Homeಗೌರಿ ಕಣ್ಣೋಟನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! - ಗೌರಿ ಕಣ್ಣೋಟ

ನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! – ಗೌರಿ ಕಣ್ಣೋಟ

- Advertisement -
- Advertisement -

ನನಗೆ ಅಚ್ಚರಿ ಮೂಡಿಸಿದ್ದು ಬಿಹಾರದ ಮುಖ್ಯಮಂತ್ರಿ ಆಗಿರುವ ನಿತೀಶ್ ಕುಮಾರ್ ಅವರ ಸರ್ಕಾರದಲ್ಲಿ ಆಗುತ್ತಿರುವ ಪ್ರಜಾಪ್ರಭುತ್ವದ ದಮನ. ಸಭ್ಯನಂತೆ ಸ್ವಚ್ಛಹಸ್ತನಂತೆ ಕಾಣುವ ನಿತೀಶ್ ಕುಮಾರ್ ಹೇಗೆ ತಮ್ಮ ರಾಜ್ಯದ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂಬುದನ್ನು ಕುರಿತು ‘ಓಪನ್’ ಪತ್ರಿಕೆಯಲ್ಲಿ ಒಂದು ಸುದೀರ್ಘವಾದ ವರದಿ ಪ್ರಕಟಗೊಂಡಿದೆ. ಅದನ್ನು ಓದಿದನಂತರ ನಿತೀಶ್ ಕುಮಾರ್ ಅವರ ಬಗ್ಗೆ ಅಚ್ಚರಿ ಆಯಿತು.

‘ಓಪನ್’ ಪತ್ರಿಕೆಯಲ್ಲಿ ಧೀರೇಂದ್ರ ಕೆ. ಝಾ ಎಂಬುವವರು ಬರೆದಿರುವ ವರದಿಯ ಸಾರಾಂಶ ಹೀಗಿದೆ:

ಇತ್ತೀಚೆಗೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ಒಂದು ಮನೆಯ ಮೇಲೆ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದರು. ಆ ದಾಳಿಯಲ್ಲಿ ಅವರಿಗೆ ಐದು ಕೋಟಿ ರೂಪಾಯಿಗಳು ಸಿಕ್ಕವಲ್ಲದೆ, ಪಾಟ್ನಾದಲ್ಲಿರುವ ಸುಮಾರು ಐವತ್ತು ಮನೆಗಳ ಖರೀದಿ ಪತ್ರಗಳೂ ಸಿಕ್ಕವು. ಐದು ಕೋಟಿಯಷ್ಟು ದೊಡ್ಡಮೊತ್ತ ಮತ್ತು ಐವತ್ತು ಮನೆಗಳ ದಾಖಲೆಗಳು ಸಿಕ್ಕಿದ್ದರೂ ಬಿಹಾರದ ಯಾವ ಪತ್ರಿಕೆಯೂ ಈ ದಾಳಿಯ ಬಗ್ಗೆ ವರದಿ ಮಾಡಲಿಲ್ಲ. ಅದಕ್ಕೆ ಕಾರಣ ಆ ಮನೆಯಲ್ಲಿ ವಾಸಿಸುತ್ತಿರುವಾತ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರಿಗೆ ಆಪ್ತನಾಗಿರುವ ಮತ್ತು ನಿತೀಶ್‌ಕುಮಾರ್ ಅವರ ಸಂಯುಕ್ತ ಜನತಾದಳದ ಖಜಾಂಚಿ ಆಗಿರುವ ವಿನಯ್‌ಕುಮಾರ್ ಸಿನ್ಹಾ! ಅಂದಹಾಗೆ ನಿತೀಶ್‌ಕುಮಾರ್ ಅವರು ಮುಖ್ಯಮಂತ್ರಿ ಆಗುವತನಕ ಇದೇ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಈಗ ಅದನ್ನು ತಮ್ಮ ಆಪ್ತನಿಗೆ ಬಿಟ್ಟುಕೊಟ್ಟಿದ್ದಾರೆ.

