ಣೋಟನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! - ಗೌರಿ ಕಣ್ಣೋಟ

ನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! – ಗೌರಿ ಕಣ್ಣೋಟ

- Advertisement -
- Advertisement -

ನನಗೆ ಅಚ್ಚರಿ ಮೂಡಿಸಿದ್ದು ಬಿಹಾರದ ಮುಖ್ಯಮಂತ್ರಿ ಆಗಿರುವ ನಿತೀಶ್ ಕುಮಾರ್ ಅವರ ಸರ್ಕಾರದಲ್ಲಿ ಆಗುತ್ತಿರುವ ಪ್ರಜಾಪ್ರಭುತ್ವದ ದಮನ. ಸಭ್ಯನಂತೆ ಸ್ವಚ್ಛಹಸ್ತನಂತೆ ಕಾಣುವ ನಿತೀಶ್ ಕುಮಾರ್ ಹೇಗೆ ತಮ್ಮ ರಾಜ್ಯದ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂಬುದನ್ನು ಕುರಿತು ‘ಓಪನ್’ ಪತ್ರಿಕೆಯಲ್ಲಿ ಒಂದು ಸುದೀರ್ಘವಾದ ವರದಿ ಪ್ರಕಟಗೊಂಡಿದೆ. ಅದನ್ನು ಓದಿದನಂತರ ನಿತೀಶ್ ಕುಮಾರ್ ಅವರ ಬಗ್ಗೆ ಅಚ್ಚರಿ ಆಯಿತು.

‘ಓಪನ್’ ಪತ್ರಿಕೆಯಲ್ಲಿ ಧೀರೇಂದ್ರ ಕೆ. ಝಾ ಎಂಬುವವರು ಬರೆದಿರುವ ವರದಿಯ ಸಾರಾಂಶ ಹೀಗಿದೆ:

ಇತ್ತೀಚೆಗೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ಒಂದು ಮನೆಯ ಮೇಲೆ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದರು. ಆ ದಾಳಿಯಲ್ಲಿ ಅವರಿಗೆ ಐದು ಕೋಟಿ ರೂಪಾಯಿಗಳು ಸಿಕ್ಕವಲ್ಲದೆ, ಪಾಟ್ನಾದಲ್ಲಿರುವ ಸುಮಾರು ಐವತ್ತು ಮನೆಗಳ ಖರೀದಿ ಪತ್ರಗಳೂ ಸಿಕ್ಕವು. ಐದು ಕೋಟಿಯಷ್ಟು ದೊಡ್ಡಮೊತ್ತ ಮತ್ತು ಐವತ್ತು ಮನೆಗಳ ದಾಖಲೆಗಳು ಸಿಕ್ಕಿದ್ದರೂ ಬಿಹಾರದ ಯಾವ ಪತ್ರಿಕೆಯೂ ಈ ದಾಳಿಯ ಬಗ್ಗೆ ವರದಿ ಮಾಡಲಿಲ್ಲ. ಅದಕ್ಕೆ ಕಾರಣ ಆ ಮನೆಯಲ್ಲಿ ವಾಸಿಸುತ್ತಿರುವಾತ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರಿಗೆ ಆಪ್ತನಾಗಿರುವ ಮತ್ತು ನಿತೀಶ್‌ಕುಮಾರ್ ಅವರ ಸಂಯುಕ್ತ ಜನತಾದಳದ ಖಜಾಂಚಿ ಆಗಿರುವ ವಿನಯ್‌ಕುಮಾರ್ ಸಿನ್ಹಾ! ಅಂದಹಾಗೆ ನಿತೀಶ್‌ಕುಮಾರ್ ಅವರು ಮುಖ್ಯಮಂತ್ರಿ ಆಗುವತನಕ ಇದೇ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಈಗ ಅದನ್ನು ತಮ್ಮ ಆಪ್ತನಿಗೆ ಬಿಟ್ಟುಕೊಟ್ಟಿದ್ದಾರೆ.

