Homeಮುಖಪುಟಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

’ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು’ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

- Advertisement -
- Advertisement -

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಟಾಂಗ್ ನೀಡಿರುವ ಮಿತ್ರ ಪಕ್ಷದ ಮುಖ್ಯಮಂತ್ರಿ ನಿತೀಶ್ ಕುಮಾರ್‌, ’ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?’ ಎಂದು ಪ್ರಶ್ನಿಸಿದ್ದಾರೆ.

ಪಾಟ್ನಾದಲ್ಲಿ ಮಾಧ್ಯಮದವರು ಅಮಿತ್ ಶಾ ಅವರ ಹೇಳಿಕೆಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌, “ನೀವು ಇತಿಹಾಸವನ್ನು ಬದಲಾಯಿಸುತ್ತೀರಾ? ಅದನ್ನು ಹೇಗೆ ಬದಲಾಯಿಸಬಹುದು ಎಂದು ನನಗೆ ಅರ್ಥವಾಗುತ್ತಿಲ್ಲ. ಇತಿಹಾಸವು ಇತಿಹಾಸವಾಗಿದೆ” ಎಂದಿದ್ದಾರೆ.

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿರುವ ಅವರು, ’ಭಾಷೆ ವಿಷಯ ಬೇರೆ. ಆದರೆ, ನೀವು ಮೂಲಭೂತ ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದಿದ್ದಾರೆ. ಇತಿಹಾಸದ ಪುಸ್ತಕಗಳಲ್ಲಿ ಮೊಘಲರಿಗೆ ಅಸಮಾನವಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ (ಜೂನ್.10) ಆರೋಪಿಸಿ, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ. ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಹೇಳಿದ್ದರು.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಇತ್ತೀಚೆಗೆ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂಣಿನ ಅಗತ್ಯವಿಲ್ಲ ಎಂದು ಹೇಳಿ ಬಿಜೆಪಿಗೆ ತಿರುಗೇಟು ನೀಡಿದ್ದರು.


ಇದನ್ನೂ ಓದಿ: ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...