ಭ್ರಷ್ಟಾಚಾರ ಮತ್ತು ರಾಜಕೀಯ ವಾಸನೆ ಇರುವ ಈ ದಾಳಿಯ ಬಗ್ಗೆ ಯಾಕೆ ಬಿಹಾರದ ಪತ್ರಿಕೆಗಳು ವರದಿ ಮಾಡಲಿಲ್ಲ ಎಂದು ನೋಡಿದಾಗ ಇದು ಒಂದು ವಿಶೇಷ ಸಂಗತಿ ಅಲ್ಲವೆಂದೂ, ಇಂತಹ ‘ಮರೆಮಾಚುವ’ ಕೆಲಸದಲ್ಲಿ ಆ ರಾಜ್ಯದ ಪತ್ರಿಕೆಗಳೂ ದಿನನಿತ್ಯ ತೊಡಗಿವೆ ಎಂದೂ ಗೊತ್ತಾಯಿತು.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆದಾಗಿನಿಂದಲೂ ಅವರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಅಲ್ಲಿನ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ. ಅವರನ್ನು ಟೀಕೆ ಮಾಡುವ ಪತ್ರಿಕೆಗಳ ಆದಾಯ ಮೂಲಗಳನ್ನು ಕಡಿದು ಹಾಕುವಮೂಲಕ ಅಂತಹ ‘ದಾರಿ ತಪ್ಪಿದ’ ಮಾಧ್ಯಮಗಳನ್ನು ‘ಸರಿದಾರಿಗೆ’ ತರುತ್ತಿದ್ದಾರೆ. ಹಾಗೆ ‘ಸರಿ ದಾರಿಗೆ’ ಎಳೆಯಲ್ಪಟ್ಟ ಪತ್ರಿಕೆಗಳಲ್ಲಿ ‘ಪಿಂಡಾರ್’ ಎಂಬ ಉರ್ದು ಪತ್ರಿಕೆಯೂ ಒಂದು.

ಈ ‘ಪಿಂಡಾರ್’ ಪತ್ರಿಕೆಗೆ ಡಾ. ರೈಹಾನ್ ಘಾಣಿ ಎಂಬುವವರು ಸಂಪಾದಕರಾಗಿದ್ದರು. 2007ರಲ್ಲಿ ನಿತೀಶ್ ಕುಮಾರ್ ಅವರ ಪತ್ನಿ ಮಡಿದಾಗ ಆಕೆಯ ಅಂತ್ಯಸಂಸ್ಕಾರವನ್ನು ಒಂದು ರಾಜಕೀಯ ಸಭೆಯಾಗಿ ಮುಖ್ಯಮಂತ್ರಿ ಪರಿವರ್ತಿಸಿದ್ದರು. ಇದನ್ನು ಟೀಕಿಸಿ ಘಾಣಿ ಅವರು ಮಾಡಿದ ಈ ‘ಪ್ರಮಾದ’ಕ್ಕೆ ಮಾರನೆ ದಿನವೇ ಅವರಿಗೆ ಬಿಸಿಮುಟ್ಟಿಸಿದ್ದರು ನಿತೀಶ್ ಕುಮಾರ್ ‘ಪಿಂಡಾರ್’ ಪತ್ರಿಕೆಯ ಮಾಲೀಕರ ಮೇಲೆ ಒತ್ತಡ ತಂದು ಘಾಣಿ ಅವರನ್ನು ಸಂಪಾದಕ ಹುದ್ದೆಯಿಂದ ಓಡಿಸಲಾಯಿತು, ಅವರು ಹಲವಾರು ವರ್ಷಗಳಿಂದ ಬರೆಯುತ್ತಿದ್ದ ಅಂಕಣಕ್ಕೆ ಕತ್ತರಿ ಬಿತ್ತು. ಇಂತಹ ಅವಮಾನವನ್ನು ಸಹಿಸದೆ ಘಾಣಿ ಅವರು ರಾಜೀನಾಮೆ ಕೊಟ್ಟು ಆ ಪತ್ರಿಕೆಯಿಂದ ಹೊರಬಿದ್ದರು.