ಭ್ರಷ್ಟಾಚಾರ ಮತ್ತು ರಾಜಕೀಯ ವಾಸನೆ ಇರುವ ಈ ದಾಳಿಯ ಬಗ್ಗೆ ಯಾಕೆ ಬಿಹಾರದ ಪತ್ರಿಕೆಗಳು ವರದಿ ಮಾಡಲಿಲ್ಲ ಎಂದು ನೋಡಿದಾಗ ಇದು ಒಂದು ವಿಶೇಷ ಸಂಗತಿ ಅಲ್ಲವೆಂದೂ, ಇಂತಹ ‘ಮರೆಮಾಚುವ’ ಕೆಲಸದಲ್ಲಿ ಆ ರಾಜ್ಯದ ಪತ್ರಿಕೆಗಳೂ ದಿನನಿತ್ಯ ತೊಡಗಿವೆ ಎಂದೂ ಗೊತ್ತಾಯಿತು.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆದಾಗಿನಿಂದಲೂ ಅವರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಅಲ್ಲಿನ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ. ಅವರನ್ನು ಟೀಕೆ ಮಾಡುವ ಪತ್ರಿಕೆಗಳ ಆದಾಯ ಮೂಲಗಳನ್ನು ಕಡಿದು ಹಾಕುವಮೂಲಕ ಅಂತಹ ‘ದಾರಿ ತಪ್ಪಿದ’ ಮಾಧ್ಯಮಗಳನ್ನು ‘ಸರಿದಾರಿಗೆ’ ತರುತ್ತಿದ್ದಾರೆ. ಹಾಗೆ ‘ಸರಿ ದಾರಿಗೆ’ ಎಳೆಯಲ್ಪಟ್ಟ ಪತ್ರಿಕೆಗಳಲ್ಲಿ ‘ಪಿಂಡಾರ್’ ಎಂಬ ಉರ್ದು ಪತ್ರಿಕೆಯೂ ಒಂದು.

ಈ ‘ಪಿಂಡಾರ್’ ಪತ್ರಿಕೆಗೆ ಡಾ. ರೈಹಾನ್ ಘಾಣಿ ಎಂಬುವವರು ಸಂಪಾದಕರಾಗಿದ್ದರು. 2007ರಲ್ಲಿ ನಿತೀಶ್ ಕುಮಾರ್ ಅವರ ಪತ್ನಿ ಮಡಿದಾಗ ಆಕೆಯ ಅಂತ್ಯಸಂಸ್ಕಾರವನ್ನು ಒಂದು ರಾಜಕೀಯ ಸಭೆಯಾಗಿ ಮುಖ್ಯಮಂತ್ರಿ ಪರಿವರ್ತಿಸಿದ್ದರು. ಇದನ್ನು ಟೀಕಿಸಿ ಘಾಣಿ ಅವರು ಮಾಡಿದ ಈ ‘ಪ್ರಮಾದ’ಕ್ಕೆ ಮಾರನೆ ದಿನವೇ ಅವರಿಗೆ ಬಿಸಿಮುಟ್ಟಿಸಿದ್ದರು ನಿತೀಶ್ ಕುಮಾರ್ ‘ಪಿಂಡಾರ್’ ಪತ್ರಿಕೆಯ ಮಾಲೀಕರ ಮೇಲೆ ಒತ್ತಡ ತಂದು ಘಾಣಿ ಅವರನ್ನು ಸಂಪಾದಕ ಹುದ್ದೆಯಿಂದ ಓಡಿಸಲಾಯಿತು, ಅವರು ಹಲವಾರು ವರ್ಷಗಳಿಂದ ಬರೆಯುತ್ತಿದ್ದ ಅಂಕಣಕ್ಕೆ ಕತ್ತರಿ ಬಿತ್ತು. ಇಂತಹ ಅವಮಾನವನ್ನು ಸಹಿಸದೆ ಘಾಣಿ ಅವರು ರಾಜೀನಾಮೆ ಕೊಟ್ಟು ಆ ಪತ್ರಿಕೆಯಿಂದ ಹೊರಬಿದ್ದರು.

ಈ ಕತೆ ಅಲ್ಲಿಗೇ ಮುಗಿಯುವುದಿಲ್ಲ. ನಿತೀಶ್ ಕುಮಾರ್ ಅವರ ಆಸೆಗೆ ತಕ್ಕಂತೆ ‘ಪಿಂಡಾರ್’ ಪತ್ರಿಕೆಯ ಮಾಲೀಕ ಎ.ಕೆ.ಎಹಸಾನಿ ಅವರು ನಡೆದುಕೊಂಡಿದ್ದರಿಂದ ಆ ಪತ್ರಿಕೆಗೆ ಬಿಹಾರ ಸರ್ಕಾರದಿಂದ ಸಾಕಷ್ಟು ಲಾಭ ಸಿಕ್ಕಿತು. ಘಾಣಿ ಅವರು ಸಂಪಾದಕರಾಗಿದ್ದಾಗ 2007ರಲ್ಲಿ ‘ಪಿಂಡಾರ್’ ಪತ್ರಿಕೆಗೆ ಬಿಹಾರದ ಸರ್ಕಾರದಿಂದ ಕೇವಲ ಒಂದು ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಸಿಕ್ಕಿದ್ದವು. ಆದರೆ ಘಾಣಿ ಅವರು ಹೊರನಡೆದ ನಂತರ ಮಾಲೀಕ ಎಹಸಾನಿ ಅವರೇ ಸಂಪಾದಕರಾದ ನಂತರ ಅದೇ ಪತ್ರಿಕೆಗೆ 2008 ರಲ್ಲಿ 24 ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಹರಿದುಬಂದವು. ಅದರ ಮುಂದಿನ ವರ್ಷವೂ ‘ಪಿಂಡಾರ್’ ಪತ್ರಿಕೆ ನಿತೀಶ್ ಕುಮಾರ್ ಅವರ ತಾಳಕ್ಕೆ ಕುಣಿದಿದ್ದರಿಂದ 2009ರಲ್ಲಿ ಬರೋಬ್ಬರಿ 40 ಲಕ್ಷದ ಸರ್ಕಾರಿ ಜಾಹೀರಾತುಗಳು ಸಿಕ್ಕಿದವು. 2010ರಲ್ಲಿ ಅದು 48 ಲಕ್ಷಕ್ಕೆ ಏರಿತು! ಸಹಜವಾಗಿಯೇ ‘ಪಿಂಡಾರ್’ ಪತ್ರಿಕೆ ಇವತ್ತು ನಿತೀಶ್ ಕುಮಾರರ ಭಟ್ಟಂಗಿ ಪತ್ರಿಕೆಯಾಗಿದೆ.