ಈ ಕತೆ ಅಲ್ಲಿಗೇ ಮುಗಿಯುವುದಿಲ್ಲ. ನಿತೀಶ್ ಕುಮಾರ್ ಅವರ ಆಸೆಗೆ ತಕ್ಕಂತೆ ‘ಪಿಂಡಾರ್’ ಪತ್ರಿಕೆಯ ಮಾಲೀಕ ಎ.ಕೆ.ಎಹಸಾನಿ ಅವರು ನಡೆದುಕೊಂಡಿದ್ದರಿಂದ ಆ ಪತ್ರಿಕೆಗೆ ಬಿಹಾರ ಸರ್ಕಾರದಿಂದ ಸಾಕಷ್ಟು ಲಾಭ ಸಿಕ್ಕಿತು. ಘಾಣಿ ಅವರು ಸಂಪಾದಕರಾಗಿದ್ದಾಗ 2007ರಲ್ಲಿ ‘ಪಿಂಡಾರ್’ ಪತ್ರಿಕೆಗೆ ಬಿಹಾರದ ಸರ್ಕಾರದಿಂದ ಕೇವಲ ಒಂದು ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಸಿಕ್ಕಿದ್ದವು. ಆದರೆ ಘಾಣಿ ಅವರು ಹೊರನಡೆದ ನಂತರ ಮಾಲೀಕ ಎಹಸಾನಿ ಅವರೇ ಸಂಪಾದಕರಾದ ನಂತರ ಅದೇ ಪತ್ರಿಕೆಗೆ 2008 ರಲ್ಲಿ 24 ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಹರಿದುಬಂದವು. ಅದರ ಮುಂದಿನ ವರ್ಷವೂ ‘ಪಿಂಡಾರ್’ ಪತ್ರಿಕೆ ನಿತೀಶ್ ಕುಮಾರ್ ಅವರ ತಾಳಕ್ಕೆ ಕುಣಿದಿದ್ದರಿಂದ 2009ರಲ್ಲಿ ಬರೋಬ್ಬರಿ 40 ಲಕ್ಷದ ಸರ್ಕಾರಿ ಜಾಹೀರಾತುಗಳು ಸಿಕ್ಕಿದವು. 2010ರಲ್ಲಿ ಅದು 48 ಲಕ್ಷಕ್ಕೆ ಏರಿತು! ಸಹಜವಾಗಿಯೇ ‘ಪಿಂಡಾರ್’ ಪತ್ರಿಕೆ ಇವತ್ತು ನಿತೀಶ್ ಕುಮಾರರ ಭಟ್ಟಂಗಿ ಪತ್ರಿಕೆಯಾಗಿದೆ.