ಅಂದಹಾಗೆ ಈ ವಿದ್ಯಮಾನ ಕೇವಲ ‘ಪಿಂಡಾರ್’ ಪತ್ರಿಕೆಗೆ ಸೀಮಿತವಾಗಿಲ್ಲ. ಬಿಹಾರ ರಾಜ್ಯದಲ್ಲಿ ಹೇಳಿಕೊಳ್ಳುವಂತಹ ಖಾಸಗಿ ಉದ್ಯಮ, ಕಾರ್ಖಾನೆ, ಸಂಸ್ಥೆಗಳು ಇಲ್ಲ ಆದ್ದರಿಂದ ಅಲ್ಲಿನ ಪತ್ರಿಕೆಗಳು ತಮ್ಮ ಉಳಿವಿಗಾಗಿ ಸರ್ಕಾರಿ ಜಾಹೀರಾತುಗಳನ್ನೇ ಅವಲಂಬಿಸಲೇಬೇಕಿದೆ. ಇದನ್ನೇ ತನ್ನ ಅಸ್ತ್ರವಾಗಿಸಿಕೊಂಡಿರುವ ನಿತೀಶ್‌ಕುಮಾರ್ ಅಲ್ಲಿನ ಪತ್ರಿಕೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅದನ್ನು ಅವರು ಅದೆಷ್ಟು ಚಾಕಚಕ್ಯತೆಯಿಂದ ಮಾಡಿದ್ದಾರೆಂಬುದು ಅಚ್ಚರಿ ಮೂಡಿಸುತ್ತದೆ.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆಗುವತನಕ ಆ ರಾಜ್ಯದ ಬಜೆಟ್‌ನಲ್ಲಿ ಸರ್ಕಾರಿ ಜಾಹೀರಾತುಗಳಿಗೆ ಕಡಿಮೆ ಹಣವನ್ನು ಎತ್ತಿಡಲಾಗುತ್ತಿತ್ತು. ಉದಾಹರಣೆಗೆ ಲಾಲೂ ಪ್ರಸಾದ್ ಯಾದವ್ ಅವರ ಆರ್‌ಜೆಡಿ ಪಕ್ಷ ಬಿಹಾರದಲ್ಲಿ ಅಧಿಕಾರದಲ್ಲಿದ್ದ 2005-06ರಲ್ಲಿ ಇಂತಹ ಜಾಹೀರಾತುಗಳಿಗೆ 4.5 ಕೋಟಿ ರೂಪಾಯಿಗಳನ್ನು ಸರ್ಕಾರಿ ಖಜಾನೆಯಿಂದ ವೆಚ್ಚ ಮಾಡಲಾಗಿತ್ತು. ಆದರೆ ನಿತೀಶ್‌ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮರುವರ್ಷವೇ (2006-07ರಲ್ಲಿ) ಆ ಮೊತ್ತವನ್ನು 5.4 ಕೋಟಿಗಳಿಗೆ ಏರಿಸಲಾಯಿತು. 2007-08ರಲ್ಲಿ ಅದು ದುಪ್ಪಟ್ಟುಗೊಂಡು 9.65 ಕೋಟಿಯಾಯಿತು. 2008-09ರಲ್ಲಿ ಅದು ಮೂರುಪಟ್ಟು ಹೆಚ್ಚಾಗಿ 27.5 ಕೋಟಿಗೆ ಏರಿತು. 2009-10ರಲ್ಲಿ ಮತ್ತಷ್ಟು ಹೆಚ್ಚಾಗಿ 34.5 ಕೋಟಿ ರೂ. ಗೆ ಮುಟ್ಟಿತು.

ಇಷ್ಟು ದೊಡ್ಡ ಮೊತ್ತದಲ್ಲಿ ಯಾವ ಪತ್ರಿಕೆಗೆ ಎಷ್ಟು ಕೊಡಬೇಕೆಂಬ ನಿರ್ಧಾರವನ್ನು ಸ್ವತಃ ನಿತೀಶ್‌ಕುಮಾರ್ ಅವರೇ ತೆಗೆದುಕೊಳ್ಳುವುದರಿಂದ ಇವತ್ತು ಅಲ್ಲಿಯ ಬಹಳಷ್ಟು ಪತ್ರಿಕೆಗಳು ಅವರ ಹೊಗಳುಭಟ್ಟ ಪತ್ರಿಕೆಗಳಾಗಿ ಮಾರ್ಪಾಟುಗೊಂಡಿವೆ. ಇದರ ಬಗ್ಗೆ ‘ಪಿಂಡಾರ್’ ಪತ್ರಿಕೆಯ ಮಾಜಿ ಸಂಪಾದಕ ಘಾಣಿ ಅವರು ಹೇಳುವುದೇನೆಂದರೆ “ತುರ್ತುಪರಿಸ್ಥಿತಿ ಸಂದರ್ಭದಲ್ಲಿ ದೇಶದಾದ್ಯಂತ ಘೋಷಿತ ಪತ್ರಿಕಾ ಸೆನ್ಸಾರ್‌ಶಿಪ್ ಇತ್ತು. ಆದರೆ ನಿತೀಶ್‌ಕುಮಾರ್ ಆಡಳಿತದಡಿ ಬಿಹಾರದಲ್ಲಿ ಅಘೋಷಿತ ಸೆನ್ಸಾರ್‌ಶಿಪ್ ಜಾರಿಯಲ್ಲಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹಳಷ್ಟು ಅಪಾಯಕಾರಿ” ಎಂದು.

  • ಗೌರಿ ಲಂಕೇಶ್.

ಮೇ 2, 2012

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...