ಅಂದಹಾಗೆ ಈ ವಿದ್ಯಮಾನ ಕೇವಲ ‘ಪಿಂಡಾರ್’ ಪತ್ರಿಕೆಗೆ ಸೀಮಿತವಾಗಿಲ್ಲ. ಬಿಹಾರ ರಾಜ್ಯದಲ್ಲಿ ಹೇಳಿಕೊಳ್ಳುವಂತಹ ಖಾಸಗಿ ಉದ್ಯಮ, ಕಾರ್ಖಾನೆ, ಸಂಸ್ಥೆಗಳು ಇಲ್ಲ ಆದ್ದರಿಂದ ಅಲ್ಲಿನ ಪತ್ರಿಕೆಗಳು ತಮ್ಮ ಉಳಿವಿಗಾಗಿ ಸರ್ಕಾರಿ ಜಾಹೀರಾತುಗಳನ್ನೇ ಅವಲಂಬಿಸಲೇಬೇಕಿದೆ. ಇದನ್ನೇ ತನ್ನ ಅಸ್ತ್ರವಾಗಿಸಿಕೊಂಡಿರುವ ನಿತೀಶ್‌ಕುಮಾರ್ ಅಲ್ಲಿನ ಪತ್ರಿಕೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅದನ್ನು ಅವರು ಅದೆಷ್ಟು ಚಾಕಚಕ್ಯತೆಯಿಂದ ಮಾಡಿದ್ದಾರೆಂಬುದು ಅಚ್ಚರಿ ಮೂಡಿಸುತ್ತದೆ.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆಗುವತನಕ ಆ ರಾಜ್ಯದ ಬಜೆಟ್‌ನಲ್ಲಿ ಸರ್ಕಾರಿ ಜಾಹೀರಾತುಗಳಿಗೆ ಕಡಿಮೆ ಹಣವನ್ನು ಎತ್ತಿಡಲಾಗುತ್ತಿತ್ತು. ಉದಾಹರಣೆಗೆ ಲಾಲೂ ಪ್ರಸಾದ್ ಯಾದವ್ ಅವರ ಆರ್‌ಜೆಡಿ ಪಕ್ಷ ಬಿಹಾರದಲ್ಲಿ ಅಧಿಕಾರದಲ್ಲಿದ್ದ 2005-06ರಲ್ಲಿ ಇಂತಹ ಜಾಹೀರಾತುಗಳಿಗೆ 4.5 ಕೋಟಿ ರೂಪಾಯಿಗಳನ್ನು ಸರ್ಕಾರಿ ಖಜಾನೆಯಿಂದ ವೆಚ್ಚ ಮಾಡಲಾಗಿತ್ತು. ಆದರೆ ನಿತೀಶ್‌ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮರುವರ್ಷವೇ (2006-07ರಲ್ಲಿ) ಆ ಮೊತ್ತವನ್ನು 5.4 ಕೋಟಿಗಳಿಗೆ ಏರಿಸಲಾಯಿತು. 2007-08ರಲ್ಲಿ ಅದು ದುಪ್ಪಟ್ಟುಗೊಂಡು 9.65 ಕೋಟಿಯಾಯಿತು. 2008-09ರಲ್ಲಿ ಅದು ಮೂರುಪಟ್ಟು ಹೆಚ್ಚಾಗಿ 27.5 ಕೋಟಿಗೆ ಏರಿತು. 2009-10ರಲ್ಲಿ ಮತ್ತಷ್ಟು ಹೆಚ್ಚಾಗಿ 34.5 ಕೋಟಿ ರೂ. ಗೆ ಮುಟ್ಟಿತು.

ಇಷ್ಟು ದೊಡ್ಡ ಮೊತ್ತದಲ್ಲಿ ಯಾವ ಪತ್ರಿಕೆಗೆ ಎಷ್ಟು ಕೊಡಬೇಕೆಂಬ ನಿರ್ಧಾರವನ್ನು ಸ್ವತಃ ನಿತೀಶ್‌ಕುಮಾರ್ ಅವರೇ ತೆಗೆದುಕೊಳ್ಳುವುದರಿಂದ ಇವತ್ತು ಅಲ್ಲಿಯ ಬಹಳಷ್ಟು ಪತ್ರಿಕೆಗಳು ಅವರ ಹೊಗಳುಭಟ್ಟ ಪತ್ರಿಕೆಗಳಾಗಿ ಮಾರ್ಪಾಟುಗೊಂಡಿವೆ. ಇದರ ಬಗ್ಗೆ ‘ಪಿಂಡಾರ್’ ಪತ್ರಿಕೆಯ ಮಾಜಿ ಸಂಪಾದಕ ಘಾಣಿ ಅವರು ಹೇಳುವುದೇನೆಂದರೆ “ತುರ್ತುಪರಿಸ್ಥಿತಿ ಸಂದರ್ಭದಲ್ಲಿ ದೇಶದಾದ್ಯಂತ ಘೋಷಿತ ಪತ್ರಿಕಾ ಸೆನ್ಸಾರ್‌ಶಿಪ್ ಇತ್ತು. ಆದರೆ ನಿತೀಶ್‌ಕುಮಾರ್ ಆಡಳಿತದಡಿ ಬಿಹಾರದಲ್ಲಿ ಅಘೋಷಿತ ಸೆನ್ಸಾರ್‌ಶಿಪ್ ಜಾರಿಯಲ್ಲಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹಳಷ್ಟು ಅಪಾಯಕಾರಿ” ಎಂದು.

  • ಗೌರಿ ಲಂಕೇಶ್.

ಮೇ 2, 2012

